Breaking News

ಬೆಳಗಾವಿ

ಕೌಜಲಗಿಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಮಾಳಿ ಸಮಾಜದವರ ಬೇಡಿಕೆಯಂತೆ ಇಷ್ಟರಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ ಮಾಡಿಕೊಳ್ಳುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕೌಜಲಗಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು ಮಹಾತ್ಮಾ ಜ್ಯೋತಿಬಾ ಫುಲೆ ಮಾಳಿ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆ ಅವರ 190ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »

‘ಗೋಕಾಕ್ ಕ್ಷೇತ್ರ ಟಾರ್ಗೆಟ್ ಮಾಡ್ತೀನಿ’ ಎಂದ ಹೆಬ್ಬಾಳ್ಕರ್​​ಗೆ ಸತೀಶ್ ಜಾರಕಿಹೊಳಿ ಮಾಸ್ಟರ್​​ ಸ್ಟ್ರೋಕ್

ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್‌, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …

Read More »

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲೂಕಿನ ಅರಭಾವಿ (ಹಟ್ಟಿಗುಡ್ಡ) ಪಟ್ಟಣದ ಕುತುಬಸಾಬ ಬಾಗವಾನ ಅವರ ವಾರಸುದಾರರಿಗೆ ಇಂಧನ ಇಲಾಖೆಯಿಂದ 5ಲಕ್ಷ ರೂಗಳ ಪರಿಹಾರಧನದ ಚೆಕ್‍ನ್ನು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ ಧನವನ್ನು ಕುಟುಂಬದವರು ಸದ್ಭಳಕೆ ಮಾಡಿಕೊಳ್ಳಬೇಕು. ಈ ಹಣವನ್ನು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬ್ಯಾಂಕ್‍ನಲ್ಲಿ ಠೇವಣಿಯಾಗಿಟ್ಟು …

Read More »

ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿ ಬಂಧನ

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಲಿಂಗ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿಯಗೈದ್ದು, ದಾರಿದೀಪ ಹೆಸರಿನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಆದರೆ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಮತ್ತೋರ್ವ ಆರೋಪಿ ರಾಚಪ್ಪನಿಂದ ಪ್ರಶ್ನೆ …

Read More »

ಜಗತ್ತಿನ ಎಲ್ಲೆಡೆ ಭಾರತದ ಅಲೆ : ಅತ್ಯುನ್ನತ ಹುದ್ದೆಗಳಲ್ಲಿ ಭಾರತೀಯರ ಮಿಂಚು

ಹೊಸದಿಲ್ಲಿ: ಜಗದೆಲ್ಲೆಡೆ ಚದುರಿ, ನೆಲೆ ಕಂಡಿರುವ ಭಾರತೀಯರು ಆಯಾ ರಾಷ್ಟ್ರಗಳಲ್ಲಿ ನಾಯಕತ್ವದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅಮೆರಿಕದ “ಇಂಡಿಯಾನ್ಪೊರಾ’ ಪ್ರಕಟಿಸಿರುವ “ಗವರ್ನ್ಮೆಂಟ್‌ ಲೀಡರ್ಸ್‌- 2021’ರ ಪಟ್ಟಿಯ ಪ್ರಕಾರ ಬರೋಬ್ಬರಿ 15 ರಾಷ್ಟ್ರಗಳಲ್ಲಿ ಭಾರತೀಯರೇ ಚಾಲಕ ಸ್ಥಾನಗಳಲ್ಲಿ ಇದ್ದಾರೆ. 15 ದೇಶಗಳಲ್ಲಿ ನಿರ್ಣಾಯಕರು 15 ರಾಷ್ಟ್ರಗಳಲ್ಲಿ ಸಾರ್ವಜನಿಕ ಸೇವೆ, ಅತ್ಯುನ್ನತ ಹುದ್ದೆಗಳಲ್ಲಿ ಭಾರತೀಯ ಮೂಲದವರೇ ಇದ್ದಾರೆ. ಈ ಪೈಕಿ 60 ನಾಯಕರು ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನ ಹೊಂದಿರುವುದು ವಿಶೇಷ. ಎಲ್ಲೆಲ್ಲೂ ಭಾರತೀಯರು …

Read More »

ಬೆಳಗಾವಿ ನಗರ ಸಿಸಿಐಬಿ ತಂಡದಿಂದ ಸುಮಾರು ೧೩ ಲಕ್ಷ ಮೌಲ್ಯದ ಮಿಲಿಟರಿ ಮತ್ತು ಅಂತರ್‌ರಾಜ್ಯ ಮದ್ಯ ಜಪ್ತಿ

ಬೆಳಗಾವಿ – ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರದ ರಕ್ಷಕ ಕಾಲೋನಿಯಲ್ಲಿ ಗೋವಾ ರಾಜ್ಯದಲ್ಲಿ ಮಾರಾಟ ಮಾಡುವ & ಮಿಲಿಟರಿ ಕ್ಯಾಂಟೀನ್ ಮುಖಾಂತರ ಸೈನಿಕರಿಗೆ ಮಾರಾಟ ಮಾಡುವ ವಿವಿಧ ಕಂಪನಿಯ ಸರಾಯಿ ಬಾಟಲ & ಚೀಲಗಳನ್ನು ಸ್ಥಳಿಯರಿಗೆ ಎರಡುಪಟ್ಟು ದರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಡಲಾಗಿತ್ತು. ಆರೋಪಿತರಾದ ರಾಜೇಶ ಕೇಶವ ನಾಯಿಕ, (೩೭) ಸಾ: ಕುಮಾರಸ್ವಾಮಿ ಲೇಔಟ್, ಬೆಳಗಾವಿ, ಶಂಕರ ಬಸವಂತ ದೇಸನೂರ, (೩೮) ಸಾ|| ಸಿಸಿಬಿ ನಂ. …

Read More »

ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ …

Read More »

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಇಲ್ಲಿಗೆ ಸಮೀಪದ ರಾಜಾಪೂರ ಗ್ರಾಮದಲ್ಲಿ 8.17 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …

Read More »

ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ

ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತ್ ಕಾರ್ಯಾಲಯ ದಲ್ಲಿ ಮೊದಲ ಸಭೆ ಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ ಹಾಗೂ ಉಪಾಧ್ಯಕ್ಷ ಶ್ರೀ ಭೀಮಪ್ಪ ಯಲ್ಲಪ್ಪ ಬಿರನಾಳಿ ಹಾಗೂ ಸರ್ವ ಸದಸ್ಯರು ಹಾಗೂ ಪಿಡಿಒ ಸಾಯೀಶ್ವರಿ ಮೆಣಸಿನಕಾಯಿ ಮತ್ತು ಲೇಕ್ಕಾಧಿಕಾರಿ …

Read More »

ಅನುದಾನಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕದ 1500 ಶಾಲೆಗಳು ಬಂದ್..!

ಬೆಳಗಾವಿ, ಫೆ.15- ಕಲ್ಯಾಣ ಕರ್ನಾಟಕ ಭಾಗದ ಅನುದಾನ ರಹಿತ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ 1500 ಶಾಲೆಗಳು ಇಂದು ಬಂದ್ ಮಾಡಿ ಪ್ರತಿಭಟನೆ ನಡೆಸಿವೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಸೇರಿದಂತೆ ಆರು ಜಿಲ್ಲೆಗಳ 1500 ಶಾಲೆಗಳು ಅನುದಾನಕ್ಕೆ ಆಗ್ರಹಿಸಿ ಇಂದು ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲೆಗಳ ಒಕ್ಕೂಟ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದೆ. 2013-14ರಲ್ಲಿ …

Read More »