Breaking News

ಬೆಳಗಾವಿ

ಬೆಳಗಾವಿ ಆ್ಯಪ್ ಈಗ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ………..

ಬೆಳಗಾವಿ -ಇಲ್ಲಿಯ ಸ್ಮಾರ್ಟ್ ಸಿಟಿಯಿಂದ ಅಭಿವೃದ್ಧಿಪಡಿಸಿರುವ ಆಯುಷ್ ಬೆಳಗಾವಿ ಆ್ಯಪ್ ಈಗ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ. ಸಧ್ಯಕ್ಕೆ ಕೋವಿಡ್ -19 ಕುರಿತು ಮೊದಲ್ಯ ಆದ್ಯತೆಯ ಮೇಲೆ ಮಾಹಿತಿಗಳನ್ನು ನೀಡುವ ಈ ಆ್ಯಪ್ ನಂತರದಲ್ಲಿ ಬೆಳಗಾವಿ ನಗರದ ಸಂಪೂರ್ಣ ಮಾಹಿತಿ ಒದಗಿಸುವ ಸಿಟಿಜನ್ ಆ್ಯಪ್ ಆಗಿ ಪರಿವರ್ತನೆಯಾಗಲಿದೆ. ಪ್ಲೇ ಸ್ಟೋರ್ ಗೆ ಹೋಗಿ AyushBelagavi ಎಂದು ಹುಡುಕಿದರೆ ಆ್ಯಪ್ ಲಭ್ಯವಿದೆ. ಕೊರೋನಾ ಕುರಿತು ಕರ್ನಾಟಕದ ಮತ್ತು ಬೆಳಗಾವಿ ಜಿಲ್ಲೆಯ ಸಂಪೂರ್ಣ …

Read More »

ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸಬೇಕು : ಸಚಿವ ರಮೇಶ ಜಾರಕಿಹೊಳಿ

ಗೋಕಾಕ :ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸುವದರೊಂದಿಗೆ ಶಾಂತಿಯುತವಾಗಿ ರಂಜಾನ್ ಹಬ್ಬವನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದರು ರವಿವಾರದಂದು ನಗರದ ತಮ್ಮ ಗೃಹ ಕಛೇರಿಯಲ್ಲಿ ಮುಸ್ಲಿಂ ಸಮಾಜದ ಮುಖಂಡರೊಂದಿಗೆ ಮತನಾಡುತ್ತಾ ಸಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೋನಾ ವೈರಸ ಹರಡದಂತೆ ಮುಂಜಾಗೃತ ಕ್ರಮವನ್ನು ಪಾಲಿಸುವಂತೆ ಕೋರಿದರು ಇದೇ ಸಂದರ್ಭದಲ್ಲಿ ರಂಜಾನ ತಿಂಗಳಲ್ಲಿ ಮಸೀದಿಯಲ್ಲಿ ಆಜಾನ ಮತ್ತು ರೋಜಾ ನಿಯತಗಳನ್ನು ಹೇಳಲು ಅನುಮತಿ ನೀಡುವಂತೆ ಮುಸ್ಲಿಂ ಮುಖಂಡರು …

Read More »

ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ನಡೆಯಬೇಕಿದ್ದ ಜಾತ್ರೆ ರದ್ದು……..

ಚಿಕ್ಕೋಡಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ನಡೆಯಬೇಕಿದ್ದ ಜಾತ್ರೆಯನ್ನು ರದ್ದು ಮಾಡಿ ಕೊರೊನಾ ವಾರಿಯರ್ಸ್‍ಗೆ ಅನ್ನ ದಾಸೋಹ ಮಾಡಿ ಹುಕ್ಕೇರಿ ಹಿರೇಮಠ ಮಾದರಿಯಾಗಿದೆ. ಪ್ರತಿ ವರ್ಷ ಏಪ್ರಿಲ್ 24ರಿಂದ ಹುಕ್ಕೇರಿ ಹಿರೇಮಠದಲ್ಲಿ ಗುರುಶಾಂತೇಶ್ವರ ಜಾತ್ರೆ ನಡೆಯಬೇಕಿತ್ತು. ಆದರೆ ಜಾತ್ರೆಯನ್ನು ಈ ಬಾರಿ ರದ್ದು ಮಾಡಲಾಗಿದೆ. ಜಾತ್ರೆ ರದ್ದಾದರೂ ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು, ಪೌರ ಕಾರ್ಮಿಕರು, ಪೊಲೀಸರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಅನ್ನ ದಾಸೋಹವನ್ನು ಆಯೋಜಿಸಲಾಗಿತ್ತು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ …

Read More »

ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿ‌ನಲ್ಲಿ ಹಗಲಿರುಳೆನ್ನದೇ

ಸಂಕೇಶ್ವರ ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿ‌ನಲ್ಲಿ ಹಗಲಿರುಳೆನ್ನದೇ ಶ್ರಮಿಸುತ್ತಿರುವ ಸಂಕೇಶ್ವರ ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಪಿಪಿ ಕೀಟ್’ನ್ನು ವಿತರಿಸಿ, ಪೋಲಿಸ್ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗೋಕಾಕ ಡಿವೈಎಸ್ಪಿ ಶ್ರೀ ಡಿ.ಟಿ.ಪ್ರಭು, ಹುಕ್ಕೇರಿ ಸಿಪಿಆಯ್ ಗುರುರಾಜ ಕಲ್ಯಾಣ ಶೆಟ್ಟಿ, ಪಿಎಸ್ಐ ಗಣಪತಿ ಕೊಗನೊಳಿ, ಸಿಬ್ಬಂದಿಗಳಾದ ಬಿ.ಕೆ.ನಾಗನೂರಿ, ಬಿ.ಎಸ್.ಕಪರಟ್ಟಿ, ಎಸ್.ಆರ್.ರಾಜಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More »

ರಮಾಜಾನ್ ಅವಧಿಯಲ್ಲಿ ಪಾಲಿಸಬೇಕಾದ ವಿಷಯಗಳು ಕುರಿತು ಹಲವಾರು ಮಹತ್ವದ ನಿರ್ಧಾರ

ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ ಇತ್ತೀಚೆಗೆ ನಗರದ ಪ್ರವಾಸಿ ಮಂದಿರದಲ್ಲಿ ಮುಸ್ಲೀಂ ಮುಖಂಡರು ,ಜಮಾತಿನ ಪದಾಧಿಕಾರಿಗಳು ಹಾಗೂ ಪ್ರಮುಖ ಮೌಲ್ವಿಗಳ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ರಮಾಜಾನ್ ಅವಧಿಯಲ್ಲಿ ಪಾಲಿಸಬೇಕಾದ ವಿಷಯಗಳು ಕುರಿತು ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ರಮಜಾನ್ ತಿಂಗಳಲ್ಲಿ ಯಾರೊಬ್ಬರು ಮಸೀದಿಯಲ್ಲಿ ನಮಾಜ್ ಮಾಡುವಂತಿಲ್ಲ,ಆಝಾನ್ ಕೊಡುವಂತಿಲ್ಲ,ಆದ್ರೆ ಪವಿತ್ರ ರಮಜಾನ್ ತಿಂಗಳಲ್ಲಿ ಮುಸ್ಲೀಂ ಬಾಂಧವರು ಉಪವಾಸದ ಆಚರಣೆ ಮಾಡುತ್ತಾರೆ ,ಬೆಳಗಿನ ಜಾವ ಸೆಹರಿ ಅಂದ್ರೆ ಉಪವಾಸ ಆರಂಭ ಮಾಡುತ್ತಾರೆ …

Read More »

ಕೋವಿಡ್-೧೯: ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ಪರೀಕ್ಷೆ “ಮಾಧ್ಯಮ ಪ್ರತಿನಿಧಿಗಳು ಮುನ್ನೆಚ್ಚರಿಕೆ ವಹಿಸಲಿ”- ಡಾ.ಮುನ್ಯಾಳ

  ಬೆಳಗಾವಿ, ಏ.೨೫(ಕರ್ನಾಟಕ ವಾರ್ತೆ): ಕೋವಿಡ್-೧೯ ಹರಡುವಿಕೆ ತಡೆಗಟ್ಟುವ ಕುರಿತು ಜನಜಾಗೃತಿ ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿರುವ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ವರದಿಗಾರರು ಮತ್ತು ಛಾಯಾಗ್ರಾಹಕರು ಸೇರಿದಂತೆ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ “ವಾರ್ತಾಭವನ”ದಲ್ಲಿ ಶನಿವಾರ (ಏ.೨೫) ಕೋವಿಡ್-೧೯ ಗೆ ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ನಡೆಸಲಾಯಿತು. ಈ …

Read More »

ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು…..54 ಕ್ಕೇರಿದ ಸೊಂಕಿತರ ಸಂಖ್ಯೆ

