Breaking News

ಬೆಳಗಾವಿ

ಸದ್ಯಕ್ಕೆ ನೈಟ್ ಕರ್ಫ್ಯೂ, ಉಪಚುನಾವಣೆ ಮುಗಿತಿದ್ದಂತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ

ರಾಜ್ಯದಲ್ಲಿ ಕೊರೋಣಾ ಎರಡನೆಯ ಅಲೆ ಆತಂಕವನ್ನುಂಟುಮಾಡಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಸೋಂಕು ಹೆಚ್ಚಾಗಿ ಕಂಡುಬರುತ್ತಿರುವ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಫ್ಯೂ ನಿಂದ ಪ್ರಯೋಜನವಿಲ್ಲ, ರಾತ್ರಿ ಜನ ಸಂಚಾರ ವಿರಳವಾಗಿರುತ್ತದೆ. ಈ ಸಂದರ್ಭದಲ್ಲಿ ಕೊರೋನಾ ಹರಡುವುದಿಲ್ಲ ಎಂದೆಲ್ಲ ಟೀಕೆಗಳು ಕೇಳಿಬರುತ್ತಿವೆ. ಆದರೆ, ಇದಿನ್ನು ಸ್ಯಾಂಪಲ್ ಮಾತ್ರ. ಸದ್ಯಕ್ಕೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಹಂತಹಂತವಾಗಿ ಉಳಿದ ನಗರಗಳಿಗೂ ವಿಸ್ತರಿಸಲಾಗುವುದು. ಉಪ ಚುನಾವಣೆ ಮುಗಿಯುತ್ತಿದ್ದಂತೆ …

Read More »

ಕಾಂಗ್ರೆಸ್ ಪಕ್ಷದ ಇತಿಹಾಸವೇ, ಈ ದೇಶದ ಇತಿಹಾಸ ” ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಪ್ರಚಾರ ಸಭೆ

ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಹಿನ್ನಲೆಯಲ್ಲಿ ಇವತ್ತು ಬಡಸ್ ಕೆ ಎಚ್ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಡಿ ಕೆ ಶಿವಕುಮಾರವರ ನೇತ್ರತ್ವದಲ್ಲಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಪ್ರಚಾರ ಸಭೆಯನ್ನು ಕೈಗೊಳ್ಳಲಾಯಿತು. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಅವಲೋಕಿಸುವ ಮುಖೇನ ಪ್ರಚಾರಕ್ಕೆ ಚಾಲನೆಯನ್ನು ನೀಡಲಾಯಿತು. ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಂತಹ ಕೊಡುಗೆಗಳನ್ನು ಸ್ಮರಿಸುತ್ತಾ ಅನೇಕ ಮಹನೀಯರು ಹಗಲು ರಾತ್ರಿಯನ್ನದೇ ದೇಶಕ್ಕಾಗಿ ದುಡಿದು ದೇಶವನ್ನು ಸುಭದ್ರವಾಗಿ …

Read More »

ಶಾಸಕ ಯತ್ನಾಳ್‌ ಶೀಘ್ರದಲ್ಲಿ ಬಿಜೆಪಿಯಿಂದ ‘ಉಚ್ಛಾಟನೆ’ : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಬೆಳಗಾವಿ : ಬಿಜೆಪಿಯಲ್ಲಿ ಇದ್ದುಕೊಂಡು ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ಯತ್ನಾಳ್‌ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ದ ಕಿಡಿಕಾರುತ್ತಿರುವುದು ಈಗ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿದ್ದು, ಬಹಿರಂಗವಾಗಿಯೇ ಯತ್ನಾಳು ಅವರು ಸಿಎಂ ಸೇರಿದಂತೆ ನಾನಾ ಮಂದಿಯ ವಿರುದ್ದ ಕಿಡಿಕಾರುತ್ತಿದ್ದಾರೆ. ಈ ನಡುವೆ ಶಾಸಕ ಯತ್ನಾಳ್‌ ಶೀಘ್ರದಲ್ಲಿ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗುವುದು ಅಂತ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ …

Read More »

ಸತೀಶ್ ಜಾರಕಿಹೊಳಿಯವರಿಗೆ ಡಿಎಸ್ಎಸ್ ಬೆಂಬಲ..!

ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಶೋಷಿತ ಸಮಾಜಗಳು ಮತ್ತು ಕಡುಬಡವರ ವಿರೋಧಿಯಾಗಿದ್ದು, ಅದನ್ನು ಕಿತ್ತೊಗೆಯಲು ನಾವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಮುತ್ಸದ್ದಿ ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಲಿದ್ದೇವೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕರಾದ ಲಕ್ಷ್ಮಿನಾರಾಯಣ ನಾಗವಾರ ಹೇಳಿದರು. ಶುಕ್ರವಾರ ದಂದು ಬೆಳಗಾವಿಯ ಕಮ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ರೈತರು ಕಾರ್ಮಿಕರು …

Read More »

ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ 7 ಲಕ್ಷಕ್ಕೂ ಹೆಚ್ಚಿನ ಮತಗಳು ಸಿಕ್ಕಿ ಗೆಲ್ಲುತ್ತೇನೆ.: ಸತೀಶ್ ಜಾರಕಿಹೊಳಿ

ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು ಅಲ್ಲಿ ಚುನಾವಣೆ ನಡೆಯುತ್ತಿದೆ, ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ವಿರುದ್ಧ ಗೆದ್ದು 7 ಲಕ್ಷಕ್ಕೂ ಅಧಿಕ ಮತಗಳು ಸಿಗುವ ವಿಶ್ವಾಸವಿದೆ ಎಂದು …

Read More »

ಯಾವುದೇ ಕಾರಣದಿಂದ ಈ ಬಾರಿ ಬೆಳಗಾವಿಯನ್ನು ಬಿಜೆಪಿಗೆ ಬಿಟ್ಟುಕೊಡಬಾರದು.: ಕಾಂಗ್ರೆಸ್

ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಈ ಕುರಿತು ತಂತ್ರಗಾರಿಕೆಗೆ ಗುರುವಾರ ರಾತ್ರಿ ಖಾಸಗಿ ಹೊಟೆಲ್ ನಲ್ಲಿ ಸಭೆ ನಡೆಸಿತು. ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್ ಮೊದಲಾದವರು ಸಭೆಯಲ್ಲಿದ್ದರು. ಡಿ.ಕೆ.ಶಿವಕುಮಾರ ಬುಧವಾರ ರಾತ್ರಿಯಿಂದ ಬೆಳಗಾವಿಯಲ್ಲಿದ್ದು, ಹಲವಾರು ಗಣ್ಯರನ್ನು ಭೇಟಿ ಮಾಡಿದ್ದಾರೆ. …

Read More »

ಬೆಳಗಾವಿ ಸಬ ರಿಜಿಸ್ಟರ್ ಕಚೇರಿಯಲ್ಲಿ ಮತ್ತೆ ಲಂಚದ ಹಾವಳಿ ಸಂಕನ್ ಗೌಡ ಹಟಾವೋ ವಿಷ್ಣು ತೀರ್ಥ ಬುಲಾವೋ ಎಂದ ಜನತೆ

ಬೆಳಗಾವಿ: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ವಕೀಲರು ಸಬ್ ರಿಜಿಸ್ಟ್ರಾರ್ ಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ದುಡ್ಡು ಕೊಟ್ಟರೆ ಮಾತ್ರ ಜನಸಾಮಾನ್ಯರಿಗೆ ಕೆಲಸ ಮಾಡಿಕೊಡಲಾಗುತ್ತಿದೆ. ಏಜೆಂಟ್ ಗಳ ಹಾವಳಿ ಮಿತಿ ಮೀರಿದ್ದು, ಅಧಿಕಾರಿಗಳು ವಕೀಲರಿಗೂ ಕ್ಯಾರೇ ಎನ್ನುತ್ತಿಲ್ಲ. 5-50 ಸಾವಿರ ರೂಪಾಯಿವರೆಗೆ ಲಂಚ ಪಡೆಯುತ್ತಿದ್ದಾರೆ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ವಿವಾಹವಾಗುವ ಜೋಡಿಗಳಿಗೂ ರಜಿಸ್ಟರ್ ಮಾಡಿಕೊಳ್ಳಲು 5 ಸಾವಿರ ಲಂಚಕ್ಕೆ …

