ಬೆಳಗಾವಿ: ಕೋವಿಡ್-೧೯ ಮತ್ತೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೆರೆಯ ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಾದ್ಯಂತ ಕೋವಿಡ್ ಹರಡುವಿಕೆ ತಡೆಗಟ್ಟಲು ಅಂತರ್ ರಾಜ್ಯ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ನೆರೆಯ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣಾ ವರದಿಯನ್ನು ನೀಡಬೇಕು ಎಂದು …
Read More »ಹೊಳಿ ದಿನವೇ ನಾಮಪತ್ರ, ಜನಸಾಮಾನ್ಯರ ಸಮಸ್ಯೆಗಳೇ ಚುನಾವಣೆ ಅಜೆಂಡಾ: ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ
ನನ್ನ ಮೇಲೆ ನಂಬಿಕೆ ಇರಿಸಿ ಎಐಸಿಸಿ ವರಿಷ್ಠರು ಲೋಕಸಭೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದ್ದಾರೆ. ಸೋಮವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ ಸೇರಿದಂತೆ ನಮ್ಮ ರಾಜ್ಯದ ನಾಯಕರು ಈ ವೇಳೆ ಹಾಜರಿರಲಿದ್ದಾರೆ. ಸಿಡಿ ಕೇಸಗೂ ನಮಗೂ ಸಂಬಂಧವಿಲ್ಲ, ನಮ್ಮ ಗೆಲುವಿಗೆ ಯಾವ ಅಡೆತಡೆಗಳೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾಜಿ ಸಚಿವ …
Read More »ರಾಜ್ಯ ಕಾಂಗ್ರೆಸ್ ನಾಯಕರು ಚುನಾವಣೆಗೆ ಸ್ಪರ್ಧಿಸಲು ನನ್ನ ಹೆಸರನ್ನೇ ಹೈಕಮಾಂಡ್ ಗೆ ಕಳಿಸಲಿಲ್ಲ: ಪ್ರಕಾಶ ಹುಕ್ಕೇರಿ ಅಸಮಾಧಾನ
ಬೆಳಗಾವಿ : “ಬಿಜೆಪಿಯಿಂದ ಸುರೇಶ ಅಂಗಡಿ ಕುಟುಂಬದ ಯಾರಿಗೇ ಟಿಕೆಟ್ ನೀಡಲಿ, ನಾನು ಅವರ ಪರವಾಗಿ ಕ್ಷೇತ್ರದಲ್ಲೆಲ್ಲ ಸುತ್ತಾಡಿ ಪ್ರಚಾರ ಮಾಡುತ್ತೇನೆ. ನನ್ನ ಮಗನ ಚುನಾವಣೆಗೆ ಕೆಲಸ ಮಾಡಿದ ರೀತಿಯಲ್ಲೇ ಮಾಡುತ್ತೇನೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಏನ್ ಮಾಡುತ್ತೋ ಮಾಡ್ಕೊಳ್ಳಿ ನೋಡೋಣ” ಎಂದು ಸವಾಲೆಸೆದಿದ್ದ ಮಾಜಿ ಸಂಸದ, ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಇದೀಗ ಮಂಗಲಾ ಅಂಗಡಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈಗ ತರಾತುರಿಯಲ್ಲಿ …
Read More »ಮಾಧ್ಯಮ ಕಣ್ಗಾವಲು ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಭೇಟಿ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಸುದ್ದಿ ಮತ್ತು ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರಿಶ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ “ವಾರ್ತಾಭವನ” ದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಕಣ್ಗಾವಲು ಕೇಂದ್ರ(ಮೀಡಿಯಾ ಮಾನಿಟರಿಂಗ್ ಸೆಲ್)ಕ್ಕೆ ಗುರುವಾರ(ಮಾ.25) ಭೇಟಿ ನೀಡಿ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಪಕ್ಷ …
Read More »ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ನಾಯಕರ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಉಪಚುನಾವಣಾ ಅಖಾಡ ರಂಗೇರುತ್ತಿದ್ದು, ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಂದಾನಗರಿ ಬೆಳಗಾವಿಗೆ ಆಗಮಿಸಲಿದ್ದಾರೆ. ಮರುದಿನ, ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಮಾರ್ಚ್ 28ರಿಂದ ಉತ್ತರ ಕರ್ನಾಟ ಭಾಗದಲ್ಲಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ರಾಯಚೂರು ಹಾಗೂ …
Read More »ಕಲ್ಲು ಕ್ವಾರಿಗಳ ಮೇಲೆ ಗಣಿ ಇಲಾಖೆ, ಪರಿಸರ ಇಲಾಖೆ ಸರ್ಜಿಕಲ್ ಸ್ಟ್ರೈಕ್
