Breaking News

ಬೆಳಗಾವಿ

ಅನುದಾನಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕದ 1500 ಶಾಲೆಗಳು ಬಂದ್..!

ಬೆಳಗಾವಿ, ಫೆ.15- ಕಲ್ಯಾಣ ಕರ್ನಾಟಕ ಭಾಗದ ಅನುದಾನ ರಹಿತ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ 1500 ಶಾಲೆಗಳು ಇಂದು ಬಂದ್ ಮಾಡಿ ಪ್ರತಿಭಟನೆ ನಡೆಸಿವೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಸೇರಿದಂತೆ ಆರು ಜಿಲ್ಲೆಗಳ 1500 ಶಾಲೆಗಳು ಅನುದಾನಕ್ಕೆ ಆಗ್ರಹಿಸಿ ಇಂದು ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲೆಗಳ ಒಕ್ಕೂಟ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದೆ. 2013-14ರಲ್ಲಿ …

Read More »

ವೀರರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ಪುತಳಿ ಪ್ರತಿಷ್ಠಾಪಿಸಿವವಂತೆವೀರ ಕನ್ನಡಿಗರ ಘರ್ಜನೆ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಪುತ್ತಳಿ ಜೊತೆಗೆ ಬಾಬಾಸಾಹೇಬ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಬಸವೇಶ್ವರ ಪುತಳಿನ್ನು ನಿರ್ಮಿಸಲು ಸರಕಾರ ಈಗಾಗಲೇ ಸಮ್ಮತಿ ನೀಡಿದೆ.. ಅದರ ಜೊತೆ ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಸಹ ಮಣಗುತ್ತಿ ಗ್ರಾಮದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವೀರ ಕನ್ನಡಿಗರ ಘರ್ಜನೆ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Read More »

ಗೋಕಾಕ: ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಗೋಕಾಕ: ಸಮೀಪದ ಮರಡಿಮಠ ಗ್ರಾಮದ ಬಳಿಯ ಕೊಣ್ಣೂರು ಪುರಸಭೆ ಕಟ್ಟಡದ ಪಕ್ಕ ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ಯುವಕನ ಶವ ಪತ್ತೆಯಾಗಿದೆ.   ಕೊಳೆತ ಸ್ಥಿತಿಯಲ್ಲಿರುವುದರಿಂದ ಯುವಕ ಯಾರೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ಇದರಿಂದ ತಳಮಟ್ಟದಿಂದ ಪಕ್ಷ ಸಂಘಟಿಸಲು ಗ್ರಾಮ ಪಂಚಾಯತಿ ಚುನಾವಣೆ ಉತ್ತಮ ಅಡಿಪಾಯ ಎಂದು …

Read More »

ಗೋಕಾಕ : ಇಬ್ಬರು ಮಕ್ಕಳೊಂದಿಗೆ ಘಟಪ್ರಭಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ !

ಗೋಕಾಕ : ಮನೆಯಲ್ಲಿ ಜಗಳವಾಡಿ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದ ಮಹಿಳೆ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಗೋಕಾಕ ತಾಲ್ಲೂಕಿನ ಅರಭಾಂವಿಯ ಸಾವಿತ್ರಿ ರಾಜು ಬನಾಜ(30), ಪೂಜಾ (4) ಲಕ್ಷ್ಮಿ (2), ಮೃತರು. ಮನೆಯಲ್ಲಿ ಜಗಳವಾಡಿ ತಮ್ಮಇಬ್ಬರು ಮಕ್ಕಳನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ, ಕಾಣೆಯಾಗಿದ್ದರು. ಈ ಬಗ್ಗೆ ಗಂಡನ ಮನೆಯವರು ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದರು. ಆದ್ರೆ ಭಾನುವಾರ ಬೆಳಿಗ್ಗೆ ಗೋಕಾಕ …

Read More »

ಗೋಕಾಕ: ಇಲ್ಲಿಯ ರೋಟರಿ ರಕ್ತ ಭಂಡಾರದಲ್ಲಿ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರಲ್ಲಿ ಪಾಲ್ಗೊಂಡ ಹಳೆಯ ವಿದ್ಯಾರ್ಥಿಗಳು.

