ಹುಕ್ಕೇರಿ: ಹುಕ್ಕೇರಿ ಮತ್ತು ಸಂಕೇಶ್ವರ ವಲಯಗಳ ವಿಪತ್ತು ನಿರ್ವಹಣೆ ಘಟಕದ ಸ್ವಯಂ ಸೇವಕರಿಗೆ ತಾಲ್ಲೂಕಿನ ನಿಡಸೋಶಿಯ ದುರದುಂಡೇಶ್ವರ ಮಠದಲ್ಲಿ ಗುರುವಾರ ನಡೆದ ‘ಶೌರ್ಯ ವಿಪತ್ತು ಸ್ವಯಂ ಸೇವಕರ ತರಬೇತಿ’ ಕಾರ್ಯಕ್ರಮವನ್ನು ಸುಬೇದಾರ್ ಎಸ್.ಕೆ.ದೇಸಾಯಿ ಹಾಗೂ ನಿಡಸೋಸಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮದೀನಾ ಶಾನೂರ್ ಮಕಾಂದಾರ್ ಉದ್ಘಾಟಿಸಿದರು. ನಂತರ ಮಾತನಾಡಿದ ಸುಬೇದಾರ್ ಎಸ್.ಕೆ.ದೇಸಾಯಿ, ‘ಯುವಕರು ಸೈನ್ಯದಲ್ಲಿ ಸೇರಿ ದೇಶ ಮಾಡಬೇಕಂತಿಲ್ಲ. ದೇಶದ ಒಳಗೆ ಜನರಿಗೆ ವಿಪತ್ತು ಬಂದಾಗ ಸೇವೆ ಸಲ್ಲಿಸಿದರೆ, …
Read More »ಬಾವಿಗೆ ಬಿದ್ದು ಶಿಂಧೊಳ್ಳಿ ಗ್ರಾಮದ ಮಹಿಳೆ ಸಾವು
ಬೆಳಗಾವಿ: ತಾಲ್ಲೂಕಿನ ಶಿಂಧೊಳ್ಳಿ ಗ್ರಾಮದ ತೆರೆದ ಬಾವಿಯಲ್ಲಿ ಗುರುವಾರ ಬೆಳಿಗ್ಗೆ ಮಹಿಳೆಯೊಬ್ಬರು ಬಿದ್ದು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಭಾರತಿ ಪೂಜಾರಿ(48) ಮೃತರು. ‘ಶಿಂಧೊಳ್ಳಿಯ ಮಸಣವ್ವ ದೇವಸ್ಥಾನಕ್ಕೆ ಗುರುವಾರ ಕಳ್ಳರು ನುಗ್ಗಿದ್ದರು. ಇದೇ ವೇಳೆ, ಭಾರತಿ ತಮ್ಮ ಮನೆಯ ದನ-ಕರುಗಳ ಸಗಣಿ ಎತ್ತಿ, ತಿಪ್ಪೆಗೆ ಎಸೆಯಲು ಹೋಗಿದ್ದರು. ಆಗ ದೇವಾಲಯದಲ್ಲಿ ಕಳ್ಳತನ ನಡೆಯುತ್ತಿರುವುದನ್ನು ನೋಡಿದ್ದರು. ಈ ವಿಷಯ ಗ್ರಾಮಸ್ಥರಿಗೆ ಗೊತ್ತಾಗಿ, ತಾವು ಸಿಕ್ಕಿಬೀಳುತ್ತೇವೆ ಎಂಬ ಭಯದಿಂದ ಕಳ್ಳರು ಭಾರತಿ ಅವರನ್ನೇ ಬಾವಿಯಲ್ಲಿ …
Read More »ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಸಮಿತಿ ಆಶ್ರಯದಲ್ಲಿ ಕಲಬುರಗಿಯಲ್ಲಿ ಇದೇ ದಿ.29 ಹಾಗೂ 30 ರಂದು ಬೃಹತ್ ಸಮ್ಮೇಳನ
ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮೇಲೆ ಒತ್ತಡ ತರಲು ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಸಮಿತಿ ಆಶ್ರಯದಲ್ಲಿ ಕಲಬುರಗಿಯಲ್ಲಿ ಇದೇ ದಿ.29 ಹಾಗೂ 30 ರಂದು ಬೃಹತ್ ಸಮ್ಮೇಳನವನ್ನು ಆಯೋಜನೆ ಮಾಡಿದೆ. ಈ ಕುರಿತು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಚಾಲಕ ಎನ್.ಎಲ್.ಭರತರಾಜ್ ಹೇಳಿಕೆ ನೀಡಿದ್ದು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಂದು ಟನ್ ಕಬ್ಬಿಗೆ ಐದು ಸಾವಿರ …
Read More »ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು
