Breaking News

ಬೆಳಗಾವಿ

ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ,ಒಟ್ಟೂ 41 ಜನರಿಗೆ ಸೋಂಕು

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ ಮತ್ತೆ 44 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ ಕಂಡುಬಂದಿದ್ದು, ಇವರಲ್ಲಿ ಮೂವರನ್ನು ಐಸಿಯುನಲ್ಲಿ ಇರಿಸಲಾಗಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಒಟ್ಟೂ 41 ಜನರಿಗೆ ಸೋಂಕು ತಗುಲಿದಂತಾಗಿದೆ. ಬೆಂಗಳೂರಿನಲ್ಲಿ 1 ಹೊಸ ಪ್ರಕರಣ ಪತ್ತೆಯಾಗಿದೆ., ಬೆಳಿಗ್ಗೆಯಷ್ಟೇ ರಾಜ್ಯದಲ್ಲಿ 38 ಪ್ರಕರಣ …

Read More »

ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಪರಿಶೀಲನೆ

ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಲಾಕ್ ಡೌನ್ ನಿರ್ವಹಣೆ ಹಾಗೂ ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಚಿಕ್ಕಲವಾಳ, ರಾಮಪುರ, ಪಾಂಗೇರಿ ಮೊದಲಾದ ಗ್ರಾಮಗಳಿಗೆ ತೆರಳಿದ ಪ್ರಕಾಶ ಹುಕ್ಕೇರಿ ಅಲ್ಲಿನ ಪರಿಸ್ಥಿತಿಯ ಅವಲೋಕನ ನಡೆಸಿದರು. ಈ ವೇಳೆ ಗ್ರಾಮಸ್ಥರ ಸಭೆ ನಡೆಸಿದ ಅವರು, ಮಹಾಮಾರಿ ಕೊರೋನಾ …

Read More »

ಬೆಳಗಾವಿ-ಅನಗತ್ಯ ವಾಗಿ ಸುತ್ತಾಡುವವರಿಗೆ ಖಾಕಿ ಖದರ್ ಗೊತ್ತಾಗಲಿದೆ………

ವ್ಯಾಪಕವಾಗಿ ಹರಡುತ್ತಿರುವ ವೈರಸ್…ಬೆಳಗಾವಿ ಪೋಲೀಸ್ ಫುಲ್ ಸೀರಿಯಸ್…..!!!! ನಾಳೆಯಿಂದ ಅನಗತ್ಯವಾಗಿ ಸುತ್ತಾಡಿದ್ರೆ ಕೇಸ್ ಬಿಳೋದು ಗ್ಯಾರಂಟಿ… ಅನಗತ್ಯ ವಾಗಿ ಸುತ್ತಾಡುವವರಿಗೆ  ಖಾಕಿ ಖದರ್ ಗೊತ್ತಾಗಲಿದೆ. ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ಬೆಳಗಾವಿ ಪೋಲೀಸರು ಗಂಭೀರವಾಗಿ ಪರಿಗಣಿಸಿದ್ದು ನಾಳೆಯಿಂದ ಅತ್ಯಂತ ಕಟ್ಟು ನಿಟ್ಟಿನ ಲಾಕ್ ಡೌನ್ ಅನುಷ್ಠಾನ ಗೊಳಿಸಲು ನಿರ್ಧರಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 36 ಕ್ಕೆ ಏರಿಕೆ ಆಗುತ್ತಿದ್ದಂತೆಯೇ ತುರ್ತು ಸಭೆ …

Read More »

ಜಿಲ್ಲೆಯಲ್ಲಿ 530 ಅಬಕಾರಿ ದಾಳಿ: 63 ಪ್ರಕರಣ ದಾಖಲು 71 ಲಕ್ಷ ರೂ. ಮೌಲ್ಯಮದ್ಯ ವಶ

ಬೆಳಗಾವಿ -: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ, ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿದೆ.  ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು 530 ದಾಳಿಗಳನ್ನು ನಡೆಸಿ, 63 ಅಬಕಾರಿ ಪ್ರಕರಣಗಳನ್ನು ದಾಖಲಿಸಿಕೊಂಡು 34 ಆರೋಪಿಗಳನ್ನು ಬಂಧಿಸಿ 4662,695 ಲೀಟರ್‌ ಮದ್ಯ, 27 ಅಟರ್ ಗೋವಾ ಮದ್ಯ, 10.170 …

