ಬೆಳಗಾವಿ: ಸತೀಶ ಜಾರಕಿಹೊಳಿ ಅಭಿಮಾನಿ ಬಳಗ, ವಾಲ್ಮೀಕಿ ಯುವ ವೇದಿಕೆ ಕಾರ್ಯಕರ್ತರು ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕೀಡಾದ ಬಡ ಜನರಿಗೆ, ಕೂಲಿ ಕಾರ್ಮಿಕರಿಗೆ, ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳನ್ನು ವಿತರಿಸಿದರು. ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಕಾರ್ಯಕರ್ತರು, ಮಾಹಾನಗರ ಪಾಲಿಕೆ ಮೂಲಕ ಬಡವರಿಗೆ ಮತ್ತು ಅಗತ್ಯ ಸೇವೆ ಸಲ್ಲಿಸುತ್ತಿರುವ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಊಟ, ಹಣ್ಣು ಹಂಪಲ, ಹ್ಯಾಂಡ್ ವಾಷ್, ವಾಟರ್ ಬಾಟಲ್ …
Read More »ಮೂಡಲಗಿ:ದೇಹದ ಮೇಲೆ ಕೊರೊನಾ ಚಿತ್ರದ ಜತೆಗೆ ಜಾಗೃತಿ ಸಂದೇಶ
ಬೆಳಗಾವಿ: ಜಿಲ್ಲೆಯ ಮೂಡಲಗಿ ಪಟ್ಟಣದ ಯುವಕನೊಬ್ಬ ದೇಹದ ಮೇಲೆ ಕೊರೊನಾ ಚಿತ್ರದ ಜತೆಗೆ ಜಾಗೃತಿ ಸಂದೇಶ ಸಾರುವ ಸಾಲುಗಳನ್ನು ಬರೆಸಿಕೊಂಡು ಜನರಿಗೆ ಕೊರೊನಾ ಕುರಿತು ತಿಳುವಳಿಕೆ ಮೂಡಿಸುತ್ತಿದ್ದಾನೆ. ಜಗತ್ತಿನಾದ್ಯಂತ ಕೊರೊನಾ ಸೋಂಕಿನಿಂದ ಜನರು ತತ್ತರಿಸಿದ್ದಾರೆ. ಇದರಿಂದ ಭಾರತ ಸರ್ಕಾರವೂ ಮುಂಜಾಗೃತ ಕ್ರಮವಾಗಿ ಸೋಂಕು ತಡೆಗಟ್ಟಲು ಲಾಕ್ ಡೌನ್ ಘೋಷಣೆ ಮಾಡಿದೆ. ಆದರೆ ಗಂಭೀರವಾಗಿ ತೆಗೆದುಕೊಳ್ಳದ ಜನರು ಮನೆಯಿಂದ ಹೊರ ಬರುತ್ತಿದ್ದಾರೆ. ಸರ್ಕಾರದ ನಿಮಯಗಳನ್ನು ಪಾಲನೆ ಮಾಡುತ್ತಿಲ್ಲ. ಆದ ಕಾರಣ ಜಾಗೃತಿ …
Read More »ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಸ್ವಾಮಿಜಿ ರಸ್ತೆಗಿಳಿಯದಂತೆ ಜಾಗೃತಿ ಕಾರ್ಯ ಮಾಡಿದ್ದಾರೆ.
