Breaking News

ಬೆಳಗಾವಿ

ತಗ್ಗಿದ ಮಳೆ 3 ಬ್ಯಾರೇಜಗಳು ಸಂಚಾರಕ್ಕೆ ಮುಕ್ತ

ಚಿಕ್ಕೋಡಿ:ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಅಬ್ಬರ ಕಡಿಮೆಯಾಗಿದ್ದು,ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿಗಳ ನೀರಿನ ಮಟ್ಟ ಇಳಿಕೆಯಾಗುತ್ತಿದೆ.ಪರಿಣಾಮ 4 ಬ್ಯಾರೇಜಗಳು ಸಂಚಾರಕ್ಕೆ ‌ಮುಕ್ತವಾಗಿವೆ. ನದಿಗಳ ಮಟ್ಟ ಕ್ಷೀಣಿಸಿದ್ದು ಕೃಷ್ಣಾ ನದಿಯ ಯಡೂರ-ಕಲ್ಲೋಳ,ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ ವೇದಗಂಗಾ ನದಿಯ ಅಕ್ಕೋಳ-ಸಿದ್ನಾಳ ಮತ್ತು ಭೋಜವಾಡಿ-ಶಿವಾಪುರ ಬ್ಯಾರೇಜ್‌ಗಳು ಸಂಚಾರಕ್ಕೆ ಮುಕ್ತಗೊಂಡಿವೆ. ದೂಧಗಂಗಾ ನದಿಗೆ 7,040 ಕ್ಯೂಸೆಕ್ ಮತ್ತು ಕೃಷ್ಣಾ ನದಿಗೆ 26,415 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ನದಿಗಳು ಒಡಲು ತುಂಬಿ ಹರಿಯುತ್ತಿವೆ. …

Read More »

ಮಳೆಗಾಲ ನಿರ್ವಹಣೆಗೆ ಮಹಾನಗರ ಪಾಲಿಕೆಯಲ್ಲಿ ಜಂಟಿ ಸಭೆ…

ಮಳೆಗಾಲ ನಿರ್ವಹಣೆಗೆ ಮಹಾನಗರ ಪಾಲಿಕೆಯಲ್ಲಿ ಜಂಟಿ ಸಭೆ… ಹಾನಿ ಸಂಭವಿಸುವ ಮುನ್ನ ಎಚ್ಚೆತ್ತು ಸರ್ವೆ ನಡೆಸಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಿ; ಮಹಾಪೌರ ಮಂಗೇಶ್ ಪವಾರ್ ಅಪಾಯದ ಅಂಚಿನಲ್ಲಿರುವ ಮರಗಳ ಸರ್ವೆ ನಡೆಸಿ, ಹಾನಿ ಸಂಭವಿಸುವ ಮುನ್ನವೇ ಎಚ್ಚೆತ್ತು ಕ್ರಮಕೈಗೊಳ್ಳಬೇಕೆಂದು ಬೆಳಗಾವಿಯ ಮಹಾಪೌರರಾದ ಮಂಗೇಶ್ ಪವಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಬೆಳಗಾವಿ ಮಹಾನಗರ ಪಾಲಿಕೆ, ಅರಣ್ಯ ಇಲಾಖೆ, ಹೆಸ್ಕಾಂ ಮತ್ತು ಮರ ಕತ್ತರಿಸುವ ಗುತ್ತಿಗೆದಾರರ ಮಳೆಗಾಲ ಆರಂಭದ ಹಿನ್ನೆಲೆ ಮುಂಜಾಗೃತಾ ಸಭೆಯನ್ನು …

Read More »

ಅಪ್ರಾಪ್ತ ಬಾಲಕಿ ‌ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ

ಅಪ್ರಾಪ್ತ ಬಾಲಕಿ ‌ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ ಚಿಕ್ಕೋಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಪಟಿ ಸ್ವಾಮೀಜಿ ಲೋಕೇಶ್ವರ ಜೈಲು ಸೇರುತ್ತಿದ್ದಂತೆ ಆತನ ಮಠ ಸಂಪೂರ್ಣ ಧ್ವಂಸ ಮಾಡಲಾಗಿದೆ. ಆರೋಪಿ ಕಪಟಿ ಸ್ವಾಮೀಜಿ ಲೋಕೇಶ್ವರ ಅನಧಿಕೃತವಾಗಿ ಮಠ ಕಟ್ಟಡ ನಿರ್ಮಾಣ ಮಾಡಿದ್ದರು.ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಸರ್ವೇ ನಂ. 225ರಲ್ಲಿ ಸರಕಾರಿ ಗಾಯರಾಣಾ ಜಮೀನಿನಲ್ಲಿ 8 ಎಕರೆ ಜಾಗವನ್ನ ಅತಿಕ್ರಮಣ ಮಾಡಿಕೊಂಡು …

Read More »

ಆಯತಪ್ಪಿ ಹಳ್ಳಕ್ಕೆ ಬಿದ್ದ ಎತ್ತಿನಗಾಡಿ: ಅಣ್ಣ-ತಮ್ಮ ಸೇರಿ ಒಂದು ಎತ್ತು ನೀರುಪಾಲು

ಚಿಕ್ಕೋಡಿ (ಬೆಳಗಾವಿ): ಎತ್ತಿನ ಗಾಡಿ ಆಯತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ಮಂಗಳವಾರ (ಮೇ 27) ನಡೆದಿದೆ. ಗಣೇಶ್​ ಸಂಜು ಕಾಂಬಳೆ (9), ದೀಪಕ್​ ಸಂಜು ಕಾಂಬಳೆ (11) ಮೃತ ಅಣ್ಣ- ತಮ್ಮ. ಎತ್ತಿನಗಾಡಿಯಲ್ಲಿ ಸಂಬರಗಿಯಿಂದ ನಾಗನೂರ ಪಿಎ ಗ್ರಾಮಕ್ಕೆ ಹೋಗುತ್ತಿದ್ದಾಗ ದಾರಿಮಧ್ಯದಲ್ಲಿ ಈ ಅವಘಡ ಸಂಭವಿಸಿದೆ. ಒಟ್ಟು ನಾಲ್ಕು ಜನ …

