Breaking News

ಬೆಳಗಾವಿ

ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ

ಹೇಗಿತ್ತು ನೋಡಿ…ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ ಇಲ್ಲಿ ಯಾವುದೇ ಮಂಟಪವಿರಲಿಲ್ಲ, ವಾದ್ಯ ಮೇಳ ಗಟ್ಟಿ ಮೇಳದ ಸದ್ದಿರಲಿಲ್ಲ, ಬಂಧುಗಳು ಬಳಗದವರು ಬಣ್ಣ ಬಣ್ಣದ ಬಟ್ಟೆ ತೊಟ್ಟಿರಲಿಲ್ಲ, ವಧು-ವರರೂ ಅಷ್ಟೇ ತುಂಬ ಸಿಂಪಲ್ ಆದರೂ ಅಲ್ಲೊಂದು ಮದುವೆ ಆಯ್ತು. ಹೇಂಗಂತೀರಾ ಈ ಸ್ಟೋರಿ ನೋಡಿ. ಆಕಾಶವೇ ಮಂಟಪವಾದ ಜಿಟಿ ಜಿಟಿ ಮಳೆಯೇ ವಧುವರರನ್ನು ಆಶೀರ್ವದಿಸಿದ ಅಪರೂಪದ ಮದುವೆಯೊಂದು ನಡೆದಿದ್ದು ಇದೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ …

Read More »

ಬೆಳಗಾವಿ ಮೇಯರ್, ಓರ್ವ ನಗರಸೇವಕನ ಸದಸ್ಯತ್ವ ರದ್ದು

ಬೆಳಗಾವಿ: ಇಲ್ಲಿನ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಾಲಿಕೆಯ ಹಾಲಿ ಮೇಯರ್ ಮಂಗೇಶ ಪವಾರ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವ ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಮಂಗೇಶ ಪವಾರ ಮತ್ತು ಜಯಂತ ಜಾಧವ ತಮ್ಮ ಪತ್ನಿಯರ ಹೆಸರಿನಲ್ಲಿ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದಿದ್ದು, ಪಾಲಿಕೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಆ ಮಳಿಗೆಗಳನ್ನು ಇಬ್ಬರು ಬಿಟ್ಟು ಕೊಡಬೇಕಾಗಿತ್ತು. ಹಾಗಾಗಿ, ಕೆಎಂಸಿ ಕಾಯ್ದೆ-1976, ಸೆಕ್ಷನ್ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಗೋಕಾಕ ತಾಲ್ಲೂಕಿನ ಶಿವಾಪುರ (ಕೊ)ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿವಾಪುರ (ಕೊ)ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಅರುಣ ಯಳ್ಳೂರಕರ ಗೆ ಕರ್ನಾಟಕ ಛಾಯಾರತ್ನ’ ಪ್ರಶಸ್ತಿ

ಅರುಣ ಯಳ್ಳೂರಕರ ಗೆ ಕರ್ನಾಟಕ ಛಾಯಾರತ್ನ’ ಪ್ರಶಸ್ತಿ ಬೆಳಗಾವಿ: ಇಲ್ಲಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಅರುಣ ಯಳ್ಳೂರಕರ ಅವರು, ‘ಕರ್ನಾಟಕ ಛಾಯಾರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಪತ್ರಿಕಾ ಛಾಯಾಗ್ರಹಕರಾಗಿ ಪತ್ರಿಕೆ ಮಾದ್ಯಮ ಕ್ಷೇತ್ರದಲ್ಲಿ ಹಲವು ದಶಕಗಳ ಲ್ಲಿ ಸಲ್ಲಿಸಿರುವ ಅಭೂತಪೂರ್ವ ಸೇವೆಯನ್ನು ಪರಿಗಣಿಸಿ, ಕರ್ನಾಟಕ ವಿಡಿಯೊ ಮತ್ತು ಫೊಟೊ ಅಸೋಸಿಯೇಷನ್ ಬ(ರಿ) ಮತ್ತು ಬೈಸೇಲ್ ಇಂಟ್ರಾಕ್ಷನ್ ಪ್ರವೇಟ್ ಲಿಮಿಟೆಡ್ ಸಹಯೊಗದೊಂದಿಗೆ ದಿನಾಂಕ 27-06-2025 ರಂದು ಬೆಂಗಳೂರಿನ ಅರಮನೆ ಮೈದಾನದ …