ಗೋಕಾಕ : ಎಲ್ಲ ದಾನಗಳಲ್ಲಿ ಶ್ರೇಷ್ಠವಾದ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವಂತೆ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಅರ್ಥಪೂರ್ಣವಾದ ಸಾಮಾಜಿಕ ಕಳಿಕಳಿಯ ಮಾರ್ಗದಲ್ಲಿ ಜೀವನ ಸಾಗಿಸೋಣವೆಂದು ಇಲ್ಲಿಯ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಅಶೋಕ ಕೌಜಲಗಿ ಹೇಳಿದರು. ರವಿವಾರದಂದು ಇಲ್ಲಿಯ ರೋಟರಿ ರಕ್ತ ಭಂಡಾರದಲ್ಲಿ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ರವಿವಾರ ದಿ. 21 ರಂದು ಇಲ್ಲಿಯ ಶುಭ …

Read More »

ಆರೋಗ್ಯ ಇಲಾಖೆಯಿಂದ ನೂತನವಾಗಿ ಪ್ರಾರಂಭಿಸಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಜನತೆ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿ, ಎಲ್ಲ ರೀತಿಯ ಸೌಲಭ್ಯಗಳೊಂದಿಗೆ ವಿಶೇಷ ಆಧುನಿಕ ತಂತ್ರಜ್ಞಾನ ಸಹಕಾರದೊಂದಿಗೆ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.   ರವಿವಾರದಂದು ನಗರದ ಗುರುವಾರ ಪೇಠೆಯಲ್ಲಿ ಆರೋಗ್ಯ ಇಲಾಖೆಯಿಂದ ನೂತನವಾಗಿ ಪ್ರಾರಂಭಿಸಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಿರಿರೆಂದು ಕರೆ ನೀಡಿದರು. …

Read More »

ಬೆಳಗಾವಿ ನಾಗರಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ: ಲಕ್ಷ್ಮಣ ನಿಂಬರಗಿ

ಬೆಳಗಾವಿ: ಶೀಘ್ರದಲ್ಲಿಯೇ ಬೆಳಗಾವಿ ನಾಗರಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಈ ತರಬೇತಿಗೆ ಸೇರಬಯಸುವವರು ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ ಬೆಳಗಾವಿ ಪೊಲೀಸ್ ಅಧೀಕ್ಷಕರ (ಸಶಸ್ತ್ರ) ಕಚೇರಿಗೆ ಸಲ್ಲಿಸಬೇಕು. ಅರ್ಜಿ ವಿತರಣಾ ಸ್ಥಳ: ಪೊಲೀಸ್ ಉಪಾಧೀಕ್ಷಕರವರ ಕಛೇರಿ ಅಥಣಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ, ರಾಮದುರ್ಗ. ಅರ್ಜಿ ವಿತರಣೆ …

Read More »

ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಡಿವೈ ಎಸ್ ಪಿ ಅವರಿಂದ ಜಾಗೃತಿ .

ಗೋಕಾಕ: ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಹಾಗೂ ರಸ್ತೆ ಸುರಕ್ಷತೆಗಾಗಿ   ತಗೆದುಕೊಳ್ಳಲು ಪೋಲಿಸ್ ಇಲಾಖೆಯ ವತಿಯಿಂದ ನಗರದಲ್ಲಿ ಸಂಚರಿಸುವ ಆಟೊ ರಿಕ್ಷಾಗಳು, ಬಸ್ಸುಗಳು ಮತ್ತು ಇನ್ನಿತರ ವಾಹನಗಳಿಗೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಜಾಗೃತಿ ಮೂಡಿಸಿದರು.   ಈ ಸಂದರ್ಭದಲ್ಲಿ ಡಿವೈಎಸ್ ಪಿ ಜಾವೇದ ಇನಾಮದಾರ, ಹುಕ್ಕೇರಿ ಸಿಪಿಐ ರಮೇಶ ಚಾಯಾಗೋಳ, ಪಿಎಸ್ಐಗಳಾದ ಗಣಪತಿ ಕೊಂಗನೊಳಿ, ಎಸ್ ಎಚ್ ಕರನಿಂಗ, ರಮೇಶ್ ಪಾಟೀಲ, ಆರ್ …

Read More »

ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ 500 ಟ್ವಿಟರ್ ಖಾತೆಗಳು ಅಮಾನತು

ಬೆಂಗಳೂರು, ಫೆ.10- ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಪ್ರಚೋದನಕಾರಿ ಪೋಸ್ಟ್ ಗಳನ್ನು ಹರಡುತ್ತಿದ್ದ 500 ಖಾತೆಗಳನ್ನು ತಾತ್ಕಾಲಿಕವಾಗಿ ಅಮಾನತು ಪಡಿಸಿರುವುದಾಗಿ ಟ್ವಿಟರ್ ಹೇಳಿದೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರ 500 ಖಾತೆಗಳನ್ನು ಗುರುತಿಸಿದ್ದು ಅವುಗಳನ್ನು ರದ್ದು ಪಡಿಸುವಂತೆ ಟ್ವಿಟರ್ ಸಂಸ್ಥೆಗೆ ಜನವರಿ 31 ಮತ್ತು ಫೆಬ್ರವರಿ 4ರಂದು ಪತ್ರ ಬರೆದಿತ್ತು. ಈ ಖಾತೆಗಳ ಮೂಲಕ ಹಿಂಸೆಗೆ ಪ್ರಚೋದನಕಾರಿಯಾದ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ …

Read More »