ಬೆಳಗಾವಿ: ಮಹಾಮಾರಿ ಕೊರೊನಾನಿಂದಾಗಿ ಬೆಡ್, ಅಂಬುಲೆನ್ಸ್, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಅನೇಕರು ಸಾವನ್ನಪ್ಪುತ್ತಿರುವ ಅಮಾನವೀಯ ಘಟನೆ ಪ್ರತಿದಿನ ಬೆಳಕಿಗೆ ಬರುತ್ತಿವೆ. ಇದೀಗ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯತೆಗೆ ವೃದ್ಧ ಬಲಿಯಾಗಿದ್ದಾರೆ. ಕೋವಿಡ್ ಕೇರ್ ಸೆಂಟರಿನಲ್ಲಿ ಕೊರೊನಾ ಸೋಂಕಿತ ವೃದ್ಧ ಬೆತ್ತಲೆಯಾಗಿ ನೆಲದ ಮೇಲೆ ಒದ್ದಾಡಿ ಸಾವನ್ನಪ್ಪಿದ್ದಾರೆ. ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ 65 ವರ್ಷದ ಸೋಂಕಿತ ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ವೃದ್ಧ …
Read More »ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನುಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ.
ಬೆಳಗಾವಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ. ಮಚ್ಚೆ ಮಾರುತಿ ಗಲ್ಲಿ ನಿವಾಸಿ ಅಕ್ಷಯ ಶಂಕರ ಚೌಗಲೆ, ಬಸವನಕುಡಚಿ ನಿವಾಸಿಗಳಾದ ಮಹೇಶ ಭಾವುಕನ್ನಾ ಅನಗೋಳಕರ, ಆಕಾಶ ಭಾವುಕನ್ನಾ ಅನಗೋಳಕರ ಬಂಧಿತರು. ವಾಘವಾಡೆ ವ್ಯಾಪ್ತಿಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಠಾಣೆಗೆ ಕರೆದಂತು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 6,50,000 ಮೌಲ್ಯದ 18 ದ್ವಿಚಕ್ರ …
Read More »ಬೆಳಗಾವಿಯಲ್ಲೂ ಲಾಕ್ ಡೌನ್ :ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹ…..
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತಲಿದ್ದು, ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕನಿಷ್ಠ ಒಂದು ತಿಂಗಳು ಲಾಕ್ ಡೌನ್ ಜಾರಿ ಮಾಡುವಂತೆ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹಿಸಿದೆ. ಈ ವಿಚಾರವಾಗಿ ಗುರುವಾರ ಜಿಲ್ಲಾಧಿಕಾರಿ ಎಂ.ಜಿ. ಹೀರೇಮಠ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಮನವಿ ಸಲ್ಲಿಸಿದೆ. ಬೆಳಗಾವಿ ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಹೀಗಾಗಿ ಬೆಳಗಾವಿಯಲ್ಲಿಯೂ ಲಾಕ್ ಡೌನ್ …
Read More »ನಿನ್ನೆ ಪರೀಕ್ಷೆಗೊಳಪಟ್ಟವರ ಪೈಕಿ 9 2ಜನರಿಗೆ ಕೊರೋನಾ ಸೋಂಕು
ಬೆಳಗಾವಿ – ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡುವ ಮುನ್ನವೇ ಬೆಳಗಾವಿ ಜಿಲ್ಲೆಯ ಕೊರೋನಾ ಸೋಂಕಿತರ ವಿವರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರ ಪ್ರಕಾರ ನಿನ್ನೆ ಪರೀಕ್ಷೆಗೊಳಪಟ್ಟವರ ಪೈಕಿ 92ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದು ಈವರೆಗಿನ ಎಲ್ಲ ದಾಖಲೆಗಳನ್ನು ಹೊಸಕಿ ಹಾಕಿದ್ದು, ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಟ್ಟಿಯಲ್ಲಿ ಸೋಂಕಿತರ ಹೆಸರು, ವಿಳಾಸ, ಸಂಪರ್ಕ ಸಂಖೆಯ ಎಲ್ಲವೂ ನಮೂದಾಗಿದ್ದು, ಎಲ್ಲ ನಿಯಮಗಳನ್ನು ಮೀರಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿದೆ. …
Read More »ಇಂದಿನ ಸಂಜೆಯ ಹೆಲ್ತ ಬುಲೆಟಿನ್ ನಲ್ಲಿ ಬೆಳಗಾವಿಗೆ ಕಾದಿದೆಯ ಬಿಗ್ ಶಾಕ….?
