ಬಾಗಲಕೋಟೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳಿಸಿದ ತಾಲ್ಲೂಕಿನ ಮುಖಚಂಡಿ ತಾಂಡಾದ ದುರ್ಗಾದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಬಸಪ್ಪ ಹುಡೇದ ಅವರಿಗೆ ಹೃದಯ ಸಂಬಂಧಿ ಇರುವ ಕಾಯಿಲೆ ದೃಢಪಟ್ಟ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು. ವಿದ್ಯಾರ್ಥಿನಿಯು 625ಕ್ಕೆ 625 ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಸಂತಸದಿಂದ ಅಭಿನಂದಿಸಿದರು. ಆ ಬಾಲಕಿಗೆ ಹೃದಯ ಸಂಬಂಧಿ ರೋಗವಿರುವ ಬಗ್ಗೆ ತಿಳಿದ ಕೂಡಲೇ ಬಾಲಕಿಯ ಪೋಷಕರೊಂದಿಗೆ ಮಾತನಾಡಿದರು. …
Read More »ಮಾಜಿ ಮುಖ್ಯ ಮಂತ್ರಿ ಅವರ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ
ಹುಬ್ಬಳ್ಳಿ: ನಗರದ ಕೇಶ್ವಾಪುರದ ಬಾದಾಮಿ ನಗರದಲ್ಲಿನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶನಿವಾರ ಸಂಜೆ ಭೇಟಿ ನೀಡಿಗುಪ್ತ ಗುಪ್ತ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಿಂದ ದೂರ ಉಳಿಯುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಶಾಸಕರಾದ ಜಗದೀಶ್ ಶೆಟ್ಟರ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು. ನಂತರದ ದಿನಗಳಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತಿದ್ದು ಒಂದು …
Read More »ಸೋತ ವ್ಯಕ್ತಿಯನ್ನ ಡಿಸಿಎಂ ಮಾಡಿದರು, ಈಗ ಯಾವುದೇ ಬೇಸರ ಇಲ್ಲ: ಲಕ್ಷ್ಮಣ ಸವದಿ
ಚಿಕ್ಕೋಡಿ: ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಲಕ್ಷ್ಮಣ ಸವದಿಯನ್ನ ಕೈ ಬಿಟ್ಟಿದ್ದಾರೆ. ಇದೇ ವಿಚಾರವಾಗಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಪುಟದಿಂದ ತನ್ನನ್ನ ಕೈ ಬಿಟ್ಟಿದ್ದಕ್ಕೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ಸೋತಂತಹ ವ್ಯಕ್ತಿಯನ್ನು ಡಿಸಿಎಮ್ ಮಾಡಿದ್ದಾರೆ, ಸಚಿವನನ್ನಾಗಿ ಮಾಡಿ ನನಗೆ ಒಳ್ಳೆಯ ಸ್ಥಾನಮಾನವನ್ನ ಪಕ್ಷ ನೀಡಿದೆ. ಈಗ ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಬರಲ್ಲ ಎಂದಿದ್ದಾರೆ. ಕೆಲವೊಮ್ಮೆ ಮತ್ತೊಬ್ಬರಿಗೆ ಅವಕಾಶ ಕೊಡುವುದಕ್ಕಾಗಿ ಅವಧಿ …
Read More »ಗೋಕಾಕ: ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವುದು.
ಗೋಕಾಕ: ಕೊವಿಡ್-19ರ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಹೊಸ ನಿರ್ದೇಶನಗಳ ಮೇರೆಗೆ ಬರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವದೆಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಶನಿವಾರದಂದು ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕೋರೋನಾ ಹಿನ್ನೆಲೆಯಲ್ಲಿ ವಿವಿಧ ಸಾಸಂಸ್ಕøತಿಕ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದ್ದು, 10 ವರ್ಷದೊಳಗಿನ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಚರಿಸುವ ಸ್ವಾತ್ರಂತ್ರೋತ್ಸವ ಕಾರ್ಯಕ್ರಮದಲ್ಲಿ …
Read More »ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದಶಾಸಕ ಸತೀಶ್ ಜಾರಕಿಹೊಳಿ
ಗೋಕಾಕ: ರಾಜ್ಯ ಸರ್ಕಾರದ ಬಿಜೆಪಿ ನಾಯಕರಿಂದ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರವಾಗಿ ನೀಡಿರುವ ಹೇಳಿಕೆ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಬದಲಾವಣೆ ಮಾಡಲು ಪ್ರಯತ್ನಿಸಿದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು, ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ …
Read More »ಬೆಳಗಾವಿಯ ಸುವರ್ಣ ಸೌಧಕ್ಕೆ ಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ
