Breaking News

ಬೆಳಗಾವಿ

ಬೆಳವಡಿ ಮಲ್ಲಮ್ಮ ಉತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಣೆ….

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬೆಳವಡಿಯಲ್ಲಿ ಬೆಳವಡಿ ಮಲ್ಲಮ್ಮ ಉತ್ಸವವನ್ನು ಭಾನುವಾರ ಸರಳ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು. ಸೋಂದಾದಿಂದ ಆಗಮಿಸಿದ ವೀರಜ್ಯೋತಿಯನ್ನು ಶಾಸಕ ಮಹಾಂತೇಶ ಕೌಜಲಗಿ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಬರಮಾಡಿಕೊಂಡು ಪೂಜೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ನಂತರ ಬೆಳವಡಿ ಮಲ್ಲಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

Read More »

ಗೋಕಾಕ: ಜಿಲ್ಲಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಬಹುಮಾನ ಪಡೆಯುತ್ತಿರುವುದು.

ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಶನಿವಾರದಂದು ಆಯೋಜಿಸಿದ್ದ 5ನೇ ಜಿಲ್ಲಾ ಮಟ್ಟದ (ಬೆಳಗಾವಿ ನಗರ ಹೊರತು ಪಡಿಸಿ) ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ ಗ್ರಾಮೀಣದ ರನ್ನರ್ ಆಫ್ ಆಗಿ ಸುನೀಲ ಬಾತಖಾಂಡೆ, ಖಾನಾಪೂರದ ಬೇಸ್ಟ್ ಫೋಜರ್ ಪ್ರಶಸ್ತಿಯನ್ನು ಸಂದೀಪ ಅಂಗಡಿ ಪಡೆದಿದ್ದಾರೆ. ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ …

Read More »

ರಾಜ್ಯ ಹೆದ್ದಾರಿ ಕಾಮಗಾರಿ

ಗೋಕಾಕ: ಲೋಕೋಪಯೋಗಿ ಇಲಾಖೆಯು 2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಡಿಪಿಆರ್ ಸಿದ್ದಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು. ನಗರದಲ್ಲಿ ರವಿವಾರದಂದು ಜಲಸಂಪನ್ಮೂಲ ಸಚಿವರೊಂದಿಗೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಂದ ಈಗಾಗಲೇ ಈ ಪ್ರಸ್ತಾವನೆಯ ಅನುಮೋದನೆ ಪಡೆಯಲಾಗಿದ್ದು, …

Read More »

ಗೋಕಾಕ: ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿದರು.

ಗೋಕಾಕ: ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮುಖಾಂತರ ಕಲೆ, ಸಾಹಿತ್ಯದ ಜೊತೆಗೆ ಕೃಷಿ, ಉದ್ದಿಮೆಗಳ ಬಗ್ಗೆಯೂ ಪ್ರಾಮುಖ್ಯತೆ ನೀಡಬೇಕು ಎಂದು ಯಮಕನಮರಡಿ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಹೇಳಿದರು. ಅವರು ಶನಿವಾರದಂದು ಸಂಜೆ ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಖಂಡ ಗೋಕಾಕದ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕೃಷ್ಣಮೂರ್ತಿ ಪುರಾಣಿಕ, ಬಸವರಾಜ ಕಟ್ಟೀಮನಿ ಕಾಲದಿಂದಲೂ …

Read More »

ಗೋಕಾಕ: ಸಚಿವರ ಕಛೇರಿಯಲ್ಲಿ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನವನ್ನು ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು.