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ಮುಂದುವರೆದಿದೆ ಈ ವರೆಗೆ ಕಿಲ್ಲರ್ ಕೊರೋನಾ ಬೆಳಗಾವಿ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದು ಇಂದು ಗುರುವಾರವೂ ಮಹಾಮಾರಿಯ ಸಂಕಟ ಮುಂದುವರೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ 602 ಸೊಂಕಿತರು ಪತ್ತೆಯಾಗಿದ್ದಾರೆ,ಇಂದು ಗುರುವಾರ ಸಂಜೆ ಬಿಡುಗಡೆಯಾಗುವ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 70 ಕ್ಕೂ ಹೆಚ್ಚು ಜನ ಸೊಂಕಿತರು ಪತ್ತೆಯಾಗುವ ಸಾದ್ಯತೆ ಇದೆ. https://youtu.be/B9KE2v3hacw ಬೆಳಗಾವಿ …
Read More »ಕೊರೋನಾ ಸೋಂಕಿತರಿಗೆ ಇನ್ನು ಮುಂದೆ ಸಾರ್ವಜನಿಕ ಆಸ್ಪತ್ರೆ ಗೋಕಾಕದಲ್ಲಿ ಚಿಕಿತ್ಸೆ ಪ್ರಾರಂಭ
ಗೋಕಾಕ :ನಾಳೆ ಶುಕ್ರವಾರದಿಂದ ಕೊರೋನಾ ಸೋಂಕಿತರಿಗೆ ಗೋಕಾಕ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುವದು ಸರಕಾರ ಹಾಗೂ ಇಲಾಖೆಯ ನಿರ್ದೇಶನದಂತೆ ತಾಲೂಕಿನ ಕೊರೋನಾ ಸೋಂಕು ದೃಡಪಟ್ಟವರನ್ನು ಶುಕ್ರವಾರದಿಂದ ಸ್ಥಳೀಯ ಗೋಕಾಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವದು ಇದಕ್ಕಾಗಿ ಈಗಾಗಲೇ ಎಲ್ಲ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಆರೋಗ್ಯ ಸಿಬ್ಬಂದಿಗಳಿಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ. ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ 100 ಹಾಸಿಗೆ ಉಳ್ಳ ಸುಸಜ್ಜಿತ ಪ್ರತ್ಯೇಕ ವಾರ್ಡನ್ನು ಸಿದ್ದಗೊಳಿಸಲಾಗಿದ್ದು, …
Read More »ಗುಡಿ ಗಂಡಾರಗಳಲ್ಲಿ ದೇವರಿಲ್ಲ. ಈ ದೇಶವನ್ನು ಕಟ್ಟಿದ ಶ್ರಮಜೀವಿಗಳೇ ನಿಜವಾದ ದೇವರುಗಳು: ಆರ್.ಎಸ್.ದರ್ಗೆ
ಬೆಳಗಾವಿ: ಗುಡಿ ಗಂಡಾರಗಳಲ್ಲಿ ದೇವರಿಲ್ಲ. ಈ ದೇಶವನ್ನು ಕಟ್ಟಿದ ಶ್ರಮಜೀವಿಗಳೇ ನಿಜವಾದ ದೇವರುಗಳು ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಹೇಳಿದ್ದಾರೆ. ಬಸವ ಪಂಚಮಿಯ ಅಂಗವಾಗಿ ಬಸವ ಭೀಮ ಸೇನೆಯ ವತಿಯಿಂದ ಜುಲೈ 27 ರÀವರೆಗೆ ಹಮ್ಮಿಕೊಂಡಿರುವ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನದ ಅಂಗವಾಗಿ ಗುರುವಾರದಂದು ಅಲೆಮಾರಿ ಬುಡಕಟ್ಟು ಜನಾಂಗದ ಹೋರಾಟಗಾರ ಮಲ್ಲೇಶ ಹೆಳವರ ಅವರನ್ನು ಶ್ರೀನಗರದಲ್ಲಿಯ ಅವರ ನಿವಾಸದಲ್ಲಿ ಸತ್ಕರಿಸಿ ಅವರು ಮಾತನಾಡಿದರು. …
Read More »ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಮೂರು ತಾಲೂಕುಗಳಲ್ಲಿ ಲಾಕ್ಡೌನ್…….
ಚಿಕ್ಕೋಡಿ(ಬೆಳಗಾವಿ): ಮಂಗಳವಾರ ರಾತ್ರಿಯಿಂದ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳಲ್ಲಿ ಲಾಕ್ಡೌನ್ ಜಾರಿಯಾಗಿದೆ. ಮುಂದಿನ ಒಂದು ವಾರಗಳ ಲಾಕ್ಡೌನ್ ಜಾರಿಯಲ್ಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ವ್ಯಾಪಾರ ವಹಿವಾಟು, ಸಾರಿಗೆ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲೇ ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣ ಹೊಂದಿರುವ ಅಥಣಿ ಪಟ್ಟಣದಲ್ಲಿ ಅನಗತ್ಯವಾಗಿ ಓಡಾಡುತಿದ್ದವರಿಗೆ ಪೊಲೀಸರು ಲಾಠಿ ಏಟು ನೀಡದ್ದಾರೆ. ಅಥಣಿ …
Read More »ಕೊವಿಡ್ -೧೯ ಅನ್ನು ಜಯಿಸಿ ಸಂಪೂರ್ಣ ಗುಣಮುಖರಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಿಂದ ಇಬ್ಬರು ಬಿಡುಗಡೆ
ಬೆಳಗಾವಿ – ಕೊರೊನಾ ವೈರಸ್ ಕೊವಿಡ್ -೧೯ ಅನ್ನು ಜಯಿಸಿ ಸಂಪೂರ್ಣ ಗುಣಮುಖರಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಿಂದ ಇಬ್ಬರು ಬಿಡುಗಡೆಗೊಂಡರು. ಅಥಣಿ ಮೂಲದ ತಂದೆ ೭೦ ವರ್ಷ ಹಾಗೂ ಮಗ ೩೦ ವರ್ಷ ವಯಸ್ಸಾದವರಾಗಿದ್ದು ಕಳೆದ ೭ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ವೈರಸ್ ನಿಂದ ಸಂಪೂರ್ಣ ಗುಣಮುಖವಾಗಿದ್ದು, ಅವರನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ …
Read More »ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಚಾಲನೆ ನೀಡಿದಸತೀಶ ಜಾರಕಿಹೊಳಿ
ಬೆಳಗಾವಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಹೆಬ್ಬಾಳಕ ಜಿಲ್ಲಾ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿ ಬರುವ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಹೆಬ್ಬಾಳ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ, ಕೊಚ್ಚರಿ, ಜಿಂಡ್ರಾಳಿ, ಮಸರಗುಪ್ಪಿ ಗ್ರಾಮಗಳಲ್ಲಿ ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಶಾಸರು ಚಾಲನೆ ನೀಡಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣ, ಮೂಲ ಸೌಕರ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. …
Read More »
Laxmi News 24×7