Breaking News

ಬೆಳಗಾವಿ

ರೈತ ಬಾಂಧವರು ಮನಸ್ಪೂರ್ತಿಯಾಗಿ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು ….

ಗೋಕಾಕ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಸುಮಾರು ದಿನಗಳಿಂದ ಚರ್ಚೆ ಯಲ್ಲಿ ಇದ್ದ ಈ ಶುಗರ್ ಫ್ಯಾಕ್ಟರಿ .. ಇದರ ಬಗ್ಗೆ ನಾವು ಹೇಳುವುದಕ್ಕಿಂತ ಜನ ಹೇಳೋದು ಕೇಳಿದ್ರೆ ಬಹುಶ ಈ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರಿಗೆ ಸಂತೋಷ್ ಜಾರಕಿಹೊಳಿ ಅವರಿಗೆ ಖುಷಿ ಆಗಬಹುದು. ಒಂದು ಈ ಕಾರ್ಖಾನೆ ರಾಜ್ಯದಲ್ಲಿಯೇ ಮಾದರಿ ಯಾಕೆ ಗೊತ್ತಾ ಪ್ರಥಮ್ ವಾಗಿ ಅನ್ನದಾತರಿಗೆ ಬರಬೇಕಾದ ಬಿಲ್ಲನ್ನು ಕೊಟ್ಟು ಮಾದರಿ ಯಾಗಿದೆ. ಇನ್ನು …

Read More »

ಬಿಪಿಎಲ್‌ ಕಾರ್ಡ್‌ಗೆ ಆನ್‌ಲೈನ್ ಮೂಲಕ ಅರ್ಜಿ: ಉಮೇಶ ಕತ್ತಿ

ಬಿಪಿಎಲ್‌ ಕಾರ್ಡ್‌ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಆಹಾರ ಸಚಿವ ಉಮೇಶ ಕತ್ತಿ ತಿಳಿಸಿದರು. ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವುದಕ್ಕೆ ತಡೆ ನೀಡಲಾಗಿತ್ತು. ಈಗ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ಸರ್ವರ್‌ನಲ್ಲಿ ಯಾವುದೇ ಸಮಸ್ಯೆ ಇದ್ದರೆ ಇದೇ 15 ರೊಳಗೆ ಸರಿಪಡಿಸಿ ಬಿಪಿಎಲ್‌ ಕಾರ್ಡ್‌ ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Read More »

ದೆಹಲಿ ಹಿಂಸಾಚಾರ: ನ್ಯಾಯಾಂಗ ತನಿಖೆಗೆ ಪೂಜಾರಿ ಒತ್ತಾಯ

ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗಳಿಗೆ ರಾಜಕೀಯದ ಬಣ್ಣಕೊಡುತ್ತಿರುವುದು ದುರ್ದೈವದ ಸಂಗತಿ ಎಂದು ಜೆ‌ಡಿಎಸ್ ಮುಖಂಡ ಅಶೋಕ ಪೂಜಾರಿ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಯಾವುದೇ ಪ್ರತಿಭಟನೆಗಳಲ್ಲಿ ನಡೆಯುವ ಹಿಂಸಾಕೃತ್ಯಗಳು ಅಕ್ಷಮ್ಯ ಮತ್ತು ಖಂಡನೀಯ. ದೆಹಲಿಯಲ್ಲಿ ಜ.26 ರಂದು ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಕಾಣದ ಕೈಗಳು ದುಷ್ಕೃತ್ಯ ನಡೆಸಿವೆ ಎಂಬ ಅನುಮಾನ ಕಂಡುಬರುತ್ತಿದೆ. …

Read More »

ಮಹಿಳೆಗೆ ಚೂಡಾಯಿಸಿದ ಆರೋಪ ಮರಕ್ಕೆ ಕಟ್ಟಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ.

ಗೋಕಾಕ ಬ್ರೇಕಿಂಗ್   ಸಂಗನಕೇರಿ ಗ್ರಾಮದ ಗೋಕಾಕ್ ರಸ್ತೆಯಲ್ಲಿ ನಡೆದಿರುವ ಘಟನೆ. ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಂಗನಕೇರಿ ಗ್ರಾಮ ಹನುಮಂತ ಹಿರೇಮಠ ಎಂಬ ಯುವಕನನ್ನು ತೆಂಗಿನ ಮರಕ್ಕೆ ಕಟ್ಟಿ ಥಳಿತ *ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಚೂಡಾಯಿಸಿದ ಆರೋಪ *ತೆಂಗಿನಮರಕ್ಕೆ ಯುವಕನ ಕಟ್ಟಿ ಥಳಿಸುತ್ತಿರುವ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ …

Read More »

ಬೆಳಗಾವಿಯಲ್ಲಿ ಸೇನಾ ಭರ್ತಿ ರ್ಯಾಲಿ ಆರಂಭ

ಬೆಳಗಾವಿ: ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸೇನಾ ಭರ್ತಿ ಆಯ್ಕೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಇಲ್ಲಿನ ವಿಟಿಯು ಕ್ರೀಡಾಂಗಣದಲ್ಲಿ ಫೆ.4ರಿಂದ ಆರಂಭಗೊಂಡ ಸೇನಾ ಭರ್ತಿ ರ್ಯಾಲಿಗೆ ಹಸಿರುನಿಶಾನೆ ತೋರಿಸಿ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ನೇಮಕಾತಿ ರ್ಯಾಲಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ. ಬೆಳಗಾವಿ ಸೇರಿದಂತೆ ಆರು ಜಿಲ್ಲೆಗಳ …

Read More »

ಅಬಕಾರಿ ಇಲಾಖೆ ಅಧಿಕಾರಿಗಳಿಂದ ಸಂಚಾರಿ ನಿಯಮ ಉಲ್ಲಂಘನೆ : ಪಾದಚಾರಿಗಳ ಆಕ್ರೋಶ !

