ಬೆಳಗಾವಿ – ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಹುದು ಮತ್ತು ಮನೆಗ ಮನೆಗಳಲ್ಲಿ ಮೂರ್ತಿ ಸ್ಥಾಪಿಸಬಹುದು ಎಂದು ತಿಳಿಸಿದ್ದಾರೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೊರೋನಾ ಏರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಳಗಾವಿಯಲ್ಲಿ ಸಧ್ಯ 567 ಸಕ್ರೀಯ ಪ್ರಕರಣಗಳಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಚಿಕ್ಕೋಡಿಯಲ್ಲಿ ಕೊರೋನಾ …
Read More »ಮಹಾರಾಷ್ಟ್ರದಲ್ಲಿ ಮತ್ತೆ ಮುಂದುವರೆದ ಮಳೆಯ ಅಬ್ಬರ; ಬೆಳಗಾವಿ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಸ್ಥಿತಿ ಅತಂತ್ರ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 60 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿಯಲ್ಲಿ 3.70 ಲಕ್ಷ ಕ್ಯುಸೆಕ್ ಹೊರ ಹರಿವು ಉಂಟಾಗಿದೆ. ಈಗಾಗಲೇ 105 ಟಿಎಂಸಿ ಸಾಮರ್ಥ್ಯದ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯ 90 ಟಿಎಂಸಿ ಭರ್ತಿಯಾಗಿದ್ದು, ಮಳೆ ಮುಂದುವರೆದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಕೃಷ್ಣಾ ನದಿಗೆ ಬಿಡುವ ಸಾಧ್ಯತೆ ಇದೆ. ಇದರಿಂದ ಬೆಳಗಾವಿ ಜಿಲ್ಲೆಯ …
Read More »ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನ
ಬೆಳಗಾವಿ – ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದಾಗಿ ಅವರು ಬೆಳಗಾವಿಯ ವಿಶ್ವೇಶ್ವರ ನಗರದ ನಿವಾಸದಲ್ಲಿ ಕೊನೆಯುಸಿರೆಳೆದರು. ನಿವೃತ್ತ ಶಿಕ್ಷಕರಾಗಿರುವ ಅವರಿಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣುಕ್ಕಳಿದ್ದಾರೆ. ಬೆಳಗಾವಿಯ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.
Read More »ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವೃದ್ಧ.
ಬೆಳಗಾವಿ : ಬೆಳಗಾವಿಯ ಹಳೆ ಗಾಂಧಿನಗರದ ಬಳಿಯಿರುವ ರೈಲು ಹಳಿಯ ಮೇಲೆ ವೃದ್ಧನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಬೆಳಗಾವಿಯ ಹಳೆ ಗಾಂಧಿನಗರ ಹೈವೆ ಸೇತುವೆ ಹತ್ತಿರ ಇರುವ ರೈಲು ಹಳಿಯ ಮೇಲೆ ಆ ವೃದ್ಧ ಬೆಳಿಗ್ಗೆಯಿಂದ ಕುಳಿತಿದ್ದನಂತೆ, ಮಧ್ಯಾಹ್ನ 3:15 ರ ವೇಳೆಗೆ ಬೆಳಗಾವಿ – ಶೇಡಬಾಳ ರೈಲು ಸಾಂಬ್ರಾ ಕಡೆಯಿಂದ ಬರುತ್ತಿದ್ದಂತೆಯೇ ತಕ್ಷಣ ಹಳಿಯ …
