Breaking News

ಬೆಳಗಾವಿ

ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!

ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಕಾಡಪ್ಪ ಪ್ರದಾನಿ ರಂಗಾಪಪುರೆ(48), ಹೆಣ್ಣುಮಕ್ಕಳಾದ ಕೀರ್ತಿ(18) ಹಾಗೂ ಸ್ಪೂರ್ತಿ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರದ ಹಿಂದೆ ಚೆನ್ನವ್ವ ರಂಗಾಪುರೆ ಸಾವನ್ನಪ್ಪಿದ್ದರು. ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.   …

Read More »

ಮಾರ್ಕಾಂಡೇಯ ನದಿ ನೀರುಪಾಲಾಗಿದ್ದ ರೈತ ಶವವಾಗಿ ಪತ್ತೆ

ಬೆಳಗಾವಿ: ಭಾರಿ ಮಳೆಯಿಂದ ಕಾಕತಿ ಬಳಿ ಮಾರ್ಕಾಂಡೇಯ ನದಿ ನೀರುಪಾಲಾಗಿದ್ದ ರೈತ ಶವವಾಗಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ದರ್ಗಾ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಮಾರ್ಕಾಂಡೇಯ ನದಿಗೆ ಕಾಕತಿ ಬಳಿ ನಿರ್ಮಿಸಿದ್ದ ಸೇತುವೆ ಬಳಿ ಕಾಲು ತೊಳೆಯಲೆಂದು ಹೋಗಿದ್ದ ರೈತ ಸಿದ್ರಾಯಿ ದೊಡ್ಡರಾಮ ಸುತಗಟ್ಟಿ ನೀರಿನ ರಭಸಕ್ಕೆ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ರೈತನಿಗಾಗಿ ಎರಡು ದಿನಗಳಿಂದ ಎನ್ ಡಿ ಆರ್ ಎಫ್ ತಂಡ …

Read More »

ಕೋವಿಡ್ ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಬೆಂಬಲ ನೀಡುವ ಕಾರ್ಯಕ್ರಮ

ಬೆಳಗಾವಿ: ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಅವರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರಬಂದು ಅವರು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳಿಗೆ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಎಲ್ಲಾ ರೀತಿಯ ಬೆಂಬಲಗಳನ್ನು ನೀಡಲು ಮುಂದೆ ಬರುವ ವ್ಯಕ್ತಿಗಳು ಬಾಲಹಿತೈಷಿ ಯೋಜನೆಯಡಿ ಮಾರ್ಗದರ್ಶಕರಾಗಿ ಕಾರ್ಯದರ್ಶಿ ಕರು ಎಂದು …

Read More »

ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್

ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ. ಶೇ …

Read More »

ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್,ಬೆಳಿಗ್ಗೆ 6ಗಂಟೆಯಿಂದ ಸಂಜೆ 5ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ

ಬೆಂಗಳೂರು: ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುತ್ತಿರುವುದಾಗಿ ತಿಳಿಸಿದರು. ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, …

Read More »

ಸರ್ಕಾರ ಕೈ ಬಿಟ್ಟರೂ,,,ತನ್ನ ಕುಲ ಭಾಂದವರ ಕೈ ಹಿಡಿದ ಸಹೋದರರು..!!

ಬೆಳಗಾವಿ : ಕೋವಿಡ್ ಮಹಾಮಾರಿಗೆ ಹೆದರಿ ಜನರು ತಮ್ಮ ಮನೆಗಳಿಂದ ಹೊರಗೆ ಬರಲು ಹಿಂದೆ ಮುಂದೆ ನೋಡುತ್ತಿರುವ ಈಗಿನ ಪರಿಸ್ಥಿತಿಯಲ್ಲಿ ಮೇದಾರ ಸಮಾಜದ ಹಿತೈಸಿಗಳಾದ ನಾಗೇಶ ಹಾಗೂ ಅರ್ಜುನ ಕಡೋಲಿ ಸಹೋದರರು ಕೊರೋನಾಗೂ ಹೆದರದೆ ತಮ್ಮ ಕಾಲಿಗೆ ಚಕ್ರ ಕಟ್ಟಿಕೊಂಡ ಹಾಗೆ ಓಡಾಡಿ ಬಡತನದ ಅಲೆಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಗಳನ್ನು ವಿತರಿಸುತ್ತಿದ್ದಾರೆ.ಕಳೆದ ಕೆಲ ದಿನಗಳಿಂದ ಬೆಳಗಾವಿ ಜಿಲ್ಲೆಯ ವಿವಿಧ ಊರುಗಳಿಗೆ ಭೇಟಿ ನೀಡಿ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …

Read More »

ವೇದಗಂಗಾ ನದಿಯಲ್ಲಿ ಕೊಚ್ಚಿಹೋಗಿ ಮರ ಹತ್ತಿ ಕುಳಿತಿದ್ದ ಯುವಕನನ್ನು ರೋಚಕ ಕಾರ್ಯಾಚರಣೆಯ ಮೂಲಕ ರಕ್ಷಿಸಿದ ಸ್ಥಳೀಯರು

