Breaking News

ಬೆಳಗಾವಿ

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ …

Read More »

ರೈತರು ಬೆಳೆ ಬೆಳೆದ ಜಮೀನಿನ ಮೇಲೆ ಬೆಳೆ ಕಟಾವು ಆಗುವವರೆಗೂ ಕಾಮಗಾರಿ ನಡೆಸಲ್ಲ ಅಂತಾ ಡಿಸಿ ಭರವಸೆ ನೀಡಿದ್ದರೂ ಬೆಳೆಯ ಮೇಲೆ ಜೆಸಿಬಿ

ಬೆಳಗಾವಿ  ಬೆಳಗಾವಿ ತಾಲೂಕಿನ (Belagavi) ಹಲಗಾ ಮತ್ತು ಮಚ್ಛೆ ಗ್ರಾಮದ ಮಧ್ಯೆ 9.5 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ 4 ಎ ಬೈಪಾಸ್ ರಸ್ತೆ ಕಾಮಗಾರಿ (National Highway By Pass Constuction) ರೈತರ ವಿರೋಧದ (Farmers Objection) ‌ನಡುವೆಯೂ ಶುರುವಾಗಿದೆ. ನಿನ್ನೆ ಕಾಮಗಾರಿ ಆರಂಭಗೊಂಡ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಜಮೀನು ಮಾಲೀಕನ ಪುತ್ರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದಾದ ಬಳಿಕ …

Read More »

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ

M.L.C. ಚುನಾವಣೆ ಬಾಲಚಂದ್ರ ಜಾರಕಿಹೊಳಿ EXCLUSIVE ಹೇಳಿಕೆ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ …

Read More »

ರೈತರ ವಿರೋಧದ ನಡುವೆಯೂ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಯನ್ನು ಬೆಳಗಾವಿ ಜಿಲ್ಲಾಡಳಿತ ಮುಂದುವರೆಸಿದೆ.

ಬೆಳಗಾವಿ: ರೈತರ ವಿರೋಧದ ನಡುವೆಯೂ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಯನ್ನು ಬೆಳಗಾವಿ ಜಿಲ್ಲಾಡಳಿತ ಮುಂದುವರೆಸಿದೆ. ರಾಜ್ಯ ಸರ್ಕಾರದ ಆದೇಶದಂತೆ ಬೈಪಾಸ್ ಕಾಮಗಾರಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ರಸ್ತೆ ಕಾಮಗಾರಿಗಾಗಿ ಭೂ ಸ್ವಾಧೀನ ಪಡಿಸಿಕೊಂಡಿರುವ 825 ರೈತರಿಗೆ ಒಟ್ಟು 25 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಬೆಳೆಗಳನ್ನು ನಾಶ ಮಾಡದೇ ಕಾಮಗಾರಿ ನಡೆಸುವುದಾಗಿ ರೈತರಿಗೆ ಭರವಸೆ ನೀಡಲಾಗಿದೆ ಎಂದರು. ಇನ್ನು ನಿನ್ನೆ ನಡೆದ ರೈತರ ಪ್ರತಿಭಟನೆ ವೇಳೆ ಯುವಕನೊಬ್ಬ ಬೆಂಕಿ …

Read More »

ವಿವಿಧ ಬೇಡಿಕೆ ಈಡೇರಿಸುವಂತೆ ನಂದಗಡ ಗ್ರಾಮಸ್ಥರಿಂದ ತಹಶೀಲ್ದಾರರ ಮೂಲಕ ಸಿಎಂಗೆ ಮನವಿ

ಖಾನಾಪುರ: ತಾಲೂಕಿನ ನಂದಗಡ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು. ಪ್ರಕೃತಿ ವಿಕೋಪದಲ್ಲಿ ಮನೆ ಕಳೆದಕೊಂಡವರಿಗೆ ಹಾಗೂ ಹಾನಿಗೊಳಗಾದ ರೈತರಿಗೆ ಶೀಘ್ರವೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಂದಗಡ ಗ್ರಾಮಸ್ಥರು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ರಾಯಣ್ಣನ ಪುಣ್ಯಭೂಮಿ ನಂದಗಡ ಹೆದ್ದಾರಿ ಪಕ್ಕದಲ್ಲಿದ್ದರೂ ಸರಿಯಾಗಿ ಬಸ್ ಸೌಲಭ್ಯವಿಲ್ಲದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಇನ್ನು ಕಳೆದ ಎರಡು ವರ್ಷಗಳಿಂದ ಸುರಿದ ಭಾರೀ ಮಳೆಗೆ ನಂದಗಡ ಗ್ರಾಮಸ್ಥರು ಕೆಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಇನ್ನು ವಿಪರೀತ ಮಳೆಯಿಂದ ಕೆಲ …

