ಗೋಕಾಕ :ನಾಳೆ ಶುಕ್ರವಾರದಿಂದ ಕೊರೋನಾ ಸೋಂಕಿತರಿಗೆ ಗೋಕಾಕ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುವದು ಸರಕಾರ ಹಾಗೂ ಇಲಾಖೆಯ ನಿರ್ದೇಶನದಂತೆ ತಾಲೂಕಿನ ಕೊರೋನಾ ಸೋಂಕು ದೃಡಪಟ್ಟವರನ್ನು ಶುಕ್ರವಾರದಿಂದ ಸ್ಥಳೀಯ ಗೋಕಾಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವದು ಇದಕ್ಕಾಗಿ ಈಗಾಗಲೇ ಎಲ್ಲ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಆರೋಗ್ಯ ಸಿಬ್ಬಂದಿಗಳಿಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ. ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ 100 ಹಾಸಿಗೆ ಉಳ್ಳ ಸುಸಜ್ಜಿತ ಪ್ರತ್ಯೇಕ ವಾರ್ಡನ್ನು ಸಿದ್ದಗೊಳಿಸಲಾಗಿದ್ದು, …
Read More »ಗುಡಿ ಗಂಡಾರಗಳಲ್ಲಿ ದೇವರಿಲ್ಲ. ಈ ದೇಶವನ್ನು ಕಟ್ಟಿದ ಶ್ರಮಜೀವಿಗಳೇ ನಿಜವಾದ ದೇವರುಗಳು: ಆರ್.ಎಸ್.ದರ್ಗೆ
ಬೆಳಗಾವಿ: ಗುಡಿ ಗಂಡಾರಗಳಲ್ಲಿ ದೇವರಿಲ್ಲ. ಈ ದೇಶವನ್ನು ಕಟ್ಟಿದ ಶ್ರಮಜೀವಿಗಳೇ ನಿಜವಾದ ದೇವರುಗಳು ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಹೇಳಿದ್ದಾರೆ. ಬಸವ ಪಂಚಮಿಯ ಅಂಗವಾಗಿ ಬಸವ ಭೀಮ ಸೇನೆಯ ವತಿಯಿಂದ ಜುಲೈ 27 ರÀವರೆಗೆ ಹಮ್ಮಿಕೊಂಡಿರುವ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನದ ಅಂಗವಾಗಿ ಗುರುವಾರದಂದು ಅಲೆಮಾರಿ ಬುಡಕಟ್ಟು ಜನಾಂಗದ ಹೋರಾಟಗಾರ ಮಲ್ಲೇಶ ಹೆಳವರ ಅವರನ್ನು ಶ್ರೀನಗರದಲ್ಲಿಯ ಅವರ ನಿವಾಸದಲ್ಲಿ ಸತ್ಕರಿಸಿ ಅವರು ಮಾತನಾಡಿದರು. …
Read More »ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಮೂರು ತಾಲೂಕುಗಳಲ್ಲಿ ಲಾಕ್ಡೌನ್…….
