Breaking News

ಬೆಳಗಾವಿ

ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣ: ಚಿವ ರಮೇಶ ಜಾರಕಿಹೊಳಿ

ಬೆಳಗಾವಿ: ಕೊರೊನಾ ಸೋಂಕು ನಿರ್ಮೂಲನೆಗೆ ಹೆಜ್ಜೆ ಹಾಕುತ್ತಿರುವ ನಾವು ಏ.5ರಂದು ಪ್ರಧಾನಿ ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು,ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಂಡಿವೆ. ಈ ನಿಟ್ಟಿನಲ್ಲಿ ಜನರು ನಿಯಮಗಳನ್ನು ಪಾಲಿಸಬೇಕು ಎಂದರು. ಭಾರತವನ್ನು ಕೊರೊನಾ ಸೋಂಕು ಮುಕ್ತ ಮಾಡುವ ನಮ್ಮ ಸಂಕಲ್ಪ …

Read More »

ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು: ಸಚಿವ ರಮೇಶ ಜಾರಕಿಹೊಳಿ

ಗೋಕಾಕ್: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ. ಆದ ಕಾರಣ ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳು ಹಾಗೂ ಸರ್ವ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಆದ ಕಾರಣ ಗೋಕಾಕ್ ತಾಲ್ಲೂಕಿನ …

Read More »

ಒಟ್ಟು ಆರು ಮಾದರಿಗಳ ಪೈಕಿ ಎಲ್ಲ ಆರೂ ವರದಿಗಳು ನೆಗೆಟಿವ್ ಬಂದಿರುತ್ತವೆ : ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ

ಬೆಳಗಾವಿ, ಏ.೨(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಒಟ್ಟು ಆರು ಮಾದರಿಗಳ ಪೈಕಿ ಎಲ್ಲ ಆರೂ ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಿಂದ ಇದುವರೆಗೆ ಒಟ್ಟು ೨೭ ಮಾದರಿಗಳನ್ನು ಕಳಿಸಲಾಗಿತ್ತು. ಇಂದು ಬಂದಿರುವ ವರದಿಯ ಪ್ರಕಾರ ಎಲ್ಲ ೨೭ ಮಾದರಿಗಳು ನೆಗೆಟಿವ ಬಂದಿರುತ್ತವೆ ಎಂದು‌ ತಿಳಿಸಿದ್ದಾರೆ. ಇದುವರೆಗೆ ೨೧ ಮಾದರಿಗಳ ವರದಿ …

Read More »

ಕೊರೋನಾ ವೈರಸ ಹಿನ್ನೆಲೆ : ಜವಾಬ್ದಾರಿಯುತ ಕಾರ್ಯ ನಿರ್ವಹಿಸಿ : ಡಿ.ಎಸ್.ಪಿ ಡಿ.ಟಿ ಪ್ರಭು

ಗೋಕಾಕ:ಕೊರೋನಾ ವೈರಸ ಹಿನ್ನೆಲೆ : ಜವಾಬ್ದಾರಿಯುತ ಕಾರ್ಯ ನಿರ್ವಹಿಸಿ : ಡಿ.ಎಸ್.ಪಿ ಡಿ.ಟಿ ಪ್ರಭು ಜನಪ್ರತಿನಿಧಿಗಳು , ಮುಖಂಡರುಗಳು ಕೊರೋನಾ ವೈರಸ್ ಹರಡದಂತೆ ಜವಾಬ್ದಾರಿಯುತ ಕಾರ್ಯ ನಿರ್ವಹಿಸಬೇ ವಹಿಸಬೇಕಾಗಿದೆ ಎಂದು ಡಿ.ಎಸ್.ಪಿ ಡಿ‌.ಟಿ ಪ್ರಭು ಹೇಳಿದರು ಗುರುವಾರದಂದು ನಗರದ ಶಹರ ಠಾಣೆಯಲ್ಲಿ ನಡೆದ ವಿವಿಧ ಮುಖಂಡರುಗಳ ಸಭೆಯಲ್ಲಿ ಮಾತನಾಡಿದ ಅವರು ಕಳೆದ ಒಂದು ವಾರದಿಂದ ರಾಜಾದ್ಯಂತ ಲಾಕಡೌನ ಜಾರಿಯಲ್ಲಿದ್ದು , ಗೋಕಾಕ ನಗರದಲ್ಲಿಯೂ ಸಹ ಲಾಕಡೌನ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ …

