Breaking News

ಬೆಳಗಾವಿ

ಪತಿ ಕೊಂದು ಎಮ್ಮೆ ಸತ್ತಿದೆ ಅಂತ ಹೂತು ಹಾಕಿದ್ದ ಕೇಸ್; ನಾಲ್ವರು ಆರೋಪಿಗಳ ಬಂಧನ

ಚಿಕ್ಕೋಡಿ: ಪತಿಯನ್ನು ಕೊಂದು ಎಮ್ಮೆ ಸತ್ತಿದೆ ಅಂತಾ ಹೊಲದಲ್ಲಿ ಹೂತು ಹಾಕಿದ್ದ ಆರೋಪದ ಮೇಲೆ ಪತ್ನಿ ಸೇರಿದಂತೆ ಆಕೆಯ ಸಂಬಂಧಿಕರನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದಾರೆ. ಮೃತ ಸಚಿನ್ ಪತ್ನಿ ಅನಿತಾ, ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ್​(29), ಗಣೇಶ ರೇಡೇಕರ(21),ಬಂಧಿತ ಆರೋಪಿಗಳು. ಅನಿತಾ ತಮ್ಮ ಪತಿಯನ್ನು ಹತ್ಯೆ ಮಾಡಿ ಸಹೋದರ, ಸಹೋದರಿಯ ಸಹಾಯದಿಂದ ಹೊಲದಲ್ಲಿ ಜೆಸಿಬಿಯಲ್ಲಿ ಗುಂಡಿತೋಡಿಸಿದ್ದ ಜಾಗದಲ್ಲಿ ಹೂತು ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. …

Read More »

ಅಭಿವೃದ್ಧಿಯೇ ನಮ್ಮ ಗುರಿ: ರಮೇಶ ಜಾರಕಿಹೊಳಿ

ಗೋಕಾಕ: ‘ಜನರಿಗೆ ಮೂಲ ಸೌಕರ್ಯ ಒದಗಿಸಲು ಸಂಕಲ್ಪ ತೊಟ್ಟಿದ್ದೇವೆ. ಅಭಿವೃದ್ಧಿಯೊಂದೇ ನಮ್ಮ ಮುಂದಿರುವ ಗುರಿ’ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ದುರದುಂಡಿ ಗ್ರಾಮದಲ್ಲಿ ಆರ್‌ಡಿಪಿಆರ್‌, ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ-3ರಡಿ ದುರದುಂಡಿ- ಬಡಿಗವಾಡ-ಮಲ್ಲಾಪೂರ ಪಿಜಿ ರಸ್ತೆ ಸುಧಾರಣೆ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಬಿಜೆಪಿಯು ಸಮಗ್ರ ಪ್ರಗತಿ ಬಯಸಿದ್ದು, ಇದರ …

Read More »

ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮೂಡಲಗಿ : ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸ್ಥಳೀಯ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟç ಹಾಗೂ ರಾಜ್ಯಮಟ್ಟದಲ್ಲಿ ಮೂಡಲಗಿ ವಲಯ ಮಿಂಚುವಲ್ಲಿ ಅಧಿಕಾರಿಗಳ ಶಿಕ್ಷಕರ ಕರ್ತವ್ಯ ನಿಷ್ಠೆಯಿಂದ ಮಾಡಿದ ಕಾರ್ಯ ಮೆಚ್ಚುವಂತಹದು. …

Read More »

ಕೋವಿಡ್-19 ದಿಂದ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಆಗುತ್ತಿಲ್ಲ.: ಅನಿಲ ಬೆನಕೆ

ಬೆಳಗಾವಿ:  ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಪಾಠವನ್ನಷ್ಟೇ ಮಾಡದೇ ಕೋವಿಡ್-19 ಸಂಕಷ್ಟ ಕಾಲದಲ್ಲಿಯೂ ಕೂಡಾ ಮುಂದೆ ಬಂದು ಕೆಲಸ ಮಾಡುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕ ಅನಿಲ ಬೆನಕೆ ಅವರು ಹೇಳಿದರು. ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ  ನಗರ ಸಂತ ಅಂಥೋನಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್-19 …

Read More »

ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು.

ಗೋಕಾಕ್: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ 73.44 ಲಕ್ಷ ರೂಪಾಯಿ ವೆಚ್ಚದಲ್ಲಿ ಬೆಟಗೇರಿ ಗ್ರಾಮದಿಂದ …

Read More »

ಕೊಲೆ, ಸುಲಿಗೆ, ಅಕ್ರಮ ಚಟುವಟಿಕೆಗಳೇ ತುಂಬಿದ್ದ ಗ್ರಾಮದಲ್ಲಿ ಈಗ ಶಿಕ್ಷಣ ಕ್ರಾಂತಿ, ಯಾವೂರದು?

