ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಿಡಕಲ್ ಡ್ಯಾಂ,ಮತ್ತು ನ ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ. ಕೇವಲ 200 ರೂ ದರದಲ್ಲಿ ಹಿಡಕಲ್ ಡ್ಯಾಂ, ಗೋಕಾಕ್ ಫಾಲ್ಸ್ ದರ್ಶನ ಮಾಡಿಸಲು, ಬೆಳಗಾವಿ ಬಸ್ ನಿಲ್ದಾಣದಿಂದ ಬೆಳಗ್ಗೆ 9:00 ಗಂಟೆಗೆ ಬಸ್ …
Read More »ವಿದ್ಯುತ್ ಟಿಸಿ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು
ಮೂಡಲಗಿ: ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸ್ ಫಾರ್ಮರ್ನಲ್ಲಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಿಗಡಿ ಗ್ರಾಮದ ಹತ್ತಿರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿ.ಸಿ) ದುರಸ್ಥಿ ವೇಳೆಯಲ್ಲಿ ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (38) ಟ್ರಾನ್ಸ್ ಫಾರ್ಮರ್ ಮೇಲೆಯೇ ಸಾವನ್ನಪಿದು. ಎಲ್ಲವನ್ನೂ ಸರಿಯಾಗಿ ಚಕ್ ಮಾಡಿಕೊಂಡೆ ಕೆಲಸ ಶುರು ಮಾಡಿದ್ದ ಲೈನ್ ಮ್ಯಾನ್, …
Read More »ಬೆಳಗಾವಿಯ ಬಿಮ್ಸ್ ರಾಜ್ಯಕ್ಕೆ ಪ್ರಥಮ.. ದೇಶದಲ್ಲಿ ಎಷ್ಟನೇ ಸ್ಥಾನ?
ಬೆಳಗಾವಿ: ಕಳೆದ ಎರಡು ವರ್ಷಗಳ ಹಿಂದಷ್ಟೇ ಅವ್ಯವಸ್ಥೆ ಸೇರಿ ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಿದ್ದ ಬೆಳಗಾವಿ ಬಿಮ್ಸ್ ಇದೀಗ ಉತ್ತಮ ಮೂಲಸೌಕರ್ಯ, ಆಡಳಿತ ಹಾಗೂ ರೋಗಿಗಳಿಗೆ ಉತ್ತಮ ಸೌಲಭ್ಯ ಒದಗಿಸಿದ್ದಕ್ಕಾಗಿ ದೇಶದ 270ಕ್ಕೂ ಅಧಿಕ ಸರ್ಕಾರಿ ಆಸ್ಪತ್ರೆಗಳ ಪೈಕಿ 12ನೇ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ ಪಾತ್ರವಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಲ್ಲಾಸ್ಪತ್ರೆ) ಕೋವಿಡ್ ಸೇರಿದಂತೆ ಇತರ ಸಂದರ್ಭದಲ್ಲಿ ಅವ್ಯವಸ್ಥೆ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗುತ್ತಿತ್ತು. ಆದರೀಗ ಹದಗೆಟ್ಟ …
Read More »ಬೆಳಗಾವಿಯಲ್ಲಿ ನಿರಂತರ ಮಳೆ ಮನೆಗಳು ಜಲಾವೃತ
ಬೆಳಗಾವಿ: ಪಶ್ಚಿಮಘಟ್ಟ ಸೇರಿ ಕುಂದಾನಗರಿ ಬೆಳಗಾವಿಯಲ್ಲಿ ನಿರಂತರ ಮಳೆಯಿಂದ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಮನೆಗಳು ಜಲಾವೃತಗೊಂಡ ನಿವಾಸಿಗಳು ಪರದಾಡುವಂತೆ ಆಗಿದೆ. ಅಲ್ಲದೇ, ನೀರು ಹೊರಗೆ ಹಾಕಲು ಹರಸಾಹಸ ಪಡುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೇಶವ ನಗರ, ಅನ್ನಪೂರ್ಣೇಶ್ವರಿ ನಗರದ ಮನೆಗಳಿಗೆ ನೀರು ನುಗ್ಗಿದೆ. ಕೇಶವ ನಗರದಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಬಡಾವಣೆಗಳಲ್ಲಿ ಸರಿಯಾದ ಒಳ ಚರಂಡಿ ವ್ಯವಸ್ಥೆ ಮಾಡದ …
