Breaking News

ಬೆಳಗಾವಿ

ತುಂಗಾ ಜಲಾಶಯದ 4 ಗೇಟ್ ಓಪನ್- 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಶಿವಮೊಗ್ಗ/ ಬೆಳಗಾವಿ: ಮಲೆನಾಡು ಹಾಗೂ ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಗಾಜನೂರು ಸಮೀಪದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಹೀಗಾಗಿ ಇಂದು 4 ಕ್ರಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ತುಂಗಾ ಜಲಾಶಯ 3.25 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 100 ಮೀ. ಎತ್ತರವಿದೆ. ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಪ್ರತಿದಿನ 7 ಸಾವಿರ ಕ್ಯೂಸೆಕ್ …

Read More »

ಬೆಳಗಾವಿಯಲ್ಲಿ ಮಾಸ್ಕ್ ಡೇ ಆಚರಣೆ

ಮಾಸ್ಕ್ ಧರಿಸಿ ಕರೋನಾದಿಂದ ದೂರವಿರಿ! ಇಂದು ಬೆಳಗಾವಿಯ ಅಶೋಕ ಸರ್ಕಲ್ ನಿಂದ ರಾಣಿ ಚೆನ್ನಮ್ಮ ಸರ್ಕಲ್ ವರೆಗೆ ಪಾದಯಾತ್ರೆ ಮೂಲಕ ಕೊವಿಡ್ 19 ವಿರುದ್ಧ ಜಾಗೃತಿ ಮೂಡಿಸುವುದರೊಂದಿಗೆ ಜನರಿಗೆ ಮಾಸ್ಕ್ ವಿತರಿಸಲಾಯಿತು. ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿನ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತವಾಗಿರಿ! ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ ಬಿ ಬೊಮ್ಮನಹಳ್ಳಿ, ಕೊವಿಡ್ 19 ವಿಶೇಷ …

Read More »

ಮಹಾರಾಷ್ಟ್ರದಲ್ಲಿ ಭಾರೀ ಮಳೆ- ಚಿಕ್ಕೋಡಿ ಭಾಗದ ನದಿಗಳ ಒಳ ಹರಿವು ಹೆಚ್ಚಳ………

ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, …

Read More »

ವಿಪರೀತ ಮಳೆ ಲಾರಿ ಪಲ್ಟಿ- 190 ಚೀಲ ಸಕ್ಕರೆ ಎಗರಿಸಿದ ಜನ………

ಬೆಳಗಾವಿ: ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯವಸ್ಥವಾಗಿದ್ದು, ನದಿಗಳ ಒಳಹರಿವು ಹೆಚ್ಚಾಗಿ ರಸ್ತೆಗಳು ಬಂದ್ ಆಗಿವೆ. ಇದರ ಮಧ್ಯೆಯೇ ಸಕ್ಕರೆ ಸಾಗಿಸುತ್ತಿದ್ದ ಲಾರಿ ಮೊಗಚಿ ಬಿದ್ದಿದೆ. ಬೆಳಗಾವಿ ತಾಲೂಕಿನ ಸುತಗತ್ತಿ ಗ್ರಾಮದ ಸಮೀಪ ತಡರಾತ್ರಿ ಘಟನೆ ನಡೆದಿದ್ದು, ಮಹಾರಾಷ್ಟ್ರದ ಓಲಂ ಸಕ್ಕರೆ ಕಾರ್ಖಾನೆಯಿಂದ 300 ಚೀಲ ಸಕ್ಕರೆ ಹೊತ್ತು ಲಾರಿ ರಾಜ್ಯಕ್ಕೆ ಆಗಮಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. …

Read More »

ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.