ಬೆಳಗಾವಿ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಕೇವಲ ಐದು ದಿನಗಳಲ್ಲಿ 9 ಜನ ಆರೋಪಿಗಳಿಗೆ ತಲಾ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ಫೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡುವ ಮೂಲಕ ಸಮಾಜದಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. …
Read More »ಚಂದ್ರ ಬಾಬು ನಾಯಡು ಹೇಳಿಕೆಯಿಂದ ನಂದಿನಿ ತುಪ್ಪಕ್ಕೆ ಭಾರಿ ಡಿಮಾಂಡ್.:ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ -ತಿರುಪತಿ ಲಡ್ಡು ಬಗ್ಗೆ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡುವ ಮೂಲಕ ದೇಶದಲ್ಲೇ ನಂದಿನಿ ತುಪ್ಪಕ್ಕೆ ಬಾರೀ ಬೇಡಿಕೆ ಬಂದಿದೆ ಎಂದು ಕೆಎಂಎಫ್ ಮಾಜಿ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಧಿಕಾರವಧಿಯಲ್ಲಿ 4 ವರ್ಷದ ಹಿಂದೆ ಕೆಎಂಎಫ್ನ ನಂದಿನಿ ತುಪ್ಪ ದೇಶದ ದೊಡ್ಡ ದೇವಸ್ಥಾನ ತಿರುಪತಿ ಬಾಲಾಜಿ ಮಂದಿರದ ಲಡ್ಡು ಪ್ರಸಾದಕ್ಕೆ ಪೂರೈಕೆಯಾಗುತ್ತಿತ್ತು. ತಿರುಪತಿ ಬಾಲಾಜಿ ಮಂದಿರದ …
Read More »ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್
ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್ ಬೆಳಗಾವಿ: ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನರ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ತಿಳಿಸಿದ ಅವರು, ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ 74.86 ಕೋಟಿ ಅವ್ಯವಹಾರ ನಡೆದಿರುವ …
Read More »ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ
ಬೆಳಗಾವಿ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಮುಗಿಸಿ ವಾಪಸ್ ಹೋಗುತ್ತಿದ್ದಾಗ ಎರಡು ಗುಂಪುಗಳ ಯುವಕರು ತಲವಾರ್ ದಿಂದ ಹೊಡೆದಾಡಿಕೊಂಡಿದ್ದು, ಮೂವರು ಗಾಯಗೊಂಡ ಘಟನೆ ಇಲ್ಲಿಯ ರುಕ್ಮಿಣಿ ನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ರುಕ್ಮಿಣಿ ನಗರ ಹಾಗೂ ಉಜ್ವಲ್ ನಗರದ ಯುವಕರ ಮಧ್ಯೆ ಈ ಗಲಾಟೆ ಆಗಿದ್ದು, ಮೆರವಣಿಗೆ ಮುಗಿಸಿಕೊಂಡು ಹೋಗುವಾಗ ಒಬ್ಬರಿಗೊಬ್ಬರು ಸಿಟ್ಟಿನಿಂದ ನೋಡಿದ್ದಕ್ಕೆ ಹೊಡೆದಾಡಿಕೊಂಡಿದ್ದಾರೆ. ತಲ್ವಾರ್ ಹಾಗೂ ಚಾಕುವಿನಿಂದ ಘರ್ಷಣೆ ಹಾಡಿದಿತ್ತು ಘಟನೆಯಲ್ಲಿ ಹೊಟ್ಟೆ ಹಾಗೂ ಕತ್ತಿನ ಭಾಗಕ್ಕೆ ಗಾಯವಾಗಿದೆ. …