Read More »ಧಾರಾಕಾರ ಮಳೆಗೆ ಬೈಲಹೊಂಗಲ ತಾಲೂಕಿನ ಯರಗೊಪ್ಪ ಗ್ರಾಮದಲ್ಲಿ ಮನೆಗೋಡೆ ಕುಸಿದಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಬೈಲಹೊಂಗಲ ತಾಲೂಕಿನ ಯರಗೊಪ್ಪ ಗ್ರಾಮದಲ್ಲಿ ಮನೆಗೋಡೆ ಕುಸಿದಿದೆ. ಹೌದು ಯರಗೊಪ್ಪ ಗ್ರಾಮದ ಜನತಾ ಪ್ಲಾಟ್ನಲ್ಲಿರುವ ಈರಪ್ಪ ಚಂದುಗೋಳ ಎಂಬುವರ ಮನೆಗೋಡೆ ಮಳೆಯಿಂದ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಇದ್ದವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಬಿದ್ದರೂ ಸ್ಥಳಕ್ಕೆ ಪಿಡಿಒ ಸೇರಿ ಇತರೆ ಯಾವುದೇ ಅಧಿಕಾರಿಗಳು ಭೇಟಿ ನೀಡದೇ ಇರೋದು ಸಧ್ಯ ತೀವ್ರ ಟೀಕೆಗೆ ಗುರಿಯಾಗಿದೆ. ಗೋಡೆ ಬಿದ್ದ ಮನೆಯಲ್ಲೇ ಕುಟುಂಬಸ್ಥರು ವಾಸಿಸುತ್ತಿದ್ದಾರೆ. …
Read More »ಬೆಳಗಾವಿಯ ಸ್ಮಶಾನಗಳ ದುಸ್ಥಿತಿ ಹೇಗಿದೆ ಎಂದರೆ ಮೃತರ ಅಂತ್ಯಕ್ರಿಯೆಗೆ ಹೋದವರು ಮರಳಿ ಮನೆಗೆ ಬರುತ್ತಾರೆ ಎನ್ನೋದು ಗ್ಯಾರಂಟಿ ಇಲ್ಲ
ಬೆಳಗಾವಿಯ ಸ್ಮಶಾನಗಳ ದುಸ್ಥಿತಿ ಹೇಗಿದೆ ಎಂದರೆ ಮೃತರ ಅಂತ್ಯಕ್ರಿಯೆಗೆ ಹೋದವರು ಮರಳಿ ಮನೆಗೆ ಬರುತ್ತಾರೆ ಎನ್ನೋದು ಗ್ಯಾರಂಟಿ ಇಲ್ಲ. ಕೆಲವೊಂದು ಸ್ಮಶಾನಗಳಲ್ಲಿ ರಾತ್ರಿಯಾದ್ರೆ ಬೆಳಕಿನ ವ್ಯವಸ್ಥೆ ಇಲ್ಲ, ಮತ್ತೊಂದಿಷ್ಟು ಮುಕ್ತಿಧಾಮಗಳ ಮೇಲ್ಛಾವಣಿಯ ತಗಡುಗಳು ಆಗಲೋ ಈಗಲೋ ಬೀಳುವಂತಾಗಿವೆ. ಹೌದು ನಾವು ತೋರಿಸುತ್ತಿರುವ ಈ ದೃಶ್ಯ ಶಾಹಪುರದ ಮುಕ್ತಿಧಾಮದಲ್ಲಿನ ಅವ್ಯವಸ್ಥೆಯನ್ನು. ಇಲ್ಲಿ ಮೇಲ್ಛಾವಣಿಯಲ್ಲಿ ಹಾಕಿರುವ ತಗಡುಗಳು ಸಂಪೂರ್ಣವಾಗಿ ತುಕ್ಕು ಹಿಡಿದಿವೆ. ಯಾವಾಗ ಬೀಳುತ್ತವೋ ಗೊತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿಯೇ ಮೃತರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು, …
Read More »ಬಿಜೆಪಿ ಆಂತರಿಕ ಸಮೀಕ್ಷೆ ವರದಿ: ಬೆಳಗಾವಿಯ ಹಲವು ಶಾಸಕರಿಗೆ ವಿಧಾನಸಭೆ ಚುನಾವಣೆಯಿಂದ ಗೇಟ್ ಪಾಸ್
ಬೆಳಗಾವಿ: ಹದಿನೆಂಟು ವಿಧಾನಸಭೆ ಕ್ಷೇತ್ರಗಳಿರುವ ಬೆಳಗಾವಿಯಲ್ಲಿ ಬಿಜೆಪಿಯ ಶಾಸಕರು ಮತ್ತು ಪ್ರಭಾವಿ ನಾಯಕರುಗಳಿದ್ದು, ಇವರಲ್ಲಿ ಕೆಲವರಿಗೆ 2023ರ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸುವ ಸಾಧ್ಯತೆಗಳು ದಟ್ಟವಾಗಿವೆ. ಹಲವು ಪ್ರಭಾವಿಗಳು ಮುಂಬರುವ ಚುನಾವಣೆಯಲ್ಲಿ ಹಿನ್ನಡೆಯಾಗುವ ಸಾಧ್ಯೆತೆಯಿದೆ ಎಂದು ಆಂತರಿಕ ಸಮೀಕ್ಷೆ ವರದಿ ಮಾಡಿದೆ. ಬೆಳಗಾವಿಯ 14 ಸ್ಥಾನಗಳಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಉಳಿಸಿಕೊಂಡಿದೆ. ಮುಂದೆಯು ಕೂಡ ಈ ಸ್ಥಾನಗಳನ್ನು ಉಳಿಸಿಕೊಂಡು ಹೋಗಲು ಬಿಜೆಪಿ ಬಯಸಿದೆ. ಒಂದು ವೇಳೆ ನಾಯಕರಿಗೆ ಟಿಕೆಟ್ ನಿರಾಕರಿಸಿದರೇ ಪಕ್ಷದಲ್ಲಿ ಬಂಡಾಯಕ್ಕೆ …
