Breaking News

ಬೆಳಗಾವಿ

ಪ್ರಯಾಗ್ ರಾಜ ಕುಂಭಮೇಳಕ್ಕೆ ತೆರಳುವಾಗ;ಭೀಕರ ರಸ್ತೆ ಅಪಘಾತ ಗೋಕಾಕನ 6 ಜನ ಸ್ಥಳದಲ್ಲಿಯೇ ಸಾವು.

ಗೋಕಾಕ: ಮಧ್ಯಪ್ರದೇಶದ ಜಬಲ್ಪುರ ನಲ್ಲಿ ನಡೆದ ಅಪಘಾತ‌. ಜಬಲ್ಪುರ ಜಿಲ್ಲೆಯ ಖಿತೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಇಂದು ನಸುಕಿನ ಜಾವ 5 ಗಂಟೆಗೆ ‌ನಡೆದ ಅಪಘಾತ. KA49M5054 ಸಂಖ್ಯೆಯ ತೂಫಾನ್ ವಾಹನ ಅಪಘಾತ. ಪ್ರಯಾಗರಾಜ್ ದಿಂದ ಜಬಲ್ಪುರಗೆ ತೆರಳುವಾಗ ನಡೆದ ಅಪಘಾತ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿಯಾಗಿ ದುರ್ಘಟನೆ. ಆರು ಜನ ಸ್ಥಳದಲ್ಲಿಯೇ ಸಾವು ಇಬ್ಬರ ಸ್ಥಿತಿ ಗಂಭೀರ. ಗಾಯಗೊಂಡ ಇಬ್ಬರೂ ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲು. …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕಾರೀಮನಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಬೆಳಗಾವಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಪ್ರಕರಣ : 24 ಗಂಟೆಯಲ್ಲೇ ಆರೋಪಿಗಳ ಬಂಧನ

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣ ದಾಖಲಾದ 24 ಗಂಟೆಯ ಒಳಗೆ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪಹರಣ ಮಾಡಿದ್ದ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದು, ಕಿಡ್ನಾಪ್ ಪ್ರಕರಣ ಸುಖಾಂತ್ಯವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್​, “ಮೂಡಲಗಿ ತಾಲ್ಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ್​ ಅಂಬಿ ಅವರನ್ನು ಕಿಡ್ನಾಪ್ ಮಾಡಲಾಗಿತ್ತು. ಅವರ ಪತ್ತೆಗಾಗಿ ಘಟಪ್ರಭಾ ಪೊಲೀಸರು ಹಾಗೂ ನಿಪ್ಪಾಣಿ …

Read More »

ಧಾರವಾಡದ ಕಲಘಟಗಿಯಲ್ಲಿ‌ ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ..

ಧಾರವಾಡದ ಕಲಘಟಗಿಯಲ್ಲಿ‌ ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ… ಅಕ್ರಮವಾಗಿ ಸ್ಪಿರಿಟ್ ಸಾಗಾಟ, ಓರ್ವನ ಬಂಧನ ಟ್ಯಾಂಕ‌ರ್ ವಾಹನದ ನಂಬರ್ ಪ್ಲೇಟ್‌ನ್ನೇ ಚೇಂಜ್ ಮಾಡಿ, ಅಕ್ರಮವಾಗಿ ಸ್ಪಿರಿಟ್‌ ಸಾಗಿಸುತ್ತಿದ್ದ ಟ್ಯಾಂಕ‌ರ ಸಮೇತ ಚಾಲಕನೊಬ್ಬನನ್ನು ಅಬಕಾರಿ ಇಲಾಖೆ ಸಿಬ್ಬಂದಿ ಧಾರವಾಡದ ಕಲಘಟಗಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ಮೂಲಕ ಟ್ಯಾಂಕರ್‌ ವಾಹನದಲ್ಲಿ ಸ್ಪಿರಿಟ್‌ನ್ನು ಗೋವಾಕ್ಕೆ ಸಾಗಿಸಲಾಗುತ್ತಿತ್ತು. ಈ ಟ್ಯಾಂಕರ್ ಚಾಲಕ ವಾಹನದ ನಂಬ‌ರ್ ಪ್ಲೇಟ್‌ ಚೇಂಜ್ ಮಾಡಿ ಸ್ಪಿರಿಟ್ ಸಾಗಿಸುತ್ತಿದ್ದ …

Read More »

ವಿಶ್ರಾಂತಿಯಲ್ಲಿದ್ದ ಸಚಿವೆ ಹೆಬ್ಬಾಳ್ಕರ್ ಜನರಿಂದ ಅಹವಾಲು ಸ್ವೀಕಾರ

ವಿಶ್ರಾಂತಿಯಲ್ಲಿದ್ದ ಸಚಿವೆ ಹೆಬ್ಬಾಳ್ಕರ್ ಜನರಿಂದ ಅಹವಾಲು ಸ್ವೀಕಾರ ಸಂಕ್ರಾಂತಿಯ ಹಬ್ಬದಂದು ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ರಸ್ತೆ ಅಪಘಾತವಾದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ‌ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಕುವೆಂಪು‌ ನಗರದ ನಿವಾಸದಲ್ಲಿ ಸಾರ್ವಜನಿಕರ ಆಹವಾಲನ್ನು ಸ್ವೀಕರಿಸಿದರು. ಗ್ರಾಮೀಣ ಮತಕ್ಷೇತ್ರದ ಜನರು ವಿವಿಧ ಸಮಸ್ಯೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆ ಅಳಲು ತೋಡಿಕೊಂಡರು. ಸ್ಥಳದಲ್ಲಿಯೇ ಕೆಲ ಜನರ ಸಮಸ್ಯೆ …

