Breaking News

ಬೆಳಗಾವಿ

ವಾಹನ ಮತ್ತು ರೂ. 2 ಲಕ್ಷ ಹಣ ಲಪಟಾಯಿಸುತ್ತಿದ್ದ ಖದೀಮನ ಬಂಧನ

ಗೋಕಾಕ: ವ್ಯಕ್ತಿಯೊಬ್ಬರಿಗೆ ಹೆಚ್ಚಿನ ಲಾಭದ ಆಮಿಷ ತೋರಿಸಿ ವಾಹನ ಹಾಗೂ ಹಣವನ್ನು ಲಪಟಾಯಿಸಿಕೊಂಡು ಪರಾರಿಯಾಗುತ್ತಿದ ಖದೀಮನನ್ನು ಗೋಕಾಕ ಪೊಲೀಸರು ಸೆರೆಹಿಡಿದಿದ್ದಾರೆ.   ನಂಬಿಕೆ ದ್ರೋಹ ಮಾಡಿ ಬುಲೆರೋ ವಾಹನ ಹಾಗೂ 2 ಲಕ್ಷ ರೂಪಾಯಿ ಪಡೆದುಕೊಂಡು ಪರಾರಿಯಾಗುತ್ತಿದ್ದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ತಾಂಡಾದ ಶಿವಾನಂದ (ರಾಜು) ಪ್ರೇಮಸಿಂಗ ಚವ್ಹಾಣ ಎಂಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ.   ಗೋಕಾಕ ಶಹರ್ ಪೊಲೀಸ್ ಠಾಣೆಯ ಡಿಎಸ್ಪಿ ಜಾವೀದ್ ಇನಾಮದಾರ …

Read More »

ಮುಂದಿನ ವಾರ ರಾಣಿ ಚನ್ನಮ್ಮ ಮೃಗಾಲಯಕ್ಕೆ ಎರಡು ಹುಲಿ ಸೇರ್ಪಡೆ : ಬಿ.ಪಿ.ರವಿ

ಬೆಳಗಾವಿ : ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯಕ್ಕೆ ಮುಂದಿನ ವಾರದಲ್ಲಿ ಎರಡು ಹುಲಿಗಳು ಬರಲಿವೆ ಎಂದು ರಾಜ್ಯ ಮೃಗಾಲಯ ಪ್ರಾಧಿಕಾರ ಸದಸ್ಯ, ಕಾರ್ಯದರ್ಶಿ ಬಿ.ಪಿ.ರವಿ ಹೇಳಿದರು. ನಿನ್ನೆ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಮೃಗಾಯಲಕ್ಕೆ ಭೇಟಿ ನೀಡಿ, ಮೃಗಾಲಯದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕಮಾತನಾಡಿದ ಅವರು, ಈ ಮೃಗಾಲಯಕ್ಕೇ ಶೀಘ್ರವೇ ನುರಿತ ತಜ್ಞರ ತಂಡ ಭೇಟಿ ನೀಡಿ, ಇಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿ, ವರದಿ ನೀಡಿದ ನಂತರ ಎರಡು ಹುಲಿಗಳು ಇಲ್ಲಿಗೆ …

Read More »

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ರಾಜನಾಥ ಸಿಂಗ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ‌, ಕಿತ್ತೂರು ರಾಣಿ …

Read More »

ಗೋಕಾಕ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕ ಸತೀಶ್ ಜಾರಕಿಹೊಳಿ ಭೇಟಿ

ಗೋಕಾಕ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ  ಸುಧಾರಣ ಸಮಿತಿ ಅಧ್ಯಕ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು. ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಪ್ರವೇಶ ಪಡೆದಿರುವ ಕುರಿತು ಮಾಹಿತಿ ಪಡೆದರು. ಬಳಿಕ ನೂತನ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಿದರು. ತದನಂತರ ಕಾಲೇಜು ಅಭಿವೃದ್ಧಿಗೆ ಮಾಡಬೇಕಾದ ಯೋಜನೆಗಳ ಕುರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ, ಹಲವು ಸಲಹೆಗಳನ್ನು ನೀಡಿದರು. ಇದೇ ವೇಳೆ ಕಾಲೇಜ್ ಸಿಬ್ಬಂದಿ …

Read More »

ಸೈನಿಕನ ಕುಟುಂಬಸ್ಥರ ಮೇಲೆ ಬೆಳಗಾವಿ ಬಿಜೆಪಿ ಮುಖಂಡನ ದರ್ಪ : ಕಬ್ಬಿಣ ರಾಡ್ ನಿಂದ ಹಲ್ಲೆ !

