Breaking News

ಬೆಳಗಾವಿ

ರಾತ್ರಿಯಿಂದ ಜಿಲ್ಲೆಯಲ್ಲಿ 144ಸೆಕ್ಷನ್ ಜಾರಿ

ಬೆಳಗಾವಿ: ವಿಧಾನ ಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕಕರ ಮತಕ್ಷೇತ್ರಗಳ ಮತದಾನ ಪ್ರಕ್ರಿಯೆ ಮುಗಿದಿರುವ ಹಿನ್ನೆಲೆ ಜೂನ್ 15 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಶಾಂತಿಯುತ, ಸುವ್ಯವಸ್ಥಿತ ಮತ ಎಣಿಕೆ ಪ್ರಕ್ರಿಯೆ ಕಾರಣಕ್ಕಾಗಿ ಜೂನ್ 14ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 15ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕಾ ಕೇಂದ್ರ ಜ್ಯೋತಿ ಪದವಿ ಪೂರ್ವ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿ …

Read More »

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಓರ್ವ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ದೇಸೂರ ರೈಲು ನಿಲ್ದಾಣದ ಬಳಿ ನಡೆದಿದೆ. ದೇಸೂರ ರೈಲು ನಿಲ್ದಾಣ ಹಾಗೂ ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜ್ ರೈಲ್ವೇ ಗೇಟ್ ಹತ್ತಿರ ಈ ಘಟನೆ ಸಂಭವಿಸಿದೆ. ಅಂದಾಜು 25 ವಯಸ್ಸಿನ ಯುವಕನಾಗಿದ್ದು. 5.7 ಅಡಿ ಎತ್ತರ, ಸಾದ ಗೆಂಪು ಬಣ್ಣ, ಮೈಯಿಂದ ತೆಳ್ಳಗೆ, ಉದ್ದು ಮುಖ, ನೀಟಾದ ಮೂಗು, ತಲೆಯಲ್ಲಿ 2 ಇಂಚ ಕಪ್ಪು ಕೂದಲು …

Read More »

ಮತಗಟ್ಟೆಯಲ್ಲಿ ಸಿಬ್ಬಂದಿ ಜೊತೆ ಮಾತನಾಡಿ, ಫೋನ್ ಬಳಕೆ ಮಾಡಿ, ಮಾಸ್ಕ್ ಹಾಕಿಲ್ಲ ಎಂಬ ಆರೋಪ ಶಾಸಕ ಅನಿಲ ಬೇನಕೆ ಮೇಲೆ..?

ಬೆಳಗಾವಿ: ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬಿರುಸುಗೊಂಡಿದ್ದು, ಈ ನಡುವೆ ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಗಟ್ಟೆಗೆ ಆಗಮಿಸಿದ ಶಾಸಕ ಅನಿಲ್ ಬೆನಕೆ ಮತಗಟ್ಟೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ ಅಲ್ಲದೇ ಮೊಬೈಲ್ ನಲ್ಲಿಯೂ ಮಾತನಾಡಿದ್ದಾರೆ. ಈ ಮೂಲಕ ಶಾಸಕರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಮತಗಟ್ಟೆಗೆ ಮೊಬೈಲ್ ಫೋನ್ …

Read More »

ಪ್ರಕಾಶ ಹುಕ್ಕೇರಿ ಗೆಲುವು ಖಚಿತ: ಸತೀಶ ಜಾರಕಿಹೊಳಿ

ಪ್ರಕಾಶ ಹುಕ್ಕೇರಿ ಅವರಿಗೆ 30 ವರ್ಷ ಜನ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ಪ್ರಕಾಶ ಹುಕ್ಕೇರಿಗೆ ಬಿಜೆಪಿ, ಉಮೇಶ ಕತ್ತಿ, ಲಕ್ಷ್ಮಣ ಸವದಿ ಸರ್ಟಿಫಿಕೆಟ್ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿರುಗೇಟು ಕೊಟ್ಟಿದ್ದಾರೆ. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಜನ 30 ವರ್ಷ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ಎಲ್ಲಾ ರಂಗದಲ್ಲಿಯೂ ಪ್ರಕಾಶ ಹುಕ್ಕೇರಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ವೇದಿಕೆಯಲ್ಲಿ ಪ್ರಕಾಶ ಹುಕ್ಕೇರಿ ಅವರಿಗೆ ವಯಸ್ಸಾಗಿದೆ ಎಂದು ಟೀಕಿಸಿದ್ದಾರೆ. …

Read More »

ಬೆಳಗಾವಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ವತಿಯಿಂದ ಸೇಂಟ್ ಆಂಥೋನಿ ಹಬ್ಬ ಆಚರಣೆ

ಬೆಳಗಾವಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ವತಿಯಿಂದ ಸೇಂಟ್ ಆಂಥೋನಿ ಹಬ್ಬವನ್ನು ಆಚರಣೆ ಮಾಡಲಾಯಿತು. ಬೆಳಗಾವಿಯ ಕ್ಯಾಂಪ್‌ನ ಸೇಂಟ್ ಆಂಥೋನಿ ಚರ್ಚನಲ್ಲಿ ಸೇಂಟ್ ಆಂಥೋನಿ ಫೀಸ್ಟ್ ನಿಮಿತ್ಯ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇಂದು ರವಿವಾರ ಸಾಯಂಕಾಲ ಚರ್ಚ್ದಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜನೆ ಮಾಡಲಾಗಿತ್ತು. ನಂತರ ಚರ್ಚ್ ಪ್ರಾಂಗಣದಿಂದ ಖಾನಾಪುರ್ ರಸ್ತೆ ಕ್ಯಾಂಪ್ ಮುಖಾಂತರ ಕ್ಯಾಂಪ್‌ನ ಅನೇಕ ರಸ್ತೆಗಳಲ್ಲಿ ಸೇಂಟ್ ಆಂಥೋನಿ ಪ್ರತಿಮೆಯೊಂದಿಗೆ ಸಂಚಾರ ಮಾಡಿದರು. ಈ ವೇಳೆ ಅನೇಕ ಕ್ರಿಶ್ಚಿಯನ್ ಸಮಾಜ …

Read More »

ಬೆಳಗಾವಿಯಲ್ಲಿ ಮನೆ ಮುಂದೆ ನಿಲ್ಲಿಸಿದ ಬೈಕ್ ಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

4 ಬೈಕ್‍ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯ ನೆಹರು ನಗರದಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ಘಟನೆ ಸಂಭವಿಸಿದ್ದು. ಬೆಳಗಾವಿಯಲ್ಲಿ ಶಾಂತಿ ಕದಡಲು ಕಿಡಿಗೇಡಿಗಳು ಯತ್ನಿಸಿದ್ದು. ನೆಹರು ನಗರದಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ 4 ಬೈಕ್‍ಗಳಿಗೆ ಬೆಂಕಿ ಹಚ್ಚಿದ್ದಾರೆ. ನಾಲ್ಕೂ ಬೈಕ್‍ಗಳು ಬೆಂಕಿಯ ಕೆನ್ನಾಲೆಯಲ್ಲಿ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಅದೇ ರೀತಿ ಎಪಿಎಂಸಿ ಠಾಣೆ ಪೊಲೀಸರು ಕೂಡ …

Read More »

ಪ್ರಕಾಶ ಹುಕ್ಕೇರಿ ಪರ ಹಣ ಹಂಚಿಕೆದಾರರು ಸಿಕ್ಕಿ ಬಿದ್ದಿದ್ದಾರೆ. ಒಟ್ಟು 1.70 ಲಕ್ಷ ರೂ.ಪತ್ತೆ

ವಾಯುವ್ಯ ಶಿಕ್ಷಕರ ಹಾಗೂ ಪದವೀಧರ ಚುನಾವಣೆಯ ಮತದಾರರಿಗೆ ಹಣ ಹಂಚಲು ಹೊರಟಿದ್ದ ವಾಹನ ವಿಜಯಪುರ ನಗರದ ಗೋದಾವರಿ ಬಾರ್ ಬಳಿ ಚುನಾವಣೆ ಅಧಿಕಾರಿಗಳಿಗೆ ಸಿಕ್ಕಿದೆ. ವಾಹನದಲ್ಲಿ ಹಣ ತೆಗೆದುಕೊಂಡು ಹೋಗುತ್ತಿರುವಾಗ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಪರ ಹಣ ಹಂಚಿಕೆದಾರರು ಸಿಕ್ಕಿ ಬಿದ್ದಿದ್ದಾರೆ. ಒಟ್ಟು 1.70 ಲಕ್ಷ ರೂ.ಪತ್ತೆಯಾಗಿದ್ದು, ಒಂದೊಂದು ಪಾಕಿಟ್ ನಲ್ಲೂ10 ಸಾವಿರ ರೂ.ಸಿಕ್ಕಿದೆ. ಸೋಮವಾರ ನಡೆಯಲಿರುವ ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತದಾರರಿಗೆ ಹಂಚಲು …

