Breaking News

ಬೆಳಗಾವಿ

ಖಾಸಗಿ ಶಾಲಾ ವಾಹನಗಳಿಗೆ 45 ಸಾವಿರ ರೂ. ದಂಡ

ಬೆಳಗಾವಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ 85 ವಾಹನಗಳ ವಿರುದ್ಧ ಜಿಲ್ಲಾ ಪೊಲೀಸರು 129 ಕೇಸ್ ದಾಖಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ ತಾಲೂಕು ಸೇರಿದ್ದಂತೆ ಇತರ ಕಡೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸರು ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ 85 ವಾಹನಗಳ ವಿರುದ್ಧ 129 ಕೇಸ್ ದಾಖಲಿಸಿ 45,800 ರೂ.ದಂಡ ವಿಧಿಸಿದ್ದಾರೆ.  ಶಾಲಾ ವಾಹನಗಳ ಚಾಲಕರು …

Read More »

ಗಣೇಶನ ಜೊತೆಗೆ ಗಾಲ್ಫ್ ಮೈದಾನದ ಚಿರತೆಗೂ ನಿತ್ಯ ಪೂಜೆ

ಬೆಳಗಾವಿ: ಕಳೆದ 1 ತಿಂಗಳಿನಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಅಡಗಿ ಕುಳಿತುಕೊಂಡಿರುವ ಚಾಣಾಕ್ಷ ಚಿರತೆ ಇನ್ನೂ ಸೆರೆಯಾಗಿಲ್ಲ. ಆದರೆ ಕುಂದಾ ನಗರಿ ಜನರು ಮಾತ್ರ ಗಣೇಶನ ಜೊತೆಗೆ ಚಿರತೆಗೂ ದಿನನಿತ್ಯ ಪೂಜೆ ಸಲ್ಲಿಸುತ್ತಿದ್ದಾರೆ. ಹೌದು, ಇಲ್ಲಿನ ವಿಶ್ವೇಶ್ವರಯ್ಯ ನಗರದ ಮನೆಯೊಂದರಲ್ಲಿ ಗಣೇಶನ ಮೂರ್ತಿ ಜೊತೆಗೆ ಚಿರತೆಯ ಗೊಂಬೆಯನ್ನು ಇಟ್ಟು ಪೂಜೆ ಸಲ್ಲಿಸಲಾಗುತ್ತಿದೆ. ಕಳೆದೊಂದು ತಿಂಗಳ ಹಿಂದೆ ಜಾಧವ್ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಗಾಲ್ಫ್ ಮೈದಾನ ಸೇರಿದ ಚಿರತೆ …

Read More »

ಆಪರೇಶನ್ ಚೀತಾಗೆ ಬರೋಬ್ಬರಿ 50 ಲಕ್ಷಕ್ಕೂ ಅಧಿಕ ಹಣ ಖರ್ಚಾಗಿದ್ದು ಕಾರ್ಯಾಚರಣೆ ಮಾತ್ರ ವಿಫಲ ,ಸಾರ್ವಜನಿಕರ ಆಕ್ರೋಶ

ಕಳೆದ 1 ತಿಂಗಳಿನಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಆಪರೇಷನ್ ಚೀತಾ ಕೊನೆಗೂ ಫೇಲ್ ಆಗಿದೆ. ಇಂದು 30ನೇ ದಿನದ ಕಾರ್ಯಾಚರಣೆ ನಡೆದಿದ್ದು. ಕೊನೆಯ ದಿನ ಕಾರ್ಯಾಚರಣೆ ಎಂಬ ನಿಟ್ಟಿನಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಯಿಂದ ಭರ್ಜರಿ ಕೋಂಬಿಂಗ್ ನಡೆದರೂ ಚಿರತೆ ಮಾತ್ರ ಪತ್ತೆಯಾಗಿಲ್ಲ. ಹೌದು ಕುಂದಾನಗರಿ ಬೆಳಗಾವಿಯಲ್ಲಿ ಚಾಲಾಕಿ ಚಿರತೆಯ ಕಣ್ಣಾಮುಚ್ಚಾಲೆ ಮುಂದುವರೆದಿದೆ. ಕಳೆದ ಅಗಷ್ಟ 5ರಂದು ಪ್ರತ್ಯಕ್ಷವಾಗಿದ್ದ ಚಿರತೆ ಇಡೀ ಬೆಳಗಾವಿ ಜನತೆಯ ನಿದ್ದೆಗೆಡಿಸಿದೆ.   30 ದಿನಗಳಿಂದ …

Read More »

ರಾಯಬಾಗದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿದ ಹದಿನೈದು ಕುರಿಗಳು ಸ್ಥಳದಲ್ಲೇ ಸಾವು…!

