ಬೆಳಗಾವಿ: ತಾಲೂಕಾ ಕೃಷಿ ಹುಟ್ಟುವಳಿ ಮಾರಾಟ ಸಹಕಾರಿ ಸಮಿತಿ(ಟಿಎಪಿಎಂಎಸ್) ದಿಂದ ಎಂಪಿಎಂಸಿಯ ನಿರ್ದೇಶಕ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಾರಿಹಾಳದ ಆಶಿಫ್ ಮುಲ್ಲಾ 9 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಪ್ರತಿ ಸ್ಪರ್ಧಿ ಶಿವನಗೌಡ ಪಾಟೀಲ್ 6 ಮತಗಳ ಪಡೆದು ಪರಾಭವಗೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ಎಂ.ಎಸ್. ಗೌಡಪ್ಪಗೋಳ ಅವರು ಕಾರ್ಯನಿರ್ವಹಿಸಿದರು. ಚುನಾವಣೆ ಗೆಲುವಿಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಟಿಎಪಿಎಂಎಸ್ …
Read More »ಗೋಕಾಕ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆ
ಹೊಲಕ್ಕೆ ಹೊಸದಾಗಿ ಟಿಸಿ ಅಳವಡಿಸಲು ರೈತನಿಂದ ರೂ.60 ಸಾವಿರ ಲಂಚ ಪಡೆಯುತ್ತಿದ್ದ ಗೋಕಾಕ ಹೆಸ್ಕಾಂ ಉಪ ವಿಭಾಗದ ಸೆಕ್ಷನ್ ಆಫೀಸರ್ ಹಾಗೂ ಸಿಬ್ಬಂದಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಲೋಳಸೂರ ಸೆಕ್ಷನ್ ಆಫೀಸರ್ ಪ್ರಕಾಶ ಪರೀಟ, ಹಾಗೂ ಸಿಬ್ಬಂದಿ ಮಲ್ಲಯ್ಯ ಹಿರೇಮಠ ಅರೋಪಿಗಳಾಗಿದ್ದಾರೆ. ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅರಭಾವಿಯ ಆನಂದ ಧರ್ಮಟ್ಟಿ ಅವರು ನೀಡಿದ ದೂರಿನ ಆಧಾರದ ಮೇಲೆ ಎಸಿಬಿ …
Read More »ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ ಬಗ್ಗೆ ಕೀಳುರಿಮೆ ಮಾಡದೇ ಆದರದಿಂದ ನೋಡಿಕೊಳ್ಳಬೇಕು. ವಿಕಲಚೇತನರ ಪ್ರಗತಿಗಾಗಿ …
Read More »ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದ್ರೆ ನಾವು ಕೈಕಟ್ಟಿ ಕೂರುವುದಿಲ್ಲ : ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು : ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ರಾಜ್ಯದಲ್ಲಿ ಪಕ್ಷಾತೀತ ವಿರೋಧ ವ್ಯಕ್ತವಾಗಿದ್ದು, ಎಲ್ಲ ಪಕ್ಷದ ನಾಯಕರು ಕಿಡಿ ಕಾರಿದ್ಧಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯೂ ಸಹ ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಬೇಕು ಎಂದಿದ್ದಾರೆ. ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದರೆ ನಾವು ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಅವರು ಹಾಗೆ ಕೇಳಿದರೆ ನಾವೂ ಸೊಲ್ಲಾಪುರ, ಮುಂಬೈಯನ್ನು ಕೇಳ ಬೇಕಾಗುತ್ತದೆ. ನಾವು ವಿವಿಧತೆಯಲ್ಲಿ ಏಕತೆ …
Read More »ರಾಯಬಾಗ ಬಳಿ ರೈಲ್ವೆ ಹಳಿ ಮೇಲೆ ನಾಲ್ವರ ಆತ್ಮಹತ್ಯೆ ತಂದೆ, ತಾಯಿ ಮಕ್ಕಳು
ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ 4 ಜನರು ರಾಯಬಾಗ ರೈಲ್ವೆ ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಕಲ್ಲಪ್ಪ ಬಡಿಗೇರ ಮತ್ತು ಆತನ ಪತ್ನಿ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾತಪ್ಪ ಅಣ್ಣಪ್ಪ ಸುತಾರ (60),ಮಹಾದೇವಿ ಸಾತಪ್ಪ ಸುತಾರ (50), ಸಂತೋಷ ಸಾತಪ್ಪ ಸುತಾರ (26), ದತ್ತಾತ್ರಯ ಸಾತಪ್ಪ ಸುತಾರ (28) ಆತ್ಮಹತ್ಯೆ ಮಾಡಿಕೊಂಡವರು. ತಂದೆ …
