ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ …
Read More »ಮೀನು ಹಿಡಿಯುವ ವಿಚಾರವಾಗಿ ಜಗಳ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದ ಕೆರೆಯಲ್ಲಿ ಬುಧವಾರ ಮೀನು ಹಿಡಿಯುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಹುಚ್ಚಾನಟ್ಟಿ ಗ್ರಾಮದ ಶಂಕರ ಪಾಟೀಲ (28) ಹಲ್ಲೆಯಿಂದ ಗಾಯಗೊಂಡವರು. ಅವರನ್ನು ಜಿಲ್ಲಾ ಆಸ್ಪತ್ರೆ ಸೇರಿಸಲಾಗಿದೆ. ಶಂಕರ ಅವರು ನಾವಗೆ ಗ್ರಾಮದ ಕೆರೆಯಲ್ಲಿ ಎಂದಿನಂತೆ ಮೀನು ಹಿಡಿಯಲು ಹೋಗಿದ್ದರು. ಅದೇ ಜಾಗದಲ್ಲಿ ಮೀನು ಹಿಡಿಯಲು ಬಂದ ಇನ್ನೊಂದು ಗುಂಪಿನ ಯುವಕರು ತಕರಾರು ತೆಗೆದರು. ತಾವು ಕೇಳಿದ …
Read More »ಬೆಳಗಾವಿಯ ಐವರಿಗೆ ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್
ಕರ್ನಾಟಕ ಛಾಯಾಗ್ರಾಹಕರ ಸಂಘದ ವತಿಯಿಂದ ಬೆಂಗಳೂರಿನಲ್ಲಿ 28 ರಂದು ಆಯೋಜಿಸಲಾಗಿದ್ದ ” ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್” ನ್ನು ಬೆಳಗಾವಿಯ ಐವರು ಪೋಟೋಗ್ರಾಪರ್ಗೆ ಈ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ. ಬೆಳಗಾವಿ ಜಿಲ್ಲಾ ಛಾಯಾಗ್ರಾಹಕ ಕ್ಷೇಮಾಭಿವೃದ್ಧಿ ಸಂಘದ ಸದ್ಯಸರಾದ ಸುಭಾಷ ಲಕ್ಷ್ಮಣರಾವ್ ಓಲೋಕರ್ , ಅನುರೂಪ ಅಶೋಕ ನಾಯಿಕ, ಮಂಜುನಾಥ ಡಿ. ಕುಂದರಗಿ, ಸಂತೋಷ ಹರಿಬಾಹು ಪಾಟೀಲ, ಮೊಮ್ಮಹದ ಮುಬಸೀರ್ ಅವರು ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್ ಗಳನ್ನು ಮುಡಿಗೇಡಿಸಿಕೊಂಡಿದ್ದು, ಇವರಿಗೆ ಬೆಳಗಾವಿ …
Read More »ಜಿಲ್ಲಾಧಿಕಾರಿಗಳು ಎಂಇಎಸ್ ಮನವಿ ಕಸದ ಬುಟ್ಟಿಗೆ ಚೆಲ್ಲಬೇಕು:
