ಬೆಳಗಾವಿಯ ಕೆಎಲ್ಎಸ್ ಸಂಸ್ಥೆಯ ಗೋಗಟೆ ತಾಂತಿಕ ವಿದ್ಯಾಲಯದಲ್ಲಿ ಇಂಜನೀಯರಿಂಗ್ ಜಾಗ್ರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಕೆಎಲ್ಎಸ್ ಸಂಸ್ಥೆಯ ಗೋಗಟೆ ತಾಂತ್ರಿಕ ವಿದ್ಯಾಲಯದಲ್ಲಿ ದಿನಾಂಕ 26 ರಂದು ರವಿವಾರ ಪಿಯು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಎಂಜನೀಯರಿಂಗ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಕೆಎಲ್ಎಸ್ ಗೋಗಟೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಂತ ಕಿತ್ತೂರ್ ಅಭಿಯಂತರರಿರುವುದೇ ಸಮಸ್ಯೆಗಳನ್ನು ಪರಿಹಾರ ಮಾಡಲು. ಸಮಾಜಕ್ಕೆ ಉತ್ತಮ ಸುಲಭ ಜೀವನ ನೀಡಲು. ಹಾಗಾಗಿ ವಿದ್ಯಾರ್ಥಿಗಳು ಉತ್ತಮ …
Read More »ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನವನ್ನು ವಿತರಿಸುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರವಿವಾರ ರಾತ್ರಿ ತಮ್ಮ ಗೃಹ ಕಛೇರಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ …
Read More »ಬೆಳಗಾವಿಯಲ್ಲಿ ಭಾರತ್ ಬಂದ್ ಬಿಸಿ; ಬಸ್ ಸಂಚಾರ ತಡೆದು ಆಕ್ರೋಶ
ಬೆಳಗಾವಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನಾ ಕಾವು ಏರುತ್ತಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿವೆ. ಇಂದು ಭಾರತ ಬಂದ್ಗೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿದಿವೆ. ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಜೋರಾಗಿದ್ದು ಬಸ್ ಬಂದ್ ಮಾಡುವಂತೆ ವಿವಿಧ ಸಂಘಟನೆಗಳು ಬಸ್ …
Read More »ಸಿಎಂ ಬೆಂಗಾವಲು ವಾಹನಗಳಿಂದ ಗಾಬರಿಬಿದ್ದು ಸ್ಕೂಟಿಯಿಂದ ಬಿದ್ದ ಮಹಿಳೆ
ಬೆಳಗಾವಿ: ಸಿಎಂ ಬೆವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಹೆದರಿ ಮಹಿಳೆಯೋರ್ವರು ಆಯತಪ್ಪಿ ಸ್ಕೂಟಿಯಿಂದ ಬಿದ್ದ ಘಟನೆ ಜಿಲ್ಲೆಯ ಸಾಂವಗಾವ್ ರಸ್ತೆಯಲ್ಲಿ ನಡೆದಿದೆ. ಸಿಎಂ ಬೊಮ್ಮಾಯಿ ಕಾರ್ಯಕ್ರಮದ ನಿಮಿತ್ತ ಸಾಂವಗಾವ್ ರಸ್ತೆಯಲ್ಲಿ ಬೆಂಗಾವಲು ವಾಹನ ಸಮೇತ ಬರುವಾಗ ದಿಢೀರ್ನೆ ಎದುರಾದ ಬೆಂಗಾವಲು ವಾಹನಗಳಿಗೆ ಹೆದರಿದ ಮಹಿಳೆಗೆ ಪೋಲಿಸರು ಪಕ್ಕಕ್ಕೆ ಹೋಗಿ ಎಂದು ಗದರಿಸಿದ್ದಾರೆ ಎನ್ನಲಾಗಿದ್ದು ಈ ವೇಳೆ ಸ್ಕೂಟಿಯನ್ನು ಪಕ್ಕಕ್ಕೆ ತಿರುಗಿಸುವಾಗ ಆಯತಪ್ಪಿ ಮಹಿಳೆ ಬಿದ್ದಿದ್ದು ಮಹಿಳೆಗೆ ಚಿಕ್ಕ ಪುಟ್ಟ ಗಾಯಗಳಾಗಿವೆ.
