ಮಹಾನಿಂಗ ನಂದಗಾವಿ ಅವರನ್ನೇ ಬೆಳಗಾವಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಮುಂದುವರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇತ್ತಿಚಿಗೆ ಐಪಿಎಸ್ಗೆ ಬಡ್ತಿ ಹೊಂದಿದ್ದ ಮಹಾನಿಂಗ ನಂದಗಾವಿ ಅವರನ್ನು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಸರ್ಕಾರ ಮುಂದುವರಿಸಿದೆ. ಅದೇ ರೀತಿ ವಿವಿಧ ಪೊಲೀಸ್ ಅಧಿಕಾರಿಗಳನ್ನು ಅದೇ ಸ್ಥಾನದಲ್ಲಿ ಮುಂದುವರಿಸಿ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ.
Read More »ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!
ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …
Read More »ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4 . 30ಕ್ಕೆ ಈ ದುರಂತ ಸಂಭವಿಸಿದೆ. ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ …
Read More »ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿತ
ಬೆಳಗಾವಿ (ಆ.25): ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿಸಿ, ಮೆರವಣಿಗೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ಬಸವನಕುಡಚಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ವಿಶಾಲ್ ಕಲ್ಲಪ್ಪ ಪಟಾಯಿ (28) ಮೃತ ವ್ಯಕ್ತಿ. ವಿಶಾಲ ಪಟಾಯಿ ಮಾನಸಿಕ ಅಸ್ವಸ್ಥನಾಗಿದ್ದ. ಈ ವಿಚಾರ ಗ್ರಾಮಸ್ಥರಿಗೂ ಗೊತ್ತಿತ್ತು. ಈತ ಆಗಾಗ ಗ್ರಾಮದವರ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. …
Read More »ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದೆ
ಬೆಳಗಾವಿ : ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಬೆಳಗಾವಿಯಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪಟ್ಟಣದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್ವಾಚ್ ಬಳಸಿ ಪರೀಕ್ಷೆ ಬರೆದು ಸಿಕ್ಕಿಹಾಕಿಕೊಂಡಿದ್ದರು. ಪ್ರಕರಣ ಸಂಬಂಧ ಈಗಾಗಲೇ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಎಸ್ಪಿ ಡಾ ಸಂಜೀವ್ ಪಾಟೀಲ್ ನೇತೃತ್ವದ ತಂಡದಿಂದ ಮತ್ತೆ …
Read More »ಪ್ಲಾಸ್ಟಿಕ್ ಕವರ್ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ತಾಯಿ
ಬೆಳಗಾವಿ: ಪ್ಲಾಸ್ಟಿಕ್ ಕವರ್ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ …
Read More »ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ
ಬೆಂಗಳೂರು : ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಬುಧವಾರ ಪ್ರೆಸ್ ಕ್ಲಬ್ ಬೆಂಗಳೂರು, ಇಲ್ಲಿ ಆಯೋಜಿಸಲಾಗಿದ್ದ ಬ್ಯುಸಿನೆಸ್ ಐಕಾನ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರ ಹಲವಾರು ಬೇಡಿಕೆಗಳಿವೆ. ಪತ್ರಕರರಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಭದ್ರತೆಯ ಅವಶ್ಯಕತೆ ಇದೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ನೀಡುವ ಸಮಿತಿ ರಚಿಸಲು ನಾಳೆಯೇ ಆದೇಶ ಹೊರಡಿಸಲಾಗುವದು. ಅದಕ್ಕಿರುವ ನಿಯಮಗಳನ್ನು ಸರಳೀಕರಣಗೊಳಿಸಲಾಗುವುದು ಎಂದು ತಿಳಿಸಿದರು. ವಿಧಾನಸಭೆಯ ಹತ್ತಿರವೇ ಪ್ರೆಸ್ ಕ್ಲಬ್ ಇದೆ. …
Read More »ಗಣೇಶೋತ್ಸವ ಆಚರಣೆ ವೇಳೆ ಯಾವುದೇ ಅಡೆತಡೆಗಳಾಗದಂತೆ ಕ್ರಮ ವಹಿಸುತ್ತೇವೆ-ಡಾ. ಎಂಬಿ ಬೊರಲಿಂಗಯ್ಯ
ಬೆಳಗಾವಿ ನಗರದಲ್ಲಿ ಈ ಬಾರಿಯ ಗಣೇಶೋತ್ಸವವನ್ನು ಯಾವುದೇ ತೊಂದರೆಗಳಾಗದ ನಿಟ್ಟಿನಲ್ಲಿ ಆಚರಣೆ ಮಾಡುವ ಹಿನ್ನೆಲೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು ಎಲ್ಲರೂ ತಂಡದ ರೀತಿಯಲ್ಲಿ ಕೆಲಸ ಮಾಡಿ ಗಣೇಶೋತ್ಸವ ಯಶಸ್ವಿಗಾಗಿ ಕಾರ್ಯ ನಿರ್ವಹಿಸಬೇಕೆಂದು ನಗರಪೊಲೀಸ್ ಆಯುಕ್ತರಾದ ಡಾ. ಎಂಬಿ ಬೊರಲಿಂಗಯ್ಯ ಹೇಳಿದರು. ಬೆಳಗಾವಿನಗರದ ಸಮಾದೇವಿ ಮಂದಿರದ ಹಾಲ್ನಲ್ಲಿ ನಡೆದ ಗಣೇಶೋತ್ಸವ ಹಿನ್ನೆಲೆ ಕರೆನೀಡಿದ್ದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಬಾರಿ ಗಣೇಶೋತ್ಸವ ಆಚರಣೆ ವೇಳೆ ಯಾವುದೇ ರೀತಿಯ ಅಡೆತಡೆಗಳಾಗದಂತೆ, ಅಹಿತಕರ …
Read More »ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿ
ರಾತ್ರಿ ವೇಳೆ ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹೌದು ರಾತ್ರಿವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ಗಳಿಂದ ಡಿಸೇಲ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಸವದತ್ತಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ದಿನಾಂಕ 14/04/2022 ರಂದು ಸವದತ್ತಿ ತಾಲೂಕಿನ ಯಡ್ರಾಂವಿ ಗ್ರಾಮದ ಮಲ್ಲಿಕಾರ್ಜುನ ಫಕ್ಕೀರಪ್ಪ ಕಗದಾಳ ತಾವು ಚಲಾಯಿಸುವ ಟ್ರಕ್ನ್ನು …
Read More »ಮೇಯರ್ ಸಾಮಾನ್ಯ, ಉಪಮೇಯರ್ ಎಸ್ಸಿ ಮಹಿಳೆ: ಬೆಳಗಾವಿ ಮಹಾನಗರ ಪಾಲಿಕೆ ಮೀಸಲಾತಿ ಘೋಷಣೆ
ಬೆಳಗಾವಿ ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. ಬೆಳಗಾವಿ ಪಾಲಿಕೆ ಮೇಯರ್ ಸಾಮಾನ್ಯ, ಉಪಮೇಯರ್ ಎಸ್ಸಿ ಮಹಿಳೆ ಮೀಸಲಾತಿ ಘೋಷಣೆಯಾಗಿದೆ. ಇದರಿಂದ ಕೊನೆಗೂ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ದಾರಿ ಸುಗಮವಾಗಿದೆ. ಈ ಕುರಿತು ಎರಡೂ ಸ್ಥಾನಗಳಿಗೆ ಸರಕಾರ ಮೀಸಲಾತಿ ಪ್ರಕಟಿಸಿದೆ.
Read More »