ಚಿಕ್ಕೋಡಿ(ಬೆಳಗಾವಿ): ಮಂಗಳವಾರ ರಾತ್ರಿಯಿಂದ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳಲ್ಲಿ ಲಾಕ್ಡೌನ್ ಜಾರಿಯಾಗಿದೆ. ಮುಂದಿನ ಒಂದು ವಾರಗಳ ಲಾಕ್ಡೌನ್ ಜಾರಿಯಲ್ಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ವ್ಯಾಪಾರ ವಹಿವಾಟು, ಸಾರಿಗೆ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲೇ ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣ ಹೊಂದಿರುವ ಅಥಣಿ ಪಟ್ಟಣದಲ್ಲಿ ಅನಗತ್ಯವಾಗಿ ಓಡಾಡುತಿದ್ದವರಿಗೆ ಪೊಲೀಸರು ಲಾಠಿ ಏಟು ನೀಡದ್ದಾರೆ. ಅಥಣಿ …
Read More »ಕೊವಿಡ್ -೧೯ ಅನ್ನು ಜಯಿಸಿ ಸಂಪೂರ್ಣ ಗುಣಮುಖರಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಿಂದ ಇಬ್ಬರು ಬಿಡುಗಡೆ
ಬೆಳಗಾವಿ – ಕೊರೊನಾ ವೈರಸ್ ಕೊವಿಡ್ -೧೯ ಅನ್ನು ಜಯಿಸಿ ಸಂಪೂರ್ಣ ಗುಣಮುಖರಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಿಂದ ಇಬ್ಬರು ಬಿಡುಗಡೆಗೊಂಡರು. ಅಥಣಿ ಮೂಲದ ತಂದೆ ೭೦ ವರ್ಷ ಹಾಗೂ ಮಗ ೩೦ ವರ್ಷ ವಯಸ್ಸಾದವರಾಗಿದ್ದು ಕಳೆದ ೭ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ವೈರಸ್ ನಿಂದ ಸಂಪೂರ್ಣ ಗುಣಮುಖವಾಗಿದ್ದು, ಅವರನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ …
Read More »ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಚಾಲನೆ ನೀಡಿದಸತೀಶ ಜಾರಕಿಹೊಳಿ
ಬೆಳಗಾವಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಹೆಬ್ಬಾಳಕ ಜಿಲ್ಲಾ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿ ಬರುವ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಹೆಬ್ಬಾಳ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ, ಕೊಚ್ಚರಿ, ಜಿಂಡ್ರಾಳಿ, ಮಸರಗುಪ್ಪಿ ಗ್ರಾಮಗಳಲ್ಲಿ ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಶಾಸರು ಚಾಲನೆ ನೀಡಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣ, ಮೂಲ ಸೌಕರ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. …
Read More »ಜನತೆಯ ಆರೋಗ್ಯದ ಕುರಿತು ಮುನ್ನಚ್ಚರಿಕೆ ವಹಿಸುವುದು ನನ್ನ ಆದ್ಯ ಕರ್ತವ್ಯ ಎಂದ ಸಚಿವೆ
ನಿಪ್ಪಾಣಿ – ಪಟ್ಟಣದ ಹೊರವಲಯದಲ್ಲಿ ಗವಾನ ಗ್ರಾಮಕ್ಕೆ ಕೊವಿಡ್-೧೯ ಮುನ್ನಚ್ಚರಿಕೆ ಕ್ರಮವಾಗಿ ನಿರ್ಮಿಸಲಾದ ೫೦ ಹಾಸಿಗೆಗಳ ಕೊವಿಡ್ ಸೆಂಟರ್ ಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆಯ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ ಪರಿಶೀಲಿಸಿದರು. ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಜನತೆಯ ಆರೋಗ್ಯದ ಕುರಿತು ಮುನ್ನಚ್ಚರಿಕೆ ವಹಿಸುವುದು ನನ್ನ ಆದ್ಯ ಕರ್ತವ್ಯ. ಭಯಂಕರ ರೋಗವೊಂದು ಇಡೀ ಸಮಾಜವನ್ನು ಅಲ್ಲೋಲ ಕಲ್ಲೋಲವಾಗಿಸುತ್ತಿರುವ …
Read More »ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದದುರದುಂಡಿ ಗ್ರಾಮದಇಬ್ಬರು ಕೊರೋನಾ ಸೊಂಕೀಗೆ ತುತ್ತಾಗಿದ್ದಾರೆ.