Read More »1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದರು. ತಾಲೂಕಿನ ತಿಗಡಿ ಗ್ರಾಮದಲ್ಲಿ ಶನಿವಾರದಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 1.27 ಕೋಟಿ ರೂ. ವೆಚ್ಚದ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡಕ್ಕೆ ಗುದ್ದಲಿ …
Read More »ಒಂದು ಲಕ್ಷ ರುಪಾಯಿ ಮೊತ್ತದ ಪರಿಹಾರ ಚೆಕ್ ನ್ನು ಪತ್ರಕರ್ತ ಯಲ್ಲಪ್ಪ ಕಾನಾರ ಅವರ ಕುಟುಂಬಕ್ಕೆ ವಿತರಿಸಿದ ಬೊಮ್ಮಾಯಿ
ಬೆಳಗಾವಿ – ಇತ್ತೀಚೆಗೆ ಅಕಾಲಿಕವಾಗಿ ಮರಣಹೊಂದಿದ ಖಾನಾಪುರದ ಪತ್ರಕರ್ತ ಯಲ್ಲಪ್ಪ ಕಾನಾರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ರುಪಾಯಿ ಮೊತ್ತದ ಪರಿಹಾರ ಚೆಕ್ ನ್ನು ಬೆಳಗಾವಿಯಲ್ಲಿ ವಿತರಿಸಿದರು. ಲೋಂಡಾದ ಯಲ್ಲಪ್ಪ ಕಾನಾರ ಕೊರೋನಾದಿಂದಾಗಿ ಈಚೆಗೆ ನಿಧನರಾಗಿದ್ದಾರೆ. ಸುಂಮಾರು 25 ವರ್ಷಗಳ ಕಾಲ ಯಲ್ಲಪ್ಪ ಪತ್ರಿಕಾ ವರದಿಗಾರರಾಗಿ, ಫೋಟೋಗ್ರಾಫರ್ ಆಗಿ ಕೆಲಸ ಮಾಡಿದ್ದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.
Read More »ವಿಶೇಷಚೇತನ ಮಕ್ಕಳಿಗಾಗಿ ವಿನೂತನವಾಗಿ ನಿರ್ಮಿಸಲಾಗಿರುವ ಮಹಾತ್ಮ ಫುಲೆ ಉದ್ಯಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.
ಬೆಳಗಾವಿ: ಕುಂದಾ ನಗರಿ ಬೆಳಗಾವಿ ಜಿಲ್ಲೆಯ ಎರಡು ದಿನಗಳ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇಲ್ಲಿನ ಟಿಳಕವಾಡಿಯಲ್ಲಿ ವಿಶೇಷಚೇತನ ಮಕ್ಕಳಿಗಾಗಿ ವಿನೂತನವಾಗಿ ನಿರ್ಮಿಸಲಾಗಿರುವ ಮಹಾತ್ಮ ಫುಲೆ ಉದ್ಯಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಚಿವರಾದ ಉಮೇಶ್ ಕತ್ತಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಅಭಯ್ ಪಾಟೀಲ, ಮಹಾದೇವಪ್ಪ ಯಾದವಾಡ ಮತ್ತಿತರರು ಉಪಸ್ಥಿತರಿದ್ದರು.
Read More »ತುಂಬಿದ ಸಭೆಯಲ್ಲಿ ಬೊಮ್ಮಾಯಿಗೆ ‘ಬಾದಾಮಿ ಹಾಲು’ ಕೊಟ್ಟು ‘CM ಮಾಡಿದ್ದು ನಾನೇ’ ಎಂದ ಅಭಿಮಾನಿ..!
