ಗೋಕಾಕ : ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದ್ದಾರೆ. …
Read More »ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?
ಬೆಳಗಾವಿ: ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್ ಸಚಿವ ಸ್ಥಾನಕ್ಕೆ ಲಾಬಿಗೆ …
Read More »ಘಟಪ್ರಭಾ ಅಟ್ಟಹಾಸದಿಂದ ಸಂಕಷ್ಟಕ್ಕೆ ಒಳಗಾದ ಬಾಣಂತಿ, ಗರ್ಭಿಣಿ!
ಬೆಳಗಾವಿ: ಘಟಪ್ರಭಾ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಜನ ತಮ್ಮ ಮನೆಗಳನ್ನು ಬಿಟ್ಟು ಪರಿಹಾರ ಕೇಂದ್ರಗಳಲ್ಲಿ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಳವಂಕಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ತಮ್ಮ ಪರಿಸ್ಥಿತಿ ನೆನೆದು ಬಾಣಂತಿ ಮತ್ತು ಗರ್ಭಿಣಿ ಕಣ್ಣೀರು ಹಾಕಿದ್ದಾರೆ. ಮೇಳವಂಕಿ ಗ್ರಾಮಕ್ಕೆ ಘಟಪ್ರಭಾ ನದಿ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಮಗುವನ್ನ ಕರೆದುಕೊಂಡು ಬಾಣಂತಿ …
Read More »ನೆರೆ ಹಾಗೂ ಅತಿವೃಷ್ಟಿಯ ಪರಿಣಾಮ, 43,300 ಹೆಕ್ಟೇರ್ ಬೆಳೆ ‘ಆಹುತಿ’
ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಮಂಗಳವಾರದವರೆಗೆ 43,300 ಹೆಕ್ಟೇರ್ ಬೆಳೆಗಳು ಮುಳುಗಿವೆ. 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ, ದೂಧ್ಗಂಗಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ಮಲಪ್ರಭಾ ನದಿಗಳಲ್ಲಿ ಮಹಾಪೂರ ಉಂಟಾಗಿದೆ. ತೀರಕ್ಕೆ ಹೊಂದಿಕೊಂಡಿರುವ ಜಮೀನುಗಳಿಗೆ ನೀರು ವ್ಯಾಪಿಸಿದೆ. ಇದರೊಂದಿಗೆ ಬೆಳಗಾವಿ ತಾಲ್ಲೂಕಿನಲ್ಲಿ ಬಳ್ಳಾರಿ ನಾಲಾ ಪ್ರವಾಹವೂ ಉಂಟಾಗಿದೆ. ಇದರಿಂದಲೂ ಸಾವಿರಾರು ಎಕರೆ ವಿವಿಧ ಬೆಳೆಗಳು ಜಲಾವೃತವಾಗಿವೆ. ಅಲ್ಲಲ್ಲಿ ಮಳೆ ಹಾಗೂ ಪ್ರವಾಹದ ಪರಿಸ್ಥಿತಿ ಮುಂದುವರಿದಿದ್ದು, ಬೆಳೆಗಳ ಹಾನಿ …
Read More »ಬೆಳಗಾವಿ: 379 ಮಂದಿಗೆ ಕೋವಿಡ್ ದೃಢ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 379 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪುರುಷ. ಎಲ್ಲರೂ ಬೆಳಗಾವಿ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ. 267 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
Read More »ಗೋಕಾಕ್ನ ಉಪ್ಪಾರಗಲ್ಲಿ, ಹಳೆದನದಪೇಟೆ, ಕುಂಬಾರಗಲ್ಲಿ, ಮಟನ್ ಮಾರ್ಕೆಟ್ ಮತ್ತು ಮಹಾಲಿಂಗೇಶ್ವರ ನಗರ ಜಲಾವೃತ
ಬೆಂಗಳೂರು: ಮಳೆಯಬ್ಬರ ತಗ್ಗಿದ್ದು, ಉತ್ತರ ಕರ್ನಾಟಕದಲ್ಲೂ ಪ್ರವಾಹ ಇಳಿಮುಖವಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಕೇವಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಬರಬಹುದು. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ.ಕಳೆದ ಆರೇಳು ದಿನಗಳಿಂದ ಆಗುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಡ್ಯಾಂಗಳು ಬಹುತೇಕ …
Read More »ಕ್ಷೇತ್ರದಲ್ಲಿ ನಾಲ್ಕು ತಂಡಗಳನ್ನು ರಚಿಸುವ ಮೂಲಕ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಬಾಲಚಂದ್ರ ಜಾರಕಿಹೊಳಿ