ಗೋಕಾಕ: ಬೆಳಗಾವಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಚಿಕ್ಕೋಡಿ ಪರಿಸರ ಇಲಾಖೆಯ ಅಧಿಕಾರಿಗಳು ಉಪ ನಿರ್ದೇಶಕಿ ಶ್ರೀ ಬಿಂದನ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಗೋಕಾಕ್ ನ ಬಿಲಕುಂದಿ ಗ್ರಾಮದಲ್ಲಿರುವ ಕಲ್ಲು ಕ್ರಷರ್ ಗಳಿಗೆ ಭೇಟಿಕೊಟ್ಟು ನಿಯಮಗಳನ್ನು ಉಲ್ಲಂಘನೆ ಮಾಡಿರುವ 5 ಕಲ್ಲು ಕ್ವಾರಿ ಗಳನ್ನು ಸೀಜ್ ಮಾಡಲಾಯಿತು. ಶಿವಮೊಗ್ಗದಲ್ಲಿ ಆದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪರಿಸರ ಇಲಾಖೆ …
Read More »ಸತೀಶ ಜಾರಕಿಹೊಳಿ ಸ್ಪರ್ಧೆಯಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಎಂಬ ಚರ್ಚೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಪ್ರತ್ಯಾಸ್ತ್ರವಾಗಿ ಯಾರನ್ನು ಕಣಕ್ಕೆ ಇಳಿಸಿದೆ ಎಂಬ ಕುತೂಹಲ ಹುಟ್ಟಿಸಿದೆ
ಬೆಳಗಾವಿ (ಮಾ. 25): ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 17ರಂದು ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಈ ಬೆಳವಣಿಗೆ ಹಿಂದ ಹಲವು ರಾಜಕೀಯ ಲೆಕ್ಕಾಚಾರಗಳು ಜಿಲ್ಲೆಯಲ್ಲಿ ಆರಂಭವಾಗಿದೆ. ಸತೀಶ ಜಾರಕಿಹೊಳಿ ಸ್ಪರ್ಧೆಯಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಎಂಬ ಚರ್ಚೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಪ್ರತ್ಯಾಸ್ತ್ರವಾಗಿ ಯಾರನ್ನು ಕಣಕ್ಕೆ ಇಳಿಸಿದೆ …
Read More »ಉಪ ಚುನಾವಣಾ ಕಣವು ಜಾರಕಿಹೊಳಿ ಸಹೋದರರ ಸವಾಲು-ಜವಾಬುಗಳಿಗೆ ವೇದಿಕೆಯಾಗುವ ಸಾಧ್ಯತೆ
ಬೆಳಗಾವಿ: ಬಿಜೆಪಿಯ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪ ಚುನಾವಣಾ ಕಣವು ಜಾರಕಿಹೊಳಿ ಸಹೋದರರ ಸವಾಲು-ಜವಾಬುಗಳಿಗೆ ವೇದಿಕೆಯಾಗುವ ಸಾಧ್ಯತೆಗಳಿವೆ. ನಾಲ್ವರಲ್ಲಿ ತಲಾ ಇಬ್ಬರು ಸಹೋದರರು ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ಇದ್ದಾರೆ. ಅವರವರಿಗೆ ಬೇಕಾದವರ ಗೆಲುವಿಗೆ ಪೈಪೋಟಿ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ‘ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ ಜಾರಕಿಹೊಳಿ ಅವರೇ ಕಾಂಗ್ರೆಸ್ ಅಭ್ಯರ್ಥಿ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು …
Read More »CD ಯುವತಿಯಿಂದ ಮತ್ತೊಂದು ವಿಡಿಯೋ.. ಸಿದ್ದರಾಮಯ್ಯ, ಡಿಕೆಶಿ ಹೆಸರು ಉಲ್ಲೇಖ
ರಮೇಶ್ ಜಾರಕಿಹೊಳಿ ವಿಡಿಯೋದಲ್ಲಿರೋ ಯುವತಿ ಇವತ್ತು ಮತ್ತೊಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾಳೆ. ಅದರಲ್ಲಿ ತನ್ನ ತಂದೆ, ತಾಯಿಗೆ ರಕ್ಷಣೆ ಕೊಡಿ ಅಂತ ವಿಪಕ್ಷ ನಾಯಕರ ಬಳಿ ಕೇಳಿಕೊಂಡಿದ್ದಾಳೆ. ಜೊತೆಗೆ ಎಸ್ಐಟಿ ತನಿಖೆ ಬಗ್ಗೆನೇ ಅನುಮಾನ ವ್ಯಕ್ತಪಡಿಸಿದ್ದಾಳೆ. ಆಕೆ ವಿಡಿಯೋದಲ್ಲಿ ಹೇಳಿರೋದೇನು ಅನ್ನೋದು ಇಲ್ಲಿದೆ ನೋಡಿ.. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅದರ ಬಗ್ಗೆ ಗ್ಯಾರಂಟಿ ಸಿಕ್ಕ ಬಳಿಕ ಎಸ್ಐಟಿ ಮುಂದೆ ವಿಚಾರಣೆಗೆ ಬರುತ್ತೇನೆ. ಏನು ಹೇಳಿಕೆ …
Read More »ಪ್ರಮಾಣಪತ್ರ ಸಿಗದೆ ಭಾವೀ ವೈದ್ಯರ ಪರದಾಟ
ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕೋ, ಬೇಡವೋ ಎಂಬ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಯಾವುದೇ ಸೂಚನೆ ನೀಡುತ್ತಿಲ್ಲ. ಕೋರ್ಸ್ ಮುಗಿಸಿ ಒಂದೂವರೆ ತಿಂಗಳು ಕಳೆದರೂ ಪ್ರಮಾಣಪತ್ರಗಳನ್ನು ನೀಡುತ್ತಿಲ್ಲ ಎಂದು ಎಂಬಿಬಿಎಸ್ ವಿದ್ಯಾರ್ಥಿಗಳು ದೂರಿದ್ದಾರೆ. ‘ವೈದ್ಯಕೀಯ ಪದವಿ ವ್ಯಾಸಂಗ ಮುಗಿಸಿದವರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ಬಗ್ಗೆ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದೊಂದಿಗೆ ಷರತ್ತುಬದ್ಧ ಒಪ್ಪಂದ ಮಾಡಿಕೊಳ್ಳಲಾಗುತ್ತಿತ್ತು. 2015ರ ಕಡ್ಡಾಯ ಸೇವಾ ತರಬೇತಿ ತಿದ್ದುಪಡಿ ಕಾಯ್ದೆಯನ್ವಯ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ …
Read More »