Breaking News

ಬೆಳಗಾವಿ

ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ

ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. ‘2018ರ ಮಾರ್ಚ್‌ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು …

Read More »

ರಾಜಕೀಯದ ನಿಖರ ಭವಿಷ್ಯದ ಮೂಲಕ ಖ್ಯಾತಿಗಳಿಸಿದ್ದ ಪಂ.ಶ್ರೀಪಾಲ್‌ ಇನ್ನಿಲ್ಲ

ಅಥಣಿ  : ರಾಜಕೀಯ ಭವಿಷ್ಯ ನುಡಿಯುವ ಮೂಲಕ ಖ್ಯಾತಿಗಳಿಸಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿಯ ಪಂಡಿತ ಶ್ರೀಪಾಲ್‌ ಉಪಾಧ್ಯೆ (78) ಮಂಗಳವಾರ ಬೆಳಗ್ಗೆ ನಿಧನರಾದರು. ನ್ಯುಮೋನಿಯಾದಿಂದ ಬಳಲುತ್ತಿದ್ದ ಉಪಾಧ್ಯೆ ಅವರು ಬೆಳಗಿನ ಜಾವ 6.30ಕ್ಕೆ ನಿಧನರಾದರು.1985ರಲ್ಲಿ ಚುನಾವಣೆಗೆ ಸ್ಪರ್ಧಿಸದ ಆ ಧೀಮಂತ ವ್ಯಕ್ತಿ ಮುಖ್ಯಮಂತ್ರಿ ಆಗ್ತಾರೆ ಎಂದು ಕವಡೆ ಭವಿಷ್ಯ ನುಡಿದಿದ್ದರು. ಅದರಂತೆ ಅಂದು ಚುನಾವಣೆಗೆ ಸ್ಪರ್ಧಿಸದ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದರು. 2018ರ ವಿಧಾನಸಭೆ ಚುನಾವಣೆ ವೇಳೆ ಎಚ್‌.ಡಿ.ಕುಮಾರಸ್ವಾಮಿಯೇ …

Read More »

ಕೊರೊನಾ ಸೋಂಕಿನಿಂದ ಧೃತಿಗೆಡಬೇಡಿ 2ನೇ ಬಾರಿ ಅರಭಾವಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್ ವಿತರಣೆ : ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸುರಕ್ಷತೆಗಾಗಿ ಅರಭಾವಿ ಕ್ಷೇತ್ರದ ಪ್ರತಿ ಮನೆ ಮಾಸ್ಕ್ ವಿತರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ‘ಕೊರೊನಾ ಜಾಗತಿಕ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕ್ಷೇತ್ರದಲ್ಲಿರುವ ಪ್ರತಿ ಮನೆಗಳಿಗೆ ಮಾಸ್ಕ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಎರಡನೆಯ ಹಂತದಲ್ಲಿ 2.50 ಲಕ್ಷ ಮಾಸ್ಕ್ ಗಳನ್ನು …

Read More »

ನಟಿ ಸಂಜನಾ ಜತೆ ಶಾಸಕ ಜಮೀರ್ ಅಹಮ್ಮದ್ಹೆಸರು ಕೇಳಿ ಬಂದಿರುವ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಹುಕ್ಕೇರಿ : ಡ್ರಗ್ಸ್ ದಂಧೆ ಜಾಲದಲ್ಲಿ ನಟಿ ಸಂಜನಾ ಜೊತೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಹೆಸರು ಕೇಳಿ ಬಂದಿರುವ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ  ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ಜಮೀರ್ ಇಲ್ಲ. ಹೀಗಾಗಿ ಅವರೊಂದಿಗೆ ಹೊಲಿಕೆ ಮಾಡುವುದು ಸರಿಯಲ್ಲ. ನಟಿ ಸಂಜನಾ ಜತೆ ಶಾಸಕ ಜಮೀರ್ ಅಹಮ್ಮದ್ ಪಾರ್ಟಿಗೆ ಹೋದರೆ ಅಥವಾ ತಿರುಗಾಡಿದ್ರೆ ಏನೂ ಸಂಬಂಧವಿಲ್ಲ. ಡ್ರಗ್ಸ್ ತೆಗೆದುಕೊಂಡರೆ, ಮಾರಾಟ ಮಾಡಿದರೆ …

Read More »

