Breaking News

ಬೆಳಗಾವಿ

  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್: ರಮೇಶ ಜಾರಕಿಹೊಳಿ

ಬೆಳಗಾವಿ:  ಕೊಲೆ, ದರೋಡೆಗೆ ಇಳಿದಿದ್ದ ಗೋಕಾಕ ನಗರದ ಟೈಗರ್  ಗ್ಯಾಂಗ್ ಪೊಲೀಸರು ಬಂಧಿಸಿದ್ದು, ಈ ವಿಚಾರವಾಗಿ  ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.  ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದಲ್ಲಿ ಅಕ್ರಮ ಚಟುವಟಿಕೆಯಲ್ಲಿ  ತೊಡಗಿದ್ದ ಗ್ಯಾಂಗ್ ನ್ನು ಪೊಲೀಸರು ಮಟ್ಟಹಾಕಿದ್ದಾರೆ.  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್ ಅಂತಾ ಸಚಿವ ರಮೇಶ ಜಾರಕಿಹೊಳಿ  ಲೇವಡಿ ಮಾಡಿದ್ದಾರೆ. ಡ್ರಗ್ಸ್ ವಿಚಾರವಾಗಿ ಪ್ರತಿಕ್ರಿಯಿಸಿ,   ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದವರ ಮೇಲೆ ಮುಲಾಜಿಲ್ಲದೇ   …

Read More »

ಡ್ರಗ್ಸ್‌ ದಂಧೆಗೆ ಕಡಿವಾಣ: ಆಗ್ರಹ

ಬೆಳಗಾವಿ: ‘ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್‌ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ‘ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದ್ದು, ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. …

Read More »

ಸಾಲ ಮರುಪಾವತಿಗೆ ಪೀಡಿಸಿದರೆ ಕೇಸ್: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ

ಬೆಳಗಾವಿ: ‘ಸಾಲಗಾರರಿಗೆ ಕಿರುಕುಳ ನೀಡುವ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಗುರುವಾರ ನಡೆದ ಹಣಕಾಸು ಸಂಸ್ಥೆಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೆಲ ಖಾಸಗಿ ಹಣಕಾಸು ಸಂಸ್ಥೆಗಳು ಮರ್ಧ್ಯವತಿಗಳನ್ನು ಬಳಸಿಕೊಂಡು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡುತ್ತಿರುವ ಮಾಹಿತಿ ಇದೆ. ಇದು ಮುಂದುವರಿಯಬಾರದು. ಒತ್ತಾಯದಿಂದ ಸಾಲ ಮರುಪಾವತಿ ಸೇರಿದಂತೆ ಇತರ ತೊಂದರೆ …

Read More »

ವ್ಯಕ್ತಿ ಬಂಧನ: 15 ದ್ವಿಚಕ್ರವಾಹನ ವಶಕ್ಕೆ

ಅಥಣಿ: ದ್ವಿಚಕ್ರ ವಾಹನಗಳ ಕಳವು ಆರೋಪದ ಮೇಲೆ ಇಲ್ಲಿನ ಪೊಲೀಸರು ವ್ಯಕ್ತಿಯೊಬ್ಬರನ್ನು ಗುರುವಾರ ಬಂಧಿಸಿದ್ದಾರೆ. ತಾಲ್ಲೂಕಿನ ಶಿರಹಟ್ಟಿಯ ರಮಜಾನ ಹುಸೇನಸಾಬ ಐನಾಪುರ (27) ಬಂಧಿತ. ‘ಜಿಲ್ಲೆ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ ₹ 5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ದ್ವಿಚಕ್ರವಾಹನಗಳ ಕಳವು ಪ್ರಕರಣ ಹೆಚ್ಚುತ್ತಿದ್ದುದ್ದರಿಂದ ಡಿಎಸ್‌ಪಿ ಎಸ್.ವಿ. …

Read More »

ಅಕ್ಕ ಮತ್ತು ತಮ್ಮ ಇಬ್ಬರೂ ಒಟ್ಟಿಗೆ ಆತ್ಮಹತ್ಯೆ………..