ಬೆಳಗಾವಿ : ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ದಾಸವಾಣಿ ಇದೆ.. ಈ ಮಾತು ನಿಜಕ್ಕೂ ಸತ್ಯ. ಜೀವನ ಅರ್ಥ ತಿಳಿಯಲು, ಗುರಿ ಸಾಧಿಸಲು ಗುರು ಬೇಕೆ ಬೇಕು. ಶಿಕ್ಷಕರು ಪ್ರತಿಯೊಬ್ಬರ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ. ಅಂತಹ ಶಿಕ್ಷಕರ ತವರು ಎಂದು ಈ ಗ್ರಾಮ ಖ್ಯಾತಿ ಪಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿರುವ ಈ ಇಂಚಲ ಗ್ರಾಮ ಶಿಕ್ಷಕರಿಂದಲೇ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಈ ಗ್ರಾಮದಲ್ಲಿ ಮನೆಗೆ ಒಬ್ಬರಂತೆ ಶಿಕ್ಷಕರಿದ್ದಾರೆ. …

Read More »

ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ.ಈ ಗ್ರಾಮದಲ್ಲಿ

ಬೆಳಗಾವಿ: ಹಿಂದುಳಿದ ತಾಲೂಕಿನಲ್ಲಿ ಅದೊಂದು ಕುಗ್ರಾಮ. ಶಿಕ್ಷಣದ ಬದಲು ಈ ಗ್ರಾಮದಲ್ಲಿ ಕೊಲೆ ಸುಲಿಗೆ, ಮಚ್ಚುಲಾಂಗು ಅಬ್ಬರ ಜಾಸ್ತಿಯಾಗಿತ್ತು. ಹೀಗಿದ್ದ ಗ್ರಾಮದಲ್ಲಿ ಇದೀಗ ಶಿಕ್ಷಣದ ಕಂಪು ಪಸರಿಸಿ ಮನಗೊಬ್ಬರಂತೆ ಶಿಕ್ಷಕರಿದ್ದಾರೆ. ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ. ಗ್ರಾಮವನ್ನ ಇದೀಗ ರಾಜ್ಯದಲ್ಲಿ ಶಿಕ್ಷಕರ ತವರೂರು ಎಂದೇ ಗುರುತಿಸಲಾಗುತ್ತಿದೆ.ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮ ಇದೀಗ ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಗ್ರಾಮ. ಈ ಗ್ರಾಮದಲ್ಲಿ ಮನಗೆ ಒಬ್ಬರಂತೆ ಶಿಕ್ಷರಿದ್ದಾರೆ ಅಂದ್ರೆ …

Read More »

ಹಾಳಾಗಿರುವ ಸೇತುವೆ ಹಾಗೂ ರಸ್ತೆಗಳ ಕಾಮಗಾರಿಸೆ‌.೨೨ರ ಒಳಗಾಗಿಆರಂಭಿಸಬೇಕು

ಬೆಳಗಾವಿ :ಮಳೆ ಮತ್ತು ಪ್ರವಾಹದಿಂದ ಹಾಳಾಗಿರುವ ಸೇತುವೆ ಹಾಗೂ ರಸ್ತೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರುಗಳ ಗಮನಕ್ಕೆ ತಂದು ಸೆ‌.೨೨ರ ಒಳಗಾಗಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ , ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಲಯ ಮಟ್ಟದ ಯೋಜನೆಗಳ ಬಗ್ಗೆ ಮತ್ತು ಪ್ರವಾಹ ಹಾನಿ ತಡೆಗಟ್ಟುವ ಕುರಿತು ತುರ್ತಾಗಿ ಕೈಗೊಳ್ಳಬೇಕಾದ …

Read More »

  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್: ರಮೇಶ ಜಾರಕಿಹೊಳಿ

ಬೆಳಗಾವಿ:  ಕೊಲೆ, ದರೋಡೆಗೆ ಇಳಿದಿದ್ದ ಗೋಕಾಕ ನಗರದ ಟೈಗರ್  ಗ್ಯಾಂಗ್ ಪೊಲೀಸರು ಬಂಧಿಸಿದ್ದು, ಈ ವಿಚಾರವಾಗಿ  ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.  ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದಲ್ಲಿ ಅಕ್ರಮ ಚಟುವಟಿಕೆಯಲ್ಲಿ  ತೊಡಗಿದ್ದ ಗ್ಯಾಂಗ್ ನ್ನು ಪೊಲೀಸರು ಮಟ್ಟಹಾಕಿದ್ದಾರೆ.  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್ ಅಂತಾ ಸಚಿವ ರಮೇಶ ಜಾರಕಿಹೊಳಿ  ಲೇವಡಿ ಮಾಡಿದ್ದಾರೆ. ಡ್ರಗ್ಸ್ ವಿಚಾರವಾಗಿ ಪ್ರತಿಕ್ರಿಯಿಸಿ,   ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದವರ ಮೇಲೆ ಮುಲಾಜಿಲ್ಲದೇ   …

Read More »

ಡ್ರಗ್ಸ್‌ ದಂಧೆಗೆ ಕಡಿವಾಣ: ಆಗ್ರಹ

ಬೆಳಗಾವಿ: ‘ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್‌ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ‘ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದ್ದು, ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. …

Read More »