Breaking News

ಬೆಳಗಾವಿ

ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.

ಬೆಂಗಳೂರು – ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 443ಕ್ಕೇರಿದೆ. ಬೆಂಗಳೂರಿನಲ್ಲಿ ಹೊಸದಾಗಿ 9 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 16 ಜನರಿಗೆ ಸೋಂಕು ಪತ್ತೆಯಾಗಿದೆ. ನಿನ್ನೆ 427 ಜನರಿಗೆ ಸೋಂಕು ತಗುಲಿತ್ತು. ಬೆಂಗಳೂರಿನಲ್ಲಿ ಬಿಹಾರ ಮೂಲದ ಕಾರ್ಮಿಕನಿಂದ 9 ಜನರಿಗೆ ಸೋಂಕು ತಗುಲಿದೆ. ವಿಜಯಪುರ, ಮಂಡ್ಯ ಹಾಗೂ ಧಾರವಾಡದ ತಲಾ ಇಬ್ಬರಿಗೆ ಹಾಗೂ ದಕ್ಷಿಣಕನ್ನಡದ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ …

Read More »

ಇಂದು ಉದ್ಘಾಟನೆಯಾಗಲಿದೆ ವಾರ್ ರೂಂ

Enಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನಲ್ಲಿ ಆರಂಭಿಸಲಾಗಿರುವ ಕೋವಿಡ್ -19 (ಕೊರೋನಾ) ವಾರ್ ರೂಂ ಇಂದು ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಧ್ಯಾಹ್ನ 12.30ಕ್ಕೆ ವಾರ್ ರೂಂ ಉದ್ಘಾಟಿಸುವರು. ಕೊರೋನಾಕ್ಕೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳು, ವಿವರಗಳು ಈ ವಾರ್ ರೂಂ ನಲ್ಲಿ ಲಭ್ಯವಾಗಲಿದೆ. ಇಡೀ ನಗರದ ಪರಿಸ್ಥಿತಿಯ ಮೇಲೆ ಇಲ್ಲಿಂದ ನಿಗಾ ಇಡಲಾಗುತ್ತದೆ. ಇದಕ್ಕಾಗಿ …

Read More »

ಮಾಸ್ಕ್ ಧರಿಸದೆ ನೀವು ಮನೆಯಿಂದ ಹೊರಗೆ ಬರುವಂತಿಲ್ಲ.:ಎಸ್.ಬಿ.ಬೊಮ್ಮನಳ್ಳಿ

ಬೆಳಗಾವಿ – ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಬುಧವಾರ ಸಂಜೆ ಹೊಸ ಆದೇಶವೊಂದನ್ನು ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಇನ್ನು ಮುಂದೆ ಮಾಸ್ಕ್ ಧರಿಸದೆ ನೀವು ಮನೆಯಿಂದ ಹೊರಗೆ ಬರುವಂತಿಲ್ಲ. ಕೊರೋನಾ ವೈರಸ್ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನೂತನ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಮಾಸ್ಕ್ ಧರಿಸದೆ ಹೊರಗೆ ಬಂದರೆ 100 ರೂ. ದಂಡ ವಿಧಿಸಲಾಗುತ್ತದೆ. ಜೊತೆಗೆ, ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೂ 100 ರೂ. ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿರುವ …

Read More »

ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟು ಕಂಟೈನ್‍ಮೆಂಟ್ ಜೋನ್‍ಗಳಿಗೆ? ಇಲ್ಲಿದೆ ವಿವರ

ಬೆಂಗಳೂರು: ಕೊರೊನಾ ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಮಾತ್ರ ಲಾಕ್‍ಡೌನ್ ಸಡಿಲಿಕೆ ನಿಯಮ ಅನ್ವಯ ಆಗಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಕೊರೋನಾ ಪೀಡಿತ ಜಿಲ್ಲೆಗಳ 359 ಪ್ರದೇಶಗಳನ್ನು ಕಂಟೈನ್‍ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ರಾಜ್ಯದ ಕಂಟೈನ್‍ಮೆಂಟ್ ಜೋನ್‍ಗಳು * ಬೆಂಗಳೂರು – 19 * ಮೈಸೂರು – 12 * ನಂಜನಗೂಡು ಪಟ್ಟಣ ಮತ್ತು ಐದು ಗ್ರಾಮ * ಕಲಬುರಗಿ – 17 * ಚಿತ್ತಾಪುರ, ಶಹಬಾದ್, ವಾಡಿ, ಆಳಂದ * ಬಾಗಲಕೋಟೆ …