ಬೆಳಗಾವಿ: ‘ಬೃಹತ್‌ ಇ- ಲೋಕ ಅದಾಲತ್‌’ 19ರಂದು

ಬೆಳಗಾವಿ: ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸೆ. 19ರಂದು ‘ಬೃಹತ್‌ ಇ-ಲೋಕ ಅದಾಲತ್‌’ ಹಮ್ಮಿಕೊಳ್ಳಲಾಗಿದೆ.   ‘ಕಲಂ 138 (ಎನ್‌ಐ ಆಕ್ಟ್) ಅಡಿ ನೋಂದಾಯಿಸಿದವು, ಮೋಟಾರು ವಾಹನ ಅಪಘಾತ ಪರಿಹಾರ, ಸಾಲ ವಸೂಲಾತಿ ಮತ್ತು ವ್ಯಾಜ್ಯ ಪೂರ್ವ, ಕೌಟುಂಬಿಕ ಹಾಗೂ ಜೀವನಾಂಶ ಮತ್ತು ಸಿವಿಲ್ ಹಾಗೂ ಎಲ್ಲ ರೀತಿಯ ಪ್ರಕರಣಗಳನ್ನು ಆನ್‌ಲೈನ್‌ ಮೂಲಕ ರಾಜಿ ಮಾಡಿ ಇತ್ಯರ್ಥಗೊಳಿಸಲಾಗುವುದು. ಅದಾಲತ್‌ಗೆ ಸಂಬಂಧಿಸಿದಂತೆ ಎಲ್ಲ ನ್ಯಾಯಾಲಯಗಳಲ್ಲೂ ಪೂರ್ವಭಾವಿ ಕಾರ್ಯಕ್ರಮಗಳು ನಡೆಯುತ್ತಿವೆ. …

Read More »

ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೋದನೆ: ಸುರೇಶ್ ಅಂಗಡಿ

ಬೆಳಗಾವಿ,  : ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಕಿತ್ತೂರು-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೊದನೆ ದೊರೆತಿದ್ದು, ಈ ಯೋಜನೆಗೆ 927.40 ಕೋಟಿ ವೆಚ್ಚವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ. ಸೋಮವಾರ ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಗೊಂಡಲ್ಲಿ ಪ್ರಮುಖ ನಗರಗಳಾದ ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿಗೆ ಕಡಿಮೆ ಸಮಯದಲ್ಲಿ ಸಂಪರ್ಕ ಸಾಧ್ಯವಾಗಲಿದೆ. ಜತೆಗೆ ಮುಂದಿನ ವರ್ಷಗಳಲ್ಲಿ …

Read More »

ಹುಬ್ಬಳ್ಳಿ-ಬೆಳಗಾವಿ ನಡುವಿನ ಹೊಸ ಮಾರ್ಗಕ್ಕೆ ರೈಲ್ವೆ ಮಂಡಳಿ ಅನುಮೋದನೆ

ಹುಬ್ಬಳ್ಳಿ: ಕಿತ್ತೂರು ಮತ್ತು ಧಾರವಾಡದ ಮಾರ್ಗವಾಗಿ ಬೆಳಗಾವಿ ಮತ್ತು ಹುಬ್ಬಳ್ಳಿ ನಡುವಿನ 73 ಕಿಲೋಮೀಟರ್ ಉದ್ದದ ಹೊಸ ರೈಲ್ವೆ ಮಾರ್ಗದ ಯೋಜನೆಗೆ ರೈಲ್ವೆ ಮಂಡಳಿ ಅನುಮೋದಿಸಿದೆ ಎಂದು ನೈರುತ್ಯ ರೈಲ್ವೆ ಪ್ರಧಾನ ಕಚೇರಿ ಸೋಮವಾರ ಪ್ರಕಟಿಸಿದೆ. ಇದರಂತೆ, ಹೊಸ ಮಾರ್ಗ ಬೆಳಗಾವಿ-ಹುಬ್ಬಳ್ಳಿ ನಡುವಿನ ಪ್ರಯಾಣದ ಸಮಯವನ್ನು ಕನಿಷ್ಠ ಒಂದು ಗಂಟೆಯವರೆಗೆ ಕಡಿಮೆ ಮಾಡುವ ಸಾಧ್ಯತೆಯಿದೆ. ರಸ್ತೆ ಮಾರ್ಗಕ್ಕೆ ಹೋಲಿಸಿದರೆ ಇದು ಸುಮಾರು 31 ಕಿಲೋಮೀಟರ್ ದೂರವನ್ನು ಕಡಿಮೆ ಮಾಡುತ್ತದೆ. ಧಾರವಾಡ ಮತ್ತು …