ಚಿಕ್ಕೋಡಿ(ಬೆಳಗಾವಿ): ಕೊರೊನಾ ಸೋಂಕು ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಆದೇಶ ಹೇರಲಾಗಿದೆ. ಲಾಕ್ಡೌನ್ ಆದೇಶ ಉಲ್ಲಂಘಿಸಿ ರಸ್ತೆಗಿಳಿಯುತ್ತಿರುವ ಜನರಿಗೆ ಪೊಲೀಸರು ಲಾಠಿ ರುಚಿ ಕೂಡ ತೋರಿಸಿದ್ದಾರೆ. ಪೋಲಿಸರ ಲಾಠಿ ಏಟಿಗೂ ಲಾಕ್ ಡೌನ್ ಪಾಲಿಸದ ಜನರಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಸ್ವಾಮಿಜಿ ರಸ್ತೆಗಿಳಿಯದಂತೆ ಜಾಗೃತಿ ಕಾರ್ಯ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮಿಜಿ …
Read More »ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಪರೀಶಿಲನೆ
ಯಮಕನಮರಡಿ: ಲಾಕ್ಡೌನ್ ನಿಮಿತ್ಯ ಯಮಕನಮರಡಿ ಕ್ಷೇತ್ರದ ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಪರೀಶಿಲನೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದರು. ಕೋರೊನಾ ರೋಗ ಹರಡದಂತೆ ಹುದಲಿ ಗ್ರಾಮ ಪಂಚಾಯತಿ ಜನರಲ್ಲಿ ಯಾವ ರೀತಿ ಜಾಗ್ರತೆ ಮೂಡಿಸುತ್ತಿದೆ ಎಂದು ಮಾಹಿತಿ ಪಡೆದುಕೊಂಡ ಶಾಸಕರು ಗ್ರಾಮಸ್ಥರಲ್ಲಿ ಮನೆಯಿಂದ ಯಾರೂ ವಿನಾಕಾರಣ ಹೊರಗಡೆ ಬಾರದಂತೆ ಮನವಿ ಮಾಡಿಕೊಂಡರು. ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹುದಲಿ, …
Read More »ಲಾಕ್ ಡೌನ್ ನಿಯಮ ಮೀರಿ ರಸ್ತೆಗಿಳಿದ ಜನರ ಮೇಲೆ ವಿನಾಕಾರಣ ಲಾಠಿ ಚಾರ್ಜ್ ಮಾಡಬೇಡಿ: ಸಂತೋಷ ಜಾರಕಿಹೊಳಿ
ಲಾಕ್ ಡೌನ್ ನಿಯಮ ಮೀರಿ ರಸ್ತೆಗಿಳಿದ ಜನರ ಮೇಲೆ ವಿನಾಕಾರಣ ಲಾಠಿ ಚಾರ್ಜ್ ಮಾಡಬೇಡಿ: ಸಂತೋಷ ಜಾರಕಿಹೊಳಿ ಅಗತ್ಯ ವಸ್ತುಗಳನ್ನು ತರಲು ಹೋದವರ ಮೇಲೆ ಲಾಠಿ ಚಾರ್ಜ್ ಮಾಡಬೇಡಿ/ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದರೆ ಮಹಾಮಾರಿ ಕೊರೊನಾ ವೈರಸ್ ರೋಗವನ್ನು ನಿಯಂತ್ರಿಸಲು ಸಾಧ್ಯ/ಪೋಲಿಸರಿಗೆ ಹಾಗೂ ಸಾರ್ವಜನಿಕರಿಗೆ ಮನವಿ ಮಾಡಿದ ಸಂತೋಷ ಜಾರಕಿಹೊಳಿ ಸರ್ಕಾರ ದಿಢೀರನೆ ಲಾಕ್ ಡೌನ್ ನಿರ್ಧಾರ ಘೋಷಣೆ ಮಾಡಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಮೊದಲ ಬಾರಿ ಇಂಥದೊಂದು ಬಿಕ್ಕಟ್ಟು ಎದುರಿಸುವ ಸಂಧರ್ಭ …
Read More »ಈಜು ಕಲಿಸಲು ಭಾವಿಗೆ ಹೋದ ವ್ಯಕ್ತಿಯೊಬ್ಬ ಮಗನ ಜೊತೆ ನೀರಿನಲ್ಲಿ ಮುಳುಗಿ ಸಾವು : ರಾಜಾಪೂರ ಗ್ರಾಮದಲ್ಲಿ ಘಟನೆ
ಮಗನಿಗೆ ಈಜು ಕಲಿಸಲು ಭಾಂವಿಗೆ ಹೋದ ವ್ಯಕ್ತಿಯೊಬ್ಬ ಮಗನ ಜೊತೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾಯಕ ಘಟನೆ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಮಂಗಳವಾರದಂದು ಮುಂಜಾನೆ ಜರುಗಿದೆ. ಸತ್ತೆಪ್ಪ ರಾಮಪ್ಪ ಕಮತೆ (75) ಎಂಬವನು ತನ್ನ ಮಗ ಪರುಶರಾಮನಿಗೆ ಈಜು ಕಲಿಸಲು ಕಮತೆ ತೋಟದ ಭಾಂವಿಗೆ ಹೋಗಿದ್ದನು. ಮಗನ ಬೆನ್ನಿಗೆ ದಂಟಿನ ಸೂಡು ಕಟ್ಟಿ ಭಾಂವಿಯೊಳಗೆ ಇಳಿಸಿದಾಗ ದಂಟಿನ ಸೂಡು ಬಿಚ್ಚಿ ಪರುಶರಾಮ ಮುಳುಗ ತೊಡಗಿದಾಗ ತಂದೆ ಸತ್ತೆಪ್ಪ ತಾನೂ ಭಾಂವಿಗೆ …