Read More »

: ಕೊರೊನಾ ಸೋಂಕು ಹರಡದಂತೆ ಎಲ್ಲರೂ ಒಟ್ಟಾಗಿ ಹೋರಾಡಬೇಕು: ಶಾಸಕ ಸತೀಶ್ ಜಾರಕಿಹೊಳಿ

ಮೂಡಲಗಿ: ಕೊರೊನಾ ಸೋಂಕು ಹರಡದಂತೆ ಎಲ್ಲರೂ ಒಟ್ಟಾಗಿ ಹೋರಾಡಬೇಕು. ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರುವುದು, ಅಂತರ ಕಾಯ್ದುಕೊಳ್ಳುವುದರಿಂದ ಮಾತ್ರ ಕೊರೊನಾ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ಬುಧವಾರ ತಾಲ್ಲೂಕು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ ಬಗ್ಗೆ ಚರ್ಚಿಸಿದ ಬಳಿಕ ಮಾತನಾಡಿದರು. ಮೂಡಲಗಿ ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಆಶಾ ಕಾರ್ಯಕರ್ತರ ಕಾರ್ಯವು ಹೆಮ್ಮೆ ವಿಷಯವಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯುವುದು, ಪಡಿತರ ವಿತರಣೆ, …

Read More »

ಜನರ ಸಮಸ್ಯೆ ಕೇಳಬೇಕಾದ ಶಾಸಕ ಮಹೇಶ್ ಕುಮಟಳ್ಳಿ ಎಲ್ಲಿಯೂ ಕಾಣುತ್ತಿಲ್ಲ.: ಮುಖಂಡ ಗಜಾಕಾಂಗ್ರೆಸ್ ನನ ಮಂಗಸೂಳಿ

ಅಥಣಿ: ಲಾಕ್ ಡೌನ್ ದಿಂದ ಅಥಣಿ ತಾಲ್ಲೂಕಿನ ಬಡಕುಟುಂಬದವರು ತೊಂದರೆ ಅನುಭವಿಸುತ್ತಿದ್ದಾರೆ. ಕ್ಷೇತ್ರದ ಜನರ ಸಮಸ್ಯೆ ಕೇಳಬೇಕಾದ ಶಾಸಕ ಮಹೇಶ್ ಕುಮಟಳ್ಳಿ ಎಲ್ಲಿಯೂ ಕಾಣುತ್ತಿಲ್ಲ. ಕಾಣೆಯಾಗಿದ್ದಾರೆ ಎಂಬ ಅನುಮಾನ ಮೂಡುತ್ತಿದೆ ಎಂದು ಮುಖಂಡ ಗಜಾಕಾಂಗ್ರೆಸ್ ನನ ಮಂಗಸೂಳಿ ಹೇಳಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ, ಬಡಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ನೀಡುತ್ತಿರುವ ಜನತೆಗೆ, ಶಾಸಕ ಮಹೇಶ್ ಕುಮಟಳ್ಳಿ ಮಾತಿನ ಭರದಲ್ಲಿ ಬಡಕುಟುಂಬಗಳಿಗೆ ನೀಡುತ್ತಿರುವ ಜೀವನಾವಶ್ಯಕ ಸಾಮಗ್ರಿಗಳು ಫೋಟೋ …

Read More »

ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು.

ಮೂಡಲಗಿ: ಭಾನುವಾರ ದೇಹ ತ್ಯಾಗ ಮಾಡಿರುವ ಇಲ್ಲಿಯ ಶ್ರೀಪಾದಬೋಧ ಪೀಠದ ಪೀಠಾಧಿಪತಿ ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು. ಬುಧವಾರ ಶಿವಬೋಧರಂಗ ಮಠಕ್ಕೆ ಭೇಟಿ ನೀಡಿ ಅಮೃತಬೋಧ ಸ್ವಾಮೀಜಿ ಮತ್ತು ಶ್ರೀಧರ ಸ್ವಾಮೀಜಿಗಳಿಗೆ ಸಾಂತ್ವನ ತಿಳಿಸಿ ಮಾತನಾಡಿದ ಅವರು ‘ಪೂಜ್ಯರು ಮೂಡಲಗಿ ಭಾಗದ ಆಧ್ಯಾತ್ಮಿಕ ಶಕ್ತಿಯಾಗಿದ್ದರು. ಪೂಜ್ಯರ ಅಗಲಿಕೆಯಿಂದ ನಾಡಿನ ಭಕ್ತರಿಗೆ ಅಪಾರ ನಷ್ಟವಾಗಿದೆ’ ಎಂದರು. ಆರ್.ಪಿ. ಸೋನವಾಲಕರ, ಮಲ್ಲಿಕಾರ್ಜುನ ಕಬ್ಬೂರ, ಪ್ರಕಾಶ …

Read More »

ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನಿಂದ50 ಕುಟುಂಬಗಳಿಗೆದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು.

