Breaking News

ಬೆಳಗಾವಿ

ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ನಗರದಲ್ಲಿ ಟ್ರಾಫಿಕ್ ಪೊಲೀಸರು ಜಾಗೃತಿ ಮೂಡಿಸಿದರು.

ಬೆಳಗಾವಿ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ‌ಧರಿಸಿಕೊಂಡು ವಾಹನ ಚಲಾಯಿಸಬೇಕೆಂದು ನಗರದ ಚನ್ನಮ್ಮ ವೃತ್ತದಲ್ಲಿ ನಗರ ಸಂಚಾರ ಪೊಲೀಸರು ವಿಶೇಷ ಅಭಿಯಾನ ನಡೆಸಿದರು. ನಗರದಲ್ಲಿ ರಸ್ತೆ ಅಪಘಾತದಲ್ಲಿ ವಾಹನ ಸವಾರರು ಹೆಲ್ಮೆಟ್ ಧರಸಿದೆ ಮೃತಪಟ್ಟ ಘಟನೆ ಹೆಚ್ಚಾಗುತ್ತಿದೆ. ಆದ್ದರಿಂದ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಮೊದಲು ಹೆಲ್ಮೆಟ್ ‌ಧರಿಸದ ಪೊಲೀಸ್ ಸಿಬ್ಬಂದಿಗಳಿಗೆ ದಂಡ ವಿಧಿಸಿದ್ದ ಸಂಚಾರ ಪೊಲೀಸರು ಈಗ ಸಾರ್ವಜನಿಕರು ಹೆಲ್ಮೆಟ್ ಧರಿಸದವರ ವಿರುದ್ಧ ವಿಶೇಷ ಅಭಿಯಾನ …

Read More »

ದೇವಸ್ಥಾನ ಬಂದ ಬಗ್ಗೆ ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿ ಶೇರ್ ಮಾಡಬೇಡಿ

ಉಗರಗೋಳ: ‘ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದಲ್ಲಿರುವ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ. ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ ಯಲ್ಲಮ್ಮ ದೇವಸ್ಥಾನವನ್ನು ಎರಡ್ಮೂರು ವರ್ಷದ ಅವಧಿಗೆ ಬಂದ್ ಮಾಡಲಾಗಿದೆ. ದೇವಿ ದರ್ಶನಕ್ಕೆ ಅವಕಾಶವಿಲ್ಲ ಎಂದು ಹಲವು ಭಕ್ತರು ವಿಚಾರಿಸುತ್ತಿದ್ದಾರೆ. ಅದು ಶುದ್ಧಸುಳ್ಳು ಎಂದು ಪ್ರತಿಕ್ರಿಯಿಸಿದ್ದಾರೆ. ಯಲ್ಲಮ್ಮ ದೇವಸ್ಥಾನದಲ್ಲಿ ಎಂದಿನಂತೆ, ದೇವಿಗೆ ವಿಶೇಷ ಪೂಜೆ ನೆರವೇರುತ್ತಿದೆ. …

Read More »

ರಸ್ತೆ ಮೇಲೆ ಹೋಗೆಯುಗಿಳಿದ ಸರ್ಕಾರಿ ಬಸ್;RTO ಅವರೆ ಇದು ರಸ್ತೆ ನಿಯಮ ಉಲ್ಲಂಘನೆ ಅಲ್ವಾ ;ನೆಟ್ಟಿಗರು ಪ್ರಶ್ನೆ

ಅಥಣಿ: ಕೆಎಸ್‌ಆರ್‌ಟಿಸಿ ಬಸ್ಸು ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…! ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ. ಆದ್ರೆ ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ. ಇದು ಅಥಣಿ ಪಟ್ಟಣದಿಂದ-ಪಾಂಡೆಗಾವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆ ಎಸ್ ಆರ್ ಟಿ …

Read More »

ಖಾನಾಪೂರ ಕೋ ಆಪ್ (ಅರ್ಬನ್ ಬ್ಯಾಂಕ್)ಬ್ಯಾಂಕಿನ ಮತ ಎಣಿಕೆ ಮಂಗಳವಾರ ನಡೆಯುವ ಸಾಧ್ಯತೆ.

