Breaking News

ಬೆಳಗಾವಿ

ಬೆಳಗಾವಿ ಜಿಲ್ಲೆಯ ಕಡೆಯಿಂದಲೂ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದರು.

ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.

ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು. ‌

Read More »

ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ: ಈರಣ್ಣಾ ಕಡಾಡಿ

ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.  ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …

Read More »

ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ.

ಚಿಕ್ಕೋಡಿ : ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಹಿನ್ನೆಲೆ ಕಠಿಣ ಕಾನೂನು ರೂಪಿಸುವ ಮುಖಾಂತರ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ತಾಲೂಕಾ ಘಟಕದಿಂದ ಶುಕ್ರವಾರ ತಹಸೀಲ್ದಾರ ಎಸ್.ಎಸ್.ಸಂಪಗಾಂವಿ ಅವರಿಗೆ ಮನವಿ ಸಲ್ಲಿಸಿದರು. ಸರ್ವೇ ಕಾರ್ಯದಲ್ಲಿ ನಿರತರಾಗಿದ್ದಾಗ ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ. ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ …

Read More »

ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ

ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …

Read More »

ಗಡಿಭಾಗದ ಪ್ರದೇಶಗಳಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಬೆಳಗಾವಿ: ಜಿಲ್ಲೆಯಲ್ಲಿ ದಿನೇದಿನೇ ಕೋವಿಡ್‌-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿಭಾಗದಲ್ಲಿ ಆ ಕಡೆಯಿಂದ ಈ ಕಡೆ, ಈ ಕಡೆಯಿಂದ ಆ ಕಡೆ ಸಂಚರಿಸುತ್ತಿರುವ ಜನರನ್ನು ನಿಭಾಯಿಸುವುದೇ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಚೆಕ್‌ಪೋಸ್ಟ್‌ಗಳನ್ನು ತಪ್ಪಿಸಿ, ಒಳದಾರಿಗಳ ಮೂಲಕ ಸ್ಥಳೀಯರು ಸಂಚರಿಸುತ್ತಿರುವುದು ಜಿಲ್ಲಾಡಳಿತವನ್ನು ಕಂಗೆಡಿಸಿದೆ. ಜಿಲ್ಲೆಯ ಅಥಣಿ, ಕಾಗವಾಡ, ಚಿಕ್ಕೋಡಿ, ಹುಕ್ಕೇರಿ ಹಾಗೂ ಬೆಳಗಾವಿ ತಾಲ್ಲೂಕುಗಳು ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿವೆ. ಸುಮಾರು 152 ಕಿ.ಮೀ.ವರೆಗೆ ಗಡಿ ಇದೆ. ಗಡಿಯಾಚೆ ಹೋಗುವವರು ಹಾಗೂ …

Read More »

ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿದ್ದು, ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುರುವಾರ ಹೇಳಿಕೆ ನೀಡಿರುವ ಅವರು, ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರಿಗೆ ಅಗತ್ಯವಿರುವ ಸುಮಾರು 2500 ಟನ್‌ (ಫುಲ್‌ ರೇಕ್‌) ಯೂರಿಯಾ ಗೊಬ್ಬರವನ್ನು ಸರಬರಾಜು ಮಾಡುವಂತೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. 2-3 ದಿನಗಳಲ್ಲಿ ರಸಗೊಬ್ಬರ …

Read More »

ಹುಕ್ಕೇರಿ ಪಟ್ಟಣದಲ್ಲಿ ಚಿಕನ್ ತಿಂದವರಿಗೆ ಕೊರೊನಾ ಭೀತಿ………..

