ಬೆಳಗಾವಿ: ನಗರದ ಸುತ್ತಮುತ್ತಲಿರುವ ವಿವಿಧ 28 ಹಳ್ಳಿಗಳನ್ನು ವ್ಯಾಪ್ತಿಗೆ ಸೇರಿಸುವಂತೆ ಇಲ್ಲಿನ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದಿಂದ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಇದಕ್ಕೆ ಅನುಮೋದನೆ ದೊರೆತಲ್ಲಿ ಪ್ರಾಧಿಕಾರದ ವ್ಯಾಪ್ತಿ ಹಿಗ್ಗಲಿದೆ. ಒಂದೆಡೆ ಸಾಂಬ್ರಾವರೆಗೆ, ಇನ್ನೊಂದೆಡೆ ಯಳ್ಳೂರು, ನಾವಗೆ, ಕಲ್ಲೇಹೊಳ ಹಾಗೂ ಕಡೋಲಿಯವರೆಗೆ ಪ್ರಾಧಿಕಾರದ ವ್ಯಾಪ್ತಿಯು ವಿಸ್ತರಣೆಗೊಳ್ಳಲಿದೆ. ಈ ಮೂಲಕ ಹೆಚ್ಚು ಹೆಚ್ಚು ಬಡಾವಣೆಗಳನ್ನು ಅಭಿವೃದ್ಧಿಪಡಿಸುವುದಕ್ಕೆ ಯೋಜಿಸಲಾಗಿದೆ. ಪ್ರಸ್ತುತ ಪ್ರಾಧಿಕಾರವು ಕಾಕತಿ ಭಾಗಶಃ, ಕಂಗ್ರಾಳಿ ಬಿ.ಕೆ. ಮತ್ತು ಕಂಗ್ರಾಳಿ ಕೆ.ಎಚ್., ಸಾಂವಗಾಂವ, ಮಂಡೋಳ್ಳಿ ಹಾಗೂ …
Read More »ವಿಪತ್ತು ನಿರ್ವಹಣೆ: ಸ್ವಯಂ ಸೇವಕರಿಗೆ ತರಬೇತಿ
ಅಥಣಿ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಇಲ್ಲಿನ ಶಾಖೆಯಿಂದ ವಿಪತ್ತು ನಿರ್ವಹಣೆ ಕುರಿತು ತಾಲ್ಲೂಕಿನ ಮುರುಗುಂಡಿ ಮುರಸಿದ್ದೇಶ್ವರ ದೇವಾಲಯದಲ್ಲಿ ಸ್ವಯಂ ಸೇವಕರಿಗೆ ತರಬೇತಿ ಶಿಬಿರ ನಡೆಸಲಾಯಿತು. ತಹಶೀಲ್ದಾರ್ ದುಂಡಪ್ಪ ಕೋಮಾರ ಉದ್ಘಾಟಿಸಿ ಮಾತನಾಡಿ, ‘ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಸ್ವಯಂಸೇವಕರ ಮೂಲಕ ಕೈ ಜೋಡಿಸಿದರೆ ವಿಪತ್ತನ್ನು ಸುಲಭವಾಗಿ ನಿರ್ವಹಿಸಬಹುದು’ ಎಂದರು. ‘ತಾಲ್ಲೂಕಿನಲ್ಲಿ ಪ್ರತಿ ವರ್ಷ ನೆರೆ ಹಾವಳಿ ಕಾಡುತ್ತಿರುತ್ತದೆ. ಆಗ ಎನ್ಡಿಆರ್ಎಫ್, ಪೊಲೀಸರು, ಸೈನ್ಯದವರು ಬಂದು ತಲುಪವರಿಗೆ ಸಾಕಷ್ಟು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಮಹಾಪೂರ …
Read More »ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡಲು ಕನ್ನಡಪರ ಹೋರಾಟಗಾರರ ಆಗ್ರಹ
ಬೆಳಗಾವಿ : ಹುಬ್ಬಳ್ಳಿ ರೈಲು ನಿಲ್ದಾಣ ಇನ್ನೂ ಮುಂದೆ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣವಾಗಲಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣವೆಂದು ನಾಮಕರಣ ಮಾಡಲು ಅನುಮೋದನೆ ನೀಡಿದೆ. ಈ ಬೆನ್ನಲ್ಲೇ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ ಎಂದು ಹೆಸರಿಡಬೇಕು. ಜೊತೆಗೆ ರೈಲು ನಿಲ್ದಾಣಕ್ಕೆ ಬೆಳವಡಿ ರಾಣಿ ಮಲ್ಲಮ್ಮ ಹೆಸರು ಇಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. …
Read More »ಬೀದಿ ನಾಟಕ ಕಲಾವಿದರು ಯಾವುದೆ ಕಾಯ೯ಕ್ರಮಗಳು ಇಲ್ಲದೆ ಪರದಾಡುವ ಪರಿಸ್ಥಿತಿ
