Breaking News

ಬೆಳಗಾವಿ

ಘಟಪ್ರಭಾ, ಮಲಪ್ರಭಾ ಜಲಾಶಯಗಳ ಹೊರಹರಿವು ಇಳಿಕೆ

ಬೆಳಗಾವಿ: ಜಿಲ್ಲೆಯಂತೆ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲೂ ಶುಕ್ರವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಅಲ್ಲಿಂದ ಕೃಷ್ಣಾ ನದಿಗೆ ಹರಿದು ಬರುತ್ತಿದ್ದ ಒಳಹರಿವು ತೀವ್ರ ಗತಿಯಲ್ಲಿ ಕಡಿಮೆಯಾಗಿದೆ. 1.73 ಲಕ್ಷ ಕ್ಯುಸೆಕ್‌ ನೀರು ಹರಿದು ಬಂದಿದ್ದು, ಹಿಂದಿನ ದಿನಕ್ಕೆ ಹೋಲಿಸಿದರೆ 25 ಸಾವಿರ ಕ್ಯುಸೆಕ್‌ ಕಡಿಮೆಯಾಗಿದೆ. ಇದೇ ರೀತಿ, ಘಟಪ್ರಭಾ ಹರಿವು ಕೂಡ ಕಡಿಮೆಯಾಗಿದೆ. 19,775 ಕ್ಯುಸೆಕ್‌ ಒಳಹರಿವು ಇದೆ. ಹಿಂದಿನ ದಿನ 31,627 ಕ್ಯುಸೆಕ್‌ ಇತ್ತು. ಹಿಡಕಲ್‌ ಬಳಿಯ ಜಲಾಶಯದಿಂದ ಹೊರಬಿಡುವ ನೀರಿನ …

Read More »

ಡ್ಯಾಂಗಳಿಂದ ಕೃಷ್ಣೆಗೆ ಹರಿದುಬಂತು ಅಪಾರ ನೀರು

ಬೆಳಗಾವಿ : ರಾಜ್ಯದಲ್ಲಿ ಮಳೆ ಇಳಿಮುಖವಾದ ಬೆನ್ನಲ್ಲೇ ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲೂ ಮಳೆ ಸಂಪೂರ್ಣ ತಗ್ಗಿರುವುದರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಎದುರುಸುತ್ತಿರುವ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಪಾತ್ರದ ನಿವಾಸಿಗಳು ನಿರಾಳವಾಗಿದ್ದಾರೆ. ಆದರೆ ಮಹಾರಾಷ್ಟ್ರದ ಜಲಾಶಯಗಳಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಹರಿದು ಬರುವ ನೀರಿನ ಪ್ರಮಾಣ 2.17 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿರುವುದರಿಂದ ನದಿ ಅಪಾಯದ ಮಟ್ಟದಲ್ಲೇ ಹರಿಯುತ್ತಿದೆ. ಇದೇ ವೇಳೆ ತುಂಗಭದ್ರಾ ಮತ್ತು ಮಲಪ್ರಭಾ ಜಲಾನಯನ ಪ್ರದೇಶದಲ್ಲೂ ಮಳೆ …

Read More »

ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಸಾವು, ಸೋಂಕು ವರದಿ : ಗುರುವಾರದ ರಿಪೋರ್ಟ್ ಎಷ್ಟು..?

ಬೆಂಗಳೂರು : ರಾಜ್ಯದಲ್ಲಿ ಗುರುವಾರ 7,385 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಂದೂವರೆ ತಿಂಗಳ ಮಗು ಸೇರಿ 102 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದೇ ದಿನ 6231 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ 2.56 ಲಕ್ಷಕ್ಕೆ ಏರಿಕೆಯಾಗಿದ್ದರೆ, ಮೃತಪಟ್ಟವರ ಸಂಖ್ಯೆ ನಾಲ್ಕೂವರೆ ಸಾವಿರ ಗಡಿ (4,429) (ಆತ್ಮಹತ್ಯೆ ಸೇರಿದಂತೆ 16 ಅನ್ಯ ಕಾರಣದ ಸಾವು ಪ್ರಕರಣ ಹೊರತುಪಡಿಸಿ) ತಲುಪಿದೆ. ಇದರ ನಡುವೆ …

Read More »

ಶುದ್ಧ ಜೇಡಿ ಮಣ್ಣಿನಿಂದ ಮಾಡಿದ ಗೌರೀ ಗಣಪತಿಯ ಪ್ರತಿಮೆಗಳನ್ನು ತೆಗೆದುಕೊಂಡು ಬನ್ನಿ.