Read More »

ನಮಗೆ ಲಿಂಗಾಯತ, ಮರಾಠಾ ಸೇರಿದಂತೆ ಎಲ್ಲಾ ಸಮುದಾಯದವರು ಒಂದೆ..: ಡಿ ಕೆ ಶಿವಕುಮಾರ್

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಡಿ ಕೆ ಶಿವಕುಮಾರ್ ಹೇಳಿಕೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ಜೊತೆಗೆ ಸಭೆ ಮಾಡುತ್ತೇನೆ. ಈಗಾಗಲೇ ರೈತ ನಾಯಕ ಬಾಬಾಗೌಡ ಪಾಟೀಲ್, ಸೇರಿದಂತೆ ಎಲ್ಲರಿಗೂ ಭೇಟಿ ಆಗುತ್ತಿದ್ದೇನೆ.. ಅನೇಕ ಧರ್ಮ ಪೀಠದ ಸ್ವಾಮೀಜಿಗಳಿಗೆ ಭೇಟಿ ಮಾಡಿದ್ದೇನೆ . ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಉತ್ತಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.. ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ರೂ ಕೇಂದ್ರ ಸರ್ಕಾರ ಅವರು ಜೊತೆಗೆ ಮಾತನಾಡಿಲ್ಲ. ಹೀಗಾಗಿ ರೈತರ ಆಕ್ರೋಶ …

Read More »

3ಲಕ್ಷ ಅಂತರದಿಂದ ಸತೀಶ ಜಾರಕಿಹೊಳಿ ಗೆದ್ದು ಬರುತ್ತಾರೆ:M.B. ಪಾಟೀಲ..

  ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ. ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಅಭ್ಯರ್ಥಿ ಗೆ ವ್ಯಾಪಕವಾಗಿ ಬೆಂಬಲ ಸಿಗುತ್ತಿದೆ.. ಎರಡರಿಂದ ಮೂರು ಲಕ್ಷ ಮತ ಗಳ ಅಂತರಿದಿಂದ ಗೆಲುವು.. ಲಿಂಗಾಯತರು ಕಾಂಗ್ರೆಸ್ ಪರವಾಗಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ್ ಕೌಜಲಗಿ ಲಿಂಗಾಯತ ಶಾಸಕರಿದ್ದಾರೆ. ನಾನು, ಎ. ಬಿ ಪಾಟೀಲ್, ಪ್ರಕಾಶ್ ಹುಕ್ಕೇರಿ ಸೇರಿ ಪ್ರಚಾರ ನಡೆಸುತ್ತೇವೆ. ಸಿದ್ದರಾಮಯ್ಯ ಚುನಾವಣೆ ಪ್ರವಾಸಕ್ಕೆ ಬರ್ತಾರೆ‌. ಮತ್ತಷ್ಟು ಬಲ …

Read More »

ಸರ್ಕಾರ ನಡೆಸುವುದು ನಮಗೆ ಗೊತ್ತಿದೆ: ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಿಎಂ

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ವಾಹನ ಕಾರ್ಯಾಚರಣೆ ನಡೆಸುತ್ತಿದ್ದು, ಸಾಕಷ್ಟು ಸರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಸುರಕ್ಷಿತ ಪ್ರಯಾಣದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಡೆಸುವುದು ನಮಗೆ ಗೊತ್ತಿದೆ. ನೀವು ಅದರ ಬಗ್ಗೆ ತಲೆ ಕೆಡಿಸಕೊಳ್ಳುವುದು ಬೇಡ. ಸರ್ಕಾರ ಹೇಗೆ ನಡೆಸಬೇಕು ನಮಗೆ ಗೊತ್ತಿದೆ. ಪ್ರಯಾಣಿಕರ ಜವಾಬ್ದಾರಿ …

Read More »