ಬೆಳಗಾವಿ : ಕನಾ೯ಟಕ ರಾಜ್ಯ ಬೀದಿ ನಾಟಕ ಕಲಾವಿದರ ಒಕ್ಕೂಟ ಬೆಳಗಾವಿ ಘಟಕದಿಂದ ಕಳೆದ ಆರು ತಿಂಗಳಿಂದ ಬೀದಿ ನಾಟಕ ಕಲಾವಿದರು ಯಾವುದೆ ಕಾಯ೯ಕ್ರಮಗಳು ಇಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದ್ದು . ಬೀದಿ ನಾಟಕ ಕಲಾವಿದರು ಎಲ್ಲ ಇಲಾಖೆಗಳ ಯೋಜನೆಗಳನ್ನು ಜನಸಾಮಾನ್ಯರಿಗೆ ಬೀದಿ ನಾಟಕದ ಮೂಲಕ ತಿಳುವಳಿಕೆ ಕೊಟ್ಟು ಸಕಾ೯ರ ಮತ್ತು ಇಲಾಖೆಯ ನಡುವೀನ ಕೊಂಡಿಗಳಂತ್ತೆ ಕೆಲಸವನ್ನು ಕಳೆದ ಸುಮಾರು 40 ಕ್ಕೂ ಹೆಚ್ಚು ವಷ೯ಗಳಿಂದ ಕಾಯ೯ಕ್ರಮಗಳನ್ನು ಮಾಡಿಕೊಂಡು …
Read More »ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (16-09-2020-ಬುಧವಾರ)
ಗುರುವಿನ ಸ್ಥಾನ ಅತ್ಯಂತ ಮಹತ್ವವೂ, ಜವಾಬ್ದಾರಿಯುತವೂ, ಕ್ಲಿಷ್ಟವೂ, ಜಟಿಲವೂ ಆದುದು. ಸಮಾಜ ಗುರುವಿನಿಂದ ಬಹಳಷ್ಟು ನಿರೀಕ್ಷಿಸುತ್ತದೆ. ಗುರು ದಾರಿ ತಪ್ಪಿದರೆ ಸಮಾಜ ನಾಶದತ್ತ ಸಾಗಿದಂತೆ. # ಪಂಚಾಂಗ : ಬುಧವಾರ, 16.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ರಾ.05.51 / ಚಂದ್ರ ಅಸ್ತ ಸಂ.05.44 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ …
Read More »ಜೇವರ್ಗಿ ಸಂಕೇಶ್ವರ ರಾಜ್ಯ ಹೆದ್ದಾರಿ ಸಂcಪೂರ್ಣ ಹಾಳಾಗಿದ್ದು: ವಾಹನ ಸವಾರರು ಆಕ್ರೋಶ.
ಅಥಣಿ: ಅಥಣಿ ಪಟ್ಟಣದಿಂದ ಐಗಳಿ ಕ್ರಾಸ್ ವರೆಗೆ ವಿಜಯಪುರ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು ಹೋಗಿದ್ದು ರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಥಣಿ ಇಂದ ವಿಜಯಪುರ ಅಂತಾರಾಜ್ಯ ರಸ್ತೆ ಸಂಚಾರಕ್ಕೆ ಅಪಾಯ ಮಟ್ಟಕ್ಕೆ ಹೋಗಿದ್ದು ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಂಚರಿಸುವ ಸ್ಥಿತಿ ಏರ್ಪಟ್ಟಿದೆ. ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಿಂದ ಪಕ್ಕದ ಮಹಾರಾಷ್ಟ್ರ, ಹಾಗೂ ತೆಲಂಗಾಣ ರಾಜ್ಯಕ್ಕೆ ಅಥಣಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ …
Read More »ಎಸ್ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?: ಕಾಂಗ್ರೆಸ್ಗೆ ಬಿ.ಸಿ.ಪಾಟೀಲ ಪ್ರಶ್ನೆ
ಬೆಳಗಾವಿ: ‘ಎಸ್ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?’ ‘ಆರ್ಎಸ್ಎಸ್ ರೀತಿ ನಮ್ಮ ಶತ್ರುಗಳನ್ನೂ ತಯಾರಿಸುವುದಿಲ್ಲ’ ಎಂಬ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದ್ದು ಹೀಗೆ. ‘ಬೆಂಗಳೂರಿನ ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ಗಲಾಟೆ ಮಾಡಿದವರ್ಯಾರು? ಶತ್ರುಗಳನ್ನು ತಯಾರಿಸುತ್ತಿರುವವರು ಅವರೇ. ದೇಶದ್ರೋಹಿಗಳು ಅವರಲ್ಲೇ ಜಾಸ್ತಿ ಜನ ಇದ್ದಾರೆ. ಕೋಮು ಗಲಭೆಗೆ ಪ್ರಚೋದಿಸುತ್ತಾರೆ’ ಎಂದು ದೂರಿದರು. ‘ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಗ್ಗೆ ಪ್ರಶ್ನಿಸುವ ಯೋಗ್ಯತೆ ಕಾಂಗ್ರೆಸ್ನವರಿಗೆ …