ಬೆಳಗಾವಿ/ಚಿಕ್ಕೋಡಿ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಆತಂಕ ಸೃಷ್ಟಿಸುತ್ತಿದೆ. ಆದರೆ ಈಗ ಚಿಕನ್ ತಿಂದವರಿಗೆ ಕೊರೊನಾ ಭೀತಿ ಶುರುವಾಗಿರುವ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಚಿಕನ್ ಮಾರಾಟ ಮಾಡುತ್ತಿದ್ದ ಕುಟುಂಬದ 58 ವರ್ಷದ ಮಹಿಳೆ ಸಾವನ್ನಪ್ಪಿದ್ದು ಕೊರೊನಾ ಆತಂಕಕ್ಕೆ ಕಾರಣವಾಗಿದೆ. ಹುಕ್ಕೇರಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ಅಂಗಡಿ ಹೊಂದಿದ್ದ ಕುಟುಂಬದವರು ಚಿಕನ್ ವ್ಯಾಪಾರವನ್ನ ಭರ್ಜರಿಯಾಗಿ ಮಾಡುತ್ತಿದ್ದರು. ಮನೆ ಜೊತೆಗೆ ಅಂಗಡಿ ಇಟ್ಟು ಚಿಕನ್ ಮಾರಾಟ ಮಾಡುತ್ತಿದ್ದ ಕುಟುಂಬದ ಮಹಿಳೆ …

Read More »

ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು: ಸತೀಶ ಜಾರಕಿಹೊಳಿ ಕಿಡಿ

ಗೋಕಾಕ: ವೈದ್ಯನಿಗೆ ಜೀವ ಬೆದರಿಕೆ ಮತ್ತು  ಹಣ ಸೂಲಿಗೆ ಯತ್ನಿಸಿದ ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಿಡಿಕಾರಿದ್ದಾರೆ. ಈ ಹಿಂದೆ ಕೂಡ ಹಲವು ಪ್ರಕರಣಗಳಲ್ಲಿ ಭೀಮಶಿ ಭರಮನ್ನವರ ಹೆಸರು ಕೇಳಿ ಬಂದಿದೆ. ಆದ್ರೆ ಪ್ರಥಮ ಬಾರಿಗೆ ಡಾ. ಹೊಸಮನಿ ಅವರ ಧೈರ್ಯದಿಂದ ಪ್ರಕರಣ ಪೊಲೀಸ ಠಾಣೆಗೆ ಬಂದಿದೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.ಆದ್ರೆ ಭರಮಣ್ಣವರನನ್ನು ಗೋಕಾಕ ಪೊಲೀಸರು ಬಂಧಿಸಲು …

Read More »

ಗುಟ್ಕಾ ತಿಂದು ನೆಲಕ್ಕೆ ಉಗಿದವನ್ ಮುಖಕ್ಕೆ ಉಗಿದ ಕೊರೊನಾ ವಾರಿಯರ್

ಚಿಕ್ಕೋಡಿ(ಬೆಳಗಾವಿ): ಗುಡ್ಕಾ ತಿಂದು ರಸ್ತೆಗೆ ಉಗುಳಿದ ವ್ಯಕ್ತಿಗೆ ಕೊರೊನಾ ವಾರಿಯರ್ ಶಿಕ್ಷೆ ನೀಡಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಕೊರೊನಾ ಮಹಾಮಾರಿ ಹರಡುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಕ್ತಿ ಗುಟ್ಕಾ ತಿಂದು ನಿಪ್ಪಾಣಿ ನಗರಸಭೆ ಎದುರು ರಸ್ತೆಗೆ ಉಗುಳಿದ್ದಾನೆ. ಇದನ್ನು ಕೊರೊನಾ ವಾರಿಯರ್ ಒಬ್ಬರು ಗಮನಿಸಿದ್ದಾರೆ. ಅಲ್ಲದೆ ಕೂಡಲೇ ಆತನಿಗೆ ಸ್ಥಳದಲ್ಲಿಯೇ ಶಿಕ್ಷೆ ನೀಡಿದ್ದಾರೆ. ವ್ಯಕ್ತಿ ಉಗಿದ ಕೂಡಲೇ ಸ್ಥಳಕ್ಕೆ ಬಂದ ಪೌರಾಯುಕ್ತ ಮಹಾವೀರ ಬೋರನ್ನವರ …

Read More »