Read More »ಅಂಗಡಿಗಳಲ್ಲಿ ಕಳ್ಳತನ ನಡೆಸುತ್ತಿದ್ದ ಅಂತಾರಾಜ್ಯ ಇರಾನಿ ಗ್ಯಾಂಗ್ ನ ಇಬ್ಬರ ಬಂಧನ
ಬೆಳಗಾವಿ: ನಾನಾ ರಾಜ್ಯಗಳಲ್ಲಿ ಕಿರಾಣಿ ಹಾಗೂ ಆಭರಣ ಅಂಗಡಿಗಳಲ್ಲಿ ಕಳುವು ನಡೆಸುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್ ನ ಇಬ್ಬರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,58,000 ರೂ. ಮೌಲ್ಯದ ಬಂಗಾರದ ಆಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ ತಿಂಗಳು ಹುಕ್ಕೇರಿ ಪಟ್ಟಣದ ವಿದ್ಯಾ ಜ್ಯುವೆಲರಿ ಶಾಪ್ನಲ್ಲಿ ಮಾಲೀಕರ ಗಮನ ಬೇರೆಡೆ ಸೆಳೆದು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಅಂಗಡಿ ಮಾಲೀಕರು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. …
Read More »ವಿಪರೀತ ಜನಸಂಖ್ಯೆಯಿಂದ ಅಸಮತೋಲನ ಸೃಷ್ಟಿ
ಬೆಳಗಾವಿ: ಜನಸಂಖ್ಯೆ ನಿಯಂತ್ರಣದ ಜೊತೆಗೆ ಇತ್ತೀಚೆಗೆ ಹರಡುತ್ತಿರುವ ಅನೇಕ ಸಾಂಕ್ರಾಮಿಕ ಕಾಯಿಲೆಗಳನ್ನೂ ನಿಯಂತ್ರಿಸಬೇಕಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಜನರು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯ ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ಬಿಮ್ಸ್ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ …
Read More »ಪವರ್ ಮ್ಯಾನ್ಗಳ ಸೇವೆಗೆ ಲಕ್ಷ್ಮಿ ತಾಯಿ ಫೌಂಡೇಷನ್ ವತಿಯಿಂದ ರೇನ್ ಕೋಟ್
ಬೆಳಗಾವಿ: ಅಪಾಯಕಾರಿ ಸನ್ನಿವೇಶಗಳಲ್ಲೂ ಜೀವದ ಹಂಗು ತೊರೆದು ಪರಿಶ್ರಮದಿಂದ ಕಾರ್ಯಾಚರಿಸಿ ಜನತೆಗೆ ಬೆಳಕು ನೀಡುವ ಪವರ್ ಮ್ಯಾನ್ ಗಳ ಸೇವೆ ಪ್ರಶಂಸನೀಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪೀರನವಾಡಿ ಸೆಕ್ಷನ್ 1, ಪೀರನವಾಡಿ ಸೆಕ್ಷನ್ 2, ಉಚಗಾಂವ ಹಾಗೂ ಹಿಂಡಲಗಾ ಈ ಪ್ರದೇಶಗಳಲ್ಲಿ ಹಗಲಿರುಳು ಕೆಲಸ ಮಾಡುವ ಪವರ್ ಮ್ಯಾನ್ಗಳ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ, ಲಕ್ಷ್ಮಿ ತಾಯಿ ಫೌಂಡೇಶನ್ ವತಿಯಿಂದ ಉತ್ತಮ ಗುಣಮಟ್ಟದ …
Read More »