Breaking News

ಬೆಳಗಾವಿ

ರೈಲು ಡಿಕ್ಕಿ ಹೊಡೆದ ಪರಿಣಾಮ ಎರಡು ಆಕಳು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

ರೈಲು ಡಿಕ್ಕಿ ಹೊಡೆದ ಪರಿಣಾಮ ಎರಡು ಆಕಳು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಹೌದು ಸೋಮವಾರ ರಾತ್ರಿ ಬೆಳಗಾವಿ ನಗರದ 3ನೇ ಮತ್ತು 4ನೇ ರೈಲ್ವೇ ಗೇಟ್ ಬಳಿ ಈ ಅವಘಡ ಸಂಭವಿಸಿದೆ. ರೈಲು ಗುದ್ದಿದ ಪರಿಣಾಮ ಆಕಳುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸ್ಯಾನಿಟರಿ ಇನ್ಸಪೆಕ್ಟರ್ ಗಣಾಚಾರಿ ಮತ್ತು ಅವರ ತಂಡ ಆಕಳುಗಳ ಶವಗಳನ್ನು ತೆಗೆದುಕೊಂಡು ಹೋಗಿ …

Read More »

ಬೆಳಗಾವಿ ಗಡಿ ವಿವಾದ : ಅತ್ತ ‘ಮಹಾ’ ಸಿದ್ಧತೆ, ಇತ್ತ ಗಾಢ ನಿದ್ದೆ

ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ, ಸಮರ್ಥ ವಾದ ಮಂಡಿಸಲು ಬೇಕಾದ ಎಲ್ಲ ಸಿದ್ಧತೆಗಳನ್ನೂ ಮಹಾರಾಷ್ಟ್ರ ಸರ್ಕಾರ ಮಾಡಿಕೊಂಡಿದೆ. ಆದರೆ, ಕರ್ನಾಟಕ ಸರ್ಕಾರ ತುರ್ತು ಸಿದ್ಧತೆಗಳನ್ನೂ ಮಾಡಿಕೊಳ್ಳದಿರುವುದು ಗಡಿ ಕನ್ನಡಿಗರು ಹಾಗೂ ಹೋರಾಟಗಾರರನ್ನು ಆತಂಕಕ್ಕೆ ತಳ್ಳಿದೆ.   1956ರ ರಾಜ್ಯ ಪುನರ್‌ ವಿಂಗಡಣಾ ಕಾಯ್ದೆಯನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ. 2004ರಲ್ಲಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ 18 ವರ್ಷಗಳ ಬಳಿಕ ನಡೆಯಲಿದೆ. ಗಡಿ ವಿವಾದವನ್ನು ಸುಪ್ರೀಂ …

Read More »

ಬೆಳಗಾವಿಯಲ್ಲಿ ಕುಸಿದ ತಾಪಮಾನ: 10.2 ಡಿಗ್ರಿ ಸೆಲ್ಸಿಯಸ್‌ ದಾಖಲು

ಬೆಳಗಾವಿ: ನಗರದಲ್ಲಿ ಸೋಮವಾರ ಕನಿಷ್ಠ ತಾಪಮಾನ 10.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಪ್ರಸಕ್ತ ವರ್ಷದ ಈವರೆಗಿನ ಅತ್ಯಂತ ಕಡಿಮೆ ತಾಪಮಾನ ಇದಾಗಿದೆ. ಕಳೆದ ಸೋಮವಾರದಿಂದ  ಗರಿಷ್ಠ 27ರಿಂದ ಕನಿಷ್ಠ 18ರ ಆಸುಪಾಸಿನಲ್ಲೇ ದಾಖಲಾಗಿದೆ. ಸೋಮವಾರ ಏಕಾಏಕಿ ಕನಿಷ್ಠ ತಾಪಮಾನದಲ್ಲಿ ಕುಸಿತ ಕಂಡಿದೆ. ಇನ್ನೂ ಎರಡು ದಿನ ಇಷ್ಟೇ ಪ್ರಮಾಣದ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ನಗರದ ಜನ ಥರಗುಟ್ಟುವ ಚಳಿಯಿಂದ ಬಳಲುವಂತಾಯಿತು. ಗರಿಷ್ಠ ತಾಪಮಾನ ಸರಾಸರಿ …

Read More »

ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು,ರಾಜ್ಯದಲ್ಲಿಯೂ ಕಠಿಣ ಕ್ರಮ : ಅಭಯ್ ಪಾಟೀಲ

ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ತಂದು ತೀವ್ರತರವಾದ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಯುಪಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಆಗ್ರಹಿಸಿದರು. ಮಂಗಳವಾರ ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಅಭಯ್ ಪಾಟೀಲ್ ರಾಜ್ಯ ಮತ್ತು ದೇಶ ವಿರೋಧಿ ಕೃತ್ಯದಲ್ಲಿ ತೊಡಗಿದ ಜನರ ವಿರುದ್ಧ ಉಗ್ರ ಕ್ರಮ ಆಗಬೇಕು ಎಂದು ನಾವು ಮೊದಲಿನಿಂದ ಒತ್ತಾಯಿಸುತ್ತಿದ್ದೇವೆ. ಈ …

Read More »

ಅಂತರಾಷ್ಟ್ರೀಯ ಮಟ್ಟದ 2022ನೇ ವ್ಹೀಲ್ ಚೇರ್ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ

ದೈಹಿಕ ಅಂಗವಿಕಲತೆಯನ್ನು ಲೆಕ್ಕಿಸದೆ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡುವ ಮೂಲಕ ಅಂತರಾಷ್ಟ್ರೀಯ ಮಟ್ಟದ 2022ನೇ ವ್ಹೀಲ್ ಚೇರ್ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಪಡೆದು ಭಾರತದ ಕೀರ್ತಿ ಪತಾಕೆ ಹಾರಿಸಿದ ಎಲ್ಲ ವಿಕಲಚೇತನ ಕ್ರೀಡಾ ಪಟುಗಳಿಗೆ ಸರ್ಕಾರದಿಂದ ಹೆಚ್ಚಿನ ಸಹಾಯ, ಸಹಕಾರ ಸಿಗುವಂತಾಗಬೇಕು ಎಂದು ಸುರೇಶ ಯಾದವ ಫೌಂಡೇಶನ್ ಸಂಸ್ಥಾಪಕ ಸುರೇಶ ಯಾದವ ಅಭಿಪ್ರಾಯ ಪಟ್ಟರು. ವ್ಹೀಲ್ ಚೇರ್ ಬಾಸ್ಕೆಟ್ ಬಾಲ್ ಫೆಡರೇಷನ್ ಆಫ್ ಇಂಡಿಯಾ, ಒಲಂಪಿಕ್ ಕಮಿಟಿ …

Read More »

ನಾಳೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀರ್ಪು, ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ನತ್ತ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನವೆಂಬರ್ 23 ರ ನಾಳೆ ನಡೆಯಲಿದೆ.   ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟಕದ ಹಲವು ಭಾಗಗಳು ತನ್ನದೆಂದು ವಾದಿಸಿ ಕಾನೂನು ಹೋರಾಟ ನಡೆಸುತ್ತಿರುವ ಮಹಾರಾಷ್ಟ್ರ ಸರ್ಕಾರ, ಈ ನಿಟ್ಟಿನಲ್ಲಿ ಕಾನೂನು ತಂಡಕ್ಕೆ ಸಹಕಾರ ನೀಡಲು ಮತ್ತು ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ …

Read More »

ಹೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಾವಿರಾರು ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ‌ ನಿರ್ಮಾಣ

ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮದ ಆನೆಬಾಯಿಕೋಡಿಯಲ್ಲಿ ಹೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಾವಿರಾರು ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ‌ ನಿರ್ಮಾಣವಾಗಿದೆ‌. ಅ ಲಾಲಪುರ- ರಾಯಬಾಗ ರಸ್ತೆಯಲ್ಲಿರುವ ಆನೆಬಾಯಿ ಕೋಡಿಯಲ್ಲಿ ವಿದ್ಯುತ್ ಕಂಬ್ ಸಮೀಪದ ಮತ್ತೊಂದು ವಿದ್ಯುತ್ ಕಂಬಕ್ಕೆ ತಾಗುತ್ತಿದೆ. ಇದರಿಂದ ಜನರು ಭಯಭೀತಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ ಯಾರೂ ಇತ್ತ ಕಡೆ ಗಮನಹರಿಸುತ್ತಿಲ್ಲ ಎಂದು ಜನರು ಗಂಭೀರ ಆರೋಪ ಮಾಡುತ್ತಿದ್ದಾರೆ. ವಿದ್ಯುತ್ ಕಂಬ …

Read More »