Read More »

ಬೆಳಗಾವಿ: ಸಮಸ್ಯೆ ಆಲಿಸಲು ಕಾರಿನಿಂದಿಳಿಯದ ಅಧಿಕಾರಿಗಳು; ಸ್ಥಳೀಯರಿಂದ ಘೇರಾವ್

ಬೆಳಗಾವಿ: ನೆರೆ ಹಾಗೂ ಅತಿವೃಷ್ಟಿಯಿಂದಾದ ಹಾನಿ ಪರಿಶೀಲನೆಗೆ ಬಂದಿದ್ದ ಕೇಂದ್ರ ಅಧ್ಯಯನ ತಂಡಕ್ಕೆ ಸ್ಥಳೀಯರು ಘೇರಾವ್ ಹಾಕಿದ ಘಟನೆ ಗೋಕಾಕ ತಾಲ್ಲೂಕಿನ ಲೋಳಸೂರ ಸೇತುವೆ ಬಳಿ ಮಂಗಳವಾರ ನಡೆಯಿತು. ಅಧ್ಯಯನ ತಂಡದ ಅಧಿಕಾರಿಗಳ ಎದುರು ಸಮಸ್ಯೆ ಹೇಳಿಕೊಳ್ಳಲು ಮುಂದಾದ ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದ ಕೊಪ್ಪದ ಹಾಗೂ ಮುಖಂಡರಿಗೆ ಅವಕಾಶ ದೊರೆಯಲಿಲ್ಲ. ಅವರೊಂದಿಗೆ ಮಾತ‌ನಾಡಲು ತಂಡದ ಅಧಿಕಾರಿಗಳು ನಿರಾಕರಿಸಿದರು. ಕಾರಿನಲ್ಲಿ ಹೋಗಿ ಕುಳಿತರು. ಇದರಿಂದಾಗಿ ಸಿಟ್ಟಾದ ಮುಖಂಡರು ಕಾರಿಗೆ ಘೇರಾವ್ ಹಾಕಿ …

Read More »

ಬೆಳಗಾವಿಯಲ್ಲಿ ಕಬ್ಬಿನ ಬಾಕಿ ಹಣಕ್ಕಾಗಿ ಆಗ್ರಹಿಸಿ ರೈತರ ಧರಣಿ

ಬೆಳಗಾವಿ – ಬೆಳಗಾವಿ ಜಿಲ್ಲೆಯ ಕಬ್ಬು ಬೆಳೆಗಾರರು ಮತ್ತೆ ಬೀದಿಗೆ ಇಳಿದು ಧರಣಿ ನಡೆಸಿದ್ದಾರೆ. ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಎರಡು ವರ್ಷದಿಂದ ಬಾಕಿ ಹಣ ಉಳಿಸಿಕೊಂಡಿದ್ದು, ರೈತರಿಗೆ ಪಾವತಿ ಮಾಡಿಲ್ಲ. ಲಾಕ್​​ಡೌನ್​​ನಂತಹ ಸಂಕಷ್ಟದ ಸಂದರ್ಭದಲ್ಲಿ ರೈತರಿಗೆ ಹಣ ನೀಡದೆ ಸತಾಯಿಸುತ್ತಿದೆ. ಹೀಗಾಗಿ ಸೋಮವಾರ ರೈತ ಸಂಘದ ನೇತೃತ್ವದಲ್ಲಿ ಬೃತಹ್ ಧರಣಿ ನಡೆಸಿ, ತಕ್ಷಣ ಬಾಕಿ ಹಣ ಪಾವತಿ ಮಾಡಬೇಕು ಎಂದು ಆಗ್ರಹಿಸಿಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಎಂ ಕೆ …

Read More »

ಮಳೆ ಹಾನಿ: ಬೆಳಗಾವಿ ಜಿಲ್ಲೆಗೆ ಬಂದ ಕೇಂದ್ರ ತಂಡ

ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬಂದಿರುವ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಜಿಲ್ಲೆಯ ಸ್ಥಿತಿಗತಿ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಹಿತಿ ನೀಡಿದರು. ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಪಾಲ್ಗೊಂಡಿದ್ದರು. ತಂಡವು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ …

Read More »