Breaking News

ಬೆಳಗಾವಿ

ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬೆಳವಣಿಗೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಉಪ ಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಗೆಲ್ಲುವ ಅವಕಾಶಗಳಿವೆ ಎಂದರು. ಶಿಗ್ಗಾವಿಯಲ್ಲಿ ಅಲ್ಪಸಂಖ್ಯಾತ ಮತಗಳು ಹೆಚ್ಚಿನ ಪ್ರಮಾಣದಲ್ಲಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡುವ ವಿಷಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಬೇಡಿಕೆಯನ್ನು …

Read More »

ರಾಜ್ಯದಾದ್ಯಂತ ಸಂಚರಿಸಿ ಬಂದ ವಿಜಯ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರು

ಚನ್ನಮ್ಮನ ಕಿತ್ತೂರು: ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಬುಧವಾರ ನಡೆದ ಜಾನಪದ ಕಲಾವಾಹಿನಿ ಮೆರವಣಿಗೆ, ಕ್ರಾಂತಿ ನೆಲದ ಹಿರಿಮೆ ಎತ್ತಿ ಹಿಡಿಯಿತು. ರಾಜಬೀದಿಯಲ್ಲಿ ಎಲ್ಲಿ ನೋಡಿದರೂ ಜನವೋ ಜನ, ಎತ್ತ ನೋಡಿದರೂ ಸಂಭ್ರಮವೋ ಸಂಭ್ರಮ. ಕಲಾವಿದರು, ವಾದ್ಯಗಾರರು, ನೃತ್ಯಪಟುಗಳು, ಮಕ್ಕಳು, ಹಿರಿಯರು, ಮಹಿಳೆಯರೆಲ್ಲ ಸೇರಿ ನೂಪುರ ಲೋಕವನ್ನೇ ಸೃಷ್ಟಿಮಾಡಿದರು.   ರಾಜ್ಯದಾದ್ಯಂತ ಸಂಚರಿಸಿ ಬಂದ ವಿಜಯ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರು. ಮಹಿಳಾ ಮತ್ತು …

Read More »

ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸ‌ವ ಹಿನ್ನೆಲೆಯಲ್ಲಿ ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಅರ್ಹ ಕನ್ನಡಪರ ಹೋರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧ್ಯಕ್ಷರು, ಕನ್ನಡ ಹೋರಾಟಗಾರರ ಸನ್ಮಾನ ಆಯ್ಕೆ ಸಮಿತಿ ಹಾಗೂ ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ಕನ್ನಡ ನಾಡು‌‌ ನುಡಿಗಾಗಿ ಹೋರಾಡಿದ 40 ವರ್ಷ ಮೇಲ್ಪಟ್ಟವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 5 ವರ್ಷಗಳ ಕಾಲ ಕನ್ನಡ‌ಪರ …

Read More »

ಧಾರವಾಡದಲ್ಲಿ ಏರ್ಪಡಿಸಿದ್ದ ಪೊಲೀಸ್‌ ಹುತ್ಮಾತರ ದಿನಾಚರಣೆಯಲ್ಲಿ

ಧಾರವಾಡ: ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿನಿತ್ಯ ವ್ಯಾಯಾಮ ಮಾಡಬೇಕು. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಬಿ.ಜಿ.ರಮಾ ತಿಳಿಸಿದರು. ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಪೊಲೀಸ್‌ ಕವಾಯತು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್‌ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದರು. ಪೊಲೀಸರಿಗೆ ಕಾರ್ಯದ ಒತ್ತಡ ಇರುತ್ತದೆ. ಪೊಲೀಸರು ತಮ್ಮ ಮತ್ತು ಕುಟುಂಬದ ಆರೋಗ್ಯ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದರು. ಪೊಲೀಸರು ಹಗಲಿರುಗಳು ಕಾರ್ಯನಿರ್ವಹಿಸುತ್ತಾರೆ. ಸಮಾಜದ ಆಂತರಿಕ ಭದ್ರತೆಗೆ ಶ್ರಮಿಸುತ್ತಾರೆ. ಪೊಲೀಸರು ಸಾರ್ವಜನಿಕರ …

Read More »

ಇದೀಗ ಎಲ್ಲ ಹಳ್ಳಿಗಳಿಗೆ ಸುವರ್ಣಕಾಲ ಬಂದಿದೆ’