Read More »

ಯುದ್ಧೋಪಾದಿಯಲ್ಲಿ ಕೋಟೆ ಕೆರೆ ನಾಲೆಯ ಸ್ವಚ್ಛತೆ ಶಾಸಕ ಆಸೀಫ್ ಸೇಠ್ ಮತ್ತು ನಗರಸೇವಕರಿಂದ ಪರಿಶೀಲನೆ

ಯುದ್ಧೋಪಾದಿಯಲ್ಲಿ ಕೋಟೆ ಕೆರೆ ನಾಲೆಯ ಸ್ವಚ್ಛತೆ ಶಾಸಕ ಆಸೀಫ್ ಸೇಠ್ ಮತ್ತು ನಗರಸೇವಕರಿಂದ ಪರಿಶೀಲನೆ ಮಾನ್ಸೂನ್ ಸಮಯದಲ್ಲಿ ನಿರ್ಮಾಣವಾದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅವರು ಬೆಳಗಾವಿ ಕೋಟೆ ಕೆರೆಗೆ ಭೇಟಿ ನೀಡಿ ಬ್ಲಾಕೇಜ್ ಸ್ವಚ್ಛತೆಗಾಗಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ಪರಿಶೀಲನೆ ನಡೆಸಿದರು. ಇಂದು ಬೆಳಗಾವಿಯ ಉತ್ತರ ಶಾಸಕ ಆಸೀಫ್ ಸೇಠ್ ಅವರು ಬೆಳಗಾವಿಯ ಕೋಟೆ ಕೆರೆಗೆ ಭೇಟಿ ನೀಡಿ ಬೃಹತ್ ನಾಲೆ ಶುದ್ಧಿಕರಣಕ್ಕಾಗಿ …

Read More »

ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ ಕಂಡಿದೆ.

ಗೋಕಾಕ: ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ ಕಂಡಿದೆ. ನಗರದ ಶೂನ್ಯ ಸಂಪಾದನ ಮಠದಲ್ಲಿ ಗುರುವಾರ ಸಂಜೆ ನಾನಾ ಶ್ರೀಗಳೊಂದಿಗೆ ಕ್ಷೇತ್ರದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಾಪೂರ (ಹ) ದ ಅಡವಿ ಸಿದ್ದೇಶ್ವರ ಶ್ರೀಗಳ ತಪ್ಪು ಕಾಣದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಠದಲ್ಲಿಯೇ ಮುಂದುವರಿಯಲು ಅಡವಿಸಿದ್ದರಾಮ ಸ್ವಾಮೀಜಿಗೆ ಅವಕಾಶ …

Read More »

ಬಳ್ಳಾರಿ‌‌ ನಾಲಾ ಅವಾಂತರ, ಗೆಣಸು ಕೊಯ್ಲಿಗೆ ರೈತರ ಹರಸಾಹಸ

ಬೆಳಗಾವಿ: ಇಲ್ಲಿನ ಬಳ್ಳಾರಿ ನಾಲೆ ಉಕ್ಕಿ ಹರಿಯುತ್ತಿದ್ದು, ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳನ್ನು ಆಹುತಿ ಪಡೆದುಕೊಳ್ಳುತ್ತಿದೆ. ಹಾಗಾಗಿ, ಗೆಣಸು ಕಟಾವು ಮಾಡಲು ರೈತರು ಹರಸಾಹಸಪಡುತ್ತಿದ್ದಾರೆ. ಇದನ್ನು ಹಾಗೇ ಬಿಟ್ಟರೆ ಹಾಕಿದ ಬಂಡವಾಳ ಕೂಡ ಕೈ ಸೇರುವುದಿಲ್ಲ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರದ ಹೊರ ವಲಯದಲ್ಲಿ ಹರಿಯುವ ಬಳ್ಳಾರಿ ನಾಲೆ ಇಲ್ಲಿನ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಆರಂಭದಲ್ಲಿ ಈ ಭಾಗದ ರೈತರಿಗೆ ವರದಾನವಾಗಿತ್ತು. ಕಳೆದ ಹತ್ತು ವರ್ಷಗಳಿಂದ ಹೂಳು ತುಂಬಿಕೊಂಡು ಪ್ರತೀ …