Read More »

ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ

ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆಯಿಂದ ಕಾರ್ಯಕ್ರಮ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಸರ್ವಜ್ಞರ ತ್ರಿಪದಿಗಳು ತ್ರಿಕಾಲ ಸತ್ಯ-ಡಾ.ಗುರುದೇವಿ ಹುಲೆಪ್ಪನವರ ಮಠ ಗುರುವಾರ ಬೆಳಗಾವಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು …

Read More »

ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ

ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆಯಿಂದ ಕಾರ್ಯಕ್ರಮ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಸರ್ವಜ್ಞರ ತ್ರಿಪದಿಗಳು ತ್ರಿಕಾಲ ಸತ್ಯ-ಡಾ.ಗುರುದೇವಿ ಹುಲೆಪ್ಪನವರ ಮಠ ಗುರುವಾರ ಬೆಳಗಾವಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು …

Read More »

ಹಿಂಡಲಗಾ ಜೈಲಿನ ಜಾಮರ್ ತಂದೊಡ್ಡಿದ ತೊಂದರೆ… ನೆಟವರ್ಕ್ ಸಿಗದೇ ಪರಿತಪಿಸುತ್ತಿರುವ ಜನತೆ..

ಬೆಳಗಾವಿ:  ಹಿಂಡಲಗಾ ಜೈಲಿನ ವತಿಯಿಂದ ಜೈಲಿನ ಹಿತಾಸಕ್ತಿಯಲ್ಲಿ ಅಳವಡಿಸಿದ ಜಾಮರನಿಂದಾಗಿ ಜೈಲಿನ ಅಕ್ಕಪಕ್ಕದ ನಾಗರಿಕರಿಗೆ ನೆಟವರ್ಕ್ ಸಿಗದೇ ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಬೆಳಗಾವಿಯ ಹಿಂಡಲಗಾ ಜೈಲಿನ ಮೂಲಕ ಜಾಮರ್ ಅಳವಡಿಸಲಾಗಿದ್ದು, ಜೈಲಿನ ಅಕ್ಕಪಕ್ಕದ ಜನವಸತಿಯಲ್ಲಿಯೂ ನೆಟವರ್ಕ್ ಸಿಗದೇ ಜನರಿಗೆ ತೀವ್ರ ತೊಂದರೆಯುಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ಈಗಾಗಲೇ ನಾಗರೀಕರು ಜೈಲಿನ ಆಡಳಿತಕ್ಕೆ ಮನವಿಯನ್ನು ಸಲ್ಲಿಸಿದ್ದು, ಜಾಮರನ ಮಿತಿಯನ್ನು ಕಡಿಮೆಗೊಳಿಸಬೇಕೆಂದು ಆಗ್ರಹಿಸಲಾಗಿದೆ. ಕಳೆದ 5 ದಿನಗಳಿಂದ ಹಿಂಡಲಗಾ ಗ್ರಾಮ …

Read More »

ದುಷ್ಕರ್ಮಿಗಳು ಉದ್ಯಮಿಯನ್ನು ಅಪಹರಣ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ : ಸಿನಿಮೀಯ ರೀತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ನಡೆದಿದೆ. ರಾಜಾಪುರ ಗ್ರಾಮದ ನಿವಾಸಿ ಬಸವರಾಜ್ ಅಂಬಿ(48) ಅಪಹರಣಕ್ಕೆ ಒಳಗಾದ ಉದ್ಯಮಿ. ಫೆ.14 ರಂದು ರಾತ್ರಿ ಬಸವರಾಜ್ ಅವರನ್ನು ಅಪಹರಣ ಮಾಡಿದ್ದಾರೆ. ಅಪಹರಣದ ಬಳಿಕ ಬಸವರಾಜ್​ ಪತ್ನಿಗೆ ಮಂಗಳವಾರ (ಫೆ.18) ತಡರಾತ್ರಿ ಕರೆ ಮಾಡಿರುವ ಕಿಡ್ನಾಪರ್ಸ್​, ಬಸವರಾಜ್​ ಅಂಬಿಯನ್ನು ಬಿಡಿಸಿಕೊಂಡು ಹೋಗಬೇಕು ಎಂದಿದ್ದರೆ, 5 ಕೋಟಿ ರೂ. …

Read More »

ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಿಂದೆಯೇ ಹೈಕಮಾಂಡ್ ಎಸ್‌ಸಿ, ಎಸ್‌ಟಿ ಸಮುದಾಯಗಳನ್ನು ಒಗ್ಗೂಡಿಸಿ ಅಂತ ಹೇಳಿತ್ತು. ಹೈಕಮಾಂಡ್ ಯಾವಾಗ ಸಮಾವೇಶ ಮಾಡಬೇಕೆಂದು ಹೇಳುತ್ತದೋ ಆವಾಗ ಸಮಾವೇಶವನ್ನು ಮಾಡುತ್ತೇವೆ ಎಂದರು. ನಾನೇನೂ ಹೈಕಮಾಂಡ್ ಭೇಟಿಯಾಗಲ್ಲ. ಸಮಾವೇಶ ಮಾಡಬೇಕು ಅಂತ ರಾಜಣ್ಣ, ಪರಮೇಶ್ವರ್ ಸೇರಿ ಹಲವರು ಮನವಿ ಮಾಡಿದ್ದಾರೆ. ಬೇರೆಯವರು ಹೇಳಿದ್ದನ್ನೇ ನಾನು …

Read More »