ಅಥಣಿ: ‘ಮುಂದಿನ ವರ್ಷದ ಒಳಗಾಗಿ ನೀರು ಒದಗಿಸುವ ಕಾರ್ಯ ಮಾಡಲಾಗುವುದು, 17100ಎಚ್‌ಪಿ ಸಾಮರ್ಥ್ಯದ ಮೂರು ಮೋಟಾರ್‌ ಕೂಡಿಸಿ 14 ತಿಂಗಳಿನಲ್ಲಿ ಏಳು ಗ್ರಾಮಗಳಿಗೆ ನೀರು ಪೂರೈಸಲಾಗುವುದು, ಕೃಷ್ಣಾ ನದಿಯ ಪ್ರವಾಹ ಮಹಾಪೂರ ಬಂದರೂ ತೊಂದರೆಯಾಗದಂತಹ ಉನ್ನತ ತಂತ್ರಜ್ಞಾನದ ವ್ಯವಸ್ಥೆಯನ್ನು ಅಳವಡಿಸಿಕೊಂಡು, ರಾಜ್ಯದಲ್ಲೆ ಮಾದರಿ ಯೋಜನೆಯನ್ನಾಗಿಸಲಾಗಿದೆ’ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.   ತಾಲ್ಲೂಕಿನ ಅರಟಾಳ ಕ್ರಾಸ್ ಹತ್ತಿರ ಜರುಗಿದ ಅಮ್ಮಾಜೇಶ್ವರಿ -ಕೊಟ್ಟಲಗಿ ಏತನೀರಾವರಿ ಯೋಜನೆಯ ಎಂ.ಎಸ್ ಪೈಪ್‌ಗಳ …

Read More »

ನೀರು ಕೊಟ್ಟು, ರಸ್ತೆ ಕಿತ್ತುಕೊಂಡರು

ಸವದತ್ತಿ: ನಿರಂತರ ನೀರು (24X7) ಪೂರೈಕೆಗಾಗಿ ಪಟ್ಟಣದ ಬಹುಪಾಲು ರಸ್ತೆಗಳನ್ನು ಅಗೆದು ಹಾಕಲಾಗಿದೆ. ಕಾಮಗಾರಿ ಮುಗಿದ ಮೇಲೆ ಮತ್ತೆ ರಸ್ತೆ ದುರಸ್ತಿ ಮಾಡಿಲ್ಲ. ಇದೇ ಪರಿಸ್ಥಿತಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲೂ ತಲೆದೋರಿದೆ. ಕೊರಕಲು ರಸ್ತೆಗಳಿಂದ ಜನ ಬೇಸತ್ತುಹೋಗಿದ್ದಾರೆ. ಅಧಿಕಾರಿಗಳು ಮಾತ್ರ ಒಬ್ಬರ ಮೇಲೊಬ್ಬರ ನೆಪ ಹೇಳಿಕೊಂಡು ದಿನ ಕಳೆಯುತ್ತಿದ್ದಾರೆ. ಸುಪ್ರಸಿದ್ಧ ಪ್ರೇಕ್ಷಣೀಯ ಸ್ಥಾನ ಯಲ್ಲಮ್ಮನ ಗುಡ್ಡವನ್ನು ಸುತ್ತವರಿದು ಸವದತ್ತಿ ಪಟ್ಟಣ ಹಾಗೂ ಗ್ರಾಮಗಳಿವೆ. ವಿಶಾಲವಾಗಿ ಹರಿದ ಮಲಪ್ರಭೆಯಿಂದ ಸಾಕಷ್ಟು ನೀರಿನ …

Read More »

