Breaking News

ಬೆಳಗಾವಿ

ವಚನ ಪುಸ್ತಕ ಮಳಿಗೆ ಉದ್ಘಾಟನೆ

ಬೆಳಗಾವಿ: ಇಲ್ಲಿನ ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಕಾಲೇಜಿನ ಗೇಟ್‌ ನಂ.3ರ ಬಳಿಯ ವಚನ ಅಧ್ಯಯನ ಕೇಂದ್ರದಲ್ಲಿ ಆರಂಭಿಸಿರುವ ಪುಸ್ತಕ ಮಾರಾಟ ಮಳಿಗೆಯನ್ನು ಭಾನುವಾರ ಉದ್ಘಾಟಿಸಲಾಯಿತು. ಡಂಬಳ-ಗದಗ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಟೇಪ್‌ ಕತ್ತರಿಸಿದರು. ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಸ್‌ಜಿಬಿಐಟಿ ಪ್ರಾಂಶುಪಾಲ ಪ್ರೊ.ಸಿದ್ರಾಮಪ್ಪ ವಿ.ಇಟ್ಟಿ ಇದ್ದರು. ‘ಮಳಿಗೆಯಲ್ಲಿ ವಚನ ಸಾಹಿತ್ಯ, ಧರ್ಮ, ತತ್ತ್ವಶಾಸ್ತ್ರ, ಅಧ್ಯಾತ್ಮ ಮೊದಲಾದ ವಿಷಯಗಳಿಗೆ ಸಂಬಂಧಿಸಿದ ಮೌಲಿಕ ಗ್ರಂಥಗಳು, ಪೂಜಾ …

Read More »

ಈ ಗ್ರಾಮಸ್ಥರಿಗೆ ಪ್ರತಿದಿನ ಶಿಕ್ಷಕರ ದಿನ:ಬೆಳಗಾವಿ ಜಿಲ್ಲೆಯ ಇಂಚಲ್ ಗ್ರಾಮದಲ್ಲಿ ಬಹುತೇಕರು ಶಿಕ್ಷಕರು!

ಬೆಳಗಾವಿ:ಈ ಗ್ರಾಮ ಪ್ರತಿದಿನ ಶಿಕ್ಷಕರ ದಿನವನ್ನು ಆಚರಿಸುತ್ತದೆ. ಇದು ಬೆಳಗಾವಿ ಜಿಲ್ಲೆಯ ಇಂಚಲ್ ಗ್ರಾಮ, ಶಿಕ್ಷಕರ ಗ್ರಾಮವೆಂದೇ ಕರೆಯಬಹುದು. ಈ ಗ್ರಾಮದ ಪ್ರತಿಯೊಂದು ಮನೆಯಲ್ಲಿಯೂ ಕನಿಷ್ಠ ಒಬ್ಬರು ಶಿಕ್ಷಕರಿದ್ದಾರೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ ತಾಲ್ಲೂಕಿನ ಇಂಚಲ್ ಗ್ರಾಮದಲ್ಲಿ ಸುಮಾರು 10 ಸಾವಿರ ಮಂದಿ ಇದ್ದಾರೆ, ಅವರಲ್ಲಿ ಸುಮಾರು 900 ಮಂದಿ ಶಿಕ್ಷಕರೇ. ಸರ್ಕಾರ ಮತ್ತು ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಾರೆ. ನೂರಾರು …

Read More »