Read More »ಕೆಎಂಎಫ್ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೆಎಂಎಫ್ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಏರ್ಪಡಿಸಿದ್ದ ಕೃತಕ ಗರ್ಭಧಾರಣಾ ಕಾರ್ಯಕರ್ತರಿಗೆ ಇನಾಫ್ ತಂತ್ರಾಂಶವನ್ನು ಒಳಗೊಂಡ ಟ್ಯಾಬ್ ಮತ್ತು ಒಕ್ಕೂಟದ ಕಲ್ಯಾಣ ನಿಧಿಯಿಂದ ಫಲಾನುಭವಿಗಳಿಗೆ ಚೆಕ್ಗಳನ್ನು ವಿತರಿಸಿ …
Read More »ಪ್ರಚೋದನಕಾರಿ ಹೇಳಿಕೆ: ಮಹಾ ಸಿಎಂಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು
ಬೆಳಗಾವಿ: ಗಡಿ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರಿಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು ನೀಡಿದ್ದಾರೆ. ಎಂಇಎಸ್ ಉದ್ಧಟತನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ. ಅವರಿಗೆ ಒಳ್ಳೆಯದನ್ನು ಬರೆಯಲು ಬರುವುದಿಲ್ಲ. ಅದಕ್ಕಾಗಿ ಈ ರೀತಿಯ ಕೆಲಸ ಮಾಡ್ತಿದ್ದಾರೆ. ಮಹಾರಾಷ್ಟ್ರ ಸಿಎಂಗೆ ಮಾಡಲು ಕೆಲಸವೇ ಇಲ್ಲ. ಯಾವಾಗಲೂ ಗಡಿ ವಿವಾದದ ಬಗ್ಗೆ ಮಾತನಾಡುತ್ತಿರುತ್ತಾರೆ. ಆಗದ ವಿಷಯ, ವಿಚಾರಗಳ …
Read More »ಬೆಳಗಾವಿ ಜಿ.ಪಂನಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ: ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಸಲಹೆ, ಸೂಚನೆ
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಸಚಿವ ರಮೇಶ ಜಾರಕಿಹೊಳಿ ನೇತೃತ್ವ ವಹಿಸಿದ್ದರು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಟಳ್ಳಿ, ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಬುಧವಾರ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ …
Read More »ಸಚಿವರು ಜವಾಬ್ದಾರಿಯುತ ಹೇಳಿಕೆ ನೀಡಲಿ: ಸತೀಶ ಜಾರಕಿಹೊಳಿ ಟಾಂಗ್
ಗೋಕಾಕ: “ರೈತರ ಪ್ರತಿಭಟನೆಯ ಕುರಿತು ಸಚಿವರು ಹಾದಿ-ಬೀದಿಯಲ್ಲಿ ಹೋಗುವವರ ರೀತಿ ಮಾತನಾಡಬಾರದು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜವಾಬ್ದಾರಿಯುತ ಹೇಳಿಕೆ ನೀಡಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿಕೆಗೆ ಟಾಂಗ್ ನೀಡಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರು ಹಕ್ಕು. ಆದರೆ, ಹಿಂಸಾತ್ಮಕ ಹೋರಾಟ ನಡೆಸುವುದು ತಪ್ಪು. ರೈತರ ಪ್ರತಿಭಟನೆ ಪಕ್ಷಾತೀತವಾಗಿದ್ದು, ಈ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದರು” ಎಂದರು. …
Read More »ದೆಹಲಿಯಲ್ಲಿ ರೈತ ಹಿಂಚಾಚಾರದ ತನಿಖೆಯಾಗಲಿ, ಸತ್ಯ ಹೊರಬರಲಿ: ಸಚಿವ ರಮೇಶ ಜಾರಕಿಹೊಳಿ
ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಲವರು ಕೆಂಪುಕೋಟೆಗೆ ನುಗ್ಗಿ ಧ್ವಜ ಹಾರಿಸಿದ್ದಾರೆ. ಇಂಥದರ ಹಿಂದೆ ಹಲವರ ಕೈವಾಡ ಇರುವ ಶಂಕೆ ವ್ಯಕ್ತವಾಗುತ್ತಿದೆ. ವೈರಿ ದೇಶಗಳು ಇಂಥದ್ದಕ್ಕೆ ಕುಮ್ಮಕ್ಕು ಕೊಡುವ ಬಗ್ಗೆ ಮಾತನಾಡುತ್ತಿವೆ. ಹಿಂಸಾಚಾರದಲ್ಲಿ ಪಾಲ್ಗೊಂಡವರು ನಿಜವಾದ ರೈತರೇ ಹೇಗೆಂಬುದು ತನಿಖೆಯಾಗಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಸಚಿವ ರಮೇಶ ಜಾರಕಿಹೊಳಿ ಬುಧವಾರ ಮಾತನಾಡಿ, ದೆಹಲಿ ಹಿಂಸಾಚಾರ ದುರದೃಷ್ಟಕರ, …
Read More »