Read More »

ದೆಹಲಿ ಸಮಾವೇಶಕ್ಕೆ ಹೋಗಿದ್ದವರ ಶೋಧಕ್ಕೆ ಹುಕ್ಕೇರಿ ಪೊಲೀಸರ ಹೊಸ ಐಡಿಯಾ

ಬೆಳಗಾವಿ(ಚಿಕ್ಕೋಡಿ): ದೇಶವನ್ನೇ ತಲ್ಲಣಗೊಳಿಸಿರುವ ಕೊರೊನಾ ಶಂಕಿತರಾದ ದೆಹಲಿ ನಿಜಾಮುದ್ದೀನ್ ಸಮಾವೇಶದ ನಂಟು ಇದ್ದವರ ಪತ್ತೆಗಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಪೊಲೀಸರು ಹೊಸ ಐಡಿಯಾವೊಂದನ್ನ ಮಾಡಿದ್ದಾರೆ. ಪೊಲೀಸರು ಗಲ್ಲಿ ಗಲ್ಲಿಗಳಿಗೆ ಹೋಗಿ ಯಾರಾದರೂ ದೆಹಲಿಯ ನಿಜಾಮುದ್ದೀನ್ ಸಮಾವೇಶಕ್ಕೆ ಜಮಾತ್‍ಗೆ ಹೋಗಿ ಬಂದಿದ್ದರೆ ದಯವಿಟ್ಟು ಬಂದು ಮಾಹಿತಿ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಹುಕ್ಕೇರಿ ಪಟ್ಟಣದ ತಬ್ಲಿಗ ಸಮಾಜದ ಎರಿಯಾಗಳಿಗೆ ಹೋಗಿ ಪೊಲೀಸರು ಧ್ವನಿ ವರ್ಧಕಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಹುಕ್ಕೇರಿ …

Read More »

ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ 3,800 ಜನರು ಬಂದಿದ್ದಾರೆ:ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಕೊರೋನಾದಿಂದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಾಗಿರುವ ಪರಿಣಾಮ, ಕ್ಷೇತ್ರಕ್ಕೆ ಹೊರದೇಶಗಳಿಂದ ಬಂದಿರುವವರ ಮೇಲೆ ತೆಗೆದುಕೊಂಡಿರುವ ಕ್ರಮ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಎಚ್ಚರಿಕೆಗಳ ಕುರಿತು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಚರ್ಚಿಸಿದರು.  ಬೆಳಗಾವಿ ತಾಲೂಕಾ ಪಂಚಾಯತ ಸಭಾಗೃಹದಲ್ಲಿ  ಸಭೆ ಆಯೋಜಿಸಲಾಗಿತ್ತು. ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ 3,800 ಜನರು ಬಂದಿದ್ದಾರೆ. ಈ 3800 ಜನರ ಮೇಲೆ ನಿಗಾ …

Read More »

ಹುಕ್ಕೇರಿ ಪಟ್ಟಣದ ಬಾಗವಾನ ಗಲ್ಲಿಯ ಓರ್ವ ವ್ಯಕ್ತಿ ಈ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಖಚಿತ

ಹುಕ್ಕೇರಿ ; ದೆಹಲಿಯ ನಿಜಾಮುದ್ದೀನ್ ತಬ್ಲೀಘ್ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡ ಓರ್ವ ಸೇರಿದಂತೆ ಇದೇ ವೇಳೆ ಅಂತಾರಾಜ್ಯಗಳಿಗೆ ಭೇಟಿ ನೀಡಿದ ತಾಲೂಕಿನ ಐವರಿಗೆ ಕಿಲ್ಲರ್ ಕೊರೋನಾ ವೈರಸ್ ಸೋಂಕು ತಗಲಿರುವ ಶಂಕೆಯ ಮೇಲೆ ನಿಗಾ ವಹಿಸಲಾಗಿದೆ. ಹುಕ್ಕೇರಿ ಪಟ್ಟಣದ ಬಾಗವಾನ ಗಲ್ಲಿಯ ಓರ್ವ ವ್ಯಕ್ತಿ ಈ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಖಚಿತಪಟ್ಟ ಹಿನ್ನೆಲೆಯಲ್ಲಿ ಆತನನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಜತೆಗೆ ಇದೇ ಸಮಯದಲ್ಲಿ …

Read More »

ಚಿಕ್ಕೋಡಿ:ಮದ್ಯ ಸಿಗುತ್ತಿಲ್ಲವೆಂದು ಬಾವಿಗೆ ಹಾರಿ ಪ್ರಾಣ ಬಿಟ್ಟ

ಚಿಕ್ಕೋಡಿ (ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ರಾಜ್ಯದಲ್ಲಿ ಮದ್ಯದ ಅಂಗಡಿ ಬಂದ್ ಆಗಿವೆ. ಪರಿಣಾಮ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಬಾವಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ. ಕೋಥಳಿ ಗ್ರಾಮದ ಪೋಪಟ್ ಈರಪ್ಪ ಬಡಿಗೇರಿ (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮದ್ಯದ ಅಂಗಡಿ ಬಂದ್ ಆಗಿದ್ದರಿಂದ ಪೋಪಟ್ ಸೋಮವಾರ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಕೋಥಳಿ ಗ್ರಾಮದ ಗಲ್ಲಿ ಗಲ್ಲಿ ಸುತ್ತಿ ನಾಪತ್ತೆಯಾಗಿದ್ದ. ಆದರೆ ಇಂದು …

Read More »

ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಒಂದು ಲಕ್ಷ ರೂ. ದೇಣಿಗೆ

ಬೆಳಗಾವಿ – ​ ​ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಆರ್ ಟಿಜಿಎಸ್ ಮೂಲಕ ಹಣವನ್ನು ಅವರು ವರ್ಗಾಯಿಸಿದ್ದಾರೆ. ಕೊರೋನಾ ವೈರಸ್ ಹರಡುತ್ತಿರುವ ಇಂದಿನ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ತಮ್ಮ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಿದ್ದಾರೆ. ಜನರು ಮನೆಯಲ್ಲೇ ಇದ್ದುಕೊಂಡು ತಮ್ಮ ಸಹಕಾರ ನೀಡಬೇಕು. ನಮಗಾಗಿ ತಮ್ಮ ಜೀವವನ್ನೇ ಪಣವಾಗಿಟ್ಟು ಕೆಲಸ …

Read More »

ಮರ್ಕಜ್ ಧಾರ್ಮಿಕ ಸಭೆ: ಜಿಲ್ಲೆಯ ೬೨ ಜನರಲ್ಲಿ ಸೋಂಕಿನ ಲಕ್ಷಣಗಳಿಲ್ಲ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಬೆಳಗಾವಿ -: ದೆಹಲಿಯ ಮರ್ಕಜ್ ಧಾರ್ಮಿಕ ಸಭೆಗೆ ಹೋಗಿಬಂದಿರುವ ಬೆಳಗಾವಿ ಜಿಲ್ಲೆಯ 62 ಜನರ ಮಾಹಿತಿ ಲಭಿಸಿದೆ.  ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. 62 ಜನರ ಪೈಕಿ ಡಯಾಬಿಟಿಸ್, ಅಸ್ಥಮಾ, ಹೈಪರ್ ಟೆನ್ಷನ್ ಹೊಂದಿರುವ ಐವತ್ತಕ್ಕೂ ಅಧಿಕ ವಯೋಮಾನದ 27 ಜನರನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದು ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ. ಇದುವರೆಗೆ ನಡೆಸಲಾದ ವೈದ್ಯಕೀಯ ತಪಾಸಣೆಯ ಪ್ರಕಾರ ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ …

Read More »