Breaking News

ಬೆಳಗಾವಿ

K.S.R.T.C. ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ 8ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‍ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದ ಬಳಿ ಸಂಭವಿಸಿದೆ. 17 ಜನ ಪ್ರಯಾಣಿಕರು ಈ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಏಕಾಏಕಿ ಬಸ್ ರಸ್ತೆ ಬಿಟ್ಟು ಕೆಳಗೆ ಇಳಿಯುತ್ತಿದ್ದಂತೆ ಪ್ರಯಾಣಿಕರು ತುಂಬಾ ವಿಚಲಿತರಾದರು. ಈ ವೇಳೆ ಬಸ್‍ನಲ್ಲಿ ಹ್ಯಾಂಡಲ್, ಕಿಡಕಿ ಆಂಗಲ್ ಬಡಿದು 8 ಪ್ರಯಾಣಿಕರಿಗೆ ಗಾಯವಾಗಿದೆ. ಓರ್ವ ಪ್ರಯಾಣಿಕರ ಕೈ ಮುರಿದಿದ್ದು, ಇನ್ನುಳಿದ ಪ್ರಯಾಣಿಕರಿಗೆ ಸಣ್ಣ …

Read More »

ಸತೀಶ್ ಜಾರಕಿಹೊಳಿ ಯಾವ ಕ್ಷೇತ್ರ ದಿಂದ ಸ್ಪರ್ಧೆ ಮಾಡ್ತಾರೆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ

ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿ ಆಯಾ ಕ್ಷೇತ್ರದಲ್ಲಿ ಜನಪ್ರಿಯತೆ, ಆಕರ್ಷಣಿಯ ವ್ಯಕ್ತಿತ್ವ ಹೊಂದಿರಬೇಕು. ಒಳ್ಳೆಯ ಕೆಲಸ ಮಾಡಿರಬೇಕು. ಎಲ್ಲಾ ಪಕ್ಷಗಳ ಟಿಕೆಟ್ ಅಂತಿಮವಾದ ಮೇಲೆ ಕೊನೆಯ ಸರ್ವೇ ಮಾಡಿ ನಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಎರಡು ಕ್ಷೇತ್ರಗಳಿಂದ ಸತೀಶ ಜಾರಕಿಹೊಳಿ ಸ್ಪರ್ಧಿಸಬೇಕು ಎಂಬ ಬೆಂಬಲಿಗರ ಒತ್ತಾಯದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗೋಕಾಕ್‍ನಲ್ಲಿ ಉತ್ತರಿಸಿದ ಸತೀಶ ಜಾರಕಿಹೊಳಿ ಆ ರೀತಿ ಇರಬಹುದು, …

Read More »

ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ.: ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ: ಭಾಸ್ಕರ್‍ರಾವ್

ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ. ಬಾಂಬೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಇರಿಸಿ, ಅವರ ವಿಡಿಯೋ ಮಾಡಿ ಬ್ಲಾಕ್‍ಮೇಲ್ ಮಾಡಿ ಇವರು ಅಧಿಕಾರಕ್ಕೆ ಬಂದಿದ್ದಾರೆ. ಕೆಂಪು ಕೋಟೆ ಮೇಲೆ ನಿಂತು ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ. ನಾನು ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆದರೆ ಇಷ್ಟೆಲ್ಲಾ ಭ್ರಷ್ಟಾಚಾರ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್‍ರಾವ್ ಆರೋಪಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ …

Read More »

ಅದ್ದೂರಿ ಗಣೇಶೋತ್ಸವ ಮಾಡುತ್ತೇವೆ, ಡಿಜೆ ಬಳಕೆ ಮಾಡುತ್ತೇವೆ. ವಿದ್ಯುತ್ ಶುಲ್ಕ ಪಾವತಿ ಮಾಡಲ್ಲ:ಯತ್ನಾಳ್

ಅಥಣಿ, : ಇತರೆ ರಾಜ್ಯಗಳಂತೆ ಕರ್ನಾಟಕದಲ್ಲೂ ಅಪ್ಪ ಮಕ್ಕಳಿಗೆ ಟಿಕೆಟ್ ನೀಡಬಾರದೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೇಳಿದ್ದಾರೆ.   ಬಿಜೆಪಿಯಲ್ಲಿ ಕುಟುಂಬಕ್ಕೆ ಒಂದೇ ಟಿಕೆಟ್ ಎಂದು ನಿಯಮ ಜಾರಿಯಾಗಿದೆ. ಈ ಕುರಿತು ನಾನು ಕೂಡ ಕರ್ನಾಟಕದಲ್ಲಿ ತ್ವರಿತವಾಗಿ ಈ ನಿಯಮ ಜಾರಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅಪ್ಪ ಮಕ್ಕಳಿಗೆ ಹಾಗೂ ಕುಟುಂಬ ರಾಜಕೀಯಕ್ಕೆ …

Read More »

500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿ,.

