Breaking News

ಬೆಳಗಾವಿ

ಕೋವಿಡ್ ಹಗಲಲ್ಲಿ ಹರಡಲ್ಲ, ರಾತ್ರಿ ಮಾತ್ರ ಹರಡುತ್ತೆ ಎಂದ ವಿಜ್ಞಾನಿಯ ಫೋಟೋ ಕೊಡಿ : ಡಿಕೆಶಿ

ಬೆಳಗಾವಿ : ಕೋವಿಡ್ ಹಗಲಲ್ಲಿ ಹರಡುವುದಿಲ್ಲ, ರಾತ್ರಿ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದರೂ ತಿಳಿಸಿದರೆ ಅವರ ಫೋಟೊವನ್ನು ನಾವೂ ಇಟ್ಟುಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಶನಿವಾರ ವ್ಯಂಗ್ಯವಾಡಿದ್ದಾರೆ. ರಾತ್ರಿ ಕರ್ಫ್ಯೂ ಮಾಡಿ ಆರ್ಥಿಕತೆ ಹಾಳು ಮಾಡುತ್ತಿದ್ದಾರೆ. ರಾತ್ರಿ ಕರ್ಫ್ಯೂ ಇಂದ ಜನರನ್ನು ಮಾನಸಿಕವಾಗಿ ಕುಂದಿಸುತ್ತಿದ್ದಾರೆ. ಹಗಲಲ್ಲಿ ಕೋವಿಡ್ ಹರಡುವುದಿಲ್ಲವೇ? ಇವೆಲ್ಲ ಅವೈಜ್ಞಾನಿಕ ನಿರ್ಧಾರಗಳು ಎಂದು ಬಿಜೆಪಿ ವಿರುದ್ಧ ಡಿಕೆಶಿ ಕಿಡಿ ಕಾರಿದ್ದಾರೆ. ಪತ್ರಕರ್ತರ …

Read More »

62.55 ಲಕ್ಷ ನಗದು ವಶ ಚುನಾವಣಾ ಅಕ್ರಮ ತಡೆಗೆ ತೀವ್ರ ನಿಗಾ: ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಅಕ್ರಮ‌ ಹಣ ಅಥವಾ ಮದ್ಯ ಸಾಗಾಣಿಕೆ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಚೆಕ್ ಪೋಸ್ಟ್ ಗಳಲ್ಲಿ ಇದುವರೆಗೆ 62.55 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ 27 ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತಗೊಂಡಿರುವ ಎಸ್.ಎಸ್.ಟಿ. ತಂಡಗಳು ತಪಾಸಣೆ …

Read More »

ಯಡಿಯೂರಪ್ಪ ಕುಳಿತಿರುವ ಹಡಗು ಮುಳುಗುತ್ತಿದೆ, ಯತ್ನಾಳ್ ಅದಕ್ಕೆ ಸಾಕ್ಷಿ : ಸಿದ್ದರಾಮಯ್ಯ

ಬೆಳಗಾವಿ, ಏ.10- ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಕುಳಿತಿರುವ ಹಡಗೇ ಈಗ ಮುಳುಗುತ್ತಿದೆ. ಇದಕ್ಕೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರೆ ಸಾಕ್ಷಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯಅವರು, ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಹೇಳಿದ್ದಾರೆ. .ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಗೆಲುವು ಸಾಧಿಸಿ ಹೊಸ ಇತಿಹಾಸ ನಿರ್ಮಿಸುತ್ತಾರೆ: ಸಿದ್ರಾಮಯ್ಯ

ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ರಾಮಯ್ಯ ಮತಬೇಟೆಯಾಡುತ್ತಿದ್ದು,ಇಂದು ಪ್ರಚಾರಕ್ಕೆ ತೆರಳುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ನಿರೀಕ್ಷೆಗೆ ಮೀರಿ,ಬೆಂಬಲ ವ್ಯೆಕ್ತವಾಗುತ್ರಿದೆ,ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಗೆಲುವು ಸಾಧಿಸಿ ಹೊಸ ಇತಿಹಾಸ ನಿರ್ಮಿಸುತ್ತಾರೆ ಎಂದು ಸಿದ್ರಾಮಯ್ಯ ವಿಶ್ವಾಸ ವ್ಯೆಕ್ತ ಪಡಿಸಿದರು. ಸಿಎಂ ಯಡಿಯೂರಪ್ಪ ಕಾಂಗ್ರೆಸ್ ಮುಳುಗುತ್ತಿರುವ ಹಡಗು,ಎಂದು ಹೋದಲೆಲ್ಲಾ ಹೇಳ್ತಾ ಇದ್ದಾರೆ,ಯಡಿಯೂರಪ್ಪ ಕುಂತ ಹಡಗೇ ಈಗ ಮುಳುಗುತ್ತಿದೆ.ಯತ್ನಾಳ ಒಬ್ಬ ಸೀನಿಯರ್ …

Read More »

ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ಬೆಳಗಾವಿ: ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಮುಷ್ಕರವನ್ನು ರಾಜ್ಯಾದ್ಯಂತ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುವ ಸಲುವಾಗಿ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಆಗಮಿಸಿದ್ದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರು ಹಾಗೂ ರೈತ …

Read More »

ಸದ್ಯಕ್ಕೆ ನೈಟ್ ಕರ್ಫ್ಯೂ, ಉಪಚುನಾವಣೆ ಮುಗಿತಿದ್ದಂತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ

ರಾಜ್ಯದಲ್ಲಿ ಕೊರೋಣಾ ಎರಡನೆಯ ಅಲೆ ಆತಂಕವನ್ನುಂಟುಮಾಡಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಸೋಂಕು ಹೆಚ್ಚಾಗಿ ಕಂಡುಬರುತ್ತಿರುವ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಫ್ಯೂ ನಿಂದ ಪ್ರಯೋಜನವಿಲ್ಲ, ರಾತ್ರಿ ಜನ ಸಂಚಾರ ವಿರಳವಾಗಿರುತ್ತದೆ. ಈ ಸಂದರ್ಭದಲ್ಲಿ ಕೊರೋನಾ ಹರಡುವುದಿಲ್ಲ ಎಂದೆಲ್ಲ ಟೀಕೆಗಳು ಕೇಳಿಬರುತ್ತಿವೆ. ಆದರೆ, ಇದಿನ್ನು ಸ್ಯಾಂಪಲ್ ಮಾತ್ರ. ಸದ್ಯಕ್ಕೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಹಂತಹಂತವಾಗಿ ಉಳಿದ ನಗರಗಳಿಗೂ ವಿಸ್ತರಿಸಲಾಗುವುದು. ಉಪ ಚುನಾವಣೆ ಮುಗಿಯುತ್ತಿದ್ದಂತೆ …

Read More »

ಕಾಂಗ್ರೆಸ್ ಪಕ್ಷದ ಇತಿಹಾಸವೇ, ಈ ದೇಶದ ಇತಿಹಾಸ ” ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಪ್ರಚಾರ ಸಭೆ

ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಹಿನ್ನಲೆಯಲ್ಲಿ ಇವತ್ತು ಬಡಸ್ ಕೆ ಎಚ್ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಡಿ ಕೆ ಶಿವಕುಮಾರವರ ನೇತ್ರತ್ವದಲ್ಲಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಪ್ರಚಾರ ಸಭೆಯನ್ನು ಕೈಗೊಳ್ಳಲಾಯಿತು. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಅವಲೋಕಿಸುವ ಮುಖೇನ ಪ್ರಚಾರಕ್ಕೆ ಚಾಲನೆಯನ್ನು ನೀಡಲಾಯಿತು. ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಂತಹ ಕೊಡುಗೆಗಳನ್ನು ಸ್ಮರಿಸುತ್ತಾ ಅನೇಕ ಮಹನೀಯರು ಹಗಲು ರಾತ್ರಿಯನ್ನದೇ ದೇಶಕ್ಕಾಗಿ ದುಡಿದು ದೇಶವನ್ನು ಸುಭದ್ರವಾಗಿ …

Read More »

ಶಾಸಕ ಯತ್ನಾಳ್‌ ಶೀಘ್ರದಲ್ಲಿ ಬಿಜೆಪಿಯಿಂದ ‘ಉಚ್ಛಾಟನೆ’ : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಬೆಳಗಾವಿ : ಬಿಜೆಪಿಯಲ್ಲಿ ಇದ್ದುಕೊಂಡು ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ಯತ್ನಾಳ್‌ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ದ ಕಿಡಿಕಾರುತ್ತಿರುವುದು ಈಗ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿದ್ದು, ಬಹಿರಂಗವಾಗಿಯೇ ಯತ್ನಾಳು ಅವರು ಸಿಎಂ ಸೇರಿದಂತೆ ನಾನಾ ಮಂದಿಯ ವಿರುದ್ದ ಕಿಡಿಕಾರುತ್ತಿದ್ದಾರೆ. ಈ ನಡುವೆ ಶಾಸಕ ಯತ್ನಾಳ್‌ ಶೀಘ್ರದಲ್ಲಿ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗುವುದು ಅಂತ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ …

Read More »

ಸತೀಶ್ ಜಾರಕಿಹೊಳಿಯವರಿಗೆ ಡಿಎಸ್ಎಸ್ ಬೆಂಬಲ..!

ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಶೋಷಿತ ಸಮಾಜಗಳು ಮತ್ತು ಕಡುಬಡವರ ವಿರೋಧಿಯಾಗಿದ್ದು, ಅದನ್ನು ಕಿತ್ತೊಗೆಯಲು ನಾವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಮುತ್ಸದ್ದಿ ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಲಿದ್ದೇವೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕರಾದ ಲಕ್ಷ್ಮಿನಾರಾಯಣ ನಾಗವಾರ ಹೇಳಿದರು. ಶುಕ್ರವಾರ ದಂದು ಬೆಳಗಾವಿಯ ಕಮ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ರೈತರು ಕಾರ್ಮಿಕರು …

Read More »

ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ 7 ಲಕ್ಷಕ್ಕೂ ಹೆಚ್ಚಿನ ಮತಗಳು ಸಿಕ್ಕಿ ಗೆಲ್ಲುತ್ತೇನೆ.: ಸತೀಶ್ ಜಾರಕಿಹೊಳಿ

ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು ಅಲ್ಲಿ ಚುನಾವಣೆ ನಡೆಯುತ್ತಿದೆ, ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ವಿರುದ್ಧ ಗೆದ್ದು 7 ಲಕ್ಷಕ್ಕೂ ಅಧಿಕ ಮತಗಳು ಸಿಗುವ ವಿಶ್ವಾಸವಿದೆ ಎಂದು …

Read More »