ಬೆಳಗಾವಿ ಜಿಲ್ಲೆಯ ಎಂಟು ವರ್ಷದ ಬಾಲಕ ಸೇರಿದಂತೆ ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು 54 ಕ್ಕೇರಿದ ಸೊಂಕಿತರ ಸಂಖ್ಯೆ ಎಂಟು ವರ್ಷದ   ಬಾಲಕ ಸೇರಿದಂತೆ ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು 54 ಕ್ಕೇರಿದ ಸೊಂಕಿತರ ಸಂಖ್ಯೆ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದೆ ಎಂಟು ವರ್ಷದ ಬಾಲಕ ಸೇರಿದಂತೆ ಹಿರೇಬಾಗೇವಾಡಿಯ ಮೂವರಿಗೆ ಸೊಂಕು ತಗುಲಿ ರುವದು ದೃಡವಾಗಿದೆ ಇಂದು ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ …

Read More »

ಮತದಾರರ ಋಣ ತೀರಿಸಲು ಇದೊಂದು ಅಳಿಲು ಸೇವೆ.:ಶಾಸಕ ಬಾಲಚಂದ್ರ ಜಾರಕಿಹೊಳಿ

ಮತದಾರರ ಋಣ ತೀರಿಸಲು ಇದೊಂದು ಅಳಿಲು ಸೇವೆ. ಮೇ 3ರ ತನಕ ಲಾಕ್ ಡೌನ್ ನಿಯಮ ಪಾಲಿಸಿ: ಮೂಡಲಗಿಯಲ್ಲಿಂದು ಎಲ್ಲ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಟ್ ವಿತರಿಸಿದ ಗಣ್ಯರು ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ  ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ …

Read More »

ಕೊರೋನಾ ವಿರುದ್ಧ ಸರಕಾರ ಮತ್ತು ಸಮಾಜದ ಜಂಟೀ ಹೋರಾಟದ ಅಗತ್ಯವಿದೆ” :ಅಶೋಕ ಚಂದರಗಿ

ವಿಶ್ವವನ್ನೇ ನಡುಗಿಸುತ್ತಿರುವ ಕೊರೋನಾ ವೈರಾಣುವಿನ ವಿರುದ್ಧ ಸರಕಾರ ಮತ್ತು ಸಮಾಜದ ಜಂಟೀ ಹೋರಾಟದ ಅಗತ್ಯವಿದ್ದು ಪ್ರತಿಯೊಬ್ಬ ನಾಗರಿಕರಿಗೆ ಅವರದೇ ಆದ ಹೊಣೆಗಾರಿಕೆ ಇದೆ.ಎಲ್ಲವನ್ನೂ ಸರಕಾರವೇ ಮಾಡಬೇಕು ಎಂಬ ಭಾವನೆ ಸರಿಯಲ್ಲ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಇಂದು ಮಧ್ಯಾನ್ಹ ಬೆಳಗಾವಿ ಸಮೀಪದ ಕಣಬರ್ಗಿಯಲ್ಲಿ ಹೇಳಿದರು. ಕಳೆದ ಮಾರ್ಚ 20 ರಿಂದ ಕ್ರಿಯಾ ಸಮಿತಿಯು ಆರಂಭಿಸಿರುವ ” ಹಸಿದವರತ್ತ ನಮ್ಮ ಚಿತ್ತ” ಅಭಿಯಾನದ …

Read More »

ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ರೇಣುಕಾ ಹೋಟೆಲ್ ಕಡೆಯಿಂದ ಊಟದ ವ್ಯವಸ್ಥೆ

ಶ್ರೀ ರೇಣುಕಾ ಹೋಟೆಲ್ ಮಾಲೀಕರಾದ ಮುದಲಿಂಗ ಮಹಾಲಿಂಗಪ್ಪ ಗೋರಬಾಳ, ಹಾಗೂ ಪರಶುರಾಮ ಕಪರಟ್ಟಿ ವತಿಯಿಂದ ಹಾಗೂ ಪುರಸಭೆ ಸದಸ್ಯರಾದಂತಹ ವಿನೋದ ಕರನಿಂಗ್,ಗೂಳಪ್ಪ ಅಸೋದೆ,ಅಶೋಕ್ಕುಮಾರ್ ನಾಯಕ, ಹಾಗೂ ಮಾಣಿಕವಾಡಿ ಗ್ರಾಮದ ಯುವಕರು ನಾಗಪ್ಪ ಹರಿಜನ,ಅಸಿಫ್ ಶೇಖ,ವಾಸಿಮ ಮುಲ್ಲಾ, ಶಿವಲಿಂಗ ಗೋರಬಾಳ ವತಿಯಿಂದ. ಕೋರನಾ ವೈರಸ್ ಸಲುವಾಗಿ ಹಗಲು ರಾತ್ರಿ ಶ್ರಮ ಪಡುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಸುಮಾರು 100~130 ವರೆಗೆ ಊಟದ ವ್ಯವಸ್ಥೆ ಮಾಡಲಾಯಿತು

Read More »