ಗೋಕಾಕ : ಅರಭಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಮೇರೆಗೆ ಅವರ ಆಪ್ತ ಸಹಾಯಕರು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಮೂಲ ಸೌಕರ್ಯ ಒದಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನದಿ ದಡದ ಗ್ರಾಮಸ್ಥರಿಗೆ ಪ್ರವಾಹದ ಆಂತಕ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಲಹೆ ಮೇರೆಗೆ ಆಪ್ತ ಸಹಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಸೇರಿ ಕಾಳಜಿ ಕೇಂದ್ರದಲ್ಲಿ ಇರುವವ ಜನರಿಗೆ …
Read More »ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು. ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ ಮನೆ ಛಾವಣಿ ಕುಸಿದು ಬಿದ್ದು ಸದಲಗಾ ನಿವಾಸಿ ಕಲ್ಲಪ್ಪ ಪರಗೌಡ ನಿಧನರಾದರು. ಈ ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಲ್ಲದೆ, ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ತಕ್ಷಣವೇ ಸರಕಾರದಿಂದ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿಸಿ ಚೆಕ್ ಕೂಡ ವಿತರಿಸಿದರು. ಅಲ್ಲದೆ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸದಲಗಾ ಸಿಪಿಐ, ಪಿಎಸ್ಐ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.
ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು. ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ ಮನೆ ಛಾವಣಿ ಕುಸಿದು ಬಿದ್ದು ಸದಲಗಾ ನಿವಾಸಿ ಕಲ್ಲಪ್ಪ …
Read More »ಗೋಕಾಕ: ಇಲ್ಲಿನ ಪರಿಹಾರ ಕೇಂದ್ರದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡ ಮಹಿಳೆಯರು.
ಗೋಕಾಕ: ಇಲ್ಲಿನ ಪರಿಹಾರ ಕೇಂದ್ರದಲ್ಲಿ ಮಹಿಳೆಯರಿಬ್ಬರು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡಿದ್ದಾರೆ. ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ನದಿತೀರದ ಗ್ರಾಮಗಳ ಜನರನ್ನು ಜಿಲ್ಲಾಡಳಿತ ಮುನ್ನೆಚ್ಚೆರಿಕೆ ಕ್ರಮವಾಗಿ ಪರಿಹಾರ ಕೇಂದ್ರಕ್ಕೆ ಶಿಫ್ಟ್ ಮಾಡಿದೆ. ಆದ್ರೆ ಕಸ ಗುಡಿಸುವ ವಿಚಾರವಾಗಿ ಉಪ್ಪಾರಗಲ್ಲಿ – ಕುಂಬಾರಗಲ್ಲಿ ಮಹಿಳೆಯರ ಮಧ್ಯೆ ಗಲಾಟೆ ನಡೆದಿದೆ. ವಿಕೋಪಕ್ಕೆ ತಿರುಗಿ ಬಳಿಕ ಇಬ್ಬರು ಕೈಕೈ ಮಿಲಾಯಿಸುವಷ್ಟರ ಮಟ್ಟಿಗೆ ಜಗಳಾಡಿದ್ದಾರೆ. ಸ್ಥಳದಲ್ಲಿದ್ದ ಕಾಳಜಿ ಕೇಂದ್ರದ ನೋಡಲ್ ಅಧಿಕಾರಿ ಇಬ್ಬರನ್ನು ಸಮಾಧಾನಪಡಿಸಲು ಹರಸಾಹಸಪಟ್ಟಿದ್ದಾರೆ
Read More »ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣ 13 ಜನರ ವಿರುದ್ಧ ಚಾರ್ಜ್ ಶೀಟ್
ಬೆಳಗಾವಿ: ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 13 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಐಡಿ ಡಿವೈಎಸ್ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ಸುದೀರ್ಘ ತನಿಖೆ ನಡೆಸಿದ್ದು, ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆನಂದ ಅಪ್ಪುಗೋಳ ಸೇರಿ ಆಡಳಿತ ಮಂಡಳಿಯ 13 ಜನ ನಿರ್ದೇಶಕರು ಗ್ರಾಹಕರ ಠೇವಣಿಯನ್ನು …
Read More »