ಬೆಳಗಾವಿ: ಕೊರೋನಾ ಭೀತಿ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದು ಜಿಲ್ಲೆಯಲ್ಲಿ ಕೊರೋನಾ ವೈರಸ್ ಶಂಕಿತರ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಜಿಲ್ಲೆಗೆ ವಿದೇಶದಿಂದ ಇದುವರೆಗೆ 134 ಜನರು ಆಗಮಿಸಿದ್ದು, ಅದರಲ್ಲಿ ಮೂರು ಜನರು 18 ದಿನಗಳ ಕ್ವಾರಂಟೈನ್(ಗೃಹ ನಿಗಾ) ಅವಧಿ ಪೂರ್ಣಗೊಳಿಸಿದ್ದಾರೆ. ಯಾವುದೇ ಪ್ರಕರಣದಲ್ಲೂ ಸೋಂಕು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 118 ಜನರನ್ನು ಅವರವರ ಮನೆಯಲ್ಲಿಯೇ ನಿಗಾದಲ್ಲಿರಿಸಲಾಗಿದೆ. 12 ಜನರು 14 ದಿನಗಳ …
Read More »ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿಗೂ ಕೊರೊನಾ ಬಿಸಿ
ಬೆಳಗಾವಿ(ಚಿಕ್ಕೋಡಿ): ಕೊರೊನಾ ವೈರಸ್ ಭೀತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿಗೂ ಕೊರೊನಾ ಬಿಸಿ ತಟ್ಟಿದೆ. ಚಿಂಚಲಿಯ ಮಾಯಕ್ಕಾದೇವಿಯ ದರ್ಶನವನ್ನು ಇಂದಿನಿಂದ ಮಾರ್ಚ್ 31ರವರೆಗೂ ಸ್ಥಗಿತಗೊಳಿಸಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿ ದೇವಸ್ಥಾನವನ್ನು ಬಂದ್ ಮಾಡಿದೆ. ಮಾಯಕ್ಕಾದೇವಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರದ ಆರಾದ್ಯ ದೇವತೆಯಾಗಿದ್ದು, ದೇವಿಯ ದರ್ಶನ ಪಡೆಯಲು ದಿನನಿತ್ಯ ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ …
Read More »ಬೆಳಗಾವಿ:ವಸತಿ ಯೋಜನೆಗಳಲ್ಲಿ ಭಾರೀ ಅಕ್ರಮ;ಸರ್ಕಾರಿ ನೌಕರರೇ ಫಲಾನುಭವಿಗಳು!
ಬೆಳಗಾವಿ ಜಿಲ್ಲೆಯ ಆಥಣಿ ತಾಲೂಕಿನ ಐಗಳಿ ಗ್ರಾಮ ಪಂಚಾಯತ ಹದ್ದಿಯಲ್ಲಿ ಎಸ್ಸಿ/ಎಸ್ಟಿ ಫಲಾನುಭವಿಗಳ ಹೆಸರಿನಲ್ಲಿ ಮನೆಗಳನ್ನು ಮಂಜೂರು ಮಾಡಿಸಿಕೊಂಡು, ಅವರಿಗೆ ಅಲ್ಪ-ಸ್ವಲ್ಪ ಹಣ ನೀಡಿ ಸರ್ಕಾರಿ ನೌಕರರೇ ದೊಡ್ಡ ಮನೆಗಳನ್ನು ಕಟ್ಟಿಕೊಳ್ಳುತ್ತಿರುವ ಆಘಾತಕಾರಿ ಸಂಗತಿ ನಡೆದಿವೆ ಎನ್ನಲಾದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡಲಾಗಿದೆಯಾದರೂ,ತನಿಖೆಯ ಹೆಸರಿನಲ್ಲಿ ಸುಖಾಸುಮ್ಮನೆ ಕಾಲಹರಣ ಮಾಡಲಾಗುತ್ತಿದೆ. ಈ ಮೂಲಕ ತಪ್ಪಿತಸ್ಥರ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ ಕೂಡ …
Read More »ಸತತವಾಗಿ ೮ನೇ ಬಾರಿಗೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಪ್ರಭಾಕರ ಕೋರೆ ಆಯ್ಕೆ
ಡಾ.ಪ್ರಭಾಕರ ಕೋರೆ ಸತತವಾಗಿ ೮ನೇ ಬಾರಿಗೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗುವುದರ ಮೂಲಕ ಸಂಸ್ಥೆಯ ಇತಿಹಾಸದಲ್ಲಿಯೇ ನೂತನ ದಾಖಲೆ ಬರೆದಿದ್ದಾರೆ. ಕೆಎಲ್ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಗುರುವಾರ ಜರುಗಿದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಸದಸ್ಯರು ಡಾ.ಪ್ರಭಾಕರ ಕೋರೆಯವರನ್ನು ಕಾರ್ಯಾಧ್ಯಕ್ಷರನ್ನಾಗಿ ಪುನರ್ಆಯ್ಕೆ ಮಾಡುವ ಮೂಲಕ ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರು ಹಾಗೂ ವಿಧಾನ ಪರಿಷತ್ನ ಸರ್ಕಾರದ ಮುಖ್ಯಸಚೇತಕರಾದ ಮಹಾಂತೇಶ ಕವಟಗಿಮಠ ಅವರು ಮಾತನಾಡಿ ’ಡಾ.ಕೋರೆಯವರು ಕೆಎಲ್ಇ ಸಂಸ್ಥೆಯ ಸಾರಥ್ಯವನ್ನು …
Read More »ಅಂಬೋಲಿ ಬಳಿ ಕಾರಿಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸಾವಿಗೀಡಾದ ಪ್ರಕರಣ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ.