Read More »ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಉಪಹಾರ ಮತ್ತು ಮಧ್ಯಾಹನದ ಊಟದ ವ್ಯವಸ್ಥೆ
ಕೋರೊನಾ ವೈರಸ್ ಹರಡದಂತೆ ಕಾರ್ಯನಿರ್ವಹಿಸುತ್ತಿರುವ ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಹಾಗೂ ಪುರಸಭೆ ಸಿಬ್ಬಂದಿಗಳಿಗೆ ಪಟ್ಟಣದ ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ಪುರಸಭೆ ಸದಸ್ಯ ಶಿವಾನಂದ ಚಂಡಕಿ, ಶ್ರೀ ಸಾಯಿ ಸೌಹರ್ದ ಬ್ಯಾಂಕಿನ ಅಧ್ಯಕ್ಷ ಮರೆಪ್ಪ ಮರೆಪ್ಪಗೋಳ ಮತ್ತು ಹಳ್ಳೂರ ಪಿಕೆಪಿಎಸ್ ಸದಸ್ಯ ಹನುಮಂತ ತೇರದಾಳ ಅವರು ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹನದ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಆನಂದ ಟಪಾಲದಾರ, …
Read More »ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. :ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ಕೋವಿಡ್ ೧೯ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯ ಸಂದರ್ಭದಲ್ಲಿ ಸದಾಕಾಲ ಸಮಾಜ ಮತ್ತು ರಾಜ್ಯ ಸರ್ಕಾರದ ಜೊತೆಗಿರುವ ಕೆಎಂಎಫ್, ಕ್ಲಿಷ್ಟಕರ್ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾಲಕಾಲಕ್ಕೆ …
Read More »“ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ “
ಬೆಳಗಾವಿ – ಶಾಸಕ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಂಗಳವಾರ ವಿವಿಧೆಡೆ ಸುತ್ತಾಡಿ ಕೊರೋನಾ ಸಂಬಂಧ ತೆಗೆದುಕೊಂಡ ಕ್ರಮಗಳನ್ನು ಪರಿಶೀಲಿಸಿದರು. ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ ನೀಡಿದ್ದರು. ಸ್ಥಳೀಯ ಆಸ್ಪತ್ರೆ, ಗ್ರಾಮ ಪಂಚಾಯಿತಿ ಕಾರ್ಯಾಲಯಗಳಿಗೆ ಭೇಟಿ ನೀಡಿ, ಕೊರೋನಾ ಸಂಬಂಧ ಕೈಗೊಂಡಿರುವ ಮುನ್ನೆಚ್ಚರಿಕೆಗಳನ್ನು ವಿಚಾರಿಸಿದರು. ವೈದ್ಯರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿ ಜೊತೆ ಚರ್ಚೆ …
Read More »ಪಕ್ಕದ ಮಹಾರಾಷ್ಟ್ರದಲ್ಲಿ ರೋಗ ಹೆಚ್ಚಿರುವುದರಿಂದ ನಾವು ಎಷ್ಟೇ ಜಾಗ್ರತೆ ವಹಿಸಿದರೂ ಕಡಿಮೆ:ಗಣೇಶ ಹುಕ್ಕೇರಿ
ಚಿಕ್ಕೋಡಿ – ಕೊರೋನಾ ವೈರಸ್ ಹರಡುವುದನ್ನು ತಡೆಯಲು ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಜನಪ್ರತಿನಿಧಿಗಳು ನಿರಂತರ ಪ್ರಯತ್ನ ಮುಂದುವರಿಸಿದ್ದಾರೆ. ಜನರಲ್ಲಿ ಅರಿವು ಮೂಡಿಸುವುದು, ಔಷಧಗಳನ್ನು ಸಿಂಬಡಿಸುವುದು, ಅಧಿಕಾರಿಗಳೊಂದಿಗೆ ಸಭೆ ನಡೆಸುವುದು, ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ತರಿಸುವುದು… ಇತ್ಯಾದಿ ಕೆಲಸಗಳನ್ನು ಜನಪ್ರತಿನಿಧಿಗಳು ಮಾಡುತ್ತಿದ್ದಾರೆ. ಗಣೇಶ ಹುಕ್ಕೇರಿ ಶಾಸಕ ಗಣೇಶ ಹುಕ್ಕೇರಿ ಕಳೆದ ವಾರ ಚಿಕ್ಕೋಡಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೊರೋನಾ ವೈರಸ್ ನಿಯಂತ್ರಿಸಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ಆಸ್ಪತ್ರೆಗಳಿಗೆ ಭೇಟಿ ನೀಡಿ …
Read More »
Laxmi News 24×7