ರುದ್ರಭೂಮಿಗೆ ಹೋಗಲು ದಾರಿವಿಲ್ಲವೆಂದು ರಸ್ತೆ ಮದ್ಯೆಯೇ ಶವವಿಟ್ಟು ಧರಣಿ

ರುದ್ರಭೂಮಿಗೆ ಹೋಗಲು ದಾರಿವಿಲ್ಲವೆಂದು ರಸ್ತೆ ಮದ್ಯೆಯೇ ಶವವಿಟ್ಟು ಧರಣಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಣದಿವಾಡಿ ಗ್ರಾಮದಲ್ಲಿ ನಡೆದಿದೆ. ಯಕ್ಸಂಬಾ- ಚಿಕ್ಕೋಡಿ ರಸ್ತೆಯ ಮದ್ಯ ಶವವಿಟ್ಟು ಭಜನೆ ಮಾಡುವುದರ ಮೂಲಕ ಪ್ರತಿಭಟನೆ ಮಾಡಲಾಯಿತು. ಇಂದು ಬೆಳಗ್ಗೆ ಅನಾರೋಗ್ಯದಿಂದ ನಣದಿವಾಡಿ ಗ್ರಾಮದ ಸುಧಾಕರ ಮಹಾದೇವ ನಾಯಕ ಎಂಬುವವರು ಮೃತಪಟ್ಟಿದರು. ರುದ್ರಭೂಮಿಗೆ ಹೋಗುವ ದಾರಿ ವಿಚಾರಕ್ಕೆ ಸಂಬಂಧಸಿದಂತೆ ನಣದಿವಾಡಿ ಗ್ರಾಮದ ಯಕ್ಸಂಬಿ ಕುಟುಂಬವು ತಕರಾರು ತಗೆದಿತ್ತು. ಅಷ್ಟೇ ಅಲ್ಲದೇ ರುದ್ರಭೂಮಿಗೆ …

Read More »

ನಂದಗಡದಲ್ಲಿ ಶಾಲೆಗಳ ನೂತನ ಕೊಠಡಿಗಳ ಉದ್ಘಾಟನೆ: ಅಂಜಲಿ ನಿಂಬಾಳ್ಕರ್

ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ಜೆಸಿಎಸ್ ಆವರಣದಲ್ಲಿನ ಉರ್ದು ಹೆಣ್ಣು ಮಕ್ಕಳ ಶಾಲೆಯ ಕೊಠಡಿ, ಅದರಂತೆ ಮರಾಠಿ ಶಾಲೆಯ ನೂತನ ಕೊಠಡಿಯ ಉದ್ಘಾಟನೆಯನ್ನು ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನೆರವೇರಿಸುವರು. ಈ ಸಂದರ್ಭದಲ್ಲಿ ಉರ್ದು ಶಾಲೆಯ ವಿದ್ಯಾರ್ಥಿಗಳೊಂದಿಗೆ,ದುವಾ ಅದರಂತೆ ಮರಾಠಿ ಶಾಲೆಯ ಮಕ್ಕಳೊಂದಿಗೆ ಪೂಜೆ ಸಲ್ಲಿಸಿ ಮಕ್ಕಳಲ್ಲಿ ಸರಳತೆಯಿಂದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಶಿಕ್ಷಕರಿಂದ ಶಾಸಕಿ ಅಂಜಲಿ ಅವರನ್ನು …

Read More »

ಇಬ್ರಾಹಿಂ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಬೆಳಗಾವಿ : ‘ಕುಮಾರಸ್ವಾಮಿ’ ಸಿಎಂ ಆಗಲಿ ಎಂದು ‘ಕೈ’ ನಾಯಕರು ದೇವೇಗೌಡರ ಕಾಲಿಗೆ ಬಿದ್ದಿದ್ದರು’ ಎಂದು ಸಿಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾತನಾಡಿದ ಇಬ್ರಾಹಿಂ, ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು H.D.ದೇವೇಗೌಡರ ಕಾಲಿಗೆ ಬಿದ್ದಿದ್ದರು. ಸಿಎಂ ಮಾಡಿದ 14 ತಿಂಗಳಲ್ಲೇ ಶಾಸಕರನ್ನ ಮುಂಬೈಗೆ ಕಳಿಸಿದ್ರು. ಮುಂಬೈಗೆ ಕಳಿಸಿ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ ಎಂದು ಹೇಳಿದ್ದಾರೆ. ಇಬ್ರಾಹಿಂ ಹೇಳಿಕೆ …

Read More »