ಚುನಾವಣೆ ಸಮೀಪ ಬರುತ್ತಿದ್ದಂತೆಯೇ ಎಂಇಎಸ್ ನಾಯಕರಿಗೆ ಭಾಷಾ ಪ್ರೇಮ ಹೆಚ್ಚಾಗುತ್ತದೆ. ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಲೇ ಬಂದಿರುವ ಎಂಇಎಸ್ ಎಲ್ಲ ರಂಗಗಳಲ್ಲಿ ಅಧಿಕಾರ ಕಳೆದುಕೊಂಡು ಕಂಗಾಲಾಗಿದ್ದು, ಮರಾಠಿ ಫಲಕ, ಮರಾಠಿ ಕಾಗದಪತ್ರ ಎಂದು ಮತ್ತೆ ಕಾಲು ಕೆದರಿ ಜಗಳಕ್ಕೆ ನಿಂತಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಭಾಷಾ ಅಲ್ಪ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮಲೇರಿಯಾ ಮಾಸಾಚರಣೆ &ಆರೋಗ್ಯ ತಪಾಸಣಾ ಶಿಬಿರ
ಗೋಕಾಕ: ಗೋಕಾಕ ಹಿರೆನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ತಾಲೂಕ ವೈದ್ಯ ಅಧಿಕಾರಿಗಳ ಆಶ್ರಯದಲ್ಲಿ ಸಂತೋಷ್ ಜಾರಕಿಹೊಳಿ ಅವರ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಲೇರಿಯಾ ಮಾಸಾಚರಣೆ ಹಾಗೂ ವಿವಿಧ ರೀತಿಯ ತಪಾಸಣೆ ಗಳನ್ನ ಮಾಡಲಾಯಿತು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರು ಹಾಗೂ ಆರೋಗ್ಯ ಅಧಿಕಾರಿಗಳು ಸಸಿಗೆ ನೀರುಣಿಸುವ ಮೂಲಕ ಕಾರ್ಯ ಕ್ರಮಕ್ಕೆ …
Read More »ನನಗೆ ಮೋದಿ ಇನ್ನೂ ಅಡಗಿ ಗ್ಯಾಸ್ ಕೊಟ್ಟಿಲ್ಲೆಪ್ಪ: ಹಿಂಡಲಗಾ ಗ್ರಾಮದ ಅಜ್ಜಿ ಬಾಯವ್ವ
ಬೆಳಗಾವಿ: ‘ನನಗೆ ಮೋದಿ ಇನ್ನೂ ಅಡಗಿ ಗ್ಯಾಸ್ ಕೊಟ್ಟಿಲ್ಲೆಪ್ಪ. ಇವತ್ತು ಮನೆಗೆ ಮಂತ್ರಿ ಬರಾತಾನ್ ಅಂದ್ರು. ಕಟಗಿ ಒಲಿ ಮ್ಯಾಲೆ ಅಡಗಿ ಮಾಡಿ ನೀಡೇನಿ…’ ತಾಲ್ಲೂಕಿನ ಹಿಂಡಲಗಾ ಗ್ರಾಮದ ಅಜ್ಜಿ ಬಾಯವ್ವ ವಸಂತ ಮಾಸ್ತೆ ಅವರ ಮಾತುಗಳಿವು. ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ರಾಜ್ಯ ಖಾತೆ ಸಚಿವ ಸೋಮ ಪ್ರಕಾಶ್ ಅವರು ಮಂಗಳವಾರ ಮಧ್ಯಾಹ್ನ, ಪರಿಶಿಷ್ಟ ಜಾತಿಯ ಈ ಅಜ್ಜಿ ಮನೆಯಲ್ಲೇ ಊಟ ಮಾಡಿದರು. 87 ವರ್ಷ ವಯಸ್ಸಿನ ಈ …
Read More »ಭೂತರಾಮನ ಹಟ್ಟಿಯಲ್ಲಿರುವ ಸರ್ಕಾರಿ ಶಾಲೆಯೊಂದು ಕಾನ್ವೆಂಟ್ ಶಾಲೆಯಂತೆ ಆಕರ್ಷಿತವಾಗಿದೆ.
