Breaking News

ಬೆಳಗಾವಿ

ತುಂಬಿ ಹರಿಯುತ್ತಿರುವ ಹಾಲಾತ್ರಿ ಹಳ್ಳದಲ್ಲಿ ಥಾರ್ ದಾಟಿಸಿದ ಚಾಲಕ

ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಖಾನಾಪುರದ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದರ ನಡುವೆಯೂ ಒಬ್ಬ ಚಾಲಕ ಹರಿಯುವ ನೀರಿನಲ್ಲೇ ವಾಹನ ದಾಟಿಸಿ, ದುಸ್ಸಾಹಸ ಪ್ರದರ್ಶಿಸಿರುವ ವಿಡಿಯೋ ವೈರಲ್ ಆಗಿದೆ. ಬೆಳಗಾವಿ, ಖಾನಾಪುರ, ಹೆಮ್ಮಡಗಾ-ಅನಮೋಡ ಮಾರ್ಗವಾಗಿ ಗೋವಾ ಸಂಪರ್ಕಿಸುವ ರಸ್ತೆಯಲ್ಲಿರುವ ಹಾಲಾತ್ರಿ ಹಳ್ಳ ತುಂಬಿ‌ ಹರಿಯುತ್ತಿದೆ. ಹಳ್ಳದ ಸೇತುವೆಯ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. …

Read More »

ಪಂಢರಪುರದತ್ತ ಹೊರಟಿರುವ ಪಾದಯಾತ್ರಿಗಳು

ಬೆಳಗಾವಿ: ವಾರಕರಿಗಳ ನೇತೃತ್ವದಲ್ಲಿ ತಾಳ ಹಾಕುತ್ತಾ, ತಂಬೂರಿ-ಭಜನೆ ಬಾರಿಸುತ್ತಾ, ವೀಣೆ ನುಡಿಸುತ್ತಾ, ಅಭಂಗಗಳ ಮೂಲಕ ವಿಠ್ಠಲನ ನಾಮ ಸ್ಮರಿಸುತ್ತಾ, ತಲೆಯ ಮೇಲೆ ತುಳಸಿ ಹೊತ್ತು, ಕೈಯಲ್ಲಿ ವಿಠಲನ ಧ್ವಜ ಹಿಡಿದು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಪಂಢರಪುರದತ್ತ ಭಕ್ತರ ಪಾದಯಾತ್ರೆ ಹೊರಟಿದೆ. ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ಭಕ್ತವರ್ಗ ತಮ್ಮ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ. ಹೌದು, ಈ ಎಲ್ಲ ದೃಶ್ಯ ಕಂಡು ಬಂದಿದ್ದು, ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ. ಬೆಳಗಾವಿ ತಾಲೂಕಿನ ಸುಳಗಾ (ಯಳ್ಳೂರ) …

Read More »

ಬೆಳಗಾವಿ, ಖಾನಾಪುರ, ಕಿತ್ತೂರು ಶಾಲಾ ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಣೆ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಹಾಮಳೆ ಬುಧವಾರವೂ ಮುಂದುವರೆದಿರುವ ಹಿನ್ನೆಲೆಯಲ್ಲಿ ಜೂನ್ 26ರಂದು ಗುರುವಾರ ಬೆಳಗಾವಿ, ಖಾನಾಪುರ ಮತ್ತು ಕಿತ್ತೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೌದು, ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಹಾಗಾಗಿ, ಬುಧವಾರ ಎರಡು ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆ ಆರ್ಭಟ ಇನ್ನೂ ಜೋರಾಗಿದ್ದರಿಂದ ಜಿಲ್ಲೆಯ ಮೂರು ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ …

Read More »

ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅಲದಾಳ ಗ್ರಾಮದ 2 ನೂತನ ಕೂಠಡಿ

ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಸಚಿವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ* ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅಲದಾಳ ಗ್ರಾಮದ 2 ನೂತನ ಕೂಠಡಿ ಒಟ್ಟು 36 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸರ್ಕಾರಿ ಹಿರಿಯ …

