Breaking News

ಬೆಳಗಾವಿ

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

ಚಿಂಚಲಿ :  ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್  ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “

ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “ ಹಿರೇ ಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಜನಪ್ರತಿನಿಧಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಬರಲಿರುವ ಲೋಕಸಭಾ ಉಪ ಚುನಾವಣೆಯ ಸಲುವಾಗಿ ಸಭೆಯನ್ನು ನಡೆಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು. ಕಾಂಗ್ರೆಸ್ ಪಕ್ಷವು ಬಡವರ, ಶ್ರಮಿಕರ ಹಾಗೂ ನಿರ್ಗತಿಕರ ಪಕ್ಷವಾಗಿ ಹೊರಹೊಮ್ಮಿದ್ದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕಾರ್ಯರೂಪಕ್ಕೆ ತಂದಿದೆ, ನೂರಾರು ವರ್ಷಗಳ ಇತಿಹಾಸವಿರುವ …

Read More »

ನನ್ನ ರಾಜಕೀಯ ಏಳ್ಗೆಗೆ ಗೋಕಾಕ ಕ್ಷೇತ್ರದ ಜನರ ಸಹಕಾರವೇ ಪ್ರಮುಖ ಕಾರಣ: ಸತೀಶ ಜಾರಕಿಹೊಳಿ

ಗೋಕಾಕ: “ನನ್ನ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕ ಮತಕ್ಷೇತ್ರದಿಂದ. ಗೋಕಾಕ ಜನರೇ ನನ್ನ ರಾಜಕೀಯ ಏಳ್ಗೆಗೆ ಪ್ರಮುಖ ಕಾರಣ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ ಅವರು ಮಾತನಾಡಿದರು. “ಕಳೆದ 30 ವರ್ಷಗಳಿಂದ ನಾನು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕನಿಂದ. ಮಮದಾಪುರ ಗ್ರಾಮದ ಮುಖಂಡರು ಹಾಗೂ ಈ ಭಾಗದ …

Read More »

ಡಿಕೆಶಿವಕುಮಾರ್ , ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ : ಸತೀಶ್ ಜಾರಕಿಹೊಳಿ

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕದಲ್ಲಿ ಪ್ರಚಾರದ ವೇಳೆ ಮಾತನಾಡಿ, ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ. ರಾಜಕೀಯದಲ್ಲಿ ಪರ ವಿರೋಧ ಇದ್ದೇ ಇರುತ್ತದೆ ಎಂದರು. ಗೋಕಾಕ್, ಅರಭಾವಿ ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡುವ ಕುರಿತು ಚರ್ಚೆ ಮಾಡುತ್ತೇನೆ. ಇನ್ನು ಸಿಡಿ …

Read More »

ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ನಗರದ ಶೂನ್ಯ ಸಂಪಾದನಾ ಮಠ ಹಾಗೂ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಭೇಟಿ ನೀಡಿದರು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿ, ಮುರುಘರಾಜೇಂದ್ರ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳು ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಇದೇ ಸಂದರ್ಭದಲ್ಲಿ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ತೆರಳಿದ ಅವರು, ತಂದೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ …

Read More »

ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಪತ್ರ ಬರೆದಿದ್ದು ಸರಿಯಲ್ಲ: ಜಗದೀಶ ಶೆಟ್ಟರ್

ಬೆಳಗಾವಿ: ‘ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಹಿರಂಗವಾಗಿ ಪತ್ರ ಬರೆಯುವುದು, ಅದನ್ನು ರಾಜ್ಯಪಾಲರಿಗಾಗಲಿ ಅಥವಾ ಪಕ್ಷದ ಮೇಲಿನವರಿಗಾಗಲಿ ಕಳುಹಿಸುವಂಥದು ಆಗಬಾರದಿತ್ತು. ಏನಿದ್ದರೂ ಮುಖ್ಯಮಂತ್ರಿ ಜೊತೆಯೇ ಚರ್ಚಿಸಬೇಕಿತ್ತು. ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಬೇಕಿತ್ತು. ಇದೆಲ್ಲವೂ ನಾಲ್ಕು ಗೋಡೆಗಳ ಒಳಗೆ ಆಗಬೇಕಾಗಿತ್ತು’ ಎಂದು ಪ್ರತಿಕ್ರಿಯಿಸಿದರು. ‘ನಾವೆಲ್ಲವೂ ಬಿ.ಎಸ್. ಯಡಿಯೂರಪ್ಪ ನಾಯಕತ್ವದಲ್ಲೇ …

Read More »

ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು

ಗೋಕಾಕ ಬ್ರೇಕಿಂಗ್ ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದ ಘಟನೆ ಸಿದ್ದಾರ್ಥ ಹಣಮಂತ ಮಲ್ಲನ್ನವರ (2) ಸಾವಿಗಿಡಾದ ಬಾಲಕ ಚಾಲಕ‌ನನ್ನು ವಶಕ್ಕೆ ಪಡೆದ ಪೋಲಿಸರು. ಮುಗಿಲು ಮುಟ್ಟಿದ ಕುಟುಂಬದ ಅಕ್ರಂದನ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ

Read More »

ಸತೀಶ ಜಾರಕಿಹೊಳಿ 3 ದಶಕಗಳ ಸಾಧನೆ ನೋಡಿ ಮತ ಹಾಕಿ : ಶಾಸಕಿ ಲಕ್ಷ್ಮಿ ಹೆಬ್ಟಾಳಕರ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಟಾಳಕರ ಮತ್ತು ಅಭ್ಯರ್ಥಿ ಸತೀಶ ಜಾರಕಿಹೊಳಿ ಪ್ರಚಾರ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಟಾಳಕರ, ನಮ್ಮ ಅಭ್ಯರ್ಥಿ ಸತೀಶ ಜಾರಕಿಹೊಳಿ ಕಾಂಗ್ರೆಸ್‌ ಪಕ್ಷದ ದೊಡ್ಡ ಶಕ್ತಿ. ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದ …

Read More »

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ವಿಶಾಲ ತಾಯಿ, ಸರೋಜಾ, ಮೇಸ್ತ್ರೀ ,23 ವರ್ಷದ, ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

Read More »

ಜಾರಕಿಹೊಳಿ ಪರ ಅಬ್ಬರದ ಪ್ರಚಾರಕ್ಕಿಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ, ಏಪ್ರಿಲ್ 1: ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಚಾರ ನಡೆಸಿದರು. ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ವಾದ್ಯ-ಮೇಳಗಳನ್ನು ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಸತೀಶ್ ಅವರ ಪರ ಘೋಷಣೆಗಳನ್ನು ಕೂಗಿದರು. ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, …

Read More »