ಬೆಳಗಾವಿ : ಇಲ್ಲಿನ ಅಬಕಾರಿ ಇಲಾಖೆಯ ಕಚೇರಿ ಮುಂದೆ ಪಾದಚಾರಿಗಳು ಸಂಚರಿಸುವ ಫುಟ್ ಪಾತ್ ಮೇಲೆ ಜಪ್ತಿ ಮಾಡಿದ ವಾಹನಗಳನ್ನು ನಿಲ್ಲಿಸಲಾಗುತ್ತಿದ್ದು, ಅಧಿಕಾರಿಗಳ ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.   ನೋ ಪಾರ್ಕಿಂಗ್ ಸ್ಥಳದಲ್ಲಿ ಜನರು ದ್ವಿಚಕ್ರ ವಾಹನ ನಿಲುಗಡೆ ಮಾಡಿದರೆ ಸಂಚಾರಿ ಪೊಲೀಸರು ದಂಡ ಹಾಕಲಾಗುತ್ತದೆ. ಜತೆಗೆ ದ್ವಿಚಕ್ರ ವಾಹನಗಳನ್ನು ಠಾಣೆಗೆ ತೆಗೆದುಕೊಂಡು ಹೋಗಲಾಗುತ್ತದೆ. ಆದ್ರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಕೆಲ ದಿನಗಳಿಂದ ಇಲಾಖೆಯ ಮುಂದಿನ ಫುಟ್ …

Read More »

ಬೆಳಗಾವಿಯಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ

ಬೆಳಗಾವಿಯಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ ಬೆಳಗಾವಿ : ಅಷ್ಟೇ ಗ್ರಾಮದಲ್ಲಿನ ಮಟಕಾ ಅಡ್ಡೆ ಮೇಲೆ ಮಾರಿಹಾಳ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಷ್ಟೇ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ನಾಯಕ್, ರಾಜು ಕಾಕತಿ, ರಮೇಶ ಗುರುನಾಥ ದೊಡಮನಿ, ಸುಧಾಕರ ನಂದಗಡಕರ ಬಂಧಿತರು. ಮಾರಿಹಾಳ ಠಾಣೆ ಪೊಲೀಸರು ಖಚಿತ ಮಾಹಿತಿ ಆದಾರದ ಮೇಲೆ ಡಿಸಿಪಿ ವಿಕ್ರಂ ಆಮಟೆ ನೇತೃತ್ವದ ತಂಡ ದಾಳಿ …

Read More »

ರೈಲಿಗೆ ತಲೆ ಕೊಟ್ಟು ಬೆಳಗಾವಿಯಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ..ಪತಿ ಸಾವು..ಪತ್ನಿಗೆ ಗಾಯ

ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ ಮಾಡಿದ್ದು ಘಟನೆಯಲ್ಲಿ ಪತಿ ಸಾವನ್ನಪ್ಪಿ, ಪತ್ನಿಗೆ ಗಾಯವಾಗಿರುವ ಘಟನೆ ಬೆಳಗಾವಿ ನಗರದ ಒಂದನೇ ರೇಲ್ವೆ ಗೇಟ್ ಬಳಿ ನಡೆದಿದೆ.ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ದುರ್ದೈವಿ ಆಗಿದ್ದು, ಪತ್ನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಈ ದಂಪತಿ ಯತ್ನಿಸಿದೆ. ಸ್ಥಳಕ್ಕೆ ಬೆಳಗಾವಿ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …

Read More »

ಗೋಕಾಕ : ಅರಭಾವಿ ಬಳಿ ಕ್ರೂಸರ್ ವಾಹನ ಪಲ್ಟಿ : 6 ಜನರಿಗೆ ಗಾಯ !

ಗೋಕಾಕ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ, 6 ಜನರು ಗಾಯಗೊಂಡಿರುವ ಘಟನೆ ಅರಭಾವಿ ಗ್ರಾಮದ ಬಳಿ ಬುಧವಾರ ನಡೆದಿದೆ.   ಸಂಕೇಶ್ವರ -ಅರಬಾವಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಸ್ಥಳೀಯರು ಧಾವಿಸಿ, ಕಾರ್ ನಲ್ಲಿ ಸಿಲುಕಿಕೊಂಡವರನ್ನು ಹೊರ ತೆಗೆಯಲಾಗಿದೆ. ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. …

Read More »

ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಸ್ಥಳಾರ್ತಿಸುವಂತೆ ಮನವಿ..

ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ …

Read More »