Breaking News

ಬೆಳಗಾವಿ

ಸಾರ್ವಜನಿಕರು ಎಚ್ಚರದಿಂದ ಇರುವಂತೆ ಬೆಳಗಾವಿ ಡಿಸಿಪಿ ವಿಕ್ರಂ ಆಮಟೆ

ಬೆಳಗಾವಿ: ಜಿಲ್ಲೆಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು, ಸಾರ್ವಜನಿಕರು ಜಾಗೃತರಾಗಿರುವಂತೆ ಎಚ್ಚರಿಕೆ ನೀಡಿರುವ ಪೊಲೀಸ್ ಉಪ ಆಯುಕ್ತ ವಿಕ್ರಂ ಆಮಟೆ, ಒಂದುಗಂಟೆಯೊಳಗೆ ದೂರು ನೀಡುವಂತೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಕ್ರಂ ಆಮಟೆ, 2020 ಹಾಗೂ 2021ರಲ್ಲಿ ಒಟ್ಟು 65 ಲಕ್ಷ ರೂ ಹಣ ಸೈಬರ್ ವಂಚನೆಯಾಗಿದ್ದು, 29 ಲಕ್ಷ 13 ಸಾವಿರ ರೂಪಾಯಿಯನ್ನು ಕಾರ್ಯಾಚರಣೆ ನಡೆಸಿ ವಂಚನೆಗೊಳಗಾದವರ ಖಾತೆಗೆ ಮರು ಜಮಾವಣೆ ಮಾಡಲಾಗಿದೆ ಎಂದರು. ನಗರ ವ್ಯಾಪ್ತಿಯಲ್ಲಿ ನೊಂದವರು ಬೆಳಗಾವಿ …

Read More »

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ …

Read More »

ಹಿರಿಯರ ಸ್ಮರಣಾರ್ಥ ಆಹಾರ ಕಿಟ್ ವಿತರಣೆ

  ಘಟಪ್ರಭಾ: ದಿ.ಜಾನ್ ಆರ್.ಕಲಾರಕೊಪ್ಪ, ಹಾಗೂ ದಿ.ಎಂ.ಬಿ.ಐಹೊಳಿ ಅವರ ಸ್ಮರನಾರ್ಥ ದೈಹಿಕ ಶಿಕ್ಷಕ ಡಿ.ಜೆ.ಕಲಾರಕೊಪ್ಪ ಅವರಿಂದ ಸರ್ಕಾರಿ ಶಾಲೆಗಳ ಬಿಸಿ ಊಟ ಸಿಬ್ಬಂದಿಗೆ ಆಹಾರ ಧಾನ್ಯ ಕಿಟ್‌ಗಳನ್ನು ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿತಿರಿಸಲಾಯಿತು.   ಸಮಾರಂಭಕ್ಕೆ ಮುಖ್ಯ ಅತಿಥಿಗಾಳಗಿ ಆಗಮಿಸಿದ ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಮಲ್ಲಾಪೂರ ಪಿ.ಜಿ ಹಾಗೂ ಶಿಂದಿಕುರಬೇಟ ಸಿ.ಆರ್.ಸಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ 30 ಕ್ಕೂ ಹೆಚ್ಚು ಬಿಸಿ …

Read More »