Read More »

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; ಜಾಗೃತಿ ನಿರ್ಮಾಣ

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; ಜಾಗೃತಿ ನಿರ್ಮಾಣ ಅಂ.ರಾ. ಮಾದಕ ದ್ರವ್ಯ ಸೇವನೆ, ಸಾಗಾಣಿಕೆ ವಿರೋಧಿ ದಿನಾಚರಣೆ ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಆಯೋಜನೆ ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗ ಕಾನೂನು ಸೇವಾ ಪ್ರಾಧಿಕಾರದ ಸಂದೀಪ ಪಾಟೀಲರಿಂದ ಉದ್ಘಾಟನೆ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇತರೆ ಸಂಘಟನೆಗಳ ಸಂಯುಕ್ತ ಸಂಯೋಜನೆಯಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಅಕ್ರಮ ಸಾಗಾಣಿಕೆ …

Read More »

ತುಂಬಿ ಹರಿಯುತ್ತಿರುವ ಹಾಲಾತ್ರಿ ಹಳ್ಳದಲ್ಲಿ ಥಾರ್ ದಾಟಿಸಿದ ಚಾಲಕ

ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಖಾನಾಪುರದ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದರ ನಡುವೆಯೂ ಒಬ್ಬ ಚಾಲಕ ಹರಿಯುವ ನೀರಿನಲ್ಲೇ ವಾಹನ ದಾಟಿಸಿ, ದುಸ್ಸಾಹಸ ಪ್ರದರ್ಶಿಸಿರುವ ವಿಡಿಯೋ ವೈರಲ್ ಆಗಿದೆ. ಬೆಳಗಾವಿ, ಖಾನಾಪುರ, ಹೆಮ್ಮಡಗಾ-ಅನಮೋಡ ಮಾರ್ಗವಾಗಿ ಗೋವಾ ಸಂಪರ್ಕಿಸುವ ರಸ್ತೆಯಲ್ಲಿರುವ ಹಾಲಾತ್ರಿ ಹಳ್ಳ ತುಂಬಿ‌ ಹರಿಯುತ್ತಿದೆ. ಹಳ್ಳದ ಸೇತುವೆಯ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. …

Read More »

ಪಂಢರಪುರದತ್ತ ಹೊರಟಿರುವ ಪಾದಯಾತ್ರಿಗಳು

ಬೆಳಗಾವಿ: ವಾರಕರಿಗಳ ನೇತೃತ್ವದಲ್ಲಿ ತಾಳ ಹಾಕುತ್ತಾ, ತಂಬೂರಿ-ಭಜನೆ ಬಾರಿಸುತ್ತಾ, ವೀಣೆ ನುಡಿಸುತ್ತಾ, ಅಭಂಗಗಳ ಮೂಲಕ ವಿಠ್ಠಲನ ನಾಮ ಸ್ಮರಿಸುತ್ತಾ, ತಲೆಯ ಮೇಲೆ ತುಳಸಿ ಹೊತ್ತು, ಕೈಯಲ್ಲಿ ವಿಠಲನ ಧ್ವಜ ಹಿಡಿದು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಪಂಢರಪುರದತ್ತ ಭಕ್ತರ ಪಾದಯಾತ್ರೆ ಹೊರಟಿದೆ. ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ಭಕ್ತವರ್ಗ ತಮ್ಮ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ. ಹೌದು, ಈ ಎಲ್ಲ ದೃಶ್ಯ ಕಂಡು ಬಂದಿದ್ದು, ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ. ಬೆಳಗಾವಿ ತಾಲೂಕಿನ ಸುಳಗಾ (ಯಳ್ಳೂರ) …

Read More »