Breaking News
Home / ಜಿಲ್ಲೆ / ಬೆಳಗಾವಿ (page 21)

ಬೆಳಗಾವಿ

ಗೋಕಾಕ್ ತಾಲೂಕಿನ ಕಡಬಗಟ್ಟಿ ಗುಡ್ಡದ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದಲ್ಲಿ ಭಕ್ತರು ದೇವಿಗೆ ಸಾರಾಯಿ, ಸಿಗರೇಟು ಅರ್ಪಣೆ ಮಾಡುತ್ತಿರುವುದು ವಿಶೇಷ

ಬೆಳಗಾವಿ : ಸಾಮಾನ್ಯವಾಗಿ ದೇವರಿಗೆ ಭಕ್ತರು ಹೂವು, ಹಣ್ಣು, ತೆಂಗಿನಕಾಯಿ ಅರ್ಪಿಸುವುದನ್ನು ನಾವು ನೀವೆಲ್ಲ ನೋಡಿದ್ದೇವೆ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ಭಕ್ತರು ದೇವಿಗೆ ಸಾರಾಯಿ, ಸಿಗರೇಟು ಅರ್ಪಣೆ ಮಾಡುತ್ತಿರುವುದು ವಿಶೇಷವಾಗಿದೆ. ಈ ದೇವಾಲಯದ ಮತ್ತೊಂದು ವಿಶೇಷ ಎಂದರೆ ಮಂಗಳಮುಖಿಯೊಬ್ಬರು ದೇವಿಗೆ ಪೂಜೆ ಸಲ್ಲಿಸುತ್ತಿದ್ದಾರೆ.  ಜಾತ್ರೆ ಮಹೋತ್ಸವದ ಹಿನ್ನೆಲೆ ದೇವಾಲಯಕ್ಕೆ ಭಕ್ತರ ದಂಡೇ ಹರಿದುಬಂದಿದ್ದು, ವಿಶೇಷ ಪೂಜೆ ಸಲ್ಲಿಸಿದರು. ಹೀಗೆ ದೇವಿಗೆ ಭಕ್ತರು ಸಾರಾಯಿ ಕುಡಿಸಿ, ಸಿಗರೇಟು ಸೇದಿಸುತ್ತಿರುವುದು ಗೋಕಾಕ್ ತಾಲೂಕಿನ ಕಡಬಗಟ್ಟಿ …

Read More »

ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ಜೀವನವನ್ನು ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ 4 ರೈತ ಕುಟುಂಬಗಳ ವಾರಸುದಾರರಿಗೆ ತಲಾ 5 ಲಕ್ಷ ರೂ.ಗಳ ಧನಾದೇಶ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

* ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಾರುಗೋಪ್ಪ ಗ್ರಾಮದಲ್ಲಿ ಶ್ರೀ ಚೆನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಬೆಳಗಾವಿಯಲ್ಲಿ ತಟ್ಟದ ಬಂದ್ ಬಿಸಿ, ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಬೆಳಗಾವಿ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಇಂದು ಕೆಲ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಕೂಡ ಬೆಳ್ಳಂಬೆಳಗ್ಗೆ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಕರವೇ ಜಿಲ್ಲಾಧ್ಯಕ್ಷ ವಾಜೀದ ಹಿರೇಕೂಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. “ನಮ್ಮದು ನಮ್ಮದು ಕಾವೇರಿ ನಮ್ಮದು” ಎಂದು ಘೋಷಣೆ ಕೂಗಿದ ಕರವೇ ಕಾರ್ಯಕರ್ತರ ಪ್ರತಿಭಟನೆಗೆ ರೈತ …

Read More »

ಚಿಕ್ಕೋಡಿ: ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸಿ ವಿಶಿಷ್ಟ ರೀತಿಯಲ್ಲಿ ಹರಕೆ ತೀರಿಸಿದ ಭಕ್ತ

ಚಿಕ್ಕೋಡಿ(ಬೆಳಗಾವಿ): ದೇವರಿಗೆ ಹರಕೆ ತೀರಿಸುವುದು ಎಂದರೆ ಉರುಳು ಸೇವೆ ಮಾಡುವುದು, ಪಾದಯಾತ್ರೆ ಮಾಡುವುದು, ಉಪವಾಸ, ಬರಿಗಾಲಲ್ಲಿ ಬೆಟ್ಟ ಹತ್ತುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೋರ್ವ ಭಕ್ತ ತನ್ನ ಹರಕೆಯನ್ನು ವಿಶಿಷ್ಟವಾಗಿ ತೀರಿಸುವ ಮೂಲಕ ಗಮನ ಸೆಳೆದಿದ್ದಾನೆ. ಈ ಯುವಕ ಬರೋಬ್ಬರಿ 48 ಕಿ.ಮೀ ದೂರ ಟ್ರ್ಯಾಕ್ಟರ್​ಗೆ ಟ್ರಾಲಿ ಜೋಡಿಸಿಕೊಂಡು ರಿವರ್ಸ್ ಡ್ರೈವ್ ಮಾಡಿಕೊಂಡು ಹೋಗಿ ಹರಕೆ ತೀರಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ನಿವಾಸಿ 25 ವರ್ಷದ ಮಹೇಶ ಅಥಣಿ …

Read More »