Read More »

ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು. ಒಂದು ವೇಳೆ ಭೂಮಿ ತೆಗೆದುಕೊಂಡರೆ ಭೂಮಿಯ ಬದಲಾಗಿ ಭೂಮಿಯನ್ನೇ ಕೊಡಬೇಕು ಇಲ್ಲದಿದ್ರೆ ಉಪವಾಸ ಸತ್ಯಾಗ್ರಹ

ಬೆಳಗಾವಿ ತಾಲೂಕಿನ ಮಚ್ಛೆಯಲ್ಲಿ ರೈತರ ಮೇಲಿನ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು. ಒಂದು ವೇಳೆ ಭೂಮಿ ತೆಗೆದುಕೊಂಡರೆ ಭೂಮಿಯ ಬದಲಾಗಿ ಭೂಮಿಯನ್ನೇ ಕೊಡಬೇಕು ಇಲ್ಲದಿದ್ರೆ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು. ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ …

Read More »

ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ.

  ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಪ್ತಾಹ ಅಂಗವಾಗಿ ನವ್ಹೆಂಬರ 14 ರಿಂದ 21 ರವರೆಗೆ …

Read More »

ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿಕೊಂಡ ಪುರಸಭೆ ಅಧಿಕಾರಿಗಳು, ಸ್ಥಳೀಯರ ಆಕ್ರೋಶ

ಬೆಳಗಾವಿ: ಮುಗಳಖೋಡ ಪುರಸಭೆಯಲ್ಲಿ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕಸದ ಬಾಕ್ಸ್‌ಗಳನ್ನು ಹೊರಿಸಿ ಮಕ್ಕಳ ಬಳಿ ಕೆಲಸ ಮಾಡಿಸಿಕೊಂಡಿದ್ದಾರೆ ಎಂದು ಸ್ಥಳೀಯರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ …

Read More »

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು :ಬಸವರಾಜ ಬೊಮ್ಮಾಯಿ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ …

Read More »

ಮಾತು ಕೊಟ್ಟ 15 ದಿನದಲ್ಲಿ ಬೇಡಿಕೆ ಈಡೇರಿಸಿದ್ದಾರೆ:

ಬೆಳಗಾವಿ, : ಉತ್ತರ ಕರ್ನಾಟಕದ ಜನರ ಬಹು ದಿನಗಳ ಬೇಡಿಕೆಯನ್ನ ರಾಜ್ಯ ಸರ್ಕಾರ ಇಂದು ಈಡೇರಿಸಿದೆ. ಬೆಳಗಾವಿ ‌ವಿಭಾಗವನ್ನು ಮುಂಬಯಿ ಕರ್ನಾಟಕ (Mumbai Karnataka) ಎಂದು ಕರೆಯಲಾಗುತ್ತಿತ್ತು. ಇದು ದಾಸ್ಯದ ಸಂಕೇತವಾಗಿದ್ದು ಬದಲಾವಣೆ ಮಾಡಿ ಕಿತ್ತೂರು ಕರ್ನಾಟಕ (Kittur Karnataka) ಎಂದು ಘೋಷಣೆ ಮಾಡಬೇಕು ಎಂಬ ಬೇಡಿಕೆ ಇತ್ತು. ಕಳೆದ ಅನೇಕ ವರ್ಷಗಳಿಂದ ಈ ಬಗ್ಗೆ ಸರ್ಕಾರ ಗಮನವನ್ನು ಕನ್ನಡಪರ ಹೋರಾಟಗಾರರು ಸೆಳೆದಿದ್ದರು. ಆದರೆ ಈ ವರೆಗೆ ಸರ್ಕಾರಗಳು ಗಮನ ಹರಿಸಿರಲಿಲ್ಲ. …

Read More »