Read More »ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು. ಹಾನಿಯ …
Read More »ಕಡೋಲಿ, ಕಾಕತಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಜಾಪರವಾಡಿ, ಕಡೋಲಿ, ದೇವಗಿರಿ ಹಾಗೂ ಕಾಕತಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾಕತಿ, ಹೊನಗಾ, ಜಮನಾಳ, ಕೆಂಚನಟ್ಟಿ, ಬೈಲೂರ, ಮಳವಳ್ಳಿ, ಹೊಸವಂಟಮುರಿ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ಭೇಟಿ ನೀಡಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದರು. ಈ ಗ್ರಾಮಗಳಲ್ಲಿ ಪ್ರವಾಹ ಹಾಗೂ ಮಳೆಯಿಂದಾಗಿ ಮನೆ, ಬೆಳೆ, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದ್ದು, ಇವುಗಳನ್ನು …
Read More »ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು. …
Read More »ಹೊಸ ಸಿಎಂ ಆಯ್ಕೆಯ ಬಳಿಕ ಯಾವ ಮಂತ್ರಿ ಔಟ್ ಆಗ್ತಾರೆ.ಈ ಬಾರಿ ಮತ್ತೆ ಯಾರಿಗೆ ಗೂಟದ ಕಾರು ಸಿಗುತ್ತದೆ ಎನ್ನುವ ಹೊಸ ಲೆಕ್ಕಾಚಾರ ಬೆಳಗಾವಿ ಜಿಲ್ಲೆಯಲ್ಲಿ ಶುರು
ಬೆಳಗಾವಿ- ರಾಜ್ಯದ 30 ನೇಯ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಬೆಳಗಾವಿಯಲ್ಲಿ ಹೊಸ ರಾಜಕೀಯ ಬಿರುಗಾಳಿ ಬೀಸುತ್ತಿದೆ.ಹೊಸ ಸಿಎಂ ಆಯ್ಕೆಯ ಬಳಿಕ ಯಾವ ಮಂತ್ರಿ ಔಟ್ ಆಗ್ತಾರೆ.ಈ ಬಾರಿ ಮತ್ತೆ ಯಾರಿಗೆ ಗೂಟದ ಕಾರು ಸಿಗುತ್ತದೆ ಎನ್ನುವ ಹೊಸ ಲೆಕ್ಕಾಚಾರ ಬೆಳಗಾವಿ ಜಿಲ್ಲೆಯಲ್ಲಿ ಶುರುವಾಗಿದೆ. ಹೊಸ ಸಿಎಂ ಹೊಸ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಜೊತೆಗೆ ಬುಡಾ,ಕಾಡಾ,ಅಲ್ಪಸಂಖ್ಯಾತರ ನಿಗಮ ಸೇರಿದಂತೆ ಎಲ್ಲ ನಿಗಮ ಮಂಡಳಿಗಳು ಯಡಿಯೂರಪ್ಪ …
Read More »ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ …
Read More »ಕೃಷ್ಣಾ ಪ್ರವಾಹಕ್ಕೆ ಬದುಕು ದುಸ್ತರ..
ಬಾಗಲಕೋಟೆ: ಕೃಷ್ಣಾ ನದಿ ಈ ಬಾರಿ ಉಗ್ರ ರೂಪ ತಾಳಿದ ಪರಿಣಾಮ ಪ್ರವಾಹ ಅಕ್ಷರಶಃ ನದಿ ಪಾತ್ರದ ಜನರ ಬದುಕನ್ನು ಬರ್ಬರವಾಗಿಸಿ ಬಿಟ್ಟಿದೆ. ಕಣ್ಣು ಹಾಯಿಸಿದ ಕಡೆಯೆಲ್ಲ ಪ್ರವಾಹ, ಭೀಕರ ಮಳೆ ಜಿಲ್ಲೆಯನ್ನು ಆಘಾತಕ್ಕೆ ತಳ್ಳಿದೆ. ಪ್ರವಾಹದ ರಣ ಕೇಕೆಗೆ ಗ್ರಾಮಗಳು ಜಲಾವೃತಗೊಂಡರೆ, ಗ್ರಾಮಕ್ಕೆ ಗ್ರಾಮಗಳೆ ನಡುಗಡ್ಡೆಯಾಗಿ ಹೋಗಿವೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು ಅಪಾರ ಹಾನಿ ಉಂಟು ಮಾಡಿದೆ. ಜನಜೀವನವನ್ನು ಸಂಪೂರ್ಣ ಅಸ್ಯವ್ಯಸ್ತಗೊಳಿಸಿದೆ. ಸಂತ್ರಸ್ಥರಿಗಾಗಿ …
Read More »