ನೀವು ಪ್ಲಾಸ್ಟಿಕ್ ನಿಂದ, ಜಿಪ್ಸಮ್ (Plaster of Paris) ನಿಂದ, ಅಥವಾ ಬೇರೆ ಯಾವುದೋ ಕೆಮಿಕಲ್ಲಿನಿಂದ ಮಾಡಿದ ಗಣಪತಿಯನ್ನು ಪೂಜೆ ಮಾಡುವುದಾದರೆ, ಮಾಡುವದೇ ಬೇಡ. ಪರಿಸರ ರಕ್ಷಣೆ ಮಾಡಿದ ಮಹಾಪುಣ್ಯ ಬರುತ್ತದೆ ನಿಮಗೆ, ಆ ರೀತಿಯ ವಿಕಾರದ ಗಣಪತಿಗಳನ್ನು ಪೂಜೆ ಮಾಡದೇ ಇದ್ದರೆ. ಮುಂದಿನ ಜನಾಂಗಕ್ಕೆ ಉಸಿರು ಹಸಿರನ್ನು ಉಳಿಸಿಕೊಡುವದು ಸಾಮಾನ್ಯ ಪುಣ್ಯದ ಮಾತೇ? ಖಂಡಿತ ಅಲ್ಲ. ಹೀಗಾಗಿ ನೀವು ವಿಕೃತ ಗಣಪತಿಯ ಪೂಜೆ ಮಾಡುವದನ್ನು ಬಿಡುವುದರಿಂದ ದೊಡ್ಡ ಸಮಾಜಸೇವೆಯನ್ನು …

Read More »

ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಬೆಳಗಾವಿ:  ಕೋವಿಡ್ ನಿರ್ವಹಣೆಯಲ್ಲಿ ವಿಫಲ   ಸೇರಿದಂತೆ ರೈತರಿಗೆ ಹಾಗೂ ಕೃಷಿ ಕೂಲಿಕಾರರಿಗೆ ಮಾರಕವಾಗಿರುವ ಭೂ ಸುಧಾರಣಾ, ಎಪಿಎಂಸಿ,  ಕಾರ್ಮಿಕ  ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಗುರುವಾರ  ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ …

Read More »

ಸಂಗೊಳ್ಳಿ ರಾಯಣ್ಣ ಸೊಸೈಟಿ ಬಹುಕೋಟಿ ವಂಚನೆಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿರುವ ತನಿಖಾಧಿಕಾರಿಗಳು

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಸೊಸೈಟಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಐಡಿ ಡಿವೈಎಸ್​ಪಿ ಕೆ.ಪುರುಷೋತ್ತಮ ನೇತೃತ್ವದ ತಂಡ ಸುಮಾರು 2,063 ಪುಟಗಳ ದೋಷಾರೋಪ ಪಟ್ಟಿಯನ್ನು ಬೆಳಗಾವಿ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಚಲನಚಿತ್ರ ನಿರ್ದೇಶಕ ಆನಂದ ಅಪ್ಪುಗೋಳ್ ನೇತೃತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ 35 ಶಾಖೆಗಳನ್ನು ಹೊಂದಿದ್ದು, 26 ಸಾವಿರ ಗ್ರಾಹಕರಿಂದ ₹281.14 …

Read More »

ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿ

ಗೋಕಾಕ: ಕಳೆದ ಎರಡು ದಿನಗಳಿಂದ‌ ಮಳೆ‌ ಪ್ರಮಾಣದಲ್ಲಿ ಕಡಿತವಾಗಿರುವದರಿಂದ‌ ಘಟಪ್ರಭಾ ನದಿಯ ನೀರಿನ‌ ಮಟ್ಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸೋಮವಾರದಿಂದ ಬಂದ್ ಆಗಿದ್ದ ಲೋಳಸುರ ಸೇತುವೆ ಈಗ ಮುಕ್ತವಾಗಿದೆ. ಆದ್ರೆ ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದ್ದು ಜನರು ಸಂಚರಿಸುತ್ತಿದ್ದಾರೆ. ಗೋಕಾಕ ನಗರಕ್ಕೆ ಮಹಾರಾಷ್ಟ್ರ ಮತ್ತು ವಿಜಯಪುರಕ್ಕೆ ರಸ್ತೆ ಕಲ್ಪಿಸುವ ಲೋಳಸುರ ಸೇತುವೆ ಬಂದ್ ಆಗಿದ್ದರಿಂದ ನಿತ್ಯ ಸಂಚರಿಸುವ ಜನರು ಪರದಾಡುವಂತಾಗಿತ್ತು. …

Read More »

ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ:

ಗೋಕಾಕ : ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದ್ದಾರೆ. …

Read More »

ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?

ಬೆಳಗಾವಿ: ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್‌ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್‌, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್‌ ಸಚಿವ ಸ್ಥಾನಕ್ಕೆ ಲಾಬಿಗೆ …

Read More »

ಘಟಪ್ರಭಾ ಅಟ್ಟಹಾಸದಿಂದ ಸಂಕಷ್ಟಕ್ಕೆ ಒಳಗಾದ ಬಾಣಂತಿ, ಗರ್ಭಿಣಿ!

ಬೆಳಗಾವಿ: ಘಟಪ್ರಭಾ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಜನ ತಮ್ಮ ಮನೆಗಳನ್ನು ಬಿಟ್ಟು ಪರಿಹಾರ ಕೇಂದ್ರಗಳಲ್ಲಿ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಳವಂಕಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ತಮ್ಮ ಪರಿಸ್ಥಿತಿ ನೆನೆದು ಬಾಣಂತಿ ಮತ್ತು ಗರ್ಭಿಣಿ ಕಣ್ಣೀರು ಹಾಕಿದ್ದಾರೆ. ಮೇಳವಂಕಿ ಗ್ರಾಮಕ್ಕೆ ಘಟಪ್ರಭಾ ನದಿ‌ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಮಗುವನ್ನ ಕರೆದುಕೊಂಡು ಬಾಣಂತಿ …

Read More »