Breaking News

ಬೆಳಗಾವಿ

ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.

ಬೆಳಗಾವಿ,): ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ(ಆ.11) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ ತರಬೇಕು. ಖಾಸಗಿ …

Read More »

70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ:ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ

ಬೆಳಗಾವಿ-ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ, ಈವರೆಗೂ 70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬಿಮ್ಸ್ ಆಸ್ಪತ್ರೆಯಲ್ಲಿ ಈವರೆಗೂ 70 ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಲಾಗಿದೆ. ಈ ಪೈಕಿ 34 ಸೀಜರಿನ್ ಹಾಗೂ 36 ನಾರ್ಮಲ್ ಡಿಲಿವರಿ ಆಗಿವೆ,ಎಂದು ದಾಸ್ತಿಕೊಪ್ಪ ಮಾಹಿತಿ ನೀಡಿದ್ದಾರೆ. ಹೆರಿಗೆಯಾದ 5 ಅಥವಾ 7ನೇ ದಿವಸಕ್ಕೆ ನವಜಾತ ಶಿಶುವಿನ ಸ್ವ್ಯಾಬ್ ಟೆಸ್ಟ್ …

Read More »

ಕಣಕುಂಬಿ ಅರಣ್ಯ ಪ್ರದೇಶದಲ್ಲಿರೈತನ ಮೇಲೆ ಕರಡಿಯೊಂದು ದಾಳಿ

ಬೆಳಗಾವಿ- ಖಾನಾಪೂರ ತಾಲ್ಲೂಕಿನ ಕಣಕುಂಬಿ ಅರಣ್ಯ ಪ್ರದೇಶದಲ್ಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದೆ. ಚಿಕಲೆ ಗ್ರಾಮದ 60 ವರ್ಷದ ಶಂಕರ ಗವಸ್ ಎಂಬ ರೈತ ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿ ಮಾಡಿ ಗಾಯಪಡಿಸಿದ್ದು ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎಂದು ಅರಣ್ಯ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.

Read More »

ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್

ಗೋಕಾಕ:  ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಮಾಡಲು  ನಿರ್ಧರಿಸಲಾಗಿದೆ ಎಂದು ನಗರಸಭೆ  ಕಮಿಷನರ್ ಶಿವನಂದ ಹಿರೇಮಠ್  ತಿಳಿಸಿದ್ದಾರೆ.  ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ  ಅಂಗಡಿ, ಮುಗ್ಗಟ್ಟು ಹಾಗೂ ವ್ಯಾಪಾರಸ್ತರೊಂದಿಗೆ ಮಂಗಳವಾರ  ನಡೆದ ಸಭೆಯಲ್ಲಿ ನಾಳೆಯಿಂದ  ಆ. 15(ರವಿವಾರ)ದವರೆಗೂ ಲಾಕ್ ಡೌನ್ ಮಾಡಲು ತೀರ್ಮಾನಿಸಲಾಗಿದೆ. ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ನಗರದಲ್ಲಿ ಸಾವಿನ ಸಂಖ್ಯೆ ಹೆಚ್ಚುತಲಿದೆ.  ಹೀಗಾಗಿ ಬಟ್ಟೆ ಅಂಗಡಿ, …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

ಚಿಕ್ಕೋಡಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದುಕೊಂಡು ನಮ್ಮ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡ ಅವಳ ಮುಂದಿನ ವಿದ್ಯಾಭ್ಯಾಸದ ಸಮಗ್ರ ಖರ್ಚು ವೆಚ್ಚವನ್ನು ಸಂಸ್ಥೆ ಭರಿಸಲಿದೆ ಎಂದು ಸಿಎಲ್‍ಇ ಸಂಸ್ಥೆ ಕಾರ್ಯದರ್ಶಿ ಜಗದೀಶ ಕವಟಗಿಮಠ ತಿಳಿಸಿದರು. ಇಲ್ಲಿನ ಸಿಎಲ್‍ಇ ಸಂಸ್ಥೆಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ರ್ಯಾಂಕ ಪಡೆದ ಎಂ.ಕೆ.ಕವಟಗಿಮಠ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡ …

Read More »

ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅಧಿಕಾರ

ಬೆಳಗಾವಿ : ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿ ಯಶೋಧಾ ವಂಟಗೋಡಿ ಲೋಕಾಯುಕ್ತ ಎಸ್ಪಿಯಾಗಿ ವರ್ಗಾವಣೆಯಾದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಚಂದ್ರಶೇಖರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಅವರು ಅಧಿಕಾರ ಸ್ವೀಕರಿಸಿಕೊಂಡರು.