Read More »

ಕೋವಿಡ್-19 ನಿಯಂತ್ರಣ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ವಿಡಿಯೋ ಸಂವಾದ

ಕೋವಿಡ್-19 ನಿಯಂತ್ರಣ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ವಿಡಿಯೋ ಸಂವಾದ ಬೆಳಗಾವಿ, ಏ.16:(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ಸೋಂಕು ಹರಡುವಿಕೆ ತಡೆಗಟ್ಟುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಆದ್ದರಿಂದ ಇದು ಇನ್ನಷ್ಟು ಹರಡದಂತೆ ಬಿಗಿಯಾದ ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೋವಿಡ್-19 ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲ ಉಪ ವಿಭಾಗಾಧಿಕಾರಿಗಳು ಮತ್ತು ತಾಲ್ಲೂಕುಗಳ ಅಧಿಕಾರಿಗಳ ಜತೆ …

Read More »

ಜನತೆಗೆ ದಾನಿಯೊಬ್ಬರು ಕೊಡಮಾಡಿದ ದಿನಸಿ ಸಾಮಗ್ರಿಗಳನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಗುರುವಾರ(ಏ.೧೬) ವಿತರಿಸಿದರು.

ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಗಾಂಧಿನಗರದಲ್ಲಿರುವ ಬಡ ಕುಟುಂಬದವರಿಗೆ ಹಾಗೂ ಅಗತ್ಯವಿರುವ ಜನತೆಗೆ ದಾನಿಯೊಬ್ಬರು ಕೊಡಮಾಡಿದ ದಿನಸಿ ಸಾಮಗ್ರಿಗಳನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಗುರುವಾರ(ಏ.೧೬) ವಿತರಿಸಿದರು. ಇಡೀ ದೇಶದ ಜನರ ಆರೋಗ್ಯದ ದೃಷ್ಟಿಯಿಂದ ಲಾಕ್ ಡೌನ್ ಘೋಷಿಸಲಾಗಿದ್ದು, ಸರ್ಕಾರದ ನಿರ್ದೇಶನದಂತೆ ಎಲ್ಲರೂ ಕಡ್ಡಾಯವಾಗಿ ಲಾಕ್ ಡೌನ್ ಪಾಲಿಸುವ ಮೂಲಕ ಕರೊನಾ ನಿರ್ಮೂಲನೆಗೆ ಸಹಕರಿಸಬೇಕು ಎಂದು ಸಚಿವ ಸುರೇಶ್ ಅಂಗಡಿ ಅವರು ಮನವಿ …

Read More »

ಡಾ. ಪದ್ಮಾಜಿತ ನಾಡಗೌಡ ಪಾಟೀಲ ಅವರು ಎರಡು ಲಕ್ಷ ರೂ. ಚೆಕ್ಕನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಹಸ್ತಾಂತರಿಸಿದರು.

ಗೋಕಾಕ: ಕೊರೋನಾ‌ ವಿರುದ್ಧದ ಹೋರಾಟಕ್ಕಾಗಿ ಕೆಪಿಸಿಸಿ‌ ಕೊರೋನಾ ವಿಪತ್ತು ಪರಿಹಾರ ನಿಧಿ ಸಂಗ್ರಹಕ್ಕೆ‌ ಮುಂದಾಗಿದ್ದು  ಇಂದು ಅಥಣಿ ತಾಲೂಕಿನ ಕಾಂಗ್ರೆಸ್ ಮುಖಂಡ ಡಾ. ಪದ್ಮಾಜಿತ ನಾಡಗೌಡ ಪಾಟೀಲ ಅವರು ಎರಡು ಲಕ್ಷ ರೂ. ಚೆಕ್ಕನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಹಸ್ತಾಂತರಿಸಿದರು. ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಚೆಕ್ ಸ್ವೀಕರಿಸಿ ಪದ್ಮಾಜಿತ ನಾಡಗೌಡ ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಸತೀಶ ಜಾರಕಿಹೊಳಿ ಅವರು ಸಂಕಷ್ಟದಲ್ಲಿರುವ ಜನತೆಯೊಂದಿಗೆ …