Read More »

ಮೂಡಲಗಿ | ಅವರಾದಿ ಸೇತುವೆ ಜಲಾವೃತ: ಸಂಪರ್ಕ ಸ್ಥಗಿತ

ಮೂಡಲಗಿ | ಅವರಾದಿ ಸೇತುವೆ ಜಲಾವೃತ: ಸಂಪರ್ಕ ಸ್ಥಗಿತ ಮೂಡಲಗಿ: ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಬಿಡುವು ಇಲ್ಲದೆ ಮಳೆಯಾಗುತ್ತಿರುವುದರಿಂದ ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾಗಿದೆ. ತಾಲ್ಲೂಕಿನ ಅವರಾದಿ ಬಳಿಯ ಘಟಪ್ರಭಾ ನದಿಗೆ ಇರುವ ಬ್ರಿಡ್ಜ್‌ ಕಂ ಬ್ಯಾರೆಜ್‌ ಬುಧವಾರ ಮಧ್ಯಾಹ್ನ ಜಲಾವೃತಗೊಂಡು ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ. ನದಿಯ ನೀರಿನ ಮಟ್ಟವು ಇನ್ನು ಏರಿಕೆಯಾಗುವ ಸಂಭವವಿದ್ದು ಮೂಡಲಗಿ ಸುಣಧೋಳಿ ಸಂಪರ್ಕ ಇರುವ ಸುಣಧೋಳಿ ಸೇತುವೆ, ವಡೇರಹಟ್ಟಿ ಸೇತುವೆ, ಕಮಲದಿನ್ನಿ …

Read More »

ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದ ಹಾಗೂ ಬಸ್ ನಲ್ಲಿದ್ದ ಬ್ಯಾಗ ಎಗರಿಸಿದ್ದ ಕಳ್ಳರ ಬಂಧನ

ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದ ಹಾಗೂ ಬಸ್ ನಲ್ಲಿದ್ದ ಬ್ಯಾಗ ಎಗರಿಸಿದ್ದ ಕಳ್ಳರ ಬಂಧನ ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದಿದ್ದ ಹಾಗೂ ಬಸ್ ನಲ್ಲಿ ಪ್ರಯಾಣಿಸುವಾಗ ಬ್ಯಾಗ್ ಎಗರಿಸಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಕಳ್ಳರನ್ನು ಹಾರೂಗೇರಿ ಪೊಲೀಸರು ಬಂಧಿಸಿ ಬಂಗಾರ ವಶಪಡಿಸಿಕೊಂಡಿದ್ದಾರೆ ಬೆಳಗಾವಿ ಶಹಪುರ್ ನಿವಾಸಿ ಪದ್ಮಾವತಿ ರಾಜೇಂದ್ರ ಕುಡಚಿ ಹಾರೋಗೇರಿ ಕ್ರಾಸ್ ನಿಂದ ಮಿರಜಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅವರ ಬ್ಯಾಗಿನಲ್ಲಿಟ್ಟಿದ್ದ 3.60.000 ಬೆಲೆಬಾಳುವ …

Read More »

ಕಾಕತಿ ಪೊಲೀಸರ ಮಿಂಚಿನ ದಾಳಿ….. ಗಾಂಜಾ ಮಾರಾಟಗಾರರ ಬಂಧನ….

ಕಾಕತಿ ಪೊಲೀಸರಿಂದ ಮಾದಕ ವಸ್ತು ವಿರುದ್ಧ ಮಿಂಚಿನ ದಾಳಿ ಹೊನಗಾ ಕೈಗಾರಿಕಾ ಪ್ರದೇಶದಿಂದ ಇಬ್ಬರು ಆರೋಪಿಗಳ ಬಂಧನ ಪಿಎಸ್ಐ ಸುರೇಶ್ ಸಿಂಗಿ ನೇತೃತ್ವದಲ್ಲಿ ದಾಳಿ ಬಂಧಿತರಿಂದ 25000 ರೂ. ಮೌಲ್ಯದ ಗಾಂಜಾ ಜಪ್ತ ಬೆಳಗಾವಿಯ ಕಾಕತಿ ಪೋಲೀಸರು ಮಿಂಚಿನ ದಾಳಿ ನಡೆಸಿ ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಪಿಎಸ್ಐ ಸುರೇಶ ಸಿಂಗಿ …