Read More »

ಮುಂಗಾರು ಮಳೆಗೆ ಬಾಯ್ತೆರೆದ ಗುಂಡಿಗಳು

ಬೆಳಗಾವಿ:‌ ಮುಂಗಾರು ಮಳೆಗೆ ಕುಂದಾನಗರಿಯ ಮುಖ್ಯ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿ ವರ್ಷವೂ ನಮಗೆ ಈ ಗೋಳು ತಪ್ಪಿದ್ದಲ್ಲ. ನಮ್ಮ ಪ್ರಾಬ್ಲಂ ಕೇಳುವವರೇ ಇಲ್ಲ ಎಂದು ಆಡಳಿತಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿ ನಗರ ಪ್ರವೇಶಿಸುವ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗಾಂಧಿ ನಗರ ಸೇತುವೆ ಬಳಿಯ ಸರ್ವೀಸ್ ರಸ್ತೆಯಲ್ಲಿ ಗುಂಡಿಗಳ ಸಾಮ್ರಾಜ್ಯ ಸೃಷ್ಟಿಯಾಗಿದೆ. ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುತ್ತಿದ್ದಾರೆ. ಜನರು ಇಷ್ಟೆಲ್ಲಾ …

Read More »

ಒಳಚರಂಡಿ ಕಳಪೆ ಕಾಮಗಾರಿಗೆ ಬೇಸತ್ತ ಜನ

ಹುಕ್ಕೇರಿ : ಒಳಚರಂಡಿ ಕಳಪೆ ಕಾಮಗಾರಿಗೆ ಬೇಸತ್ತ ಜನ ಕಳಪೆ ಮಟ್ಟದ ಒಳಚರಂಡಿ ಕಾಮಗಾರಿ ಅಧಿಕಾರಿಗಳ ವಿರುದ್ಧ ಜನರ ಹಿಡಿಶಾಪ ಹುಕ್ಕೇರಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿ ಪುರಸಭೆ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸುವಂತೆ ಆಗ್ರಹ

Read More »

ರೈತರು ಮುಂಗಾರು ಬೆಳೆ ಬೆಳೆಯಲು ಸಿದ್ದರಾಗಿ – ಶಾಸಕ ನಿಖಿಲ್ ಕತ್ತಿ

ಹುಕ್ಕೇರಿ : ರೈತರು ಮುಂಗಾರು ಬೆಳೆ ಬೆಳೆಯಲು ಸಿದ್ದರಾಗಿ – ಶಾಸಕ ನಿಖಿಲ್ ಕತ್ತಿ ಹುಕ್ಕೇರಿ ತಾಲೂಕಿನಲ್ಲಿ ಮಳೆ ಚನ್ನಾಗಿ ಆಗಿದ್ದರಿಂದ ರೈತರು ಜಮೀನುಗಳನ್ನು ಹದ ಮಾಡಿದ್ದರ ಹಿನ್ನಲೆಯಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ಬಿಜ ವಿತರಣಾ ಕಾರ್ಯಕ್ರಮ ಜರುಗಿತು. ಹುಕ್ಕೇರಿ ಕೃಷಿ ಇಲಾಖೆ ಆವರಣದಲ್ಲಿ ಜರುಗಿದಚಸರಳ ಸಮಾರಂಭದಲ್ಲಿ ಶಾಸಕ ನಿಖಿಲ್ ಕತ್ತಿ ಬೀಜಗಳಿಗೆ ಪೂಜೆ ಸಲ್ಲಿಸಿ ರೈತರಿಗೆ ಸೋಯಾಬೀನ, ಗೋವಿನ ಜೋಳ ಮತ್ತು ಹೆಸರು ಕಾಳುಗಳನ್ನು ವಿತರಣೆ ಮಾಡಿದರು. ನಂತರ …

Read More »

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ…

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ… ಬೆಳಗಾವಿ : ಕೆಲ ತಿಂಗಳಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಪ್ರಾರಂಭ ಮಾಡಲಾಗಿತು. ಈ ಸಂಸ್ಥೆಯ ಅಂಗವಾದ ಚಿಕ್ಕೋಡಿ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಅನ್ನು ಇಂದು ಪ್ರಾರಂಭ ಮಾಡಿ ಅಧ್ಯಕ್ಷ, ಉಪಾಧ್ಯಕ್ಣ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಖಜಾಂಚಿಯನ್ನು ಆಯ್ಕೆ ಮಾಡಲಾಗಿದೆ. ಸೋಮವಾರ ಬೆಳಗಾವಿ ಕನ್ನಡ ಸಾಹಿತ್ಯ ಭವ‌‌ನದಲ್ಲಿ ನಡೆದ …

Read More »

ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ

ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ ಹಿರೆಬಾಗೇವಾಡಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ಹಿರೇಬಾಗೇವಾಡಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು. ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ, ಬೀಜಗಳನ್ನು ವಿತರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಅವರು ಚಾಲನೆ ನೀಡಿದರು. ಈ ವೇಳೆ ರೈತರು, ಗ್ರಾಮದ ಮುಖಂಡರು, ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Read More »

ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ

ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಈ ಕೆಳಗಿನ ಸೂಚನೆಗಳನ್ನು ನೀಡಿದರು… *ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. *ಸದ್ಯಕ್ಕೆ ಆತಂಕ ಪಡುವ …

Read More »