Read More »

ಇದು ಅಣ್ಣ ದಾನಿಗಳಾದ ಮಲ್ಲಿಕಾರ್ಜುನ್ ಮಹಾಸ್ವಾಮಿಗಳಿಂದ 2000 ಜನಗಳಿಗೆ ಅನ್ನಪ್ರಸಾದ ವಿತರಣೆ

  ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಇದು ಅಣ್ಣ ದಾನಿಗಳಾದ ಮಲ್ಲಿಕಾರ್ಜುನ್ ಮಹಾಸ್ವಾಮಿಗಳಿಂದ 2000 ಜನಗಳಿಗೆ ಅನ್ನಪ್ರಸಾದ ವಿತರಣೆ ಕೊರೋನಾ ಎಂಬ ಮಹಾಮಾರಿ ರೋಗ ಹೆಚ್ಚಾಗಿ ಹರಡುತ್ತಿರುವುದು ಕಡುಬಡವರಿಗೆ ಜನರಲ್ಲಿ ಆತಂಕ ಉಂಟುಮಾಡಿದೆ ತಿನ್ನಲು ಅನ್ನ ಇಲ್ಲದ ದುಡಿಯಲು ಕೆಲಸವಿಲ್ಲದ ಆದ ಕಾರಣ ಜನರಲ್ಲಿ ಭಯದ ವಾತಾವರಣ ಮೂಡಿರುತ್ತದೆ ಪೊಲೀಸ್ ಸಿಬ್ಬಂದಿ ವರ್ಗದವರಿಗೂ ಆಶಾ ಕಾರ್ಯಕರ್ತರಿಗೆ ಅಂಗನವಾಡಿ ಕಾರ್ಯಕರ್ತರಿಗೆ ಮಾಧ್ಯಮ ವರ್ಗದವರಿಗೂ ವಲಸೆ ಬಂದ ಜನಾಂಗದವರಿಗೆ ಶಂಕಧಯ ಜನಾಂಗದವರಿಗೆ ಪೌರಕಾರ್ಮಿಕರಿಗೆ ವಲಸೆ …

Read More »

ಇಂದಿನಿಂದ ೧೦ದಿನಗಳವರೆಗೆ ನೀರು ಬಿಡುಗಡೆ, ಕುಡಿಯುವುದಕ್ಕಾಗಿ ಮಾತ್ರ ಬಳಕೆ ಮಾಡಿ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದ ಮೂಲಕ ಘಟಪ್ರಭಾ ಬಲದಂಡೆ ಕಾಲುವೆಗೆ ಗುರುವಾರ ಸಂಜೆಯಿಂದ ಮುಂದಿನ ೧೦ ದಿನಗಳ ವರೆಗೆ ನೀರನ್ನು ಹರಿಸಲಾಗುತ್ತಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಇಂದು ಸಂಜೆ ಆರು ಗಂಟೆಯಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ೨ ಟಿಎಂಸಿ ಮತ್ತು ಸಿಬಿಸಿ ಕಾಲುವೆಗೆ ೫೫೦೦ ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಏ. ೧೬ …

Read More »

ನೀರಿನ‌ ಸದ್ಬಳಕೆಗೆ ಅಂತರ ರಾಜ್ಯ ನದಿ ಜೋಡಣೆ ಮಾಡಬೇಕಾದ ಅಗತ್ಯವಿದೆ.:ಸಚಿವ ರಮೇಶ್ ಜಾರಕಿಹೊಳಿ‌

ಬೆಂಗಳೂರು: ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನ ದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ, ನೀರಾವರಿ ತಜ್ಞ ಕ್ಯಾ. ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಬೆಂಗಳೂರಿನ ವಿಧಾನಸೌದ ಕಚೇರಿಯಲ್ಲಿ ಇಂದು ಚರ್ಚಿಸಿದ ಬಳಿಕ ಮಾತನಾಡಿದರು. ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ …

Read More »