ಬೆಳಗಾವಿ: ಕೊರೊನಾ ದಿಂದಾಗಿ ಸರ್ಕಾರ ಘೋಷಿಸಿದ ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.  ಇಲ್ಲಿನ ಅಲಾರವಾಡ ಸೇತುವೆಯ ಕೆಳಗಡೆ ಬುಧವಾರ  ಹಿರಿಯ ಕನ್ನಡ ಹೋರಾಟಗಾರ ಮಲ್ಲಪ್ಪ ಅಕ್ಷರದ, ಗಜಾನನ ಗುಂಜೇರಿ, ರಾಜೂ ಟೋಪಗಿ, ಮ್ಯಾಗೋಟಿ ಆಯೋಜಿಸಿದ್ದರು. ಜನರಿಗೆ ನೆರವಾಗುವ ದೃಷ್ಟಿಯಿಂದ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಕಳೆದ ಮಾರ್ಚ 23 ರಂದು,ದಾನಿಗಳ ನೆರವಿನಿಂದ, ಆರಂಭಿಸಿದ ” ಹಸಿದವರತ್ತ ನಮ್ಮ ಚಿತ್ತ” …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ: ರಮೇಶ ಜಾರಕಿಹೊಳಿ

ಗೋಕಾಕ : ಬೆಳಗಾವಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ   ನಡೆದ ಮಾತಿನ ಚಕಮಕಿ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿ  ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಸವಾಲು ಹಾಕಿಲ್ಲ. ಅವರ ಪಕ್ಷದ ಪರವಾಗಿ ಅವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.  ನಗರದ ತಾ. ಪಂ. ಕಚೇರಿಯಲ್ಲಿ …

Read More »

ಮೂಲ ಸೌಕರ್ಯ ಪೂರೈಸಲುದಗಿಸುವಂತೆ ಸಚಿವ …….

ಕಾಯಿಪಲ್ಯ ವ್ಯಾಪಾರಸ್ಥರಿಂದ ಮಾರು ಕಟ್ಟೆಗೆ ಮೂಲ ಸೌಕರ್ಯ ಪೂರೈಸಲು ಜಲಸಂಪನ್ಮೂಲ ಸಚಿವರಿಗೆ ಮನವಿ ಘಟಪ್ರಭಾ: ಘಟಪ್ರಭಾ ತರಕಾರಿ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ತರಕಾರಿ ವ್ಯಾಪಾರಸ್ಥರು ಮತ್ತು ಜನಪ್ರತಿನಿಧಿಗಳು ಇಂದು  ಮನವಿ ಸಲ್ಲಿಸಿದರು. ಪಟ್ಟಣದ ತರಕಾರಿ ಮಾರುಕಟ್ಟೆ ತುಂಬಾ ಹೆಸರುವಾಸಿಯಾಗಿದ್ದು ದಿನನಿತ್ಯ  ಸುತ್ತ ಮುತ್ತಲಿನ ಹಳ್ಳಿಯ ನೂರಾರು  ರೈತರು ತಾವು ಬೆಳಸಿದ ತರಕಾರಿಗಳನ್ನು ಮಾರಾಟ ಮಾಡಲು ಮಾರುಕಟ್ಟೆಗೆ ಬರುತ್ತಾರೆ. ಆದ್ರೆ ಮಾರುಕಟ್ಟೆಯಲ್ಲಿ …

Read More »

ಗೋಕಾಕ ತಾಲೂಕಿನ ಸರ್ಕಾರದ ವಿವಿದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.