ಬೆಳಗಾವಿ: ಕೊರೊನಾದಿಂದ ಸರ್ಕಾರ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಬಡ ಕುಟುಂಬಗಳ ಆಹಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನಿಂದ ಇಲ್ಲಿನ ಕಣಬರಗಿಯಲ್ಲಿ ವಾಸವಾಗಿರುವ ಪ್ಲಾಸ್ಟಿಕ್, ಬಾಟಲ್ ಆಯ್ದು ಜೀವನ ಸಾಗಿಸುತ್ತಿರುವ ಸುಮಾರು 50 ಕುಟುಂಬಗಳಿಗೆ ಮಹಿಳಾ ಕಲ್ಯಾಣ ಸಂಸ್ಥೆಯ ಸಹಯೋಗದಲ್ಲಿ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು. ಅಕ್ಕಿ, ಬೇಳೆ, ರವಾ, ಗೋಧಿಹಿಟ್ಟು, ಎಣ್ಣೆ ಇತ್ಯಾದಿ ವಸ್ತುಗಳನ್ನು ಒಳಗೊಂಡಿರುವ ಕಿಟ್ ನೀಡಿದರು. ಮಹಿಳಾ ಕಲ್ಯಾಣ …

Read More »

ರಾಯಬಾಗ:೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ. ದೇಶದಲ್ಲಿ ಕೊರೊನಾ ವಾರಿಯರ್ಸ್ ಅವರಿಗೆ ವಿವಿಧ ರೀತಿಯಲ್ಲಿ ಗೌರವಿಸುತ್ತಿದ್ದಾರೆ. ಅದೇ ರೀಲ್ಲಿ ಬಾವನಸೌದತ್ತಿ ಗ್ರಾಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನ ಮಾಡಲಾಗಿದೆ. ಆಶಾ ಕಾರ್ಯಕರ್ತಯರು, ಅಂಗನವಾಡಿ ಕಾರ್ಯಕರ್ತ, ಆರೋಗ್ಯ ಇಲಾಖೆ, ಪೊಲೀಸರು ಸೇರಿ ೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ವಿಶೇಷವಾಗಿ ಸನ್ಮಾನಿಸಲಾಗಿದೆ. ದೇಶದ ರಕ್ಷಣೆಗಾಗಿ …

Read More »

ಬಡವರಿಗೆ ಉಚಿತವಾಗಿ 67 ಟನ್ ಆಹಾರ ಸಾಮಗ್ರಿ ವಿತರಿಸಿದ ಉಮೇಶ್ ಕತ್ತಿ

ಬೆಳಗಾವಿ(ಚಿಕ್ಕೋಡಿ): ಲಾಕ್‍ಡೌನ್ ಹಿನ್ನೆಲೆ ದುಡಿಮೆ ಇಲ್ಲದೆ ಮನೆಯಲ್ಲಿ ಕಷ್ಟದಲ್ಲಿ ಇರುವ ಬಡವರಿಗೆ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಸಹಾಯ ಹಸ್ತ ಚಾಚಿದ್ದಾರೆ. ಉಮೇಶ್ ಕತ್ತಿ ಅವರು ತಮ್ಮ ತಂದೆ ವಿಶ್ವನಾಶ್ ಕತ್ತಿ ಹಾಗೂ ತಾಯಿ ರಾಜೇಶ್ವರಿ ಅವರ ಸ್ಮರಣಾರ್ಥ ಹುಕ್ಕೇರಿ ತಾಲೂಕಿನ 5,500 ಬಡ ಕುಟುಂಬಗಳಿಗೆ ಉಚಿತವಾಗಿ ದಿನಸಿ ವಸ್ತುಗಳನ್ನ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ವಿಶ್ವರಾಜ ಭವನದಲ್ಲಿ ಸಾಂಕೇತಿಕವಾಗಿ ಬಡವರಿಗೆ ದಿನಸಿ ಸಾಮಗ್ರಿಗಳನ್ನ ವಿತರಿಸಲಾಯಿತು. ಹುಕ್ಕೇರಿ …

Read More »