ಬೆಳಗಾವಿ: ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸಿದ್ನಾಳ ಗ್ರಾಮದ ಬಳಿ ವೇದಗಂಗಾ ನದಿ ದಾಟುತ್ತಿದ್ದಾಗ ಕೊಚ್ಚಿಹೋಗಿದ್ದ ಯುವಕನನ್ನು ಸತತ 5 ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ. ಎನ್​ಡಿಆರ್​ಎಫ್​ ತಂಡ ರಕ್ಷಣಾ ಕಾರ್ಯಾಚರನೆ ನಡೆಸುತ್ತಿದ್ದರೂ ಸ್ಥಳೀಯರೇ ನದಿಯಲ್ಲಿ ಕೊಚ್ಚಿಹೋಗಿದ್ದ ದಿಗ್ವಿಜಯ್ ಕುಲಕರ್ಣಿ ಎಂಬ ಯುವಕನ್ನು ರಕ್ಷಿಸಿದ್ದಾರೆ. ಸೇತುವೆ ಮೇಲೆ ಹರಿಯುತ್ತಿದ್ದ ವೇದಗಂಗಾ ನದಿ ದಾಟಲು ಯತ್ನಿಸಿದ್ದ ಯುವಕ ದಿಗ್ವಿಜಯ ಕುಲಕರ್ಣಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ. ನದಿಯ ಮಧ್ಯೆ …

Read More »

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ L& T ಕಂಪನಿಯ ಆಕ್ಸೀಜನ್ ಘಟಕ ಇಂದಿನಿಂದ ಸೇವೆಗೆ ಸಮರ್ಪಣೆ

ಬೆಳಗಾವಿ- ಇನ್ನು ಮುಂದೆ ಬೆಳಗಾವಿಯಲ್ಲಿ ಎಂದಿಗೂ ಆಕ್ಸೀಜನ್ ಸಮಸ್ಯೆ ಎದುರಾಗುವದಿಲ್ಲ,ಯಾಕಂದ್ರೆ ಶಾಸಕ ಅಭಯ ಪಾಟೀಲ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ.ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ L& T ಕಂಪನಿಯ ಆಕ್ಸೀಜನ್ ಘಟಕ ಇಂದಿನಿಂದ ಸೇವೆಗೆ ಸಮರ್ಪಣೆಯಾಗಿದೆ. ಬೆಳಗಾವಿಯಲ್ಲಿ ಆಮ್ಲಜನಕ ಕೊರತೆನ್ನು ಗಮನಿಸಿದ ಶಾಸಕ, ಅಭಯ ಪಾಟೀಲ ರವರು ಆಮ್ಲಜನಕ ತಯಾರಿಕಾ ಘಟವನ್ನು ಸ್ಥಾಪಿಸುವಂತೆ ಎಲ್&ಟಿ ಕಂಪನಿಯ ಅವರಿಗೆ ವೈಯಕ್ತಿಕವಾಗಿ ವಿನಂತಿಸಿದ್ದರು. ಅದಕ್ಕೆ ಸ್ಪಂದಿಸಿರುವ L&T ಕಂಪನಿ ನಿಗದಿತ ಅವಧಿಯಲ್ಲಿ ಆಮ್ಲಜನಕ. …

Read More »

ಬೆಳಗಾವಿಯಲ್ಲಿ ಸದ್ಯಕ್ಕಿಲ್ಲ ಪ್ರವಾಹ ಭೀತಿ ಎಂದ ಜಿಲ್ಲಾಧಿಕಾರಿ,ವಿವಿಧ ಜಿಲ್ಲೆಗಳ ಜೊತೆ ಸಂವಾದ ನಡೆಸಿದ B.S.Y.

ಬೆಳಗಾವಿ : ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವ ಕುರಿತು ಮುಂಚಿತವಾಗಿಯೇ ಮಾಹಿತಿ ನೀಡಲಾಗುವುದು ಎಂದು ನೆರೆಯ ಮಹಾರಾಷ್ಟ್ರದ ನೀರಾವರಿ ಇಲಾಖೆಯ ಸಚಿವರು ತಿಳಿಸಿದ್ದಾರೆ. ಇದರಿಂದ ಪ್ರವಾಹ ಸ್ಥಿತಿಯ ಸಮರ್ಪಕ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಪ್ರವಾಹ ಸಿದ್ಧತೆ ಕುರಿತು ಬೆಳಗಾವಿ ಸೇರಿದಂತೆ ರಾಜ್ಯದ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶನಿವಾರ (ಜೂ.19) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಜಲಾಶಯಗಳಿಂದ ನೀರು ಬಿಡುಗಡೆ ಕುರಿತ …

Read More »