ಭಾರತೀಯ ಕ್ರೈಸ್ತರ ದಿನಾಚರಣೆ ಅಂಗವಾಗಿ ಕೋವಿಡ್ ಪೀಡಿತರಿಗೆ ಹಣ್ಣು, ಹಂಪಲು ವಿತರಣೆ

  ಬೆಳಗಾವಿ : ಬೆಳಗಾವಿ ಫಾಸ್ಟರ್ಸ್ ಅಂಡ್ ಕ್ರಿಸ್ಟಿನ್ ಲೀಡರ್ಸ್ ಅಸೋಸಿಯೇಷನ್, ಶನಿವಾರ – ಭಾರತೀಯ ಕ್ರೈಸ್ತ ದಿನಾಚರಣೆ – ಅಂಗವಾಗಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಕೋವಿಡ್ 19 ನಿಯಮಗಳನ್ನು ಪಾಲಿಸಿ, ಹಣ್ಣು ಹಂಪಲವನ್ನು ವಿತರಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷ ಪಾಸ್ಟರ್ ಜೆ ಥೋಮಸ್ ನೇತೃತ್ವದಲ್ಲಿ ಕೋವಿಡ್ ಹಾಗು ಇತರ ಒಳರೋಗಿಗಳಿಗೆ ಹಣ್ಣು, ಹಾಲು, ಬಿಸ್ಕೆಟ್, ನೀರು ನೀಡಿ ಅವರು ಶೀಘ್ರ ಗುಣವಾಗಲೆಂದು ಅವರಿಗಾಗಿ ಪ್ರಾರ್ಥಿಸಲಾಯಿತು. ಬೆಳಗಾವಿ ಫಾಸ್ಟರ್ಸ್ …

Read More »

ಕರ್ನಾಟಕ ಪೊಲೀಸರಿಗೆ ತಲೆನೋವಾಯ್ತು ಆಂಧ್ರ-ತೆಲಂಗಾಣ ರೈತರ ಜಗಳ

ರಾಯಚೂರು: ಸುಮಾರು ವರ್ಷಗಳಿಂದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ರಾಜೋಳಿ ಬಂಡಾ ಜಲಾಶಯದ ನೀರು ಹಂಚಿಕೆ ವಿಚಾರವಾಗಿ ಆಂಧ್ರ – ತೆಲಂಗಾಣ ನಡುವೆ ಗಲಾಟೆ ನಡೆಯುತ್ತಲೇ ಇದೆ. ಇಷ್ಟು ದಿನ ರಾಜೋಳಿ ಬಂಡಾ ಜಲಾಶಯದ ನೀರನ್ನು ಕೇವಲ ತೆಲಂಗಾಣಕ್ಕೆ ಮಾತ್ರ ಬಿಡಲಾಗುತ್ತಿತ್ತು. ಈಗ ಆಂಧ್ರದ ರಾಯಲಸೀಮ ಪ್ರದೇಶಕ್ಕೂ ಈ ಜಲಾಶಯದ ನೀರು ಬೇಕು ಎಂಬ ಕೂಗು ಕೇಳಿ ಬಂದಿದೆ. ರಾಜೋಳಿ ಬಂಡಾ ಜಲಾಶಯದ ನೀರನ್ನು ನಮಗೂ ಬಿಡಿ ಎಂದು ಆಂಧ್ರದ …

Read More »

ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.

    ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು .   ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ …

Read More »

ಕಿತ್ತೂರು ತಾಲೂಕಿನ ವೈದ್ಯರಿಗೆ Thermos ವಿತರಿಸಿ ವೈದ್ಯರ ಸೇವೆಯನ್ನು ಗುಣಗಾನ ಮಾಡಿದ ಪೆಂಡಾಲ್ ಗುತ್ತಿಗೆದಾರ ಪಕ್ಕಿರಪ್ಪ ಮುರಗೋಡ..!!

ಕಿತ್ತೂರು ತಾಲೂಕಿನ ವೈದ್ಯರಿಗೆ Thermos ವಿತರಿಸಿ ವೈದ್ಯರ ಸೇವೆಯನ್ನು ಗುಣಗಾನ ಮಾಡಿದ ಪೆಂಡಾಲ್ ಗುತ್ತಿಗೆದಾರ ಪಕ್ಕಿರಪ್ಪ ಮುರಗೋಡ..!! ಕಿತ್ತೂರು :ಗುರುವಾರ ದಂದು ಕಿತ್ತೂರು ಪಟ್ಟಣದಲ್ಲಿರುವ ಕಲ್ಮಠ ಸಭಾಭವನದಲ್ಲಿ ವೈದ್ಯರ ದಿನಾಚರಣೆ ನಿಮಿತ್ಯ ಸತ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ರಾಜಗುರು ಸಂಸ್ಥಾನ ಕಲ್ಮಠದ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ತಾಲೂಕಿನ ಗಣ್ಯ ವ್ಯಕ್ತಿಗಳು ಮತ್ತು ಪೆಂಡಾಲ್ ಗುತ್ತಿಗೆದಾರರು ಆದ ಪಕ್ಕಿರಪ್ಪ …