ಬೆಳಗಾವಿ: ಅಭಿಮಾನಿಯೋರ್ವ ಸಿಎಂ ಬಸವರಾಜ್ ಬೊಮ್ಮಾಯಿಗೆ ಬಾದಾಮಿ ಹಾಲು ನೀಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಶೇಷ ಗೆಟಪ್ನಲ್ಲಿ ಆಗಮಿಸಿ ಅಭಿಮಾನಿ ಬಾದಾಮಿ ಹಾಲು ನೀಡಿದ್ದಾನೆ. ಅಭಿಮಾನಿಯನ್ನ ತಡೆಯಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಅವನನ್ನು ಬಿಡಿ ಎಂದು ಸಿಎಂ ಹಾಲು ಸ್ವೀಕರಿಸಿದ್ದಾರೆ. ಎಲ್ಲಿ ಹೋದರೂ ಅವನು ಏನನ್ನಾದರು ಕೊಟ್ಟೇ ಕೊಡುತ್ತಾನೆ. ಇಂದು ಬಾದಾಮಿ ಹಾಲು ಕೊಟ್ಟಿದ್ದಾನೆ ಎಂದಿದ್ದಾರೆ ಸಿಎಂ ಬೊಮ್ಮಾಯಿ. ಬಾದಾಮಿ ಹಾಲು ನೀಡಿದ ಬಳಿಕ ಬೊಮ್ಮಾಯಿ ಅವರನ್ನ ಸಿಎಂ …
Read More »ಬೆಳಗಾವಿ: ಐದು ಭಾಷೆಯ ಡಿಜಿಟಲ್ ಗ್ರಂಥಾಲಯವನ್ನು ಲೋಕಾರ್ಪಣೆ ಮಾಡಲಿರುವ ಸಿಎಂ!
ಬೆಳಗಾವಿ: ಎರಡು ದಿನ ಜಿಲ್ಲಾ ಪ್ರವಾಸ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ 2. 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗಿರೋ 5 ಭಾಷೆಯ ರವೀಂದ್ರ ಕೌಶಿಕ್ ಡಿಜಿಟಲ್ ಗ್ರಂಥಾಯಲದ ಉದ್ಘಾಟನೆ ಮಾಡಿ ಲೋಕಾರ್ಪಣೆ ಆಗಲಿದೆ. ಇದೇ ರೀತಿ 2.7 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವಟ ರಾಜ್ಯದ ಮೊದಲ ಬುದ್ಧಿಮಾಂದ್ಯತೆ ಮಕ್ಕಳ ಪಾರ್ಕ್ ನ ಉದ್ಘಾಟನೆಯನ್ನು ಸಿಎಂ …
Read More »ಕಾಸ್ಮೊಪಾಲಿಟನ್ ಸಂಸ್ಕೃತಿ ಹೊಂದಿರುವ ಬೆಳಗಾವಿಯಲ್ಲಿ ಇಡೀ ಭಾರತವೇ ಇದೆ: ಬೊಮ್ಮಾಯಿ
ಬೆಳಗಾವಿ: ಬೆಳಗಾವಿಯಲ್ಲಿ ಇಡೀ ಭಾರತವೇ ಇದೆ. ಕಾಸ್ಮೊಪಾಲಿಟನ್ ಸಂಸ್ಕೃತಿಯನ್ನು ಅಳವಡಿಸಿಕೊಂಡಿರುವ ವಿಶಾಲ ಮನೋಭಾವದ ಜನರು ಈ ನಗರದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಎಸ್ಪಿಎಂ ರಸ್ತೆಯಲ್ಲಿ ಶಿವಾಜಿ ಉದ್ಯಾನದ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸಲಾದ ರವೀಂದ್ರ ಕೌಶಿಕ್ ಇ- ಗ್ರಂಥಾಲಯವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಂಕುಚಿತ ಮನೋಭಾವಕ್ಕೆ ಇಲ್ಲಿ ಜಾಗ ಇಲ್ಲ ಎನ್ನುವುದನ್ನು ಈಚೆಗೆ ನಡೆದ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ತೋರಿಸಿಕೊಟ್ಟಿದ್ದಾರೆ. ಅಭಿವೃದ್ಧಿಗೆ …
Read More »