ಬೆಳಗಾವಿ- ಬೆಳಗಾವಿ ನಗರದ ಶಹಾಪೂರ ಪ್ರದೇಶದ ಆಚಾರಿಗಲ್ಲಿಯಲ್ಲಿ ವಯಸ್ಕರ ಅಕ್ಕ ಮತ್ತು ತಮ್ಮ ಇಬ್ಬರೂ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ದಿನದ ಹಿಂದೆ ಆಚಾರಿಗಲ್ಲಿಯ ಮನೆಯಲ್ಲಿ ಅಕ್ಕ ಮತ್ತು ತಮ್ಮ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಮನೆಯಿಂದ ದುರ್ವಾಸನೆ ಬಂದು,ಪ್ರಕರಣ ಇವತ್ತು ಬೆಳಕಿಗೆ ಬಂದಿದೆ. 61 ವರ್ಷ ವಯಸ್ಸಿನ ಯದುಕುಲೇಶ ನಾಯಿಕ,70 ವರ್ಷದ ಪಂಕಜಾ ರಾಮಚಂದ್ರ ನಾಯಿಕ,ಆತ್ಯಹತ್ಯೆ ಮಾಡಿಕೊಂಡಿದ್ದು,ಇಬ್ಬರೂ ಅವಿವಾಹಿತರಾಗಿದ್ದರು,ಮನೆಯಲ್ಲಿ ಬೇರೆ ಯಾರೂ ಇಲ್ಲದಿರುವದರಿಂದ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ …

Read More »

ಬೆಳಗಾವಿ ಸೂಪರ್ ಕಾಪ್ ಮಾರ್ಕೆಟ್ ಸ್ಟೇಷನ್ ಇಂದ ವರ್ಗಾವಣೆ………

ಬೆಳಗಾವಿ- ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆಯಾಗಿದ್ದು ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ಮಾರ್ಕೆಟ್ ಎಸಿಪಿಯಾಗಿ ಸದಾಶಿವ ಕಟ್ಟೀಮನಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇಂದು ನಾರಾಯಣ ಭರಮಣಿ ಅವರು ಸದಾಶಿವ ಕಟ್ಟೀಮನಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು ನಾರಾಯಣ ಭರಮಣಿ ಅವರನ್ನು ಸರ್ಕಾರ ಖಾನಾಪೂರ ತರಬೇತಿ ಶಾಲೆಗೆ ವರ್ಗಾವಣೆ ಮಾಡಿದೆ. ಮಾರ್ಕೆಟ್ ಎಸಿಪಿಯಾಗಿ ನಾರಾಯಣ ಭರಮಣಿ ಅವರು ಬೆಳಗಾವಿ ಮಹಾನಗರದಲ್ಲಿ ಕಾನೂನು ಸುವ್ಯೆವಸ್ಥೆ ಕಾಪಾಡುವಲ್ಲಿ ಪ್ರಮುಖ …

Read More »

ಕನ್ನಡ, ಮರಾಠಿ ಎರಡೂ ಭಾಷೆಯಲ್ಲಿ ಇರುವ ನಾಮಫಲಕ ಅಳವಡಿಕೆ ಮಾಡಿದ ಅವರು,ರಾಯಣ್ಣ, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸೌಹಾರ್ದತೆಯ ಸಂದೇಶ

ಬೆಳಗಾವಿ- ಜಿಲ್ಲಾಡಳಿದ ರಾಜಿ ಸಂಧಾನದ ಒಪ್ಪಂದದಂತೆ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಇಂದು ಪೀರನವಾಡಿ ಜಂಕ್ಷನ್ ನಲ್ಲಿ ಛತ್ರಪತಿ ಶಿವಾಜಿ ಸರ್ಕಲ್ ಎಂದು ಕನ್ನಡ,ಮರಾಠಿ ಎರಡೂ ಭಾಷೆಯಲ್ಲಿರುವ ಫಲಕವನ್ನು ಅನಾವರಣಗೊಳಿಸಿದರು. ಇಂದು ಬೆಳಿಗ್ಗೆಯೇ ಜಮಾಯಿಸಿದ ನೂರಾರು ಶಿವಾಜಿ ಅಭಿಮಾನಿಗಳು,ಪಟಾಕಿ ಸಿಡಿಸಿ,ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ,ಹಾಗೂ ಶಿವಾಜಿ ಮಹಾರಾಜರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಫಲಕವನ್ನು ಅನಾವರಣ ಮಾಡಿದ್ರು ಪೀರನವಾಡಿ ನಾಕಾ ಬಳಿ ‘ಶಿವಾಜಿ ಚೌಕ್’ ಅಂತಾ ನಾಮಫಲಕ ಅನಾವರಣ ಮಾಡಲಾಯಿತು,9 X …