ಗೋಕಾಕ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ತಮ್ಮ ಕಛೇರಿಯಲ್ಲಿ ತಾಲೂಕಿನ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನ ವಿತರಿಸಿ ಮಾತನಾಡಿದರು. ಸನ್ 2019-20 ಮತ್ತು 2020-21 ರ ಸಾಲಿನ ಎಸ್.ಎಫ್.ಸಿ ಅನುದಾನ ಶೇ 24.10% ರ ಯೋಜನೆಯಡಿಯಲ್ಲಿ ರೂ 2.42 ಲಕ್ಷಗಳ ಅನುದಾನದಲ್ಲಿ 5 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ವರ್ಗದ ಬಿ.ಇ …

Read More »

ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್ (ತಿನಿಸು ಮಾರುಕಟ್ಟೆ) ಆರಂಭಿಸಲಾಗಿದೆ. ಇಲ್ಲಿನ ಗೋವಾ ವೇಸ್ ಬಳಿ ರಾಣಿ ಚೆನ್ನಭೈರಾದೇವಿ ಮಹಿಳಾ ಬಜಾರ ಮತ್ತು ತಿನಿಸು ಕಟ್ಟೆ ಮಳಿಗೆಗಳನ್ನು ನಿರ್ಮಾಣಮಾಡಿದ್ದು, ಅದರ ಲೋಕಾರ್ಪಣೆ ಕಾರ್ಯಕ್ರಮವನ್ನು ರವಿವಾರ ಸಂಜೆ: 5 ಗಂಟೆಗೆ  ರಾಜ್ಯಸಭಾ ಮಾಜಿ ಸದಸ್ಯ, ಕೆ.ಎಲ್‌.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನೆರವೇರಿಸಲಿದ್ದಾರೆ.

Read More »

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ನಿರ್ದೇಶಕ ಸನತ ಜಾರಕಿಹೊಳಿ.

ಗೋಕಾಕ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಕಲ್ಪನಾ ಹೇಳಿದರು. ಶನಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನಾ ಘಟಕದಿಂದ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು …

Read More »

ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು

ಬೆಳಗಾವಿ: ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು ಮೂವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗೋಕಾಕ್ ನ ಅರಬಾವಿ ಗ್ರಾಮದ ಸಂತೋಷ್ ಗಂಗಾರಾಮ ವಡ್ಡರ, ವಿಶಾಲ ನರಸಿಂಗ ಹಾಗೂ ಚಿನ್ನದ ವ್ಯಾಪಾರಿ ಚಂದ್ರಕಾಂತ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 18,59,776/-ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಲಾಗಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಕಿತ್ತೂರು ಠಾಣೆ ವ್ಯಾಪ್ತಿಯ 13 ಮನೆ, ಮಾರಿಹಾಳ ಠಾಣಾ ವ್ಯಾಪ್ತಿಯ 2 …

Read More »

ಸೋಯಾಅವರೆ ಪ್ರದೇಶ ವಿಸ್ತರಣೆಗೆ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ ಸಲಹೆ

ಬೆಳಗಾವಿ: ‘ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಸಂಕಲ್ಪದಂತೆ ಸ್ಥಾಪನೆಯಾಗಿರುವ ಕೃಷಿ ವಿಜ್ಞಾನ ಕೇಂದ್ರವು ನೂತನ ಕೃಷಿ ತಂತ್ರಜ್ಞಾನಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸುವ ಮೂಲಕ ಕೃಷಿಕರಿಗೆ ನೆರವಾಗುತ್ತಿದೆ’ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ ಹೇಳಿದರು. ಬಾಗಲಕೋಟೆ ರಸ್ತೆಯಲ್ಲಿರುವ ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ ಹಾಗೂ ಇಂದೋರ್‌ನ ಐಸಿಎಆರ್-ಭಾರತೀಯ ಸೋಯಾಅವರೆ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಕೊರವಿಕೊಪ್ಪದ ಈಶ್ವರ ನಾ. ಏಣಗಿ ಅವರ ಜಮೀನಿನಲ್ಲಿ ಈಚೆಗೆ …

Read More »

ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ

ಗೋಕಾಕ: ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಶನಿವಾರದಂದು ನಡೆಯಲಿರುವ     ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ ಬಸವಣ್ಣೆಪ್ಪ ಹೊಸಮನಿ ವೇದಿಕೆ.

Read More »