ಅಂಬೋಲಿ ಬಳಿ ಕಾರಿಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸಾವಿಗೀಡಾದ ಪ್ರಕರಣ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ. ಬೆಂಕಿಯಿಂದ ಗಂಭೀರ ಗಾಯಗೊಂಡು ಗೋವಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಕಾರು ಚಾಲನೆ ಮಾಡುತ್ತಿದ್ದ ದುಂಡಪ್ಪ ಪದ್ಮಣ್ಣವರ್ ಮೃತ ಮಹಿಳೆಯ ಪತಿಯಲ್ಲ. ಆತ ಆಕೆಯೊಂದಿಗೆ ರೆಸಾರ್ಟ್ ಗೆ ತೆರಳಿದ್ದ ಎನ್ನುವ ಮಾಹಿತಿ ಬಂದಿದೆ. ಸುಟ್ಟು ಭಸ್ಮವಾದ ಮಹಿಳೆ ರಿಜ್ವಾನಾ (41) ಎನ್ನುವವಳಾಗಿದ್ದು, ಆಕೆ ಬೆಳಗಾವಿಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಮಹಿಳೆಯ ಸಂಬಧಿಕರು ಇದೀಗ ಪ್ರಕರಣದ …
Read More »ಪ್ರವಾಹ ಸಂದರ್ಭದಲ್ಲಿ ಬೆಳೆಹಾನಿ ಪರಿಹಾರ ವಿತರಿಸುವಲ್ಲಿ ಅಕ್ರಮ.
ಬೆಳಗಾವಿ: ಪ್ರವಾಹ ಸಂದರ್ಭದಲ್ಲಿ ಬೆಳೆಹಾನಿ ಪರಿಹಾರ ವಿತರಿಸುವಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ರಾಯಬಾಗ ತಾಲೂಕಿನ ಮೂವರು ಗ್ರಾಮ ಲೆಕ್ಕಿಗರನ್ನು ಅಮಾನತುಗೊಳಿಸಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮ ಲೆಕ್ಕಿಗ ಪಿ.ಎಂ ಹಾಲವಡೆರ್, ದಿಗ್ಗೆವಾಡಿಯ ಎಸ್.ಎ. ಬಸ್ತವಾಡೆ, ಭಿರಡಿಯ ಬಿ.ಪಿ ಹಳ್ಳಿ ಅಮಾನತುಗೊಂಡ ಗ್ರಾಮ ಲೆಕ್ಕಿಗರು. ಬೆಳೆ ಪರಿಹಾರ ವಿತರಸುವಲ್ಲಿ ಅಕ್ರಮ ಎಸಗಿದ ಗ್ರಾಮ ಲೆಕ್ಕಿಗರ ವಿರುದ್ದ ಕ್ರಮ ಜರುಗಿಸಲು ಚಿಕ್ಕೋಡಿ ಎಸಿ, ರಾಯಬಾಗ ತಹಸೀಲ್ದಾರ್ …
Read More »“ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ ಗ್ರಾಮಸ್ಥರಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆ”
ಗೋಕಾಕ: ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಲೋಳಸೂರದಿಂದ ಬಳೋಬಾಳ ವರೆಗಿನ ರಸ್ತೆ ಕಾಮಗಾರಿಯು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಗೊಂಡಿದೆ ಎಂದು ನ್ಯಾಯವಾದಿ ಎಮ್ ಕೆ ಕುಳ್ಳೂರ ಹೇಳಿದರು. ಅವರು, ಇಲ್ಲಿಗೆ ಸಮೀಪದ ಲೋಳಸೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಡಿ ಮಂಜೂರಾದ 3.20ಕೋಟಿ ರೂಗಳ ವೆಚ್ಚದ ಲೋಳಸೂರ-ಬಳೋಬಾಳ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರಸ್ತೆ ಕಾಮಗಾರಿಗೆ ಅನುದಾನ ತಂದಿರುವ ಶಾಸಕ ಬಾಲಚಂದ್ರ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಗೆ ಸನ್ಮಾನ