  ಬೆಳಗಾವಿ : ಆಸ್ತಿ ವಿಚಾರವಾಗಿ ಬೆಳಗಾವಿ ಮಹಾನಗರ ಘಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ ನಮ್ಮ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಅಧಿಕಾರಿಗಳು ಕೇಸ್ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸೈನಿಕ ಭೀಮ್ಮಪ್ಪಾ ನರಸಗೌಡ ಕುಟುಂಬಸ್ಥರು ಆರೋಪಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು ತೊಡಿಕೊಂಡ ಸೈನಿಕ ಕುಟುಂಬ ನ್ಯಾಯಕ್ಕಾಗಿ ಅಂಗಲಾಚಿದ್ದಾರೆ. ಅತ್ತ ಸೇನೆಯಲ್ಲಿ ಸೈನಿಕ ಸೇವೆ …

Read More »

ಗೋಟೂರ ಗ್ರಾಮ ಪಂಚಾಯತಿ: ಅಧ್ಶಕ್ಷರಾಗಿ ಅಶೋಕ ಗಂಗನ್ನವರ, ಉಪಾಧ್ಶಕ್ಷರಾಗಿ ಲತಾ ಪಾಟೀಲ ಆಯ್ಕೆ

ಬೆಳಗಾವಿ: ಗೋಟೂರ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಶಕ್ಷರಾಗಿ ಅಶೋಕ ಗಂಗನ್ನವರ ಹಾಗೂ ಉಪಾಧ್ಶಕ್ಷರಾಗಿ ಲತಾ ನಿಂಗನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇವರನ್ನು ಆಯ್ಕೆ ಮಾಡಲಾಗಿದೆ.   ಮುಖಂಡರಾದ ಬಸು ಜತ್ತಿ, ಪ್ರಕಾಶ ಬಸ್ಸಾಪುರಿ, ಪಪ್ಪುಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ನಿಂಗನಗೌಡ ಪಾಟೀಲ, ರವಿಂದ್ರ ಮಾಸೇವಾಡಿ, ಗುರುನಾಥ ಶಿಂದೆ, ಹನುಮಂತ ಶೇಖನವರ, ರಾಜು ನಾಯಿಕ, ಸುಭಾಸ ಘಸ್ತಿ, …

Read More »

ಆರ್ಥಿಕತೆಗೆ ಚೈತನ್ಯ ತುಂಬುವ ಬಜೆಟ್ : ಬಾಲಚಂದ್ರ ಜಾರಕಿಹೊಳಿ

ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು ಇನ್ನೂ ಎರಡು ಆತ್ಮನಿರ್ಭರ ಪ್ಯಾಕೇಜ್ ಘೋಷಿಸಲಾಗಿದೆ. …

Read More »

ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ಮಾಡಿದ್ದೇಕೆ ? ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸದೇ ಉತ್ತರ ಕರ್ನಾಟಕದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಬಜೆಟ್ ಅಧಿವೇಶವನ್ನು ಬೆಳಗಾವಿಯಲ್ಲಿ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ಯಾಕೆ ಮಾಡಿದ್ದೇವೆ ಎಂಬುದನ್ನೇ ಸರ್ಕಾರ ಮರೆತಿದೆ. ಹೀಗಾಗಿ ಅಲ್ಲಿಯೇ ಬಜೆಟ್ ಅಧಿವೇಶ ಮಾಡುವಂತೆ ಒತ್ತಾಯಿಸಿದ್ದೇವೆ. ಆದರೆ ಬಜೆಟ್ ಅಧಿವೇಶನ ಬಳಿಕ ಮುಂದಿನ ಅಧಿವೇಶನ ಬೆಳಗಾವಿಯಲ್ಲಿ ಮಾಡುತ್ತೇವೆ ಎಂದಿದ್ದಾರೆ ಎಂದು ಹೇಳಿದರು. ಇನ್ನು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್ …

Read More »

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ 684 ಮದ್ಯದ ಬಾಟಲ ವಶಕ್ಕೆ

ಬೆಳಗಾವಿ: ಬಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 684 ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಟ ಬಳಿ ನಡೆದಿದೆ. ಬೆಳಗಾವಿ ಉಪ ವಿಭಾಗ ಹಾಗೂ ತನಿಖಾ ಠಾಣೆಯ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಅಶೋಕಾ ಲೈಲ್ಯಾಂಡ್ ಕಂಪನಿಯ ಎಸಿ ಬಸ್ ನಿಲ್ಲಿಸಿ ಪರಿಶೀಲಿಸಿದಾಗ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವುದು ಗೊತ್ತಾಗಿದೆ. ಪ್ರಕರಣ …

Read More »

ಶಿವಾಜಿ ಮಹಾರಾಜರ ಮೂಲವೇ ಕನ್ನಡ: ಕಾರಜೋಳ

ಬೆಳಗಾವಿ-ಮುಂಬೈ ನಮ್ಮದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ ಬೆನ್ನಲ್ಲಿಯೇ ಡಿಸಿಎಂ ಗೋವೀಂದ್ ಕಾರಜೋಳ ಅವರು ಶಿವಾಜಿ ಮೂಲ ಕನ್ನಡ ಎಂದು ಹೇಳಿಕೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದು ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ, ಮಹಾರಾಷ್ಟ್ರದ ಲ್ಲಿ ಉದ್ಧವ್ ಠಾಕ್ರೆ ನೇತೃತ್ವದ್ದು ಸಮ್ಮಿಶ್ರ ಸರ್ಕಾರ, ಕಾಂಗ್ರೆಸ್ ಪಕ್ಷದವರು …

Read More »