Read More »

S.S.L.C.ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಗಳಿಬ್ಬರು ಆತ್ಮಹತ್ಯೆ

ಹಾವೇರಿ: ಎಸ್​​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆಯಷ್ಟೇ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ಫಲಿತಾಂಶ ಬಂದ ಬೆನ್ನಲ್ಲೇ ಕಡಿಮೆ ಅಂಕ ಬಂದಿದೆ ಹಾಗೂ ಅನುತ್ತೀರ್ಣನಾಗಿದ್ದೇನೆ ಎಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣಿತ ವಿಷಯದಲ್ಲಿ ಫೇಲಾದ ಕಾರಣಕ್ಕೆ ಹಾವೇರಿಯ ದ್ಯಾಮವ್ವನ ಗುಡಿ ಓಣಿಯಲ್ಲಿ ವೈಷ್ಣವಿ ರಿತ್ತಿ (16) ಮನೆಯಲ್ಲಿ ವಿಷ ಸೇವಿಸಿದ್ದಾಳೆ. …

Read More »

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯುವರಾಜ ಜಾಧವ ಅವರ ಸಹೋದರ ಬಾಳೆಕುಂದ್ರಿ ಕೆ.ಎಚ್.ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ ಜಾಧವ ವಿರುದ್ಧ ಕ್ರಿಮಿನಲ್ ಪ್ರಕರಣ

ಬೆಳಗಾವಿ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯುವರಾಜ ಜಾಧವ ಅವರ ಸಹೋದರ ಬಾಳೆಕುಂದ್ರಿ ಕೆ.ಎಚ್.ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ ಜಾಧವ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು,  ಅವರ ಸದಸ್ಯತ್ವ ರದ್ದುಪಡಿಸಬೇಕೆಂದು ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಪ್ರಶಾಂತ ಅವರು ವಿರುದ್ಧ 26,78,473 ರುಪಾಯಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ ನ್ಯಾಯಾಲಯ ವಿಚಾರಣೆ ನಡೆಸಿದೆ. ಅಲ್ಲದೆ ಅವರ ವಿರುದ್ಧ ಹಲವಾರು ಗಂಭೀರ ಆರೋಪಗಳ ಕೇಳಿ ಬಂದಿವೆ.  ಗ್ರಾಮ ಪಂಚಾಯಿತಿಯ ಕರವಸೂಲಾತಿಯಲ್ಲಿ …

Read More »

ಘಟಪ್ರಭಾ-ಮಣಗುತ್ತಿ ವಿವಾದ ಸೌಹಾರ್ದತೆ ಕಾಪಾಡುವಂತೆ ಪೋಲಿಸ್ ಕಮೀಶನರ್ ಗೆ ಕನ್ನಡ ಸೇನೆ ವತಿಯಿಂದ ಮನವಿ

ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮತ್ತು ಸ್ಥಳಾಂತರ ಪ್ರಕರಣವನ್ನು ಶಿವಸೇನೆ ಮತ್ತು ಹೊರಗಿನಿಂದ ಬಂದ ಇತರೆ ಸಂಘಟನೆಗಳು ವಿವಾದ ಸೃಷ್ಟಿ ಮಾಡಿ ಸೌಹಾರ್ದತೆ ಹಾಳು ಮಾಡಲು ಪ್ರಯತ್ನಿಸುತ್ತಿರುವ ಕಿಡಗೇಡಿಗಳನ್ನು ಕೂಡಲೇ ಅವರನ್ನು ಬಂದಿಸಬೇಕು. ಅದರಂತೆ ಅಲ್ಲಿಯ ಜನರಿಗೆ ಸೌಹಾರ್ದತೆಯಿಂದ ಬಾಳಲು ಅನುಮಾಡಿ ಕೊಡಬೇಕು ಎಂದು ಕನ್ನಡ ಸೇನೆ ಮತ್ತು ಕರವೇ ಸಂಘಟನೆ ವತಿಯಿಂದ ಪೋಲಿಸ್ ಕಮೀಶನರ್ ಮನವಿ ಸಲ್ಲಿಸಲಾಯಿತು. ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ …

Read More »

ಅಂಜಲಿ ನಿಂಬಾಳ್ಕರ್ ಮಾಡಿರುವ ಟ್ವಿಟ್ ವೊಂದು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. 

ಬೆಳಗಾವಿ:  ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ವಿಧಾನ ಸಭೆ ಮತಕ್ಷೇತ್ರದಲ್ಲಿ ಬರುವ ಮಣಗುತ್ತಿ ಗ್ರಾಮದಲ್ಲಿಯ ಶಿವಾಜಿ ಪ್ರತಿಮೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಮಾಡಿರುವ ಟ್ವಿಟ್ ವೊಂದು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.  ಮಣಗುತ್ತಿಯಲ್ಲಿಯ ಶಿವಾಜಿ ಪ್ರತಿಮೆಯನ್ನು ತೆರವು ಮಾಡಿದ್ದನ್ನು ಆಕ್ಷೇಪಿಸಿದ ಶಾಸಕಿ ನಿಂಬಾಳ್ಕರ್ ಅವರು, ಸಕಲ ಸರಕಾರಿ ಗೌರವದೊಂದಿಗೆ ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪಿಸಬೇಕು ಮತ್ತು ರಾಜ್ಯ ಸರ್ಕಾರ ಕ್ಷಮೆಯನ್ನು ಕೇಳಬೇಕು ಎಂದು  ಟ್ವೀಟ್ ಮೂಲಕ ಆಗ್ರಹಿಸಿದ್ದು ಕನ್ನಡಿಗರ …

Read More »