ಬೆಳಗಾವಿ: ಸರ್ಕಾರಿ ಶಾಲೆ ಎಂದು ಅಸಡ್ಡೆ ಮಾಡುವ ಜನರ ಮಧ್ಯೆ ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿರುವ ಸರ್ಕಾರಿ ಶಾಲೆಯೊಂದು ಕಾನ್ವೆಂಟ್ ಶಾಲೆಯಂತೆ ಆಕರ್ಷಿತವಾಗಿದೆ. ಈ ಸರ್ಕಾರಿ ಶಾಲೆಗೆ ವರ್ಷದಿಂದ ವರ್ಷಕ್ಕೆ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆಯು ಗಣನೀಯವಾಗಿ ಹಚ್ಚುತ್ತಿದೆ . ಬೆಳಗಾವಿಯಿಂದ (Belagavi News) ಸುಮಾರು 8 ಕಿ . ಮಿ ದೂರದಲ್ಲಿರುವ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯು (Government Primary School) ಈ ಭಾಗದ ಪಾಲಕರ ಪಾಲಿನ ನೆಚ್ಚಿನ …
Read More »ಬೆಳಗಾವಿ ಬಳಿ ಕ್ರೂಸರ್ ಪಲ್ಟಿ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ
ಬೆಳಗಾವಿ: ಬೆಳಗಾವಿ ತಾಲೂಕಿನ ಕಲ್ಯಾಳ್ ಸೇತುವೆ ಬಳಿ ಭಾನುವಾರ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. ಕಿರಣ್ ಅಶೋಕ್ ಕಳಸಣ್ಣವರ್ ಮೃತ ಕಾರ್ಮಿಕ. ಮೃತ ಕಿರಣ್ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ನಿವಾಸಿಯಾಗಿದ್ದಾರೆ. ಭಾನುವಾರ ಬೆಳಗ್ಗೆ ಕಳ್ಯಾಳ್ ಸೇತುವೆ ಬಳಿ ಕ್ರೂಸರ್ ಪಲ್ಟಿಯಾಗಿ ಭೀಕರ ಅಪಘಾತ ನಡೆದಿತ್ತು. ಸ್ಥಳದಲ್ಲೇ 7 ಮಂದಿ ಕಾರ್ಮಿಕರು ಮೃತಪಟ್ಟು, 14 …
Read More »ಬೆಳಗಾವಿ ಡಿಸಿ ಕಚೇರಿಗೆ ಶಕ್ತಿದೇವತೆ, ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತುಕೊಂಡುಬಂದ ಜೋಗತಿಯರು
ಉತ್ತರಕರ್ನಾಟಕದ ಶಕ್ತಿದೇವತೆ, ಲಕ್ಷಾಂತರ ಭಕ್ತರ ಪಾಲಿನ ಆರಾಧ್ಯ ದೇವಿ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಸುಕ್ಷೇತ್ರದಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ಜೋಗತಿಯರು ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ತಲೆ ಮೇಲೆ ಸವದತ್ತಿ ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತುಕೊಂಡು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೋಗತಿಯರು ಯಲ್ಲಮ್ಮ ಗುಡ್ಡದಲ್ಲಿನ ಅವ್ಯವಸ್ಥೆಯ ವಿರುದ್ಧ ಅಸಮಾಧಾನ ಹೊರ ಹಾಕಿದರು. ಜಿಲ್ಲಾಡಳಿತ ಮತ್ತು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ತೀವ್ರ …
Read More »ಪೀರನವಾಡಿಯಲ್ಲಿ ವರ್ಷದೊಳಗೆ ಬಯಲು ರಂಗಮಂದಿರ ನಿರ್ಮಾಣ: ಶಾಸಕ ಅಭಯ ಪಾಟೀಲ ಭರವಸೆ
ಬೆಳಗಾವಿ: ‘ನೂತನ ಗಾಂಧಿ ಭವನ ಆವರಣದಲ್ಲಿ ಒಂದು ವರ್ಷದೊಳಗೆ ಬಯಲು ರಂಗಮಂದಿರ ಮತ್ತು ಡಿಜಿಟಲ್ ಲೈಬ್ರರಿ ನಿರ್ಮಿಸಲಾಗುವುದು’ ಎಂದು ದಕ್ಷಿಣ ಶಾಸಕ ಅಭಯ ಪಾಟೀಲ ಭರವಸೆ ನೀಡಿದರು. ತಾಲ್ಲೂಕಿನ ಪೀರನವಾಡಿಯಲ್ಲಿ ಸೋಮವಾರ ನಡೆದ ಗಾಂಧಿ ಭವನ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದರು. ಆ ಐತಿಹಾಸಿಕ ಕ್ಷಣಕ್ಕೆ 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಈ …
Read More »