Read More »ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್-ಮಿಲಾದ್ ಹಬ್ಬದ ಮೆರವಣಿಗೆ
ಬೆಳಗಾವಿ: ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್-ಮಿಲಾದ್ ಹಬ್ಬದ ಮೆರವಣಿಗೆ ಸಂಭ್ರಮದಿಂದ ನೆರವೇರಿತು. ಮುಸ್ಲಿಮರೊಂದಿಗೆ ಹಿಂದೂಗಳೂ ಭಾಗವಹಿಸಿ ಭಾವೈಕ್ಯತೆ ಮೆರೆದರು. ನಗರದಲ್ಲಿ ಸೆ.16ರಂದೇ ಈದ್-ಮಿಲಾದ್ ಹಬ್ಬವನ್ನು ಮುಸ್ಲಿಮರು ಆಚರಿಸಿದ್ದಾರೆ. ಅಂದೇ ಬೆಳಿಗ್ಗೆ ಈದ್-ಮಿಲಾದ್ ಮೆರವಣಿಗೆ ನಡೆಯಬೇಕಿತ್ತು. ಆದರೆ, ಅದರ ಮಾರನೇ ದಿನವೇ( ಸೆ.17) ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಇತ್ತು. ಹಾಗಾಗಿ ಗಣೇಶನ ಮೆರವಣಿಗೆ ಮೊದಲು ಅದ್ದೂರಿಯಾಗಿ ನಡೆಯಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೂ ಅನುಕೂಲವಾಗಲೆಂದು ಮುಸ್ಲಿಮರು …
Read More »ನಿವೇಶನ ವಿವಾದ: ಎರಡು ಗುಂಪುಗಳ ನಡುವೆ ಗಲಾಟೆ; ಕೊಂಡಸಕೊಪ್ಪದಲ್ಲಿ ಪೊಲೀಸ್ ಕಾವಲು
ಬೆಳಗಾವಿ: ತಾಲ್ಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಗುರುವಾರ ನಿವೇಶನ ವಿಚಾರಕ್ಕೆ ನಡೆದ ಜಗಳದಲ್ಲಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದೆ. ಬಸ್ತವಾಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಠ್ಠಲ ಸಾಂಬ್ರೇಕರ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಮೂವರು ಸ್ನೇಹಿತರು ಚಿಕಿತ್ಸೆ ಪಡೆದು ಮರಳಿದ್ದಾರೆ. ಕೊಂಡಸಕೊಪ್ಪದವರಾದ ಪುಂಡಲೀಕ ಕುಡಚೇಕರ, ಭೀಮಾ ದೇಮನ್ನವರ, ನಾಗಪ್ಪ ವಾಳಕೆ, ಗಜು ಡೋಂಗ್ರೆ, ಮೋನಪ್ಪ ಗುಜರಾನಟ್ಟಿ, ಶಂಕರ ಪಾಟೀಲ ಆರೋಪಿಗಳು. ಈಗಾಗಲೇ …
Read More »74.87 ಕೋಟಿ ವಂಚನೆ: 14 ಸಿಬ್ಬಂದಿ ವಿರುದ್ಧ ದೂರು
ಬೆಳಗಾವಿ: ‘ಗೋಕಾಕದ ಮಹಾಲಕ್ಷ್ಮಿ ಅರ್ಬನ್ ಕೋ-ಆಪ್ ಕ್ರೆಡಿಟ್ ಬ್ಯಾಂಕ್ನಲ್ಲಿ ₹74.87 ಕೋಟಿ ವಂಚನೆ ಆಗಿದೆ. ಬ್ಯಾಂಕ್ನ ವ್ಯವಸ್ಥಾಪಕ, ಗುಮಾಸ್ತ ಸೇರಿ 14 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಬಂಧನಕ್ಕೆ ಮೂರು ತಂಡ ರಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದರು. ‘ಪ್ರಕರಣ ಸಂಬಂಧ ಬ್ಯಾಂಕ್ನ ಅಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ದೂರು ದಾಖಲಿಸಿದ್ದಾರೆ. ದೊಡ್ಡ ಮೊತ್ತದ ಪ್ರಕರಣವಾದ್ದರಿಂದ ಇದನ್ನು ಸಿಐಡಿಗೆ ಹಸ್ತಾಂತರಿಸಲು ಪತ್ರ ಬರೆಯಲಾಗಿದೆ. …
Read More »