ಗೋಕಾಕ: ದುರದುಂಡಿ ಗ್ರಾಮದಲ್ಲಿ ಇಬ್ಬರು ಕೊರೋನಾ ಸೊಂಕೀಗೆ ತುತ್ತಾಗಿದ್ದಾರೆ. ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ 23 ವರ್ಷದ ಯುವಕನಿಗೆ ಮತ್ತು ಇತ್ತೀಚೆಗೆ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ 37 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ 37 ವರ್ಷದ ವ್ಯಕ್ತಿಯು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಿಂಡಲಗಾದಿಂದ ಬಂದ ಯುವಕನನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಸೊಂಕೀತರ ವಾಸವಿದ್ದ ಸ್ಥಳವನ್ನು ಸಿಲ್ಡೌನ್ ಮಾಡಲಾಗಿದೆ ಎಂದು ಡಿಎಚ್ಓ ಜಗದೀಶ ಜಿಂಗಿ …
Read More »ಸುಮಾರು 10 ಸಾವಿರ ಕುಟುಂಬಗಳಿಗೆ 16 ದಿನಗಳವರೆಗೆ ದಿನಬಿಟ್ಟು ದಿನ ಹಾಲಿನ ಪೂರೈಕೆಯಾಗಲಿದೆ:ಗಣೇಶ ಹುಕ್ಕೇರಿ
ಚಿಕ್ಕೋಡಿ – ಚಿಕ್ಕೋಡಿ ಪಟ್ಟಣದಲ್ಲಿ ಕೊರೋನಾ ಈವರೆಗೂ ಕಾಣಿಸದಿದ್ದರೂ, ಮುಂದಿನ ದಿನಗಳಲ್ಲಿ ಅಪಾಯ ಬರಬಾರದೆನ್ನುವ ಕಾರಣಕ್ಕೆ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳಲಾಗಿದೆ. ಪಟ್ಟಣದಲ್ಲಿ 8 ದಿನಗಳ ಕಾಲ ಶಾಸಕ ಗಣೇಶ ಹುಕ್ಕೇರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸ್ವಯಂ ಲಾಕ್ ಡೌನ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಮತ್ತು ಶಾಸಕ ಗಣೇಶ ಹುಕ್ಕೇರಿ ತಾವೇ ಸ್ವತಃ 8 ದಿನಗಳ ಕಾಲ ಪಟ್ಟಣದ ಎಲ್ಲ ಜನರಿಗೂ ಹಾಲನ್ನು ಉಚಿತವಾಗಿ …
Read More »ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇ……………
ಬೆಳಗಾವಿ – ಕೊರೋನಾದಿಂದ ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇರಿದೆ. ಇಂದು ಮೂವರು ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಇಂದು ಬೆಳಗಾವಿ ನಗರದಲ್ಲಿ ಇಬ್ಬರು ಹಾಗೂ ಅಥಣಿಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ನಗರದ ಕುಮಾರಸ್ವಾಮಿ ಬಡಾವಣೆ ಮತ್ತು ಆನಗೋಳದಲ್ಲಿ ಒಬ್ಬೊಬ್ಬರು ಸಾವಿಗೀಡಾಗಿದ್ದಾರೆ. ನಿನ್ನೆ 64 ಜನರಿಗೆ ಸೋಂಕು ಪತ್ತಯಾಗಿರುವುದು ಸೇರಿ ಜಿಲ್ಲೆಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 561ಕ್ಕೇರಿದೆ. 366 ಜನರು ಗುಣಮುಖರಾಗಿದ್ದು, ಇನ್ನೂ 185 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
Read More »Big breaking ಡಿಸಿಸಿ ಬ್ಯಾಂಕ್ ಚುನಾವಣೆ ಮುಂದುಡ ಲಾಗಿದೆ..
ರಾಜ್ಯ ಸರ್ಕಾರ ನಿರ್ಧರಿಸಿದ ಪ್ರಕಾರ ಎಲ್ಲ ಸಹಕಾರಿ ಸಂಘಗಳ ಚುನಾವಣೆ ಯನ್ನಾ ರಾಜ್ಯ ಸರ್ಕಾರ ಮುಂದೂಡಿದೆ ಬೆಳಗಾವಿಯ ಪ್ರತಿಷ್ಠಿತ ಬ್ಯಾಂಕ ಗಳಲ್ಲೊಂದಾದ ಬೆಳಗಾವಿ ಡಿ.ಸಿ.ಸಿ. ಬ್ಯಾಂಕ ಚುನಾವಣೆ ಕೂಡ ಸರ್ಕಾರ ಮುಂದೂಡಿದೆ
Read More »