Read More »ವಿದ್ಯಾರ್ಥಿಗಳಿಗೆ ‘ಜಿತೋ ನೆರವು
ಬೆಳಗಾವಿ: ಜಿತೋ (ಜೈನ ಅಂತರರಾಷ್ಟ್ರೀಯ ವ್ಯಾಪಾರ ಸಂಸ್ಥೆ) ಬೆಳಗಾವಿ ವಿಭಾಗದಿಂದ ಜೈನ ಸಮಾಜದ ಪ್ರತಿಭಾವಂತ ಬಡ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಭಾನುವಾರ ಆರ್ಥಿಕ ನೆರವು ನೀಡಲಾಯಿತು. ‘7 ವರ್ಷಗಳಿಂದಲೂ, ಎಸ್ಸೆಸ್ಸೆಲ್ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ನೀಡುತ್ತಿದ್ದೇವೆ. ಪ್ರಸಕ್ತ ಸಾಲಿನಲ್ಲಿ 385 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ತಲಾ ₹ 5ಸಾವಿರ ವಿತರಿಸಲಾಗಿದೆ’ ಎಂದು ಆಯೋಜಕರು ತಿಳಿಸಿದ್ದಾರೆ. ಮುಖಂಡರಾದ ಶಾಂತಿಲಾಲ ಪೋರವಾಲ, …
Read More »ಜಿಐಟಿ ಎಂಬಿಎ ವಿಭಾಗದ ವಾರ್ಷಿಕೋತ್ಸವ
ಬೆಳಗಾವಿ: ಇಲ್ಲಿನ ಕೆಎಲ್ಎಸ್ ಗೋಗಟೆ ತಾಂತ್ರಿಕ ಕಾಲೇಜಿನ ಎಂಬಿಎ ವಿಭಾಗದಿಂದ ಆನ್ಲೈನ್ ಮೂಲಕ ವಾರ್ಷಿಕ ದಿನ ಆಚರಿಸಲಾಯಿತು. ಪ್ರಾಂಶುಪಾಲ ಡಾ.ಜಯಂತ್ ಕೆ. ಕಿತ್ತೂರ ಮಾತನಾಡಿ, ‘ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಸಮಾಜಕ್ಕೆ ನಿಷ್ಠರಾಗಿರಬೇಕು. ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ನಡುವಿನ ಸಂಬಂಧವು ದೀರ್ಘಕಾಲದ್ದಾಗಿರುತ್ತದೆ. ಯಾವುದೇ ಶಿಕ್ಷಣ ಸಂಸ್ಥೆಗೆ ಅವರೇ ನಿಜವಾದ ಬ್ರಾಂಡ್ ಅಂಬಾಸಿಡರ್ಗಳಾಗಿರುತ್ತಾರೆ’ ಎಂದರು. ಪ್ರಾಂಶುಪಾಲ ಡಾ.ಜಯಂತ್ ಕೆ. ಕಿತ್ತೂರ ಅಧ್ಯಕ್ಷತೆ ವಹಿಸಿದ್ದರು. ಎಂಬಿಎ ವಿಭಾಗದ ಡೀನ್ ಡಾ.ಕೃಷ್ಣ ಶೇಖರ್ ಲಾಲ್ದಾಸ್ ವಾರ್ಷಿಕ …
Read More »ನಾಳೆ ಸಚಿವರು ರಮೇಶ ಜಾರಕಿಹೊಳಿ ದೆಹಲಿಗೆ: ಸಂಪುಟ ವಿಸ್ತರಣೆ ಚರ್ಚೆಯ ನಡುವೆ ಗರಿಗೆದರಿದ ಕುತೂಹಲ
ರಾಜ್ಯ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮತ್ತೆ ಹೊಸದೆಹಲಿಗೆ ಹೊರಟಿದ್ದಾರೆ. ಕಳೆದ ಒಂದೂವರೆ ತಿಂಗಳಲ್ಲಿ ಸಚಿವರು ಮೂರನೇ ಬಾರಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಕೆರಳಿಸಿದೆ. ಜಲಸಂಪನ್ಮೂಲ ಸಚಿವಾಲಯದ ಮಾಹಿತಿಯಂತೆ ಸಚಿವ ರಮೇಶ ಜಾರಕಿಹೊಳಿ ಬುಧವಾರ ದೆಹಲಿಗೆ ತೆರಳುವರು. ಅಂದು ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸುವರು. ದೆಹಲಿಯಲ್ಲಿ ಶುಕ್ರವಾರದವರೆಗೂ ಜಾರಕಿಹೊಳಿ ವಾಸ್ತವ್ಯ ಕಾರ್ಯಕ್ರಮ ನಿಗದಿಯಾಗಿದೆ. ಸಚಿವ ರಮೇಶ ಜಾರಕಿಹೊಳಿ …
Read More »
Laxmi News 24×7