ಗೋಕಾಕ: ಕೆಪಿಸಿಸಿಗೆ ಕಾರ್ಯಾಧ್ಯಕ್ಷರಾಗಿ ನೇಮಕರಾದ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಗೋಕಾಕ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು. ಇಲ್ಲಿನ ಶಾಸಕರ ಕಚೇರಿಯಲ್ಲಿ ನಗರಸಭೆ ಮತ್ತು ಎಪಿಎಂಸಿ ಸದಸ್ಯರು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂತನ ಕಾರ್ಯಾಧ್ಯಕ್ಷರನ್ನು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಭಗವಂತ ಹುಳ್ಳಿ, ಕುತುಬುದ್ದೀನ್ ಗೋಕಾಕ, ಬಸವರಾಜ ದೇಶನೂರ, ವಿವೇಕ ಜತ್ತಿ, ಬಸವರಾಜ ದೇಶನೂರ, ಅನಿಲ ಮುರಾರಿ, ಸಂತೋಷ ಮಂತ್ರಣ್ಣವರ ಸೇರಿ ಹಲವು ನಗರ …
Read More »ಹೆಚ್ವು ಜನ ಸೇರಬಾರಬಾದು ಎನ್ನುವ ಸದುದ್ದೇಶದಿಂದ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು50rsಗೆ ಹೆಚ್ಚಿಸಿದೆ
ಬೆಳಗಾವಿ- ಕೊರೋನಾ ಸೊಂಕು ಹರಡದಂತೆ ರೈಲ್ವೆ ಇಲಾಖೆಯೂ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದೆ,ರೈಲು ನಿಲ್ಧಾಣಗಳಲ್ಲಿ ಜನಜಂಗುಳಿ ಯನ್ನು ನಿಯಂತ್ರಿಸಲು ಬೆಳಗಾವಿ ರೈಲು ನಿಲ್ಧಾಣದಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು ಹೆಚ್ಚಿಸಿದೆ ಬೆಳಗಾವಿ,ಹುಬ್ಬಳ್ಳಿ, ಮತ್ತು ಬಳ್ಳಾರಿ ರೈಲು ನಿಲ್ಧಾಣಗಳಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು ಮಾರ್ಚ 31ರವರೆಗೆ 50 ರೂ ಗೆ ಹೆಚ್ಚಿಸಿ ನೈಋತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರೈಲು ನಿಲ್ಧಾಣಗಳಲ್ಲಿ ಅನವಶ್ಯಕವಾಗಿ ಹೆಚ್ವು ಜನ ಸೇರಬಾರಬಾದು ಎನ್ನುವ ಸದುದ್ದೇಶದಿಂದ ಅಧಿಕಾರಿಗಳು …
Read More »ಮಂಗಳಸೂತ್ರ ದೋಚಲು ಯತ್ನ,ಇಬ್ಬರು ಸರಗಳ್ಳರ ಅರೆಸ್ಟ್…
ಬೆಳಗಾವಿ- ಮಹಿಳೆಯೊಬ್ಬಳ ಮಂಗಳಸೂತ್ರ ದೋಚುವ ವಿಫಲ ಪ್ರಯತ್ನ ನಡೆಸಿ ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೇವಲ ನಾಲ್ಕು ತಾಸುಗಳಲ್ಲಿ ಪತ್ತೆ ಮಾಡಿ ಅವರನ್ನು ಬಂಧಿಸುವಲ್ಲಿ ಬೆಳಗಾವಿಯ ಕ್ಯಾಂಪ್ ಪೋಲೀಸರು ಯಶಸ್ವಿಯಾಗಿದ್ದಾರೆ ನಿನ್ನೆ ಸಂಜೆ ಗಣೇಶಪೂರದ ಡಿಫೆನ್ಸ ಕಾಲೋನಿ ಬಳಿ ರಾಜಶ್ರೀ ಏಕನಾಥ ಪಾಟೀಲ ಎಂಬ ಮಹಿಳೆಯ 50 ಗ್ರಾಮ ತೂಕದ ಮಂಗಳಸೂತ್ರ ದೋಚುವ ಪ್ರಯತ್ನ ಮಾಡಿದ್ದರು ರಾಜಶ್ರೀ ಪಾಟೀಲ ಇದಕ್ಕೆ ತೀವ್ರ ವಿರೋಧ ವ್ಯೆಕ್ತ ಪಡಿಸಿ ಸರಗಳ್ಳರಿಂದ ಬಚಾವ್ ಆಗಿದ್ದರು ಪ್ರಕರಣ …
Read More »