ಖಾನಾಪೂರ :-ಖಾನಾಪೂರ ಕೋ ಆಪ್ ಬ್ಯಾಂಕ್ (ಅರ್ಬನ್ ಬ್ಯಾಂಕ್) ನ ಚುನಾವಣೆ ನಡೆದು ಹದಿನೈದರಿಂದ ಇಪ್ಪತ್ತು ದಿನಗಳು ಕಳೆದಿವೆ, ಆದರೆ ಹೊಸ ಮತದಾರರ ಪಟ್ಟಿಯ ಗೊಂದಲದ ಮೇಲೆ ಚುನಾವಣಾ ಫಲಿತಾಂಶಗಳು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಮತ ಎಣಿಕೆ ನಡೆಯಲು ಸಾಧ್ಯವಾಗಿರಲಿಲ್ಲ. ಆದರೆ ಬಲ ಮಾಹಿತಿ ಪ್ರಕಾರ ಚುನಾವಣೆಯ ಮತ ಎಣಿಕೆಯು ಫೆಬ್ರವರಿ 4, 2025 ರ ಮಂಗಳವಾರ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಮತ ಎಣಿಕೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿ ರವೀಂದ್ರ …

Read More »

ಕಾಗವಾಡ ಸದಸ್ಯರು ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ.

 ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮ ಪಂಚಾಯಿತಿಯ ಸದಸ್ಯರು ಪಿಡಿಒ ಇವರನ್ನು ವರ್ಗಾಯಿಸಲು ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ಕೈಗೊಂಡಿದ್ದಾರೆ. ಉಗಾರ ಬುದ್ರುಕ ಗ್ರಾಮ ಪಂಚಾಯತಿಯ ಸದಸ್ಯರು ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಈ ಘಟನೆ ಸಂಬAಧ ಸ್ಥಳಕ್ಕೆ ತಲುಪಿದ ತಾಲೂಕಾ ಪಂಚಾಯತಿ ಅಧಿಕಾರಿಗಳು ಸದಸ್ಯರೊಂದಿಗೆ ಚರ್ಚೆ ನಡೆಸಿ ನಿಯಂತ್ರಿಸಲು ಪ್ರಯತ್ನಿಸಿದರೂ, ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು. ಶನಿವಾರ ರಂದು ಉಗಾರ …

Read More »

‘ವೇದಾಂತ ಎಕ್ಸ್‌ಲೆನ್ಸ್‌ ಅವಾರ್ಡ್‌’ ಪಡೆದ 9 ಸಾಧಕರು;‘ಪುರಸ್ಕಾರದಿಂದ ಕ್ರಿಯಾಶೀಲತೆ ಹೆಚ್ಚಳ’

ಬೆಳಗಾವಿ: ‘ವಿವಿಧ ರಂಗಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ಪುರಸ್ಕಾರ ನೀಡಿರುವ ಕಾರ್ಯ ಶ್ಲಾಘನೀಯ. ಇದರಿಂದ ತಮ್ಮ ಜವಾಬ್ದಾರಿ ಹೆಚ್ಚಿದ್ದು, ಇನ್ನಷ್ಟು ಕ್ರಿಯಾಶೀಲ, ಪ್ರಾಮಾಣಿಕವಾಗಿ ತಾವು ಸೇವೆ ಸಲ್ಲಿಸಲು ಉತ್ಸಾಹ ಬರುತ್ತದೆ’ ಎಂದು ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಜೆ.ಭಜಂತ್ರಿ ಹೇಳಿದರು. ಇಲ್ಲಿನ ಮಹಿಳಾ ವಿದ್ಯಾಲಯದಲ್ಲಿ ವೇದಾಂತ ಫೌಂಡೇಷನ್ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಕ್ಷೇತ್ರಗಳ ಸಾಧಕರಿಗೆ 2025ನೇ ಸಾಲಿನ ‘ವೇದಾಂತ ಎಕ್ಸ್‌ಲೆನ್ಸ್‌ ಅವಾರ್ಡ್‌’ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. …

Read More »

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ – ಮಂಜುಳಾ ನಾಯಿಕ.