500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟಪ್ರಭಾದ ಬಾರ್ ನಲ್ಲಿ ಮಂದ ಬೆಳಕಿನಲ್ಲಿ ಕ್ಯಾಷಿಯ್ ಗೆ ಈ ನಕಲಿ ನೋಟುಗಳನ್ನು ಕೊಡಲು ಆರೋಪಿಗಳು ಮುಂದಾಗಿದ್ದರು. 500 ರೂಪಾಯಿ ಮುಖಬೆಲೆಯ ಈ ನೋಟುಗಳ ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಅಂತಾ ಇತ್ತು. ಈ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು …

Read More »

ಲಕ್ಷ್ಮಣ ಸವದಿ ಕಾರು ಅಪಘಾತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು. ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ …

Read More »

ಶತಮಾನದ ಇತಿಹಾಸ ಹೊಂದಿರುವ ಗಣೇಶೋತ್ಸವಕ್ಕೆ ಕುಂದಾನಗರಿ ಸಜ್ಜು

ಬೆಳಗಾವಿ: ಶತಮಾನದ ಇತಿಹಾಸ ಹೊಂದಿರುವ ಗಣೇಶೋತ್ಸವಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ವಿಘ್ನ ನಿವಾರಕನನ್ನು ಬುಧವಾರ ಜನರು ಅದ್ದೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. 1905ರಿಂದ ಇಲ್ಲಿ ಪ್ರತಿವರ್ಷ ಸಾರ್ವಜನಿಕ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ. ಕಳೆದ ಎರಡು ವರ್ಷ ‘ಚೌತಿ’ ಮೇಲೆ ಕೋವಿಡ್‌-19 ಬರೆ ಎಳೆದಿತ್ತು. ಈ ಬಾರಿ ಕೊರೊನಾ ಉಪಟಳ ಇಲ್ಲದೇ ಹಬ್ಬದ ಸಂಭ್ರಮ ಇಮ್ಮಡಿಗೊಂಡಿದೆ. ಸರ್ವಭಾಷಿಕರು ಮತ್ತು ಸರ್ವಧರ್ಮೀಯರು ಸಡಗರದಿಂದ ಗಣೇಶ ಚತುರ್ಥಿ ಆಚರಣೆಗೆ ತಯಾರಿ ನಡೆಸಿದ್ದಾರೆ. 378 ಕಡೆ ಸಾರ್ವಜನಿಕ ಗಣೇಶ: …

Read More »

ಬೆಳಗಾವಿ ಗಣೇಶೋತ್ಸವ: ಮಹಾಪುರುಷರ ಪೋಸ್ಟರ್‌ಗೆ ಅನುಮತಿ ಕಡ್ಡಾಯ -ಅಲೋಕ್‌ಕುಮಾರ್‌

ಬೆಳಗಾವಿ: ‘ಸಾರ್ವಜನಿಕ ಗಣೇಶ ಮಂಟಪಗಳಲ್ಲಿ ಯಾವುದೇ ಮಹಾಪುರುಷರು, ವ್ಯಕ್ತಿಗಳ ಪೋಸ್ಟರ್‌ ಹಾಕಲು ಆಯಾ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಎಡಿಜಿಪಿ ಅಲೋಕ್‌ಕುಮಾರ್‌ ತಿಳಿಸಿದರು. ಈ ಬಾರಿ ನಗರದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆದ ಹಿನ್ನೆಲೆಯಲ್ಲಿ, ಮಂಗಳವಾರ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಅವರು, ಮಧ್ಯಮಗಳೊಂದಿಗೆ ಮಾತನಾಡಿದರು.   ‘ಮಂಟಪಗಳಲ್ಲಿ ವೀರ ಸಾವರ್ಕರ್‌ ಭಾವಚಿತ್ರ ಹಾಕುವಂತೆ ಕೆಲವರು ಅಭಿಯಾನ ನಡೆಸಿದ್ದಾರೆ. ಸಾವರ್ಕರ್‌, ನೆಹರೂ, ಬಾಲಗಂಗಾಧರ ತಿಲಕ್‌, ಭಗತ್‌ ಸಿಂಗ್‌ …

Read More »

ವಿಘ್ನನಾಶಕನ ಹಬ್ಬ ಆರೋಗ್ಯಪೂರ್ಣವಾಗಿರಲಿ:

ಕೊರೊನಾದಂಥ ಮಹಾವಿಘ್ನದಿಂದಾಗಿ ಎರಡು ವರ್ಷಗಳಲ್ಲಿ ಗಣಪನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವಕಾಶ ಆಗಲೇ ಇಲ್ಲ. ಈಗ ಸಾರ್ವಜನಿಕವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸಲು ಕೊನೆಯ ಹಂತದ ಸಿದ್ಧತೆಗಳು ನಡೆದಿವೆ. ಈ ಸಂಭ್ರಮದ ಕ್ಷಣದಲ್ಲೇ ನಾವು ಮೈ ಮರೆಯುವ ಹಾಗಿಲ್ಲ. ಈ ವರ್ಷವೂ ನಾವೆಲ್ಲರೂ ಎಚ್ಚರಿಕೆಯಿಂದ ಹಬ್ಬವನ್ನು ಆಚರಿಸ ಬೇಕಾಗಿದೆ. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೊರೊನಾ ಸೋಂಕಿನ ಹಾವಳಿ ನಿಧಾನವಾಗಿ ಇಳಿಕೆಯಾಗುತ್ತಿದೆ ಮತ್ತು ಸೋಂಕಿನ ಪ್ರಭಾವದಿಂದ ಉಂಟಾಗಿರುವ ಆರ್ಥಿಕ …

Read More »

ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿ-ನಿರ್ಮಲಕುಮಾರ್ ಸುರಾನಾ ಕರೆ

ಬೆಳಗಾವಿ ನಗರದಲ್ಲಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಬಿಜೆಪಿ ಪಕ್ಷದ ಪದಾಧಿಕಾರಿಗಳ ಸಭೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ ಇವರ ಮಾರ್ಗದರ್ಶನದಲ್ಲಿ ನಡೆಯಿತು. ಹೌದು ಇಂದು ಬೆಳಗಾವಿ ನಗರದ ಗೊಮಟೇಶ ಸಭಾಗೃಹದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಪದಾಧಿಕಾರಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ, ಬೆಳಗಾವಿ ಸಂಸದರಾದ ಮಂಗಳಾ ಸಂಗಡಿ, ಶಾಸಕರಾದ ಅಭಯ್ ಪಾಟೀಲ್, …

Read More »