ಬೆಳಗಾವಿ ನಗರದ ಮಹಿಳಾ ಪೊಲೀಸ್ ಠಾಣೆಯ ಮಾನವ ಕಳ್ಳಸಾಗಾಣಿಕೆ ನಿಗ್ರಹ ಪಡೆ (AHTU) ಹಾಗೂ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098, ಕಾರ್ಮಿಕ ಇಲಾಖೆ, ಯೋಜನಾ ನಿರ್ದೇಶಕರು ಬಾಲ ಕಾರ್ಮಿಕ ಯೋಜನೆ ಬೆಳಗಾವಿ ಮತ್ತು ಸಮಾಲೋಚಕರ ಸಹಯೋಗದೊಂದಿಗೆ ಬೆಳಗಾವಿ ನಗರದ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕ ರಸ್ತೆಗಳ ಮೇಲೆ ಸಂಚರಿಸುವ ವಾಹನಗಳ ಸಿಗ್ನಲ್ ಹತ್ತಿರ ಭಿಕ್ಷಾಟಣೆ ಮಾಡುತ್ತಿದ್ದ 8 ಜನ ಹೆಣ್ಣು ಮಕ್ಕಳು 2 …
Read More »ಸಂಕೇಶ್ವರ : ಟಿಪ್ಪರ್ ಢಿಕ್ಕಿ ಹೊಡೆದು 50ಕ್ಕೂ ಹೆಚ್ಚು ಕುರಿಗಳ ಸಾವು
ಸಂಕೇಶ್ವರ : ಟಿಪ್ಪರ್ ವಾಹನವೊಂದು ಹಾಯ್ದು 50ಕ್ಕೂ ಅಧಿಕ ಕುರಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಟಿಪ್ಪರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾಯ್ದು ವಾಹನ ಪಲ್ಟಿಯಾಗಿದೆ ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಮ್ಮಣಗಿ ಗ್ರಾಮದ ಕುರಿಗಾಯಿ ಹಾಲಪ್ಪ ಸಿದ್ದಪ್ಪ ಹೆಗಡೆ ಎಂಬುವವರಿಗೆ ಸೇರಿದ ಕುರಿಗಳು ಇದಾಗಿವೆ. ಘಟನಾ ಸ್ಥಳಕ್ಕೆ ಸಂಕೇಶ್ವದ ಪೋಲಿಸರು ಭೇಟಿ ನೀಡಿ ಪರಿಶೀಲನೆ …
Read More »ರಾಷ್ಟ್ರಪತಿ ಚುನಾವಣೆ:ಬಿಜೆಪಿ ಮಹಾನಗರ ಹಾಗೂ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ
ಬೆಳಗಾವಿ-: ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಗುರುವಾರ ಬೆಳಗಾವಿ ಗ್ಯಾಂಗವಾಡಿ ಮರಗಾಯಿದೇವಿ ಮಂದಿರದ ಬಳಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಬಿಜೆಪಿ ಪದಾದಿಕಾರಗಳ ಜೊತೆಗೆ ವಿಜಯೋತ್ಸವ ಆಚರಿಸಿ ದ್ರೌಪದಿ ಮುರ್ಮು ಅವರಿಗೆ ಶುಭ ಹಾರೈಸಿದರು. ಈ ವೇಳೆ ಮಾತನಾಡಿ ಶಾಸಕ …
Read More »ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ :ಕಾಂಗ್ರೆಸ್
ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ …
Read More »ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್; ಕೆ.ಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.
Read More »ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ
ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ. “ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು …
Read More »ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ
ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ. ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ
Read More »ಮರಾಠರಿಗೆ 2ಎ ಮೀಸಲಾತಿ: ಸಿಎಂ ಭರವಸೆ, ಮರಾಠ ಅಭಿವೃದ್ಧಿ ನಿಗಮ ಉದ್ಘಾಟನೆ
ಬೆಂಗಳೂರು: ರಾಜ್ಯದಲ್ಲಿ ಮರಾಠ ಸಮುದಾಯಕ್ಕೆ 2ಎ ಮೀಸಲಾತಿ ಕೊಡುವ ವಿಚಾರವಾಗಿ ಆಯೋಗದಿಂದ ವರದಿ ತರಿಸಿಕೊಂಡು ಸಂವಿಧಾನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಟೊಂಕ ಕಟ್ಟಿ ನಿಂತಿರುವ ಸಮುದಾಯಕ್ಕೆ ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ಮರಾಠ ಸಮುದಾಯಕ್ಕೆ ಹಿಂದುಳಿದ …
Read More »ಬೆಳಗಾವಿಯ ಸಿಇಎನ್ ಠಾಣೆಯ ಸಿಪಿಐ ಬಿ.ಆರ್.ಗಡ್ಡೇಕರ್ ವರ್ಗಾವಣೆ
ಬೆಳಗಾವಿಯ ಸಿಇಎನ್ ಠಾಣೆಯ ಸಿಪಿಐ ಬಿ.ಆರ್.ಗಡ್ಡೇಕರ್ ಸೇರಿ ರಾಜ್ಯದ 92 ಪೊಲೀಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು ಬಿ.ಆರ್.ಗಡ್ಡೇಕರ್ ಅವರನ್ನು ಬೆಳಗಾವಿಯ ಹೆಸ್ಕಾಂ ಜಾಗೃತ ದಳಕ್ಕೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಗಡ್ಡೇಕರ್ ಸ್ಥಾನಕ್ಕೆ ರಾಜ್ಯ ಗುಪ್ತವಾರ್ತೆಯಲ್ಲಿದ್ದ ಸಂಜೀವ್ ಕಾಂಬಳೆ ಅವರನ್ನು ಬೆಳಗಾವಿಯ ಸಿಇಎನ್ ಠಾಣೆ ಸಿಪಿಐ ಆಗಿ ನೇಮಕ ಮಾಡಲಾಗಿದೆ. ಅದೇ ರೀತಿ ರಾಜ್ಯದ ಒಟ್ಟು 92 ಪೊಲೀಸ್ ಅಧಿಕಾರಿಗಳನ್ನು …
Read More »ರಸ್ತೆ ಅಪಘಾತದಲ್ಲಿ ಚಿಕ್ಕೋಡಿಯ ಯೋಧ ಸಾವು
ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಬಿಎಸ್ಎಫ್ ಯೋಧ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಅಟೋದಿಂದ ಕೆಳಗಿಳಿಯುತ್ತಿದ್ದಾಗ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯೋಧ ಪಶ್ಚಿಮ ಬಂಗಾಳ ರಾಜ್ಯದ ಪಂಜಿ ಪಾಡಾ ಎಂಬಲ್ಲಿ ರಸ್ತೆ ಅಪಘಾತದಲ್ಲಿ ನಿಧನವಾಗಿದ್ದಾರೆ. ಸೂರಜ ಧೋಂಡಿರಾಮ ಸುತಾರ (30) ಸಾವನ್ನಪ್ಪಿದ ಯುವಕ. ಇತನು ಪಶ್ಚಿಮ ಬಂಗಾಳದಲ್ಲಿ ಗಡಿಭದ್ರತಾ ಪಡೆಯಲ್ಲಿ ಪೊಲೀಸ್ ಪೇದೆ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ಬೆಳಗ್ಗೆ ಪತ್ನಿಯೊಂದಿಗೆ ಸೇವಾ ಸ್ಥಳಕ್ಕೆ ಹೋಗುತ್ತಿದ್ದಾಗ …
Read More »