ಗೋಕಾಕ:ಗೋಕಾಕ ತಾಲೂಕಿನ ಸರ್ಕಾರದ ವಿವಿದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆಯನ್ನು ಗೋಕಾಕ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಜಲಸಂಪನ್ಮೂಲ ಸಚಿವರು‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಅದ್ಯಕ್ಷತೆಯಲ್ಲಿ ಸಭೆ ನಡೆಯಿತು ಈ ಸಂದರ್ಭದಲ್ಲಿ ವಿವಿದ ಇಲಾಖೆಗಳ‌ ಅಧಿಕಾರಿಗಳಿಗೆ ಸಚಿವರು ಅವರ ಪ್ರಗತಿಯ ಬಗ್ಗೆ ವಿವರ ಕೇಳುತ್ತಿರುವಾಗ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಕೆನಾಲ ಗೆಟಗಳನ್ನೆ ದುರಸ್ತಿಯಾಗದೆ ನೀರು ಹೇಗೆ ರೈತರಿಗೆ ಮುಟ್ಟುತ್ತದೆ ,ಎಂದು ಜಿಲ್ಲಾ ಪಂಚಾಯತ ಸದಸ್ಯ ತುಕಾರಾಮ‌ ಕಾಗಲ್ …

Read More »

ಹೊಸದಾಗಿ ಅಧಿಕಾರ ವಹಿಸಿಕೊಂಡ ತಹಶಿಲ್ದಾರ ಹಾಗೂ ಉಪ-ತಹಶಿಲ್ದಾರರಿಗೆ ಸತ್ಕಾರ

ಘಟಪ್ರಭಾ- ಬೆಂಗಳೂರಿನಲ್ಲಿ ಹೊಸದಾಗಿ ತಹಶಿಲ್ದಾರ ಆಗಿ ಅಧಿಕಾರ ವಹಿಸಿಕೊಂಡಿರುವ ವಿಠ್ಠಲ ಚೌಗಲಾ ಹಾಗೂ ಬೆಳಗಾವಿ ಜಿಲ್ಲೆಯ ತೇರದಾಳ ತಾಲೂಕಿನ ಉಪ-ತಹಶಿಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕಾಂತ ಮಾಯನ್ನವರ ಇವರಿಗೆ ಘಟಪ್ರಭಾದ ಶ್ರೀ ಸರಸ್ವತಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಸರಸ್ವತಿ ಇಂಟರ್ ನ್ಯಾಷನಲ್ ಸ್ಕೂಲಿನ ಅಧ್ಯಕ್ಷರಾದ ಶಂಕರ ಕುರಣಗಿ.ವಿಶ್ವ ಕರ್ಮ ಹೋರಾಟಗಾರ ಸಮಿತಿಯ ಉಪಾಧ್ಯಕ್ಷ ರಾದ …

Read More »

ಅಶೋಕ ವೆಂಕಪ್ಪ ಚಂದರಗಿ ಅವರನ್ನು ಎಂಎಲ್ಸಿ ಮಾಡುವಂತೆ

ಬೆಳಗಾವಿ: ಸಮಸ್ತ ಕರ್ನಾಟಕ ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳ ಜ್ಞಾನ ಅನುಭವ ಹೊಂದಿರುವ ಪ್ರಮುಖ ಕನ್ನಡ ಹೋರಾಟಗಾರ ಅಶೋಕ ವೆಂಕಪ್ಪ ಚಂದರಗಿ ಅವರನ್ನು ಎಂಎಲ್ಸಿ ಮಾಡುವಂತೆ ಕನ್ನಡಪರ ಹೋರಾಟಗಾರರ ಒಕ್ಕೂಟ ಆಗ್ರಹಿಸಿದೆ. ಇಂದು ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಕರವೇ ಮಹಾದೇವ ತಳವಾರ ಮತ್ತು ಹಿರಿಯ ಕನ್ನಡ ಮುಖಂಡರು ರಾಜ್ಯ ಬಿಜೆಪಿ ಸರಕಾರ ಮತ್ತು ಎಲ್ಲ ರಾಜಕೀಯ ಪಕ್ಷಗಳನ್ನು ಆಗ್ರಹಿಸಿದ್ದಾರೆ. ಕನ್ನಡ ನಾಡು-ನುಡಿ, ನೆಲ -ಜಲ ಹಾಗೂ ಸಾಮಾಜಿಕ ಸೇವಾ ವಲಯದಲ್ಲಿ ನೈಜ …

Read More »