Read More »

ಬೆಳಗಾವಿಯಲ್ಲಿ ಜ್ಯೇಷ್ಠ ಶುದ್ಧ ತ್ರಯೋದಶಿ ಶಕೆ1944ಹಿಂದೂ ತಿಥಿಯನುಸಾರ ಶಿವರಾಜ್ಯಾಭಿಷೇಕ

ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನ ಬೆಳಗಾವಿಯ ವತಿಯಿಮದ ಪ್ರತಿವರ್ಷದಂತೆ ಈ ಬಾರಿಯೂ ಜ್ಯೇಷ್ಠ ಶುದ್ಧ ತ್ರಯೋದಶಿ ಶಕೆ ೧೯೪೪ ಹಿಂದೂ ತಿಥಿಯನುಸಾರ ಶಿವರಾಜ್ಯಾಭಿಷೇಕ ಮಾಡಲಾಯಿತು. ಪ್ರೇರಣಾ ಮಂತ್ರದೊಂದಿಗೆ ಶಿವಾಜಿ ಮಹಾರಾಜರ ಮೂರ್ತಿಗೆ ವಿಧಿವತ್ತ ಕ್ಷೀರಾಭಿಷೇಕ, ಜಲಾಭಿಷೇಕ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಶಿರೀಷ್ ಗೋಗಟೆ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನನ ಜಿಲ್ಲಾ ಪ್ರಮುಖ ಕಿರಣ ಗಾವಡೆ ಅವರು ಶಿವಾಜೀ ಮಹಾರಾಜರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಮಹಾಆರತಿ ನಡೆಯಿತು. ನಂತರ …

Read More »

ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ: ಬೊಮ್ಮಾಯಿ

ಬೆಳಗಾವಿ: ‘ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಅಮೆರಿಕಕ್ಕೆ ಹೋಗುವುದಾಗಿ ನನಗೆ ಮುಂಚೆಯೇ ಹೇಳಿದ್ದರು. ಆರು ತಿಂಗಳ ಹಿಂದೆಯೇ ಅವರ ಕಾರ್ಯಕ್ರಮ ನಿಗದಿಯಾಗಿದ್ದರಿಂದ, ವಿಧಾನ ಪರಿಷತ್‌ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲು ಅವರಿಗೆ ಆಗಿಲ್ಲ. ಆದರೆ, ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ‘ಕೋರೆ ಅವರು ನಮ್ಮ ಹಿರಿಯರು, ಮಾರ್ಗದರ್ಶಕ. ಅವರ ಕೊಡುಗೆಯನ್ನು ಪಕ್ಷವೂ ಗುರುತಿಸುತ್ತದೆ, ನಾವೂ ಗುರುತಿಸುತ್ತೇವೆ. ಸುದೀರ್ಘ …

Read More »

₹3 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕುಂದಾನಗರಿಯಲ್ಲಿ ಹೈಟೆಕ್‌ ಸರ್ಕಾರಿ ಶಾಲೆ

ಬೆಳಗಾವಿ: ಇಲ್ಲಿ ಎರಡು ಕಂಪ್ಯೂಟರ್‌ ಲ್ಯಾಬ್‌ಗಳಿವೆ. ಮಕ್ಕಳಲ್ಲಿ ಬೆರಗು ಮೂಡಿಸುವಂತಹ ಇ-ಲೈಬ್ರರಿಯಿದೆ. ₹3 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಭವ್ಯ ಆಡಿಟೋರಿಯಂ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ. ಸಾಲು-ಸಾಲಾಗಿ ಹೈಟೆಕ್‌ ಕಲಿಕಾ ಸೌಲಭ್ಯಗಳೂ ಇಲ್ಲಿವೆ…   ಅಷ್ಟಕ್ಕೂ ಇದು ಯಾವುದೋ ಪ್ರತಿಷ್ಠಿತ ಖಾಸಗಿ ಶಾಲೆ ಅಂದುಕೊಂಡರೆ ಈ ಊಹೆ ತಪ್ಪು. ಇದು ಶತಮಾನ ಕಂಡಿರುವ ಇಲ್ಲಿನ ಶಹಾಪುರದ ಸರ್ಕಾರಿ ಚಿಂತಾಮಣರಾವ್‌ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಚಿತ್ರಣ. ಗಡಿಭಾಗದಲ್ಲಿ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಈ ದಿನಗಳಲ್ಲಿ, …

Read More »