Read More »

ಬೆಳಗಾವಿಯಲ್ಲಿ ವಿಧಾನಮಂಡಳದ ಅಧಿವೇಶನ ನಡೆಯಲಿದೆಯೇ?

ಬೆಳಗಾವಿ – ಇದೇ ತಿಂಗಳಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಳದ ಅಧಿವೇಶನ ನಡೆಯಲಿದೆಯೇ? ವಿಧಾನ ಪರಿಷತ್ ಸಭಾಪತಿ, ವಿಧಾನಸಭಾಧ್ಯಕ್ಷ, ವಿಧಾನಪರಿಷತ್ ಮುಖ್ಯಸಚೇತಕ – ಈ ಮೂವರೂ ಬೆಳಗಾವಿಯ ಸುವ್ರಣ ವಿಧಾನಸೌಧದಲ್ಲಿ ಜುಲೈ ತಿಂಗಳಲ್ಲಿ ವಿಧಾನಮಂಡಳದ ಅಧಿವೇಶನ ನಡೆಸಲು ಸಹಮತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಇದೇ ತಿಂಗಳಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಳದ ಅಧಿವೇಶನ ನಡೆಸುವಂತೆ ಪತ್ರ ಬರೆದಿದ್ದಾರೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ …

Read More »

ಚಿಕ್ಕೋಡಿಯಲ್ಲಿ ದೇವಿಯ ಮೂರ್ತಿಗೆ ಕಣ್ಣು ಅಂಟಿಸಿದ್ದ ಅರ್ಚಕ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ದೇವಿ ವಿಗ್ರಹ ಕಣ್ಣುಬಿಟ್ಟಿರುವುದೇ ಭಾರಿ ಸುದ್ದಿಯಾಗಿದೆ. ಸಂತೂಬಾಯಿ ದೇವಸ್ಥಾನದ ದೇವಿ ರಾತ್ರೋರಾತ್ರಿ ಕಣ್ಣುಬಿಟ್ಟಿದ್ದು ಅದೆಷ್ಟು ಶರವೇಗದಲ್ಲಿ ಹರಡಿತ್ತು ಎಂದರೆ ಗ್ರಾಮಸ್ಥರು ಮಾತ್ರವಲ್ಲದೇ ಅಕ್ಕಪಕ್ಕದ ಊರಿನವರೂ ಈ ಪವಾಡವನ್ನು ನೋಡಲು ತಂಡೋಪತಂಡವಾಗಿ ಬರತೊಡಗಿದರು. ಕರೊನಾ ತೊಲಗಿಸಲು ಈ ದೇವಿ ಕಣ್ಣು ಬಿಟ್ಟಿರುವುದಾಗಿ ಹೇಳಿದ್ದ ಅರ್ಚಕ, ಈ ದೇವಿಯನ್ನು ಪೂಜೆ ಮಾಡಿದರೆ ಕರೊನಾ ತೊಲಗುವುದಾಗಿ ಹೇಳಿದ್ದರು. ಆದ ಕಾರಣ …

Read More »

ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು: ಸತೀಶ್ ಜಾರಕಿಹೊಳಿ

ಬೆಳಗಾವಿ: ಸ್ವಪಕ್ಷಿಯರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದು ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು ಎಂದಿದ್ದಾರೆ. ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುವುದನ್ನು ರಮೇಶ್ ಜಾರಕಿಹೊಳಿ ಅವರಿಗೆ ನೀವೇ ಕೇಳಬೇಕು ಎಂದರು. …

Read More »