ಗೋಡೆಗಳಲ್ಲಿ ಅರಳಿದ ಕಲಾಕೃತಿ

ಕಿತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಹಾಗೂ ಸೋಮವಾರ ಪೇಟೆಯ ಹೃದಯ ಭಾಗದಲ್ಲಿರುವ ರಾಣಿ ಚನ್ನಮ್ಮನ ಪುತ್ಥಳಿಗೆ ಹೊಸಕಳೆ ಬಂದಿದ್ದು, ಹೆದ್ದಾರಿ ಕೆಳ ಸೇತುವೆಯ ಪಕ್ಕದ ಗೋಡೆಗಳಲ್ಲಿ ರಾಣಿ ಚನ್ನಮ್ಮ ಹಾಗೂ ಇತಿಹಾಸ ಬಿಂಬಿಸುವ ಕೆಲವು ಸನ್ನಿವೇಶ, ಚಿತ್ರಗಳು ಜೀವ ಪಡೆದಿದ್ದು, ಕಿತ್ತೂರು ಕಳೆಗಟ್ಟಿದೆ.   ಇಲ್ಲಿನ ಕೋಟೆ ಆವರಣದಲ್ಲಿ ಅ. 23ರಿಂದ 25 ರ ವರೆಗೆ ನಡೆಯಲಿರುವ ಚನ್ನಮ್ಮನ ಕಿತ್ತೂರು ಉತ್ಸವದ ಅಂಗವಾಗಿ ಕಲಾಕೃತಿಗಳು ಜೀವತಳೆದಿವೆ. ಅಶ್ವಾರೂಢ ಚನ್ನಮ್ಮನ ಪ್ರತಿಮೆಗೆ …

Read More »

ಎಚ್‌ಐವಿ ತಡೆಗಟ್ಟುವಿಕೆ ಜಾಗೃತಿಗಾಗಿ ಮ್ಯಾರಥಾನ್

ಬೆಳಗಾವಿ: ಎಚ್‌ಐವಿ/ಏಡ್ಸ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್‌ ಸೊಸೈಟಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ನಗರದಲ್ಲಿ ಶನಿವಾರ ‘ರೆಡ್ ರನ್’ ರಾಜ್ಯಮಟ್ಟದ 5 ಕಿ.ಮೀ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಓಟ ಕೃಷ್ಣದೇವರಾಯ ವೃತ್ತ, ರಾಣಿ ಚನ್ನಮ್ಮನ ವೃತ್ತದ ಮಾರ್ಗವಾಗಿ ಸಾಗಿ, ಜಿಲ್ಲಾ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ರಾಜ್ಯ ಏಡ್ಸ್ ಪ್ರಿವೆನ್ಷನ್‌ ಸೊಸೈಟಿ ಹೆಚ್ಚುವರಿ ಯೋಜನಾ ನಿರ್ದೇಶಕಿ ಡಾ.ಉಮಾ ಬುಗ್ಗಿ ಸ್ಪರ್ಧೆಗೆ ಚಾಲನೆ ನೀಡಿದರು. …

Read More »

ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಮರುಪರಿಶೀಲಿಸಬೇಕು: ಮಹಾಂತೇಶ ಕವಟಗಿಮಠ

ಬೆಳಗಾವಿ: ‘ಎಚ್‌.ಕಾಂತರಾಜ ಆಯೋಗ ಕೈಗೊಂಡ 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ವರದಿ ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರ ಅದನ್ನು ಮರುಪರಿಶೀಲಿಸಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಒತ್ತಾಯಿಸಿದರು. ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‌ಜಾತಿ ಗಣತಿ ಮಾಡಬೇಕಾದರೆ ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕು. ಆದರೆ, ಕಾಂತರಾಜ ಆಯೋಗವು ಮನೆ-ಮನೆಗೆ ತೆರಳದೆ, ಸಾಮೂಹಿಕವಾಗಿ ಕೆಲವೇ ಜನರ ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷೆ ಕೈಗೊಂಡಿದೆ. ಈ ವರದಿ …

Read More »

ವೈಭವಯುತ ‘ಕಿತ್ತೂರು ಉತ್ಸವ’ಕ್ಕೆ ಭರದ ಸಿದ್ಧತೆ: ಶಾಸಕ ಬಾಬಾಸಾಹೇಬ ಪಾಟೀಲ

ಬೆಳಗಾವಿ: ‘ಚನ್ನಮ್ಮನ ಕಿತ್ತೂರಿನಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. 23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ‘ದ್ವಿಶತಮಾನೋತ್ಸವದ ಕಾರಣಕ್ಕಾಗಿ ಈ ಬಾರಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಅನುದಾನ ಘೋಷಿಸಿದೆ. ಒಂದೆರಡು ದಿನಗಲ್ಲಿ ಸಂಪೂರ್ಣ ಅನುದಾನ ಬಿಡುಗಡೆಯಾಗಲಿದೆ’ ಎಂದು ಅವರು ನಗರದಲ್ಲಿ ಶನಿವಾರ …

Read More »