ಚಿಕ್ಕೋಡಿ: ರೈಲು ಹಳಿಯಲ್ಲಿ ಹೋಗುತ್ತಿದ್ದ ಕುರಿಗಳ ಮೇಲೆ ರೈಲು ಹರಿದ ಪರಿಣಾಮ 15 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ರೈಲು ನಿಲ್ದಾಣದ ಹೊರವಲಯದಲ್ಲಿರುವ ರೈಲ್ವೆ ಗೇಟ್ ಬಳಿ ಅವಘಡ ಸಂಭವಿಸಿದೆ. ಚಿಂಚಲಿ ಪಟ್ಟಣದ ವಸಂತ ಜಾವೇದಾರ್ ಎಂಬುವವರಿಗೆ ಸೇರಿದ 15 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ …

Read More »

ಗಣೇಶ್ ಚತುರ್ಥಿ ನಿಮಿತ್ತ ಅನ್ನ ಸಂತರ್ಪಣೆ ಮಾಡಿದ ಸಾಯನ್ನವರ ದಂಪತಿಗಳು

  ಗೋಕಾಕ:ನಾಡಿನೆಲ್ಲೆಡೆ ಗಣೇಶನ ಅಬ್ಬರ ಜೋರಾಗಿದೆ ಸುಮಾರು ಎರಡು ವರ್ಷ ಕೊವಿಡ ಮಹಾಮಾರಿಯ ಕಾರಣ ಎಲ್ಲೆಡೆ ಗಣೇಶ್ ಉತ್ಸವ ಅಷ್ಟೊಂದು ಅದ್ದೂರಿಯಾಗಿ ನಡೆದಿರಲಿಲ್ಲ ಇನ್ನು ಇತ್ತಿಚ್ಚ್ಚಿಗೆ ಎಲ್ಲೆಡೆ ಸಂಭ್ರಮಕ್ಕೆ ಪರವಾನಿಗೆ ಸಿಕ್ಕಿದ್ದಕ್ಕೆ ಎಲ್ಲರೂ ಗಣೇಶ್ ನ ಆಗಮನ ವನ್ನಾ ಜೋರಾಗಿ ಅದ್ದುರಿಯಾಗಿ ಮಾಡಿಕೊಂಡಿದ್ದಾರೆ   ಅದೇರೀತಿ ಗೋಕಾಕ ನಗರದ ಎಪಿಎಂಸಿ ಮಾಜಿ ನಿರ್ದೇಶಕರು ಶ್ರೀ ಬಸವರಾಜ ಸಾಯನ್ನವರ ದಂಪತಿಗಳು ಮಹಾಲಿಂಗೇಶ್ವರ ನಗರದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಹಮ್ಮಿ ಕೊಂಡಿದ್ದಾರೆ …

Read More »

ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ

ಬೆಳಗಾವಿ: ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಸ್ಥಳೀಯ ಬಿಜೆಪಿ ನಾಯಕ, ಬೆಳಗಾವಿ ಮಹಾನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ನೇತೃತ್ವದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಈ ಬಾರಿ ಗಣೇಶೋತ್ಸವ ವೀರ್ ಸಾವರ್ಕರ್ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಲಾಗಿದೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಒಟ್ಟು 378 ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಗಣೇಶ ಪ್ರತಿಷ್ಠಾಪನೆಗೂ ಮುನ್ನವೇ …

Read More »