Read More »

ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಬೆಳಗಾವಿ: ಮಂಗಳವಾರ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜೂನ್ 25 ರಂದು (ಬುಧವಾರ) ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸೋಮವಾರ ಸಾಯಂಕಾಲ ಬೆಳಗಾವಿಯಲ್ಲಿ ಶುರುವಾದ ಮಳೆ ರಾತ್ರಿಯಿಡೀ ಸುರಿಯಿತು. ಇಂದೂ ಸಹ ಬಿಟ್ಟು ಬಿಡದೇ ಮಳೆ ಆರ್ಭಟಿಸುತ್ತಿದೆ. ಬುಧವಾರವೂ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ …

Read More »

ರಂಗಪಟ್ಟಣ ಶಾಸಕ ರಮೇಶ ಬಂಡಿ ಸಿದ್ದೇಗೌಡ ರಿಂದ ಮುಸ್ಲಿಮರಿಗೆ ಅವಮಾನ… ಎಸ್ ಡಿ ಪಿ ಐ ದಿಂದ ಪ್ರತಿಭಟನೆ….

ಬೆಳಗಾವಿ : ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿ ಸಿದ್ದೇಗೌಡ ರಿಂದ ಮುಸ್ಲಿಮರಿಗೆ ಅವಮಾನ… ಎಸ್ ಡಿ ಪಿ ಐ ದಿಂದ ಪ್ರತಿಭಟನೆ…. ಸರಕಾರಿ ಜಮೀನನ್ನು ಮುಸ್ಲಿಮರ ಹೆಸರಿನಲ್ಲಿ ಪರಭಾರೆ ಮಾಡಿದರೆ, ನೇಣಿಗೆ ಹಾಕುವುದು ಗ್ಯಾರಂಟಿ’ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಧಮ್ಕಿ ಹಾಕಿರುವುದನ್ನು ಖಂಡಿಸಿ ಮಂಗಳವಾರ ಎಸ್ ಡಿಪಿಐ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸರಕಾರಿ ಜಮೀನಿನ ಮೇಲಿನ ಪರಭಾರೆ ವಿವಾದದ ಹಿನ್ನೆಲೆಯಲ್ಲಿ …

Read More »

ಕ್ಯಾಂಪ್ ಠಾಣೆ ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ

ಬೆಳಗಾವಿ : ಕ್ಯಾಂಪ್ ಠಾಣೆ ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ ಬೆಳಗಾವಿ ಕ್ಯಾಂಪ್ ಪ್ರದೇಶದ ಧೋಬಿ ಘಾಟ್ ಬಳಿ ಸಾರ್ವಜನಿಕವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕ್ಯಾಂಪ್ ಠಾಣಾ ಪೊಲೀಸರು ಬಂಧಿಸಿದ್ದಾರೆ ಮಾದಕ ವಸ್ತು ಮಾರಾಟದ ಮೇಲೆ ಮಿಂಚಿನ ದಾಳಿ ನಡೆಸಿರುವ ಕ್ಯಾಂಪ್ ಪೊಲೀಸ್ ಠಾಣೆಯ ಪಿಎಸ್ಐ ಎ. ರುಕ್ಮಿಣಿ ಹಾಗೂ ಸಿಬ್ಬಂದಿ ಕ್ಯಾಂಪ ಪ್ರದೇಶದ ಧೋಬಿ ಘಾಟ್ ಬಳಿ, ಸಾರ್ವಜನಿಕವಾಗಿ ಗಾಂಜಾ ಮಾರಾಟ …

Read More »