ಬೆಳಗಾವಿಯಲ್ಲಿ ಅಕ್ಕಲಕೋಟ ಸ್ವಾಮಿ ಸಮರ್ಥ‌ ಮಹಾರಾಜರ ಮಂದಿರದ ಪ್ರತಿರೂಪ ನಿರ್ಮಿಸಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಬೆಳಗಾವಿ: ಇಲ್ಲಿಯ ಸೋಮನಾಥ ನಗರದ ಜೈ ಕಿಸಾನ್ ಹೋಲ್​ಸೇಲ್ ಬಾಜಿ ಮಾರ್ಕೆಟ್ ಸಾರ್ವಜನಿಕ ಗಣೇಶೋತ್ಸವ ಮಂಡಳಿಯು 35ನೇ ವರ್ಷದ ಗಣೇಶೋತ್ಸವ ನಿಮಿತ್ತ ಈ ಬಾರಿ ಮಹಾರಾಷ್ಟ್ರದ ಅಕ್ಕಲಕೋಟ ಸ್ವಾಮಿ ಸಮರ್ಥ‌ ಮಹಾರಾಜರ ಮಂದಿರದ ಪ್ರತಿರೂಪವನ್ನು ನಿರ್ಮಿಸಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿದೆ.   ಮಂದಿರದ ಒಳಗಡೆ ಸ್ವಾಮಿ ಸಮರ್ಥ‌ ಮಹಾರಾಜರ ಮೂರ್ತಿ ಹಾಗೂ ಅವರ ಜೀವನದ ವಿವಿಧ ಕಾಲಘಟ್ಟದ ಭಾವಚಿತ್ರಗಳು ಕಣ್ಮನ ಸೆಳೆಯುತ್ತಿವೆ. ಇನ್ನು ರಾತ್ರಿ ಹೊತ್ತು ಇಡೀ ಮಂದಿರವು ವಿದ್ಯುತ್ ದೀಪಗಳಿಂದ …

Read More »

ಇಡೀ ವಿಶ್ವವೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಡೆ ತಿರುಗಿ ನೋಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ಅದರತ್ತ ತಿರುಗಿ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು. ಬೆಳಗಾವಿಯಲ್ಲಿಂದು ಪೋಷಣ್​ ಅಭಿಯಾನ ಮಾಸಾಚರಣೆ ಮತ್ತು ಇಲಾಖೆಯ ವಿವಿಧ ನೂತನ ಸಂಸ್ಥೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಭಾಯಿಸುವ ಭಾಗ್ಯ ನನಗೆ ಸಿಕ್ಕಿದೆ. ನಿಜವಾಗಿಯೂ ಪುಣ್ಯದ …

Read More »

ಜನತಾ ದರ್ಶನಕ್ಕೆ ಜನಸಾಗರ: ಸಮಸ್ಯೆ ಆಲಿಸಿದ ಅಧಿಕಾರಿಗಳು, ಶಾಸಕರು

ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ನಡೆದ ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಮಹಿಳೆಯರು, ವೃದ್ಧರು, ಅಂಗವಿಕಲರು ಸೇರಿ ನೂರಾರು ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ತೋಡಿಕೊಂಡರು. ಜಿಲ್ಲಾಧಿಕಾರಿ, ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಆಲಿಸಿದರು. ವಿಠಲ ದೇಸಾಯಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಜಿಲ್ಲಾಡಳಿತದಿಂದ 8 ಕೇಂದ್ರಗಳನ್ನು ತೆರೆಯಲಾಗಿತ್ತು. ಅರ್ಜಿ ಸಲ್ಲಿಸಿದ ಬಳಿಕ ವೇದಿಕೆಗೆ ಆಗಮಿಸಿದ ಜನರು, …

Read More »

ಕಿತ್ತೂರು ಉತ್ಸವಕ್ಕೆ 5 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಕಳಿಸಲು ನಿರ್ಧಾರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : “ಕಳೆದ ವರ್ಷ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸಿ ಎರಡು ಕೋಟಿ ರೂಪಾಯಿ ಅನುದಾನ ನೀಡಿತ್ತು. ಅದೇ ರೀತಿ ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಐದು ಕೋಟಿ ರೂಪಾಯಿ ಅನುದಾನ …

Read More »

ಶಾಲಾ ಬಾಲಕರಿದ್ದ ಬಸ್ಸನ್ನು ಪ್ರವಾಹದ ನೀರಿನಲ್ಲಿ ನುಗ್ಗಿಸಿದ ಚಾಲಕ

ಬೆಳಗಾವಿ : ಮಳೆಯ ಆರ್ಭಟಕ್ಕೆ ಹಳ್ಳದಲ್ಲಿ ಉಂಟಾಗಿದ್ದ ಪ್ರವಾಹದ ನೀರಿನಲ್ಲಿ ಶಾಲಾ ಬಾಲಕರಿದ್ದ ಬಸ್ಸನ್ನು ಎಗ್ಗಿಲ್ಲದೆ ನುಗ್ಗಿಸಿ ಚಾಲಕ ಚಲಾಯಿಸಿದ್ದು, ಇನ್ನೇನು ಬಸ್ ನೀರಲ್ಲಿ ಕೊಚ್ವಿ ಹೋಗುವ ಮಟ್ಟಕ್ಕೆ ಬಂದಾಗ ಎಚ್ಚರಗೊಂಡ ಗ್ರಾಮಸ್ಥರು ಶಾಲಾ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.   ಹುಕ್ಕೇರಿ ತಾಲೂಕಿನಲ್ಲಿ ಮಂಗಳವಾರ ಸಂಜೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿ, ಹಳ್ಳಗಳು …

Read More »