ಕಿಶೋರಿಯರನ್ನು ಅಪೌಷ್ಟಿಕತೆಯಿಂದ ಹೊರತರಬೇಕು: ವೈದ್ಯಾಧಿಕಾರಿ ಡಾ.ಕೀರ್ತಿ

ಬೆಳಗಾವಿ: ‘ಕಿಶೋರಿಯರಲ್ಲಿ ಹೆಚ್ಚಿನವರು ಕುಪೋಷಣೆಗೆ ಒಳಗಾಗಿದ್ದಾರೆ. ಆಟ-ಪಾಠದೊಂದಿಗೆ ಬೆಳೆಯಬೇಕಾದ ಮಕ್ಕಳು ಹಾಸಿಗೆ ಹಿಡಿಯುತ್ತಿದ್ದಾರೆ ಎಂದರೆ ಅದಕ್ಕೆ ಅವರಲ್ಲಿರುವ ಅಪೌಷ್ಟಿಕತೆಯೇ ಕಾರಣ’ ಎಂದು ವೈದ್ಯಾಧಿಕಾರಿ ಡಾ.ಕೀರ್ತಿ ಹೇಳಿದರು. ಇಲ್ಲಿನ ಮಹಿಳಾ ಕಲ್ಯಾಣ ಸಂಸ್ಥೆಯು ಹುಕ್ಕೇರಿ ತಾಲ್ಲೂಕಿನ ಯರಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಯರನಾಳ, ಹೊಸೂರ, ನಿರ್ವಾಣಹಟ್ಟಿ, ಬಡಕುಂದ್ರಿ ಗ್ರಾಮದ ಕಿಶೋರಿಯರಿಗಾಗಿ ಆಯೋಜಿಸಿದ್ದ ‘ಪೌಷ್ಟಿಕಾಂಶ ಅಭಿಯಾನ’ದ ಅಂಗವಾಗಿ ನಡೆದ ಆರೋಗ್ಯ ತಪಾಸಣೆ ಮತ್ತು ಪೌಷ್ಟಿಕ ಆಹಾರ ತಯಾರಿಕೆ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಯಾಗಿ ಅವರು …

Read More »

ಗಂಡನನ್ನೇ ಕೊಂದು ಹೂತು ಹಾಕಿದ ಪತ್ನಿ

ಚಿಕ್ಕೋಡಿ: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಗಂಡನನ್ನೇ ಹೆಂಡತಿ ಕೊಲೆ ಮಾಡಿ ಹೂತು ಹಾಕಿದ ಘಟನೆ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ ತಡವಾಗಿ ಪತ್ತೆಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್‌ ತಾಲೂಕಿನ ನೇರ್ಲೆ ಗ್ರಾಮದ ಸಚಿನ ಸದಾಶಿವ ಭೋಪಳೆ(35) ಕೊಲೆಯಾದ ವ್ಯಕ್ತಿ. ಕೊಲೆ ಮಾಡಿದ ಪತ್ನಿ ಅನಿತಾ ಭೋಪಳೆ(33) ಸಹಚರ ಸಹೋದರ ಹಂಚಿನಾಳ ಗ್ರಾಮದ ಕೃಷ್ಣಾತ್‌ ರಾಜಾರಾಮ ಘಾಟಗೆ(26) ಹಾಗೂ ಪತ್ನಿಯ ಸಹೋದರಿ ಕಾಗಲ್‌ ತಾಲೂಕಿನ ಸಿದ್ಧನೇರ್ಲಿ ಗ್ರಾಮದ ವನಿತಾ …

Read More »

473 ಮಂದಿಗೆ ಕೋವಿಡ್ ಸೋಂಕು

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, ಶನಿವಾರ 473 ಮಂದಿಗೆ ಸೋಂಕು ತಗುಲಿದ್ದು, 331 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.473 ಹೊಸ ಪ್ರಕರಣಗಳಿಂದ 14235 ಸೋಂಕಿತರು ಆಗಿದ್ದು, ಒಂದೇ ದಿನ 331 ಮಂದಿ ಗುಣಮುಖರಾಗಿ ಇಲ್ಲಿಯವರೆಗೆ 10145 ಜನ ಗುಣಮುಖರಾಗಿ ಬಿಡುಗಡೆ ಆದಂತಾಗಿದೆ. ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌-19 ವಾರ್ಡ್‌ನಲ್ಲಿ ಸದ್ಯ 3887 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 1,08,624 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 26,960 …

Read More »