ಹುಕ್ಕೇರಿ : ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ – ಮಂಜುಳಾ ನಾಯಿಕ. ಜನೇವರಿ 26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗ ವಹಿಸಬೇಕು ಎಂದು ಹುಕ್ಕೇರಿ ತಹಸಿಲ್ದಾರ ಮಂಜುಳಾ ನಾಯಿಕ ಹೇಳಿದರು. ಅವರು ಇಂದು ಗಣರಾಜ್ಯೋತ್ಸವ ಆಚರಣೆಯ ಪೂರ್ವ ಭಾವಿ ಸಭೆಯಲ್ಲಿ ಮಾತನಾಡುತ್ತಾ ಆರ್ ಟಿ ಆಯ್ ಕಾರ್ಯಕರ್ತ ರಾಜು ಕುರಂದವಾಡೆ ಯವರು ರಾಷ್ಟ್ರೀಯ ಹಬ್ಬಗಳಲ್ಲಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸುವದಿಲ್ಲಾ ಈ ಕುರಿತು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಶ್ರೀ ಮಾರುತೇಶ್ವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಅಣ್ಣಮ್ಮ ದೇವಿ ಕೂರಿಸುವ ವಿಚಾರದಲ್ಲಿ ಸ್ಥಳೀಯರು, ಬಿಗ್‌ಬಾಸ್ -11ರ ಸ್ಪರ್ಧಿ- ಜಗದೀಶ್ ನಡುವೆ ಗಲಾಟೆ ; ದೂರು – ಪ್ರತಿದೂರು ದಾಖಲು

ಬೆಂಗಳೂರು : ಅಣ್ಣಮ್ಮ ದೇವಿ ಕೂರಿಸುವ ವಿಚಾರದಲ್ಲಿ ಸ್ಥಳೀಯರು ಹಾಗೂ ಬಿಗ್‌ಬಾಸ್ -11ರ ಸ್ಪರ್ಧಿ ಹಾಗೂ ವಕೀಲ ಜಗದೀಶ್ ನಡುವೆ ಗಲಾಟೆಯಾಗಿದ್ದು, ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿದೆ. ಕೊಡಿಗೇಹಳ್ಳಿಯ ವಿರೂಪಾಕ್ಷನಗರದಲ್ಲಿ ಲಾಯರ್ ಜಗದೀಶ್‌ಗೆ ಸೇರಿರುವ ಕಾಂಪ್ಲೆೆಕ್ಸ್ ಇದ್ದು, ಅದೇ ರಸ್ತೆಯಲ್ಲಿ ಸ್ಥಳೀಯರು ಅಣ್ಣಮ್ಮ ದೇವಿ ಕೂರಿಸಲು ಪೆಂಡಾಲ್ ಹಾಕಿದ್ದಾರೆ. ಅದಕ್ಕೆ ಆಕ್ಷೇಪಿಸಿದ ಜಗದೀಶ್, ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. …

Read More »

ಫೈನಾನ್ಸ್‌ಗಳ ಹಾವಳಿಗೆ ಮೊದಲ ಬಲಿ.

ಬೆಳಗಾವಿ:  ಜಿಲ್ಲೆಯ ಕಾಕತಿ ಸಮೀಪದ ದಾಬಾ ಬಳಿ ಫೈನಾನ್ಸ್‌ ಸಂಸ್ಥೆಗಳ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಬಾವಿಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಫೈನಾನ್ಸ್ ಸಂಸ್ಥೆಯಿಂದ ಸಾಲ ಪಡೆದಿದ್ದ ಸರೋಜಾ, ಸಬ್ಸಿಡಿ ಯೋಜನೆಯ ಅಸರೆಗಾಗಿ ಸಾಲದ ಅರ್ಧ ಹಣವನ್ನು ಯಮನಾಪುರದ ಹೊಳೆಪ್ಪ ದಡ್ಡಿ ಎಂಬ ವ್ಯಕ್ತಿಗೆ ನೀಡಿದ್ದರು. ಎಲ್ಲ ಕಂತು ತಾನೇ ಪಾವತಿಸುವ ಭರವಸೆ ನೀಡಿದ್ದ ಹೊಳೆಪ್ಪ ಮೋಸಮಾಡಿದ …

Read More »