Read More »

ಬೆಳೆ-ಮನೆ ಹಾನಿ ಪ್ರಾಮಾಣಿಕ ಸರ್ವೇಗೆ ಸೂಚನೆ

ರಾಮದುರ್ಗ: ಪ್ರವಾಹದಿಂದಾಗಿ ಹಾನಿಗೊಳಗಾದ ಬೆಳೆ ಹಾಗೂ ಮನೆಗಳ ಸರ್ವೇ ಕಾರ್ಯವನ್ನು ಜಂಟಿಯಾಗಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಮಾಡಬೇಕು. ಏನಾದರೂ ಲೋಪದೋಷ ಎಸಗಿದಲ್ಲಿ ಅಂತವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಅಧಿಕಾರಿಗಳಿಗೆ ಖಡಕ ಸೂಚನೆ ನೀಡಿದರು. ಸ್ಥಳೀಯ ತಾಪಂ ಸಭಾಭವನದಲ್ಲಿ ಮಂಗಳವಾರ ಪ್ರವಾಹಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಬಾರಿ ತಪ್ಪು ನಡೆಯಬಾರದು. ಆ ಸಂದರ್ಭದಲ್ಲಿ ಮಾಡಿದ ತಪ್ಪು ಇನ್ನೂವರೆಗೂ ಬಗೆಹರಿಯುತ್ತಿಲ್ಲ. ನೋಡಲ್‌ …

Read More »

ಸಿದ್ದಪ್ಪ ಕನಮಡ್ಡಿ ಕೊಲೆ ಪ್ರಕರಣ: ₹ 30.48 ಲಕ್ಷ, ಮಾರಕಾಸ್ತ್ರ ವಶ

ಗೋಕಾಕ: ಇಲ್ಲಿ ಮೇ 6ರಂದು ನಡೆದಿದ್ದ ಯುವ ಮುಖಂಡ, ಆದಿಜಾಂಬವ ನಗರ ಬಡಾವಣೆಯ ನಿವಾಸಿ ಸಿದ್ದಪ್ಪ ಅರ್ಜುನ ಕನಮಡ್ಡಿ ಕೊಲೆ ಪ್ರಕರಣದ ತನಿಖೆ ವೇಳೆ ಆರೋಪಿಗಳು ಮತ್ತು ಅವರ ಸಹಚರರ ಮನೆಗಳ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿದ ಪೊಲೀಸರು, ₹ 30.48 ಲಕ್ಷ ನಗದು, ಮಾರಕಾಸ್ತ್ರ ಹಾಗೂ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.     ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕರಣದ ಮಾಹಿತಿ ನೀಡಿದರು. ‘ಇಲ್ಲಿನ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ  ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿದ್ದಪ್ಪ  ಓ. ಹಲಸಗಿ (53)  ನಿಧನ

ಬೆಳಗಾವಿ – ಕೊರೋನಾದಿಂದಾಗಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ  ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿದ್ದಪ್ಪ  ಓ. ಹಲಸಗಿ (53)  ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೂ ಸೋಂಕು ತಗುಲಿರುವುದಾಗಿ ಗೊತ್ತಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಕುರಿತು ಪ್ರಗತಿವಾಹಿನಿ ಈ ಹಿಂದೆಯೇ ವರದಿ ಪ್ರಕಟಿಸಿತ್ತು. ಹಲವು ದಶಕಗಳ ಸುದೀರ್ಘ ಶೈಕ್ಷಣಿಕ ಜೀವನದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ …

Read More »