ಪತಿ ಕೊಂದು ಎಮ್ಮೆ ಸತ್ತಿದೆ ಅಂತ ಹೂತು ಹಾಕಿದ್ದ ಕೇಸ್; ನಾಲ್ವರು ಆರೋಪಿಗಳ ಬಂಧನ

ಚಿಕ್ಕೋಡಿ: ಪತಿಯನ್ನು ಕೊಂದು ಎಮ್ಮೆ ಸತ್ತಿದೆ ಅಂತಾ ಹೊಲದಲ್ಲಿ ಹೂತು ಹಾಕಿದ್ದ ಆರೋಪದ ಮೇಲೆ ಪತ್ನಿ ಸೇರಿದಂತೆ ಆಕೆಯ ಸಂಬಂಧಿಕರನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದಾರೆ. ಮೃತ ಸಚಿನ್ ಪತ್ನಿ ಅನಿತಾ, ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ್​(29), ಗಣೇಶ ರೇಡೇಕರ(21),ಬಂಧಿತ ಆರೋಪಿಗಳು. ಅನಿತಾ ತಮ್ಮ ಪತಿಯನ್ನು ಹತ್ಯೆ ಮಾಡಿ ಸಹೋದರ, ಸಹೋದರಿಯ ಸಹಾಯದಿಂದ ಹೊಲದಲ್ಲಿ ಜೆಸಿಬಿಯಲ್ಲಿ ಗುಂಡಿತೋಡಿಸಿದ್ದ ಜಾಗದಲ್ಲಿ ಹೂತು ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. …

Read More »

ಅಭಿವೃದ್ಧಿಯೇ ನಮ್ಮ ಗುರಿ: ರಮೇಶ ಜಾರಕಿಹೊಳಿ

ಗೋಕಾಕ: ‘ಜನರಿಗೆ ಮೂಲ ಸೌಕರ್ಯ ಒದಗಿಸಲು ಸಂಕಲ್ಪ ತೊಟ್ಟಿದ್ದೇವೆ. ಅಭಿವೃದ್ಧಿಯೊಂದೇ ನಮ್ಮ ಮುಂದಿರುವ ಗುರಿ’ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ದುರದುಂಡಿ ಗ್ರಾಮದಲ್ಲಿ ಆರ್‌ಡಿಪಿಆರ್‌, ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ-3ರಡಿ ದುರದುಂಡಿ- ಬಡಿಗವಾಡ-ಮಲ್ಲಾಪೂರ ಪಿಜಿ ರಸ್ತೆ ಸುಧಾರಣೆ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಬಿಜೆಪಿಯು ಸಮಗ್ರ ಪ್ರಗತಿ ಬಯಸಿದ್ದು, ಇದರ …

Read More »

ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮೂಡಲಗಿ : ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸ್ಥಳೀಯ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟç ಹಾಗೂ ರಾಜ್ಯಮಟ್ಟದಲ್ಲಿ ಮೂಡಲಗಿ ವಲಯ ಮಿಂಚುವಲ್ಲಿ ಅಧಿಕಾರಿಗಳ ಶಿಕ್ಷಕರ ಕರ್ತವ್ಯ ನಿಷ್ಠೆಯಿಂದ ಮಾಡಿದ ಕಾರ್ಯ ಮೆಚ್ಚುವಂತಹದು. …

Read More »

ಕೋವಿಡ್-19 ದಿಂದ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಆಗುತ್ತಿಲ್ಲ.: ಅನಿಲ ಬೆನಕೆ

ಬೆಳಗಾವಿ:  ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಪಾಠವನ್ನಷ್ಟೇ ಮಾಡದೇ ಕೋವಿಡ್-19 ಸಂಕಷ್ಟ ಕಾಲದಲ್ಲಿಯೂ ಕೂಡಾ ಮುಂದೆ ಬಂದು ಕೆಲಸ ಮಾಡುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕ ಅನಿಲ ಬೆನಕೆ ಅವರು ಹೇಳಿದರು. ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ  ನಗರ ಸಂತ ಅಂಥೋನಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್-19 …

Read More »

ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು.

ಗೋಕಾಕ್: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ 73.44 ಲಕ್ಷ ರೂಪಾಯಿ ವೆಚ್ಚದಲ್ಲಿ ಬೆಟಗೇರಿ ಗ್ರಾಮದಿಂದ …

Read More »