ಬೆಳಗಾವಿಯ: ಸುವರ್ಣ ಸೌಧಕ್ಕೆಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ.ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲು ತೀರ್ಮಾನಿಸಿದ್ದೇನೆ” ಇಂದು ರವಿವಾರ ಸಂಜೆಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿತಮ್ಮನ್ನು ಭೆಟ್ಟಿಯಾದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯನಿಯೋಗಕ್ಕೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಈ ಭರವಸೆನೀಡಿದ್ದಾರೆ. ಗಡಿ ಅಭಿವೃದ್ಧಿ ಪ್ರಾಧಿಕಾರ,ಗಡಿ ಸಂರಕ್ಷಣಾ ಆಯೋಗ,ಸುವರ್ಣ ಸೌಧಕ್ಕೆ ಪ್ರಮುಖ ಕಚೇರಿಗಳ ಸ್ಥಳಾಂತರ ಹಾಗೂಮುಂಬಯಿ ಕರ್ನಾಟಕಕ್ಕೆ ಕಿತ್ತೂರುಕರ್ನಾಟಕ ಎಂದು ಮರು ನಾಮಕರಣಮಾಡುವ ಕುರಿತು ನಿಯೋಗವು ಬೊಮ್ಮಾಯಿ ಅವರೊಂದಿಗೆ ಚರ್ಚಿಸಿತು. …
Read More »ಬೆಳಗಾವಿ: ಬಾಚಿ ಚೆಕ್ಪೋಸ್ಟ್ ಬಳಿ ತೀವ್ರ ಕಟ್ಟೆಚ್ಚರ; 72 ಗಂಟೆ ಅವಧಿಯೊಳಗಿನ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ
ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗಿದೆ. ವೀಕೆಂಡ್ ಕರ್ಪ್ಯೂ (Weekend Curfew) ಹಿನ್ನೆಲೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಬಂದ್ ಘೋಷಿಸಲಾಗಿದೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ ಬೆಳಗಾವಿ ಗಡಿಭಾಗದ ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ ಹೊರವಲಯ ಬಾಚಿ ಚೆಕ್ಪೋಸ್ಟ್ ಬಳಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಸ್ಥಳದಲ್ಲೇ ಒಂದು ಕೆಎಸ್ಆರ್ಪಿ ವಾಹನ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ವಾಹನ ತಪಾಸಣೆ …
Read More »ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗಿದೆ. ವೀಕೆಂಡ್ ಕರ್ಪ್ಯೂ (Weekend Curfwe) ಹಿನ್ನೆಲೆ ನಿನ್ನೆ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಬಂದ್ ಘೋಷಿಸಲಾಗಿದೆ. ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ತರಕಾರಿ, ಹೂವು ಹಣ್ಣು, ಹಾಲು, ಮದ್ಯದಂಗಡಿ, ದಿನಸಿ ಅಂಗಡಿ ತೆರೆಯಬಹುದಾಗಿದೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2ಗಂಟೆ ವರೆಗೆ ಮಾತ್ರ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ನೀಡಿದ್ದು, ಉಳಿದಂತೆ ಎಲ್ಲಾ …
Read More »ಮನೆ ಸೋರುತ್ತಿರುವುದರಿಂದ ನೆರವು ಕೇಳಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಅಜ್ಜಿಯ ನೋವಿಗೆ ಸ್ಪಂದಿಸಲು ಸ್ವತಃ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸಭೆ ಬಿಟು ಅಜ್ಜಿ ನೋವಿಗೆ ಸ್ಪಂದಿಸಿದ ಬೆಳಗಾವಿ ಡಿಸಿ
ಬೆಳಗಾವಿ: ಮನೆ ಸೋರುತ್ತಿರುವುದರಿಂದ ನೆರವು ಕೇಳಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಅಜ್ಜಿಯ ನೋವಿಗೆ ಸ್ಪಂದಿಸಲು ಸ್ವತಃ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಗುರುವಾರ ಸಭೆ ಬಿಟ್ಟು ಬಂದು ಮನವಿ ಆಲಿಸಿ ಕೂಡಲೇ ಕ್ರಮಕ್ಕೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿ ಮಾನವೀಯತೆ ಮೆರೆದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್ನಲ್ಲಿ ಇದ್ದರು. ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕಚೇರಿಯ ಹೊರ ಭಾಗದಲ್ಲಿ ಗಣಪತಿ ಗಲ್ಲಿಯ …
Read More »ಗೋಕಾಕ್ ತಹಶೀಲ್ದಾರ್ ನೇತೃತ್ವದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳ ತೆರವು
ಘಟಪ್ರಭಾ : ಧುಪದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ರಿ.ಸ.ನಂ-120 ರಲ್ಲಿ ನೀರಾವರಿ ನಿಗಮಕ್ಕೆ ಸೇರಿದ ಜಾಗದಲ್ಲಿ ಅತಿಕ್ರಮಣವಾಗಿ ನಿರ್ಮಿಸಿದ್ದ ಮನೆಗಳನ್ನು ಶುಕ್ರವಾರದಂದು ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪನವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ನೀರಾವರಿ ನಿಗಮದ ಕಛೇರಿ ಹಿಂದುಗಡೆ ಇರುವ ರಿ.ಸ.ನಂ-120 ರಲ್ಲಿ ಇರುವ ನೀರಾವರಿ ಇಲಾಖೆಗೆ ಸೇರಿದ 82 ಎಕರೆ ಜಮೀನಿನ ಪೈಕಿ ಸುಮಾರು 30 ಎಕರೆ ಜಮೀನು ಅತಿಕ್ರಮಣವಾಗಿತ್ತು. ಸುಮಾರು 30ಕ್ಕೂ ಹೆಚ್ಚು ಅನಧಿಕೃತ ಮನೆಗಳು ತೆರವುಗೊಳಿಸುವ ಕಾರ್ಯ ಮುಂದುವರೆದಿದ್ದು, …
Read More »