ಪೊಲೀಸ್ ಎಂದು ನಂಬಿಸಿ ಮಹಿಳೆಯ ಚಿನ್ನಾಭರಣ ಎಗರಿಸಿದ್ದ ಆರೋಪಿ ಅಂದರ್

ಚಿಕ್ಕೋಡಿ: ತಾನು ಪೊಲೀಸ್ ಎಂದು ನಂಬಿಸಿ ಮಹಿಳೆಯ ಬಳಿ ಇದ್ದ ಚಿನ್ನಾಭರಣ ಎಗರಿಸಿದ್ದ ಆರೋಪಿಯನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಾರಾಷ್ಟ್ರದ ಸಾಂಗ್ಲಿಯ ಮಹಮ್ಮದ್ ಯೂಸುಫ್ ಇರಾನಿ ಎಂದು ಗುರುತಿಸಲಾಗಿದೆ. ಇತ್ತಿಚೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ವಿಜಯಲಕ್ಷ್ಮೀ ರಾಜು ಚೌಗಲೆ ಎಂಬ ಮಹಿಳೆಗೆ ತಾನು ಪೊಲೀಸ್ ಎಂದು ನಂಬಿಸಿ, ಬೇರೆ ಕಡೆ ಗಮನ ಸೆಳೆದು 1.5 ಲಕ್ಷ ರೂ. ಬೆಲೆಯ ಚಿನ್ನಾಭರಣ ಕದ್ದು ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ …

Read More »

ಲೋಕಕಲ್ಯಾಣಕ್ಕಾಗಿ 220 ಕಿ.ಮೀ. ಉರುಳು ಸೇವೆ ಮಾಡಿದ ಪಂಡರಪುರದ ವಿಠ್ಠಲನ ಭಕ್ತ

ಚಿಕ್ಕೋಡಿ: ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ದೇವಸ್ಥಾನಗಳಲ್ಲಿ ಉರುಳು ಸೇವೆ ಮಾಡೋದನ್ನ ಕೇಳಿದ್ದೀವಿ, ನೋಡಿದ್ದೀವಿ‌. ಅಷ್ಟೆ ಯಾಕೆ ಪಾದಯಾತ್ರೆ ಮೂಲಕ ತಮ್ಮ ಮನೆದೇವರ ಹರಕೆ ತೀರಿಸಿದವರನ್ನೂ ಸಹ ನೋಡಿರ್ತೀವಿ. ಆದರೆ ಇಲ್ಲೊಬ್ಬ ವಿಠ್ಠಲನ ಭಕ್ತ ಲೋಕಕಲ್ಯಾಣಕ್ಕಾಗಿ ಸುಮಾರು 220 ಕಿ.ಮೀ. ಉರುಳು ಸೇವೆ ಮಾಡಿ ಪಂಡರಪುರದ ವಿಠ್ಠಲನ ಕೃಪೆಗೆ ಪಾತ್ರನಾಗಿದ್ದಾ‌ನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೇವನೂರು ಗ್ರಾಮದ ನಿವಾಸಿ ಶಹಾಜೀ ಜಾಧವ್ ಉರುಳು ಸೇವೆ ಸಲ್ಲಿಸಿದ ಭಕ್ತ. ಶಹಾಜೀ ಅಥಣಿ ತಾಲೂಕಿನ …

Read More »

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಹುಬ್ಬಳ್ಳಿಯಲ್ಲಿ ಕಿಂಗ್‌ಪಿನ್‌ ಅರೆಸ್ಟ್

ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಪಿಟಿಸಿಎಲ್ ಕಿರಿಯ ಅಭಿಯಂತರ(ಜೆಇ)ಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 13ಕ್ಕೇರಿದೆ. ಈ ಪರೀಕ್ಷೆಯ ಅಕ್ರಮದ ಕಿಂಗ್​ ಪಿನ್​ ಎಂದೇ ಕರೆಯಲಾಗುತ್ತಿದ್ದ ಜಿಲ್ಲೆಯ ಗೋಕಾಕ್​ ತಾಲೂಕಿನ ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ. ಬಂಧಿತ ಆರೋಪಿಯನ್ನು ಪೊಲೀಸರು ಗೋಕಾಕ್​ನ ಪ್ರಿನ್ಸಿಪಲ್ ಜೆಎಂಎಫ್‌ಸಿಗೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು 7ದಿನಗಳ ವರೆಗೆ …

Read More »

ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ

ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ ಮಾಡಿದ್ದಾರೆ. ಆರೋಪಿಗಳು ಪರಾರಿಯಾಗಿರುವ ಘಟನೆ ಜೋಯ್ಡಾ ತಾಲೂಕಿನ ಉಸೋಡ ಬಳಿ ನಡೆದಿದೆ. ಹೌದು GA 07 C 9384 ನಂಬರಿನ ಸಫಾರಿ ವಾಹನದಲ್ಲಿ ಅಕ್